Homeಮುಖಪುಟಬಿಜೆಪಿ ಸೇರಿದ ರಾಮಾಯಣದ ರಾಮ ಪಾತ್ರಧಾರಿ ಅರುಣ್ ಗೋವಿಲ್

ಬಿಜೆಪಿ ಸೇರಿದ ರಾಮಾಯಣದ ರಾಮ ಪಾತ್ರಧಾರಿ ಅರುಣ್ ಗೋವಿಲ್

- Advertisement -
- Advertisement -

ರಾಮಾಯಣ ಟಿವಿ ಸರಣಿಯಲ್ಲಿ ರಾಮ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ನಟ ಅರುಣ್ ಗೋವಿಲ್ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ. ಹಿರಿಯ ನಟ ಅರುಣ್ ಗೋವಿಲ್ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ತಮಿಳುನಾಡು, ಕೇರಳ, ಅಸ್ಸಾಂ ,ಪಶ್ಚಿಮ ಬಂಗಾಳದ ನಾಲ್ಕು ವಿಧಾನಸಭಾ ಚುನಾವಣೆ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಕೆಲವು ದಿನಗಳು ಇರುವಾಗ ಇವರ ಪಕ್ಷ ಸೇರ್ಪಡೆ ಹಲವು ಕುತೂಹಲಗಳಿಗೆ ಕಾರಣವಾಗಿದೆ.

ಮೀರತ್ ಪಟ್ಟಣದಲ್ಲಿ ಬೆಳೆದ ನಟ ಗೋವಿಲ್ ಸಹರಾನ್ಪುರ್ ಮತ್ತು ಶಹಜಹಾನ್‌ಪುರದ ಶಾಲೆಗಳಲ್ಲಿ ಅಧ್ಯಯನ ಮಾಡಿದ್ದಾರೆ. ರಾಮಾಯಣದ ರಾಮ ಪಾತ್ರವನ್ನು ನಿರ್ವಹಿಸುವ ಮೊದಲು, ಅರುಣ್ ಗೋವಿಲ್ ತಮ್ಮ ಮೊದಲ ಚಿತ್ರ ಪಹೇಲಿ (1977) ಮೂಲಕ ಹಿರಿತೆರೆಯಲ್ಲಿ ಅದೃಷ್ಟ ಪರೀಕ್ಷಿಸಿದ್ದರು.

ಇದನ್ನೂ ಓದಿ: ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ವರದಿಗಳ ಪ್ರಕಾರ, ರಾಮಾಯಣವು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಐತಿಹಾಸಿಕ ವೀಕ್ಷಕರ ಕಾರಣದಿಂದಾಗಿ ಒಂದು ಸ್ಥಾನವನ್ನು ಕಂಡುಕೊಂಡಿದೆ. ಈ ಪ್ರದರ್ಶನವು 2003 ರವರೆಗೆ ವಿಶ್ವದ ಅತಿ ಹೆಚ್ಚು ವೀಕ್ಷಿಸಿದ ಪೌರಾಣಿಕ ಟಿವಿ ಸರಣಿಯ ದಾಖಲೆಯನ್ನು ಹೊಂದಿದೆ.

ವರದಿಗಳ ಪ್ರಕಾರ, ರಾಮಾಯಣವು ಲಿಮ್ಕಾ ಬುಕ್ ಆಫ್ ರೆಕಾರ್ಡ್ನಲ್ಲಿ ಐತಿಹಾಸಿಕ ವೀಕ್ಷಕರ ಕಾರಣದಿಂದಾಗಿ  ಸ್ಥಾನ ಪಡದುಕೊಂಡಿದೆ. ಈ ರಾಮಾಯಣ ಧಾರಾವಾಹಿ 2003 ರವರೆಗೆ ವಿಶ್ವದಲ್ಲಿ ಅತಿ ಹೆಚ್ಚು ವೀಕ್ಷಿಸಿದ ಪೌರಾಣಿಕ ಟಿವಿ ಸರಣಿಯ ದಾಖಲೆಯನ್ನು ಹೊಂದಿದೆ.

ರಾಮಾಯಣದ ನಂತರ, ಗೋವಿಲ್ ಹಲವು ಧಾರಾವಾಹಿಗಳಲ್ಲಿ ಕೆಲಸ ಮಾಡಿದ್ದಾರೆ. ಹಲವಾರು ಭೋಜ್‌ಪುರಿ, ಬ್ರಜ್ ಭಾಷಾ, ಒಡಿಯಾ ಮತ್ತು ತೆಲುಗು ಚಿತ್ರಗಳಲ್ಲಿಯೂ ಕೆಲಸ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮಹಾಭಾರತ ಧಾರಾವಾಹಿಯ ದ್ರೌಪದಿ ಪಾತ್ರದಲ್ಲಿ ನಟಿಸಿದ್ದ ನಟಿ ರೂಪಾ ಗಂಗೂಲಿ ಬಿಜೆಪಿ ಸೇರಿ, ಪಶ್ಚಿಮ ಬಂಗಾಳದ ಸ್ಟಾರ್‌ ಪ್ರಚಾರಕರಾಗಿದ್ದಾರೆ.


ಇದನ್ನೂ ಓದಿ: ಶಬರಿಮಲೆ ಕುರಿತು ಸುಪ್ರೀಂಕೋರ್ಟ್‌ ಅಂತಿಮ ತೀರ್ಪಿನ ನಂತರ ತೀರ್ಮಾನ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...