Homeಮುಖಪುಟಜಾಮಿಯದಲ್ಲಿ ಗುಂಡು ಹೊಡೆಯುವ ಮುನ್ನ ಆ ದುಷ್ಕರ್ಮಿ ಫೇಸ್‌ಬುಕ್‌ ಲೈವ್‌ನಲ್ಲಿ ಹೇಳಿದ್ದೇನು?

ಜಾಮಿಯದಲ್ಲಿ ಗುಂಡು ಹೊಡೆಯುವ ಮುನ್ನ ಆ ದುಷ್ಕರ್ಮಿ ಫೇಸ್‌ಬುಕ್‌ ಲೈವ್‌ನಲ್ಲಿ ಹೇಳಿದ್ದೇನು?

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಸಿಎಎ ವಿರುದ್ಧ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ವ್ಯಕ್ತಿ, ಘಟನೆಗೆ ಕೆಲವೇ ನಿಮಿಷಗಳ ಮೊದಲು ತನ್ನ ಎಲ್ಲಾ ಚಟುವಟಿಕೆಗಳನ್ನು ಫೇಸ್‌ಬುಕ್‌ನಲ್ಲಿ ನೇರಪ್ರಸಾರ ಮಾಡಿರುವುದು ಕಂಡುಬಂದಿದೆ.

ಗುಂಡು ಹೊಡೆದ ಘಟನೆಯ ನಂತರ ವೈರಲ್ ಆಗಿರುವ ವಿಡಿಯೋದಲ್ಲಿ ಪೊಲೀಸರು ಕರೆದೊಯ್ಯುವಾಗ ದಾಳಿಕೋರನು ತನ್ನನ್ನು ‘ರಾಮ್‌ಭಕ್ತ್‌ ಗೋಪಾಲ್’ ಎಂದು ಗುರುತಿಸಿಕೊಂಡಿದ್ದಾನೆ.

Posted by Rambhakt Gopal on Thursday, January 30, 2020

ಫೇಸ್‌ಬುಕ್‌ನಲ್ಲಿ ಗೋಪಾಲ್ ಅವರ ಬಯೋ ಹೇಳುವಂತೆ ‘ರಾಮ್‌ಭಕ್ತ್‌, ಸಾಕು ವಿಶ್ರಾಂತಿ, ಸಮಯ ಬಂದಿದೆ’. ಅಂತಿಮವಾಗಿ ಜಾಮಿಯಾ ವಿದ್ಯಾರ್ಥಿಗಳಿಗೆ ಗುಂಡು ಹಾರಿಸುವ ಮೊದಲು ಅವನು ಕೆಲವು ಬಾರಿ ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದಾನೆ. ಅವನ ಕೆಲವು ವೀಡಿಯೊಗಳು ಪ್ರತಿಭಟನೆಯ ನೋಟವನ್ನು ತೋರಿಸಿದರೆ, ಇತರ ಕೆಲವು ವಿಡಿಯೋಗಳಲ್ಲಿ ಮೊಬೈಲ್‌ನ ಸೆಲ್ಫಿ ಕ್ಯಾಮೆರಾವನ್ನು ಬಳಸಿದ್ದಾನೆ.

ದೆಹಲಿಯ ಶಾಹೀನ್ ಬಾಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಅವನು ತೆಗೆದುಕೊಳ್ಳಲು ಯೋಜಿಸುತ್ತಿರುವ ಪ್ರತೀಕಾರದ ಬಗ್ಗೆ ಹಲವು ಪೋಸ್ಟ್‌‌ಗಳನ್ನು ಮಾಡಿದ್ದಾನೆ. “ಶಾಹೀನ್ ಬಾಗ್ … ಆಟ ಮುಗಿದಿದೆ” ಎಂಬುದು ಅವನ ಪೋಸ್ಟ್‌ಗಳಲ್ಲಿ ಒಂದಾಗಿದ್ದು ಅದನ್ನು ಏಳುನೂರಕ್ಕೂ ಹೆಚ್ಚು ಜನರು ಲೈಕ್‌ ಮಾಡಿದ್ದಾರೆ.

ಅಲ್ಲದೇ ಮತ್ತೊಂದು ಪೋಸ್ಟ್‌ನಲ್ಲಿ ಇಲ್ಲಿ ಹಿಂದೂ ಮಾಧ್ಯಮಗಳು ಒಂದೂ ಇಲ್ಲ ಎಂದು ಪೋಸ್ಟ್‌ ಮಾಡಿದ್ದಾನೆ. ಒಟ್ಟಿನಲ್ಲಿ ಈತನ ಪೋಸ್ಟ್‌ಗಳ್ಲಿ ವಿಪರೀತ ದ್ವೇಷವೇ ತುಂಬಿಕೊಂಡಿದೆ. ಈ ಪ್ರತಿಕಾರವನ್ನು ಚಂದನ್‌ ಅಣ್ಣನಿಗೆ ಅರ್ಪಿಸುತ್ತೇನೆ ಎಂದು ಬರೆದುಕೊಂಡಿದ್ದಾನೆ. ನಾನೋಬ್ಬನೇ ಹಿಂದು ಇಲ್ಲಿರುವುದು ಎಂದು ಬರೆದಿದ್ದಾನೆ. ನನ್ನ ಕುಟುಂಬದ ಬಗ್ಗೆ ಕಾಳಜಿ ವಹಿಸಿ,

ಒಂದು ಪೋಸ್ಟ್‌ನಲ್ಲಿ, ತನಗೆ ಕರೆ ಮಾಡದಂತೆ ತನ್ನ ಫೇಸ್‌ಬುಕ್ ಸ್ನೇಹಿತರನ್ನು ಒತ್ತಾಯಿಸಿದ್ದಾನೆ. ಎಲ್ಲಾ ಪೋಸ್ಟ್‌ಗಳು ಹಿಂದಿಯಲ್ಲಿವೆ.

ಆತನ ಫೇಸ್‌ಬುಕ್‌ ಕವರ್‌ ಫೋಟೊದಲ್ಲಿ ಆತ ಹರಿತವಾದ ತಲ್ವಾರ್‌(ಮಚ್ಚು)ಗೆ ಮುತ್ತು ಕೊಡುತ್ತಿರುವ ಫೋಟೊ ಹಾಕಿದ್ದಾನೆ. ಕೇಸರಿ ಬಣ್ಣದ ಬಟ್ಟೆಗಳ ಅವನ ಫೋಟೊಗಳು ಫೇಸ್‌ಬುಕ್‌ನಲ್ಲಿವೆ. ಜೈಶ್ರೀರಾಮ್‌,

ಪಿಸ್ತೂಲ್ ಹೊತ್ತುಕೊಂಡಿದ್ದ ಗೋಪಾಲ್ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದು, ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಜನಸಮೂಹವು ಅವನನ್ನು ಹಿಡಿಯಿತು ಮತ್ತು ನಂತರ ಪೊಲೀಸರು ಆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

“ನಾವು ಹೋಲಿ ಫ್ಯಾಮಿಲಿ ಆಸ್ಪತ್ರೆಯತ್ತ ಸಾಗುತ್ತಿದ್ದೆವು, ಅಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಇದ್ದಕ್ಕಿದ್ದಂತೆ, ಬಂದೂಕು ಹಿಡಿದ ವ್ಯಕ್ತಿಯೊಬ್ಬರು ಹೊರಗೆ ಬಂದು ಗುಂಡು ಹಾರಿಸಿದರು. ಒಂದು ಗುಂಡು ನನ್ನ ಸ್ನೇಹಿತನ ಕೈಗೆ ಬಡಿಯಿತು ”ಎಂದು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ವಿದ್ಯಾರ್ಥಿನಿ ಆಮ್ನಾ ಆಸಿಫ್ ಪಿಟಿಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...