Homeರಾಷ್ಟ್ರೀಯರಾಮನವಮಿ ಹಿಂಸಾಚಾರ ಪ್ರಕರಣ: ಖಡ್ಗ ಹಿಡಿದು ಮೆರವಣಿಗೆಗೆ ಬಂದಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್

ರಾಮನವಮಿ ಹಿಂಸಾಚಾರ ಪ್ರಕರಣ: ಖಡ್ಗ ಹಿಡಿದು ಮೆರವಣಿಗೆಗೆ ಬಂದಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್

- Advertisement -
- Advertisement -

ಎಪ್ರಿಲ್‌ 10 ರಂದು ಗುಜರಾತಿನ ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದಲ್ಲಿ ರಾಮ ನವಮಿಯಂದು ಭುಗಿಲೆದ್ದ ಹಿಂಸಾಚಾರದ ಆರೋಪಿಯ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ಆರೋಪಿಯನ್ನು ಪ್ರಕಾಶ್ ಪಾಂಡ್ಯ(20) ಎಂದು ಗುರುತಿಸಲಾಗಿದ್ದು, ರಾಮನವಮಿಯ ‘ಶೋಭಾ ಯಾತ್ರೆ’ಯಲ್ಲಿ ಭಾಗವಹಿಸಿದ್ದನು.

ಈ ಮೆರವಣಿಗೆಯು ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಸಾಗಿದ್ದಾಗ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆ ನಡೆದಾಗ ಪ್ರಕಾಶ್‌ ಪಾಂಡ್ಯ ಕೈಯ್ಯಲ್ಲಿ ತಲವಾರು ಹಿಡಿದ್ದನು ಎಂದು ಸಿಸಿಟಿವಿ ಫೂಟೇಜ್‌ನಲ್ಲಿ ಕಂಡುಬಂದಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಕೋರ್ಟ್‌ನಲ್ಲಿ ಆರೋಪಿಯ ವಕೀಲರು ಕೂಡಾ ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ ವಕೀಲರು ಪ್ರಕಾಶ್‌ ಪಾಂಡ್ಯ ಆಯುಧವನ್ನು ಕೊಂಡೊಯ್ಯುವುದನ್ನು ಕೋರ್ಟ್‌ನಲ್ಲಿ ಸಮರ್ಥಿಸಿದ್ದಾರೆ. ಕೆಲವು ಹಬ್ಬಗಳ ಸಮಯದಲ್ಲಿ ಆಯುಧವನ್ನು ಕೊಂಡೊಯ್ಯುವುದು ಎಲ್ಲರಿಗೂ ತಿಳಿದಿರುವ ಆಚರಣೆಗೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಧಾರಿಗಳೂ

“ರಾಮ ನವಮಿ ಮತ್ತು ಗುರುನಾನಕ್ ಜಯಂತಿಯಂತಹ ಸಂದರ್ಭಗಳ ಶೋಭಾ ಯಾತ್ರೆಯಲ್ಲಿ ಜನರು ಈ ಆಯುಧಗಳನ್ನು (ತಲವಾರುಗಳನ್ನು) ತಮ್ಮೊಂದಿಗೆ ತೆಗೆದುಕೊಂಡು ಹೋಗುತ್ತಾರೆ” ಎಂದು ಪ್ರಕಾಶ್‌ ಪಾಂಡ್ಯ ಅವರ ವಕೀಲರು ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಭದ್ರತೆಯನ್ನು ಒದಗಿಸದಿದ್ದರೂ ಪೊಲೀಸರ ಅನುಮತಿಯೊಂದಿಗೆ ಮೆರವಣಿಗೆಯನ್ನು ಮಾಡಲಾಗಿದೆ ಎಂದು ವಕೀಲರು ಹೇಳಿದ್ದಾರೆ.

ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸಮೀರ್ ದವೆ ಅವರ ಪೀಠವು ಈ ಹಂತದಲ್ಲಿ ಪ್ರಕಾಶ್‌ ಪಾಂಡ್ಯ ಅವರಿಗೆ ಸಾಮಾನ್ಯ ಜಾಮೀನು ನೀಡಲು ನಿರಾಕರಿಸಿತು. ಜೊತೆಗೆ ಪ್ರಕರಣದಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ನಂತರ ನ್ಯಾಯಾಲಯವನ್ನು ಸಂಪರ್ಕಿಸಲು ಸೂಚಿಸಿದೆ.

ಇದನ್ನೂ ಓದಿ: ದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

ರಾಮ ನವಮಿ ಹಿಂಸಾಚಾರ

ರಾಮನವಮಿಯಂದು ದೇಶಾದ್ಯಂತ ನಡೆದ ಹಲವು ಘಟನೆಗಳಲ್ಲಿ ಹಿಮ್ಮತ್‌ನಗರದ ಕೋಮು ಘರ್ಷಣೆಯೂ ಒಂದಾಗಿದೆ. ಈ ಸಮಯದಲ್ಲಿ ಗುಜರಾತ್‌ನಲ್ಲಿ ಎರಡು ಕೋಮು ಸಂಘರ್ಷ ಘಟನೆಗಳು ನಡೆದಿತ್ತು.

ಪೊಲೀಸರ ಪ್ರಕಾರ, ಕಾರುಗಳು ಮತ್ತು ಮೋಟಾರ್‌ಸೈಕಲ್‌ಗಳ ಮೆರವಣಿಗೆಯು ಹಿಮ್ಮತ್‌ನಗರದ ಛಪಾರಿಯಾ ಪ್ರದೇಶವನ್ನು ತಲುಪಿದ ನಂತರ ಹಿಂಸಾಚಾರವು ಪ್ರಾರಂಭವಾಯಿತು. ಇಲ್ಲಿ ಹೆಚ್ಚಾಗಿ ಅಲ್ಪಸಂಖ್ಯಾತ ಸಮುದಾಯಗಳ ಜನರು ವಾಸಿಸುತ್ತಾರೆ.

ಎರಡೂ ಕಡೆಯಿಂದ ಕಲ್ಲು ತೂರಾಟಗಳು ನಡೆದವು, ಇದನ್ನು ಅನುಸರಿಸಿ ಬೆಂಕಿ ಹಚ್ಚಲಾಗಿದ್ದು, ಪ್ರದೇಶದಲ್ಲಿ ಅಂಗಡಿಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಲಾಯಿತು. ಹಿಂಸಾಚಾರವು ಮಧ್ಯಾಹ್ನ 3 ಗಂಟೆಯವರೆಗೂ ಮುಂದುವರೆದಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ 

ಇದರ ನಂತರ, ಸಂಜೆ 4 ಗಂಟೆಗೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಲ್ಲಿಂದ ಮತ್ತೊಂದು ಮೆರವಣಿಗೆಯನ್ನು ಪ್ರಾರಂಭಿಸಿದ್ದರು ಎಂದು ವರದಿಯಾಗಿದೆ. ಇದು ಮತ್ತೊಂದು ಸುತ್ತಿನ ಕಲ್ಲು ತೂರಾಟ ಮತ್ತು ಗಲಭೆಗೆ ನಾಂದಿ ಹಾಡಿತು ಪೊಲೀಸರು ಹೇಳಿದ್ದಾರೆ.

ಎರಡನೇ ಮೆರವಣಿಗೆಗೆ ಭದ್ರತೆಯಿದ್ದರೂ, ಗಲಭೆಯಲ್ಲಿ ತಮ್ಮ 15 ಸದಸ್ಯರು ಗಾಯಗೊಂಡಿದ್ದಾರೆ ಎಂದು ವಿಎಚ್‌ಪಿಯ ಸದಸ್ಯರೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ತಮ್ಮ ನಾಲ್ವರು ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆಯ ನಂತರ, ಅಹಮದಾಬಾದ್ ಮೂಲದ ಹಕ್ಕುಗಳ ಸಂಘಟನೆಯಾದ ಅಲ್ಪಸಂಖ್ಯಾತ ಸಮನ್ವಯ ಸಮಿತಿಯು, ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲು ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಯಾವುದೇ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರಿಗೆ ಸ್ಪಷ್ಟವಾಗಿ ಕೇಳಿತ್ತು. ಈ ವೇಳ ಪ್ರಕಾಶ್ ಪಾಂಡ್ಯ ತಲವಾರು ಹಿಡಿದಿರುವುದು ಕಂಡು ಬಂದಿದ್ದು, ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಜನರನ್ನು ಬಂಧಿಸಿದ್ದು, 40 ಆರೋಪಿಗಳನ್ನು ಹೆಸರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...