Homeರಾಷ್ಟ್ರೀಯರಾಮನವಮಿ ಹಿಂಸಾಚಾರ ಪ್ರಕರಣ: ಖಡ್ಗ ಹಿಡಿದು ಮೆರವಣಿಗೆಗೆ ಬಂದಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್

ರಾಮನವಮಿ ಹಿಂಸಾಚಾರ ಪ್ರಕರಣ: ಖಡ್ಗ ಹಿಡಿದು ಮೆರವಣಿಗೆಗೆ ಬಂದಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್

- Advertisement -
- Advertisement -

ಎಪ್ರಿಲ್‌ 10 ರಂದು ಗುಜರಾತಿನ ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದಲ್ಲಿ ರಾಮ ನವಮಿಯಂದು ಭುಗಿಲೆದ್ದ ಹಿಂಸಾಚಾರದ ಆರೋಪಿಯ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ಆರೋಪಿಯನ್ನು ಪ್ರಕಾಶ್ ಪಾಂಡ್ಯ(20) ಎಂದು ಗುರುತಿಸಲಾಗಿದ್ದು, ರಾಮನವಮಿಯ ‘ಶೋಭಾ ಯಾತ್ರೆ’ಯಲ್ಲಿ ಭಾಗವಹಿಸಿದ್ದನು.

ಈ ಮೆರವಣಿಗೆಯು ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಸಾಗಿದ್ದಾಗ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆ ನಡೆದಾಗ ಪ್ರಕಾಶ್‌ ಪಾಂಡ್ಯ ಕೈಯ್ಯಲ್ಲಿ ತಲವಾರು ಹಿಡಿದ್ದನು ಎಂದು ಸಿಸಿಟಿವಿ ಫೂಟೇಜ್‌ನಲ್ಲಿ ಕಂಡುಬಂದಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಕೋರ್ಟ್‌ನಲ್ಲಿ ಆರೋಪಿಯ ವಕೀಲರು ಕೂಡಾ ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ ವಕೀಲರು ಪ್ರಕಾಶ್‌ ಪಾಂಡ್ಯ ಆಯುಧವನ್ನು ಕೊಂಡೊಯ್ಯುವುದನ್ನು ಕೋರ್ಟ್‌ನಲ್ಲಿ ಸಮರ್ಥಿಸಿದ್ದಾರೆ. ಕೆಲವು ಹಬ್ಬಗಳ ಸಮಯದಲ್ಲಿ ಆಯುಧವನ್ನು ಕೊಂಡೊಯ್ಯುವುದು ಎಲ್ಲರಿಗೂ ತಿಳಿದಿರುವ ಆಚರಣೆಗೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಧಾರಿಗಳೂ

“ರಾಮ ನವಮಿ ಮತ್ತು ಗುರುನಾನಕ್ ಜಯಂತಿಯಂತಹ ಸಂದರ್ಭಗಳ ಶೋಭಾ ಯಾತ್ರೆಯಲ್ಲಿ ಜನರು ಈ ಆಯುಧಗಳನ್ನು (ತಲವಾರುಗಳನ್ನು) ತಮ್ಮೊಂದಿಗೆ ತೆಗೆದುಕೊಂಡು ಹೋಗುತ್ತಾರೆ” ಎಂದು ಪ್ರಕಾಶ್‌ ಪಾಂಡ್ಯ ಅವರ ವಕೀಲರು ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಭದ್ರತೆಯನ್ನು ಒದಗಿಸದಿದ್ದರೂ ಪೊಲೀಸರ ಅನುಮತಿಯೊಂದಿಗೆ ಮೆರವಣಿಗೆಯನ್ನು ಮಾಡಲಾಗಿದೆ ಎಂದು ವಕೀಲರು ಹೇಳಿದ್ದಾರೆ.

ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸಮೀರ್ ದವೆ ಅವರ ಪೀಠವು ಈ ಹಂತದಲ್ಲಿ ಪ್ರಕಾಶ್‌ ಪಾಂಡ್ಯ ಅವರಿಗೆ ಸಾಮಾನ್ಯ ಜಾಮೀನು ನೀಡಲು ನಿರಾಕರಿಸಿತು. ಜೊತೆಗೆ ಪ್ರಕರಣದಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ನಂತರ ನ್ಯಾಯಾಲಯವನ್ನು ಸಂಪರ್ಕಿಸಲು ಸೂಚಿಸಿದೆ.

ಇದನ್ನೂ ಓದಿ: ದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

ರಾಮ ನವಮಿ ಹಿಂಸಾಚಾರ

ರಾಮನವಮಿಯಂದು ದೇಶಾದ್ಯಂತ ನಡೆದ ಹಲವು ಘಟನೆಗಳಲ್ಲಿ ಹಿಮ್ಮತ್‌ನಗರದ ಕೋಮು ಘರ್ಷಣೆಯೂ ಒಂದಾಗಿದೆ. ಈ ಸಮಯದಲ್ಲಿ ಗುಜರಾತ್‌ನಲ್ಲಿ ಎರಡು ಕೋಮು ಸಂಘರ್ಷ ಘಟನೆಗಳು ನಡೆದಿತ್ತು.

ಪೊಲೀಸರ ಪ್ರಕಾರ, ಕಾರುಗಳು ಮತ್ತು ಮೋಟಾರ್‌ಸೈಕಲ್‌ಗಳ ಮೆರವಣಿಗೆಯು ಹಿಮ್ಮತ್‌ನಗರದ ಛಪಾರಿಯಾ ಪ್ರದೇಶವನ್ನು ತಲುಪಿದ ನಂತರ ಹಿಂಸಾಚಾರವು ಪ್ರಾರಂಭವಾಯಿತು. ಇಲ್ಲಿ ಹೆಚ್ಚಾಗಿ ಅಲ್ಪಸಂಖ್ಯಾತ ಸಮುದಾಯಗಳ ಜನರು ವಾಸಿಸುತ್ತಾರೆ.

ಎರಡೂ ಕಡೆಯಿಂದ ಕಲ್ಲು ತೂರಾಟಗಳು ನಡೆದವು, ಇದನ್ನು ಅನುಸರಿಸಿ ಬೆಂಕಿ ಹಚ್ಚಲಾಗಿದ್ದು, ಪ್ರದೇಶದಲ್ಲಿ ಅಂಗಡಿಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಲಾಯಿತು. ಹಿಂಸಾಚಾರವು ಮಧ್ಯಾಹ್ನ 3 ಗಂಟೆಯವರೆಗೂ ಮುಂದುವರೆದಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ 

ಇದರ ನಂತರ, ಸಂಜೆ 4 ಗಂಟೆಗೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಲ್ಲಿಂದ ಮತ್ತೊಂದು ಮೆರವಣಿಗೆಯನ್ನು ಪ್ರಾರಂಭಿಸಿದ್ದರು ಎಂದು ವರದಿಯಾಗಿದೆ. ಇದು ಮತ್ತೊಂದು ಸುತ್ತಿನ ಕಲ್ಲು ತೂರಾಟ ಮತ್ತು ಗಲಭೆಗೆ ನಾಂದಿ ಹಾಡಿತು ಪೊಲೀಸರು ಹೇಳಿದ್ದಾರೆ.

ಎರಡನೇ ಮೆರವಣಿಗೆಗೆ ಭದ್ರತೆಯಿದ್ದರೂ, ಗಲಭೆಯಲ್ಲಿ ತಮ್ಮ 15 ಸದಸ್ಯರು ಗಾಯಗೊಂಡಿದ್ದಾರೆ ಎಂದು ವಿಎಚ್‌ಪಿಯ ಸದಸ್ಯರೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ತಮ್ಮ ನಾಲ್ವರು ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆಯ ನಂತರ, ಅಹಮದಾಬಾದ್ ಮೂಲದ ಹಕ್ಕುಗಳ ಸಂಘಟನೆಯಾದ ಅಲ್ಪಸಂಖ್ಯಾತ ಸಮನ್ವಯ ಸಮಿತಿಯು, ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲು ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಯಾವುದೇ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರಿಗೆ ಸ್ಪಷ್ಟವಾಗಿ ಕೇಳಿತ್ತು. ಈ ವೇಳ ಪ್ರಕಾಶ್ ಪಾಂಡ್ಯ ತಲವಾರು ಹಿಡಿದಿರುವುದು ಕಂಡು ಬಂದಿದ್ದು, ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಜನರನ್ನು ಬಂಧಿಸಿದ್ದು, 40 ಆರೋಪಿಗಳನ್ನು ಹೆಸರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....