Homeಮುಖಪುಟಜಾಮಿಯದಲ್ಲಿ ಗುಂಡು ಹೊಡೆಯುವ ಮುನ್ನ ಆ ದುಷ್ಕರ್ಮಿ ಫೇಸ್‌ಬುಕ್‌ ಲೈವ್‌ನಲ್ಲಿ ಹೇಳಿದ್ದೇನು?

ಜಾಮಿಯದಲ್ಲಿ ಗುಂಡು ಹೊಡೆಯುವ ಮುನ್ನ ಆ ದುಷ್ಕರ್ಮಿ ಫೇಸ್‌ಬುಕ್‌ ಲೈವ್‌ನಲ್ಲಿ ಹೇಳಿದ್ದೇನು?

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಸಿಎಎ ವಿರುದ್ಧ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ವ್ಯಕ್ತಿ, ಘಟನೆಗೆ ಕೆಲವೇ ನಿಮಿಷಗಳ ಮೊದಲು ತನ್ನ ಎಲ್ಲಾ ಚಟುವಟಿಕೆಗಳನ್ನು ಫೇಸ್‌ಬುಕ್‌ನಲ್ಲಿ ನೇರಪ್ರಸಾರ ಮಾಡಿರುವುದು ಕಂಡುಬಂದಿದೆ.

ಗುಂಡು ಹೊಡೆದ ಘಟನೆಯ ನಂತರ ವೈರಲ್ ಆಗಿರುವ ವಿಡಿಯೋದಲ್ಲಿ ಪೊಲೀಸರು ಕರೆದೊಯ್ಯುವಾಗ ದಾಳಿಕೋರನು ತನ್ನನ್ನು ‘ರಾಮ್‌ಭಕ್ತ್‌ ಗೋಪಾಲ್’ ಎಂದು ಗುರುತಿಸಿಕೊಂಡಿದ್ದಾನೆ.

Posted by Rambhakt Gopal on Thursday, January 30, 2020

ಫೇಸ್‌ಬುಕ್‌ನಲ್ಲಿ ಗೋಪಾಲ್ ಅವರ ಬಯೋ ಹೇಳುವಂತೆ ‘ರಾಮ್‌ಭಕ್ತ್‌, ಸಾಕು ವಿಶ್ರಾಂತಿ, ಸಮಯ ಬಂದಿದೆ’. ಅಂತಿಮವಾಗಿ ಜಾಮಿಯಾ ವಿದ್ಯಾರ್ಥಿಗಳಿಗೆ ಗುಂಡು ಹಾರಿಸುವ ಮೊದಲು ಅವನು ಕೆಲವು ಬಾರಿ ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದಾನೆ. ಅವನ ಕೆಲವು ವೀಡಿಯೊಗಳು ಪ್ರತಿಭಟನೆಯ ನೋಟವನ್ನು ತೋರಿಸಿದರೆ, ಇತರ ಕೆಲವು ವಿಡಿಯೋಗಳಲ್ಲಿ ಮೊಬೈಲ್‌ನ ಸೆಲ್ಫಿ ಕ್ಯಾಮೆರಾವನ್ನು ಬಳಸಿದ್ದಾನೆ.

ದೆಹಲಿಯ ಶಾಹೀನ್ ಬಾಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಅವನು ತೆಗೆದುಕೊಳ್ಳಲು ಯೋಜಿಸುತ್ತಿರುವ ಪ್ರತೀಕಾರದ ಬಗ್ಗೆ ಹಲವು ಪೋಸ್ಟ್‌‌ಗಳನ್ನು ಮಾಡಿದ್ದಾನೆ. “ಶಾಹೀನ್ ಬಾಗ್ … ಆಟ ಮುಗಿದಿದೆ” ಎಂಬುದು ಅವನ ಪೋಸ್ಟ್‌ಗಳಲ್ಲಿ ಒಂದಾಗಿದ್ದು ಅದನ್ನು ಏಳುನೂರಕ್ಕೂ ಹೆಚ್ಚು ಜನರು ಲೈಕ್‌ ಮಾಡಿದ್ದಾರೆ.

ಅಲ್ಲದೇ ಮತ್ತೊಂದು ಪೋಸ್ಟ್‌ನಲ್ಲಿ ಇಲ್ಲಿ ಹಿಂದೂ ಮಾಧ್ಯಮಗಳು ಒಂದೂ ಇಲ್ಲ ಎಂದು ಪೋಸ್ಟ್‌ ಮಾಡಿದ್ದಾನೆ. ಒಟ್ಟಿನಲ್ಲಿ ಈತನ ಪೋಸ್ಟ್‌ಗಳ್ಲಿ ವಿಪರೀತ ದ್ವೇಷವೇ ತುಂಬಿಕೊಂಡಿದೆ. ಈ ಪ್ರತಿಕಾರವನ್ನು ಚಂದನ್‌ ಅಣ್ಣನಿಗೆ ಅರ್ಪಿಸುತ್ತೇನೆ ಎಂದು ಬರೆದುಕೊಂಡಿದ್ದಾನೆ. ನಾನೋಬ್ಬನೇ ಹಿಂದು ಇಲ್ಲಿರುವುದು ಎಂದು ಬರೆದಿದ್ದಾನೆ. ನನ್ನ ಕುಟುಂಬದ ಬಗ್ಗೆ ಕಾಳಜಿ ವಹಿಸಿ,

ಒಂದು ಪೋಸ್ಟ್‌ನಲ್ಲಿ, ತನಗೆ ಕರೆ ಮಾಡದಂತೆ ತನ್ನ ಫೇಸ್‌ಬುಕ್ ಸ್ನೇಹಿತರನ್ನು ಒತ್ತಾಯಿಸಿದ್ದಾನೆ. ಎಲ್ಲಾ ಪೋಸ್ಟ್‌ಗಳು ಹಿಂದಿಯಲ್ಲಿವೆ.

ಆತನ ಫೇಸ್‌ಬುಕ್‌ ಕವರ್‌ ಫೋಟೊದಲ್ಲಿ ಆತ ಹರಿತವಾದ ತಲ್ವಾರ್‌(ಮಚ್ಚು)ಗೆ ಮುತ್ತು ಕೊಡುತ್ತಿರುವ ಫೋಟೊ ಹಾಕಿದ್ದಾನೆ. ಕೇಸರಿ ಬಣ್ಣದ ಬಟ್ಟೆಗಳ ಅವನ ಫೋಟೊಗಳು ಫೇಸ್‌ಬುಕ್‌ನಲ್ಲಿವೆ. ಜೈಶ್ರೀರಾಮ್‌,

ಪಿಸ್ತೂಲ್ ಹೊತ್ತುಕೊಂಡಿದ್ದ ಗೋಪಾಲ್ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದು, ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಜನಸಮೂಹವು ಅವನನ್ನು ಹಿಡಿಯಿತು ಮತ್ತು ನಂತರ ಪೊಲೀಸರು ಆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

“ನಾವು ಹೋಲಿ ಫ್ಯಾಮಿಲಿ ಆಸ್ಪತ್ರೆಯತ್ತ ಸಾಗುತ್ತಿದ್ದೆವು, ಅಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಇದ್ದಕ್ಕಿದ್ದಂತೆ, ಬಂದೂಕು ಹಿಡಿದ ವ್ಯಕ್ತಿಯೊಬ್ಬರು ಹೊರಗೆ ಬಂದು ಗುಂಡು ಹಾರಿಸಿದರು. ಒಂದು ಗುಂಡು ನನ್ನ ಸ್ನೇಹಿತನ ಕೈಗೆ ಬಡಿಯಿತು ”ಎಂದು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ವಿದ್ಯಾರ್ಥಿನಿ ಆಮ್ನಾ ಆಸಿಫ್ ಪಿಟಿಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...