Homeಮುಖಪುಟಜಾಮಿಯದಲ್ಲಿ ಗುಂಡು ಹೊಡೆಯುವ ಮುನ್ನ ಆ ದುಷ್ಕರ್ಮಿ ಫೇಸ್‌ಬುಕ್‌ ಲೈವ್‌ನಲ್ಲಿ ಹೇಳಿದ್ದೇನು?

ಜಾಮಿಯದಲ್ಲಿ ಗುಂಡು ಹೊಡೆಯುವ ಮುನ್ನ ಆ ದುಷ್ಕರ್ಮಿ ಫೇಸ್‌ಬುಕ್‌ ಲೈವ್‌ನಲ್ಲಿ ಹೇಳಿದ್ದೇನು?

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಸಿಎಎ ವಿರುದ್ಧ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ವ್ಯಕ್ತಿ, ಘಟನೆಗೆ ಕೆಲವೇ ನಿಮಿಷಗಳ ಮೊದಲು ತನ್ನ ಎಲ್ಲಾ ಚಟುವಟಿಕೆಗಳನ್ನು ಫೇಸ್‌ಬುಕ್‌ನಲ್ಲಿ ನೇರಪ್ರಸಾರ ಮಾಡಿರುವುದು ಕಂಡುಬಂದಿದೆ.

ಗುಂಡು ಹೊಡೆದ ಘಟನೆಯ ನಂತರ ವೈರಲ್ ಆಗಿರುವ ವಿಡಿಯೋದಲ್ಲಿ ಪೊಲೀಸರು ಕರೆದೊಯ್ಯುವಾಗ ದಾಳಿಕೋರನು ತನ್ನನ್ನು ‘ರಾಮ್‌ಭಕ್ತ್‌ ಗೋಪಾಲ್’ ಎಂದು ಗುರುತಿಸಿಕೊಂಡಿದ್ದಾನೆ.

Posted by Rambhakt Gopal on Thursday, January 30, 2020

ಫೇಸ್‌ಬುಕ್‌ನಲ್ಲಿ ಗೋಪಾಲ್ ಅವರ ಬಯೋ ಹೇಳುವಂತೆ ‘ರಾಮ್‌ಭಕ್ತ್‌, ಸಾಕು ವಿಶ್ರಾಂತಿ, ಸಮಯ ಬಂದಿದೆ’. ಅಂತಿಮವಾಗಿ ಜಾಮಿಯಾ ವಿದ್ಯಾರ್ಥಿಗಳಿಗೆ ಗುಂಡು ಹಾರಿಸುವ ಮೊದಲು ಅವನು ಕೆಲವು ಬಾರಿ ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದಾನೆ. ಅವನ ಕೆಲವು ವೀಡಿಯೊಗಳು ಪ್ರತಿಭಟನೆಯ ನೋಟವನ್ನು ತೋರಿಸಿದರೆ, ಇತರ ಕೆಲವು ವಿಡಿಯೋಗಳಲ್ಲಿ ಮೊಬೈಲ್‌ನ ಸೆಲ್ಫಿ ಕ್ಯಾಮೆರಾವನ್ನು ಬಳಸಿದ್ದಾನೆ.

ದೆಹಲಿಯ ಶಾಹೀನ್ ಬಾಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಅವನು ತೆಗೆದುಕೊಳ್ಳಲು ಯೋಜಿಸುತ್ತಿರುವ ಪ್ರತೀಕಾರದ ಬಗ್ಗೆ ಹಲವು ಪೋಸ್ಟ್‌‌ಗಳನ್ನು ಮಾಡಿದ್ದಾನೆ. “ಶಾಹೀನ್ ಬಾಗ್ … ಆಟ ಮುಗಿದಿದೆ” ಎಂಬುದು ಅವನ ಪೋಸ್ಟ್‌ಗಳಲ್ಲಿ ಒಂದಾಗಿದ್ದು ಅದನ್ನು ಏಳುನೂರಕ್ಕೂ ಹೆಚ್ಚು ಜನರು ಲೈಕ್‌ ಮಾಡಿದ್ದಾರೆ.

ಅಲ್ಲದೇ ಮತ್ತೊಂದು ಪೋಸ್ಟ್‌ನಲ್ಲಿ ಇಲ್ಲಿ ಹಿಂದೂ ಮಾಧ್ಯಮಗಳು ಒಂದೂ ಇಲ್ಲ ಎಂದು ಪೋಸ್ಟ್‌ ಮಾಡಿದ್ದಾನೆ. ಒಟ್ಟಿನಲ್ಲಿ ಈತನ ಪೋಸ್ಟ್‌ಗಳ್ಲಿ ವಿಪರೀತ ದ್ವೇಷವೇ ತುಂಬಿಕೊಂಡಿದೆ. ಈ ಪ್ರತಿಕಾರವನ್ನು ಚಂದನ್‌ ಅಣ್ಣನಿಗೆ ಅರ್ಪಿಸುತ್ತೇನೆ ಎಂದು ಬರೆದುಕೊಂಡಿದ್ದಾನೆ. ನಾನೋಬ್ಬನೇ ಹಿಂದು ಇಲ್ಲಿರುವುದು ಎಂದು ಬರೆದಿದ್ದಾನೆ. ನನ್ನ ಕುಟುಂಬದ ಬಗ್ಗೆ ಕಾಳಜಿ ವಹಿಸಿ,

ಒಂದು ಪೋಸ್ಟ್‌ನಲ್ಲಿ, ತನಗೆ ಕರೆ ಮಾಡದಂತೆ ತನ್ನ ಫೇಸ್‌ಬುಕ್ ಸ್ನೇಹಿತರನ್ನು ಒತ್ತಾಯಿಸಿದ್ದಾನೆ. ಎಲ್ಲಾ ಪೋಸ್ಟ್‌ಗಳು ಹಿಂದಿಯಲ್ಲಿವೆ.

ಆತನ ಫೇಸ್‌ಬುಕ್‌ ಕವರ್‌ ಫೋಟೊದಲ್ಲಿ ಆತ ಹರಿತವಾದ ತಲ್ವಾರ್‌(ಮಚ್ಚು)ಗೆ ಮುತ್ತು ಕೊಡುತ್ತಿರುವ ಫೋಟೊ ಹಾಕಿದ್ದಾನೆ. ಕೇಸರಿ ಬಣ್ಣದ ಬಟ್ಟೆಗಳ ಅವನ ಫೋಟೊಗಳು ಫೇಸ್‌ಬುಕ್‌ನಲ್ಲಿವೆ. ಜೈಶ್ರೀರಾಮ್‌,

ಪಿಸ್ತೂಲ್ ಹೊತ್ತುಕೊಂಡಿದ್ದ ಗೋಪಾಲ್ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದು, ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಜನಸಮೂಹವು ಅವನನ್ನು ಹಿಡಿಯಿತು ಮತ್ತು ನಂತರ ಪೊಲೀಸರು ಆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

“ನಾವು ಹೋಲಿ ಫ್ಯಾಮಿಲಿ ಆಸ್ಪತ್ರೆಯತ್ತ ಸಾಗುತ್ತಿದ್ದೆವು, ಅಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಇದ್ದಕ್ಕಿದ್ದಂತೆ, ಬಂದೂಕು ಹಿಡಿದ ವ್ಯಕ್ತಿಯೊಬ್ಬರು ಹೊರಗೆ ಬಂದು ಗುಂಡು ಹಾರಿಸಿದರು. ಒಂದು ಗುಂಡು ನನ್ನ ಸ್ನೇಹಿತನ ಕೈಗೆ ಬಡಿಯಿತು ”ಎಂದು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ವಿದ್ಯಾರ್ಥಿನಿ ಆಮ್ನಾ ಆಸಿಫ್ ಪಿಟಿಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...