Homeಕರ್ನಾಟಕಬಿಜೆಪಿಯಲ್ಲೇ ಉಳಿಯಲು ರಾಮದಾಸ್ ನಿರ್ಧಾರ; ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದೇನು?

ಬಿಜೆಪಿಯಲ್ಲೇ ಉಳಿಯಲು ರಾಮದಾಸ್ ನಿರ್ಧಾರ; ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದೇನು?

- Advertisement -
- Advertisement -

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅವರು ಮಂಗಳವಾರ ಸಂಜೆ ಜನರೊಂದಿಗೆ ಸಭೆ ನಡೆಸಿದ್ದು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಮುಖಂಡರ ಭೇಟಿಗೂ ನಿರಾಕರಿಸಿದ್ದ ರಾಮದಾಸ್ ಅವರು ಬಂಡಾಯ ಏಳುವ ಸೂಚನೆಗಳು ದೊರೆತ್ತಿದ್ದವು. ಆದರೆ ಅಂತಿಮವಾಗಿ ಪಕ್ಷದಲ್ಲೇ ಉಳಿಯಲು ನಿರ್ಧರಿಸಿದ್ದಾರೆ.

ಕ್ಷೇತ್ರದ ಜನರೊಂದಿಗೆ ಮಾತನಾಡಿದ ಅವರು, ತಾವು ನಡೆದುಬಂದ ರಾಜಕಾರಣವನ್ನು ಮೆಲುಕು ಹಾಕಿದರು. ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿದರು. “ನಾನು ಶಾಸಕನಾಗಿರಲಿ, ಇಲ್ಲದಿರಲಿ ನನ್ನ ಕಚೇರಿ ತೆರೆದಿರುತ್ತದೆ. ಕ್ಷೇತ್ರದ ಪ್ರತಿ ವಾರ್ಡ್‌ನ ಮನೆಗೂ ಭೇಟಿ ನೀಡಿ ಊಟ ಉಪಚಾರ ಮಾಡುತ್ತೇನೆ. ಕ್ಷೇತ್ರದಲ್ಲಿ ನಿರಂತರ ಸಂಪರ್ಕದಲ್ಲಿ ಇರುತ್ತೇನೆ” ಎಂದು ಘೋಷಿಸಿದ್ದಾರೆ.

“ಶಾಸಕನಾದ ನಾನು ಪ್ರತಿಯೊಂದು ಬೂತ್‌ನ ಅಧ್ಯಕ್ಷರ ಮನೆಗೆ ಬರುತ್ತೇನೆ. ನಿಮ್ಮ ಮನೆಯಲ್ಲೇ ಊಟ ಮಾಡುತ್ತೇನೆ. ನಿಮ್ಮ ಯೋಗಕ್ಷೇಮ ವಿಚಾರಿಸುತ್ತೇನೆ. ಕಾರ್ಯಕರ್ತರೇ ಆಸ್ತಿ. ನನ್ನನ್ನು ಅಣ್ಣನ ಸ್ಥಾನದಲ್ಲಿ ನೋಡುತ್ತಿದ್ದೀರಿ. ಕೊನೆಯುಸಿರು ಇರುವವರೆಗೂ ನಿಮ್ಮ ಕ್ಷೇಮವನ್ನು ವಿಚಾರಿಸುತ್ತೇನೆ. ಶಾಸಕರ ಕಚೇರಿ ಇದೆ. ನಾನು ಶಾಸಕನಾಗಿ ಇರುತ್ತೇನೋ ಬಿಡುತ್ತೇನೋ ಬೇರೆ ವಿಷಯ. ಆದರೆ ನನ್ನ ಕಚೇರಿ ಜನರ ಸೇವೆಗಾಗಿ ತೆರೆದಿರುತ್ತದೆ” ಎಂದಿದ್ದಾರೆ.

“ಶಾಸಕನಾಗಿ ಸೇವೆ ಮಾಡುವುದಕ್ಕಾಗಿ ಸರ್ವೇ ಮಾಡಿಸಿದೆ. ಜಾತಿ ಮತ ಎಲ್ಲವನ್ನೂ ಮೀರಿ ನನಗೆ ಬೆಂಬಲ ನೀಡಿದ್ದಾರೆ. ಚುನಾವಣೆಯಲ್ಲಿ ನಿಂತರೆ ಹನ್ನೊಂದರಿಂದ ಹನ್ನೆರಡು ಸಾವಿರ ಮತಗಳಲ್ಲಿ ಗೆಲ್ಲುತ್ತೇನೆ ಅಂತ ಸಮೀಕ್ಷೆಯಲ್ಲಿ ತಿಳಿದುಬಂದಿದೆ.

“ಮೋದಿಯವರು ಮಾಡಿದ ಪ್ರಶಂಸೆ ನನಗೆ ನೆನಪಿದೆ. ಪಕ್ಷ ಮುಖ್ಯನಾ? ನೋವು ಮುಖ್ಯನಾ ಎಂದು ಪ್ರಶ್ನೆ ಬರುತ್ತದೆ. ಜಗದೀಶ್‌ ಶೆಟ್ಟರು ನಮ್ಮ ಮುಂದೆ ಇದ್ದಾರೆ. ಅವರಿಗೆ ಅನಿಸಿದ ನಿರ್ಧಾರ ತೆಗೆದುಕೊಂಡಿದ್ದಾರೆ. ವೈಯಕ್ತಿಕ ವಿಷಯ ಮುಖ್ಯನಾ? ಪಕ್ಷದ ವಿಚಾರ ಮುಖ್ಯನಾ? ದೇಶವನ್ನು ಕಾಪಾಡುತ್ತಿರುವ ಮಹಾನ್ ನಾಯಕ ಮೋದಿಯವರು ಮುಖ್ಯನಾ? ಎಂಬ ತೊಳಲಾಟದಲ್ಲಿ ಇದ್ದೇನೆ. ಹನ್ನೊಂದು ಸಾವಿರ ಪ್ರಮುಖರು ನನ್ನನ್ನು ಮನೆಯ ಮಗ ಎಂದು ಸ್ವೀಕರಿಸಿದ್ದೀರಿ. ಕಠಿಣವಾದ ಸಂದರ್ಭದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂಬುದು ಮುಖ್ಯವಾಗುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳಿದರು.

“ನನ್ನ ನಿರ್ಧಾರ ನಿಮಗೆ ಕೆಟ್ಟದ್ದು ಅನಿಸಿದರೂ ಅದು ಒಳ್ಳೆಯ ನಿರ್ಧಾರವೆಂದು ನಾನು ಭಾವಿಸಿರುವೆ. ಅದನ್ನು ದಯವಿಟ್ಟು ಸ್ವೀಕರಿಸಬೇಕು. ಆರ್‌ಎಸ್‌ಎಸ್‌ನ ಸ್ವಯಂಸೇವಕನಾದ ನಾನು ಹೇಗೆ ಪಕ್ಷವನ್ನು ಕಟ್ಟಿ ಬೆಳೆಸಿದೆನೋ ಹಾಗೆಯೇ ನಡೆದುಕೊಂಡು ಹೋಗಬೇಕಾಗಿರುವುದು ಮುಖ್ಯವಾಗುತ್ತದೆ” ಎಂದಿದ್ದಾರೆ.

“ಪಕ್ಷದ ನಿರ್ಣಯವನ್ನು ತೆಗೆದುಕೊಳ್ಳಬೇಕು. ಭಾರತಾಂಬೆಯ ಗೌರವವನ್ನು ಹೆಚ್ಚಿಸುವ ಸಂದರ್ಭ ಇದು. ನಿಮ್ಮ ಶಾಸಕ ನಿಮ್ಮ ಮನೆಯಲ್ಲಿಯೇ ಇರುತ್ತಾನೆ. ಭಾರತೀಯ ಜನತಾ ಪಕ್ಷವನ್ನು ನಡೆಸಿಕೊಂಡು ಹೋಗಬೇಕಾಗಿದೆ. ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ನಿಮ್ಮ ಹಿತದೃಷ್ಟಿಯಿಂದ ಮತ್ತು ಕ್ಷೇತ್ರದ ಹಿತಾದೃಷ್ಟಿಯಿಂದ ಆಗಿರುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಈ ಮೂರು ದಿನಗಳ ಅವಧಿಯಲ್ಲಿ ಯಾರ್‍ಯಾರು ಹೋದರು, ಯಾರ್‍ಯಾರು ಬಂದರು ಎಂದು ತಿಳಿಸಿದೆ. ಈ ಕ್ಷೇತ್ರದ ಶೇ. 90ರಷ್ಟು ಪದಾಧಿಕಾರಿಗಳು ನನ್ನ ಜೊತೆ ಇದ್ದೀರಿ. ಇದಕ್ಕೆ ನನ್ನ ಜೀವನ ಸಾರ್ಥಕವಾಯಿತು” ಎಂದು ಭಾವುಕವಾಗಿ ನುಡಿದ್ದಾರೆ.

“ಕಾರ್ಯಕರ್ತರ ಯೋಗ ಕ್ಷೇಮ ಮಾಡುತ್ತಿದ್ದೇನೆ. 400 ಕಿಮೀ ರಸ್ತೆ ಆಗಿದೆ, ಇನ್ನೊಂದಿಷ್ಟು ಆಗಬೇಕಾಗಿದೆ.
ಕಬಿನಿಯಿಂದ ನೀರು ಸರಬರಾಜು ಆಗುತ್ತಿದೆ. 120 ಪಾರ್ಕ್‌ಗಳ ಅಭಿವೃದ್ಧಿಯಾಗಿದೆ. ರಾಜಕಾಲುವೆ ಒತ್ತುವರಿ ತೆರವು ಮಾಡಿಸುತ್ತಿದ್ದೇವೆ. ಬಾಡಿಗೆ ಮನೆಯಲ್ಲಿರುವವರಿಗೆ ಮನೆ ಕೊಡಿಸಲು 4500 ಮನೆ ನಿರ್ಮಾಣ ಮಾಡುತ್ತಿದ್ದೇವೆ. ಮನೆಗಳ ಕಾರ್ಯ ಆರಂಭವಾಗಿದೆ. ಬ್ಯಾಂಕ್‌ಗಳು ಒಪ್ಪಿಗೆ ಕೊಟ್ಟಿವೆ” ಎಂದು ವಿವರಿಸಿದ್ದಾರೆ.

“ಇಷ್ಟೆಲ್ಲ ಕೆಲಸ ನಿರಂತರವಾಗಿ ಮಾಡಿದ್ದೇನೆ. 265 ಬೂತ್‌ಗಳಲ್ಲಿ ಸಭೆ ಕರೆದು ಅಭಿಪ್ರಾಯ ತಿಳಿಸಿದ್ದೀರಿ. ನಿಮ್ಮ ಭಾವನೆಗಳನ್ನು ಸ್ಪಷ್ಟಪಡಿಸಿದ್ದೀರಿ. ನಾನು ಒಂದು ಪಕ್ಷದ ವ್ಯವಸ್ಥೆಯಲ್ಲಿ ಬಂದಿರುವವನು. ಬಿ.ಎಸ್.ಯಡಿಯೂರಪ್ಪ ಮತ್ತು ಅನಂತಕುಮಾರ್‌ ಅವರಿಂದಾಗಿ ಎರಡು ಅವಧಿಯಲ್ಲಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷನಾಗಿದ್ದೆ. ಅದನ್ನು ನಾನು ಮರೆಯಲ್ಲ. ಪಕ್ಷ ನನ್ನ ತಾಯಿ ಸಮಾನ” ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿರಿ: ಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

ನೋವುಗಳನ್ನು ಅನುಭವಿಸಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದಾಗ ಅನೇಕ ಕಡೆ ಬೆಂಕಿ ಹಚ್ಚಿದವರಿದ್ದಾರೆ. ನನ್ನ ಕ್ಷೇತ್ರದ ಜನ ಯಾವತ್ತೂ ಜಗಳ ಮಾಡಲಿಲ್ಲ. ಈ ಬಾರಿ ಕೂಡ ಮಂತ್ರಿ ಸ್ಥಾನ ಕೊಡಲಿಲ್ಲ. ಹೊರಗಿನವರಿಗೆ ಕೊಟ್ಟರು. ನಾನು ಆಗಲೂ ಮಾತನಾಡಲಿಲ್ಲ. ನೀವು ತಾಳ್ಮೆಯಿಂದ ಇದ್ದೀರಿ. ಐದು ವರ್ಷಗಳಿಂದ ಮಂತ್ರಿ ಸ್ಥಾನವನ್ನು ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹನ್ನೊಂದು ಶಾಸಕರು ಈ ಭಾಗದಲ್ಲಿ ಬಂದು ಹೋಗಿದ್ದಾರೆ. ಉಳಿದವನು ನಾನೊಬ್ಬ ಮಾತ್ರ. ಈ ಮೂವತ್ತು ವರ್ಷಗಳ ಕಾಲ ಎಲ್ಲ ನೋವುಗಳನ್ನು ಸಹಿಸಿಕೊಂಡು ಸ್ವಯಂ ಸೇವಕನಾಗಿ ಜೀವನ ನಡೆಸುತ್ತಾ ಬಂದಿರುವೆ. ರಾಜಕಾರಣದಲ್ಲಿ ಆಪಾದನೆಗಳು ಬರುತ್ತವೆ. ನೋವಾಗುತ್ತವೆ. ಆದರೆ ಮಹಾಭಾರತ ನೆನಪಾಗುತ್ತದೆ. ಕೃಷ್ಣನನ್ನೇ ಕಳ್ಳ ಎಂದರು, ನೀನ್ಯಾವ ಮಹಾ ಎನಿಸುತ್ತದೆ ಎಂದು ಮೆಲುಕು ಹಾಕಿದ್ದಾರೆ.

“ನನ್ನ ಜೀವನ ಇರುವವರೆಗೂ ಕಾರ್ಯಕರ್ತರ ಮನೆಯಾಳು. ಅವರ ಯೋಗಕ್ಷೇಮಕ್ಕಾಗಿ ಇರುತ್ತೇನೆ. ಆಗಿಬೇಕಾಗಿರುವ ಕೆಲಸಗಳು ಮುಂದೆ ಪೂರ್ಣವಾಗುತ್ತವೆಯೋ ಇಲ್ಲವೋ ಇಲ್ಲವೋ ಎಂಬ ಆತಂಕವಿದೆ” ಎಂದೂ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...