Homeಕರ್ನಾಟಕಬಿಜೆಪಿಯಲ್ಲೇ ಉಳಿಯಲು ರಾಮದಾಸ್ ನಿರ್ಧಾರ; ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದೇನು?

ಬಿಜೆಪಿಯಲ್ಲೇ ಉಳಿಯಲು ರಾಮದಾಸ್ ನಿರ್ಧಾರ; ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದೇನು?

- Advertisement -
- Advertisement -

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅವರು ಮಂಗಳವಾರ ಸಂಜೆ ಜನರೊಂದಿಗೆ ಸಭೆ ನಡೆಸಿದ್ದು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಮುಖಂಡರ ಭೇಟಿಗೂ ನಿರಾಕರಿಸಿದ್ದ ರಾಮದಾಸ್ ಅವರು ಬಂಡಾಯ ಏಳುವ ಸೂಚನೆಗಳು ದೊರೆತ್ತಿದ್ದವು. ಆದರೆ ಅಂತಿಮವಾಗಿ ಪಕ್ಷದಲ್ಲೇ ಉಳಿಯಲು ನಿರ್ಧರಿಸಿದ್ದಾರೆ.

ಕ್ಷೇತ್ರದ ಜನರೊಂದಿಗೆ ಮಾತನಾಡಿದ ಅವರು, ತಾವು ನಡೆದುಬಂದ ರಾಜಕಾರಣವನ್ನು ಮೆಲುಕು ಹಾಕಿದರು. ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿದರು. “ನಾನು ಶಾಸಕನಾಗಿರಲಿ, ಇಲ್ಲದಿರಲಿ ನನ್ನ ಕಚೇರಿ ತೆರೆದಿರುತ್ತದೆ. ಕ್ಷೇತ್ರದ ಪ್ರತಿ ವಾರ್ಡ್‌ನ ಮನೆಗೂ ಭೇಟಿ ನೀಡಿ ಊಟ ಉಪಚಾರ ಮಾಡುತ್ತೇನೆ. ಕ್ಷೇತ್ರದಲ್ಲಿ ನಿರಂತರ ಸಂಪರ್ಕದಲ್ಲಿ ಇರುತ್ತೇನೆ” ಎಂದು ಘೋಷಿಸಿದ್ದಾರೆ.

“ಶಾಸಕನಾದ ನಾನು ಪ್ರತಿಯೊಂದು ಬೂತ್‌ನ ಅಧ್ಯಕ್ಷರ ಮನೆಗೆ ಬರುತ್ತೇನೆ. ನಿಮ್ಮ ಮನೆಯಲ್ಲೇ ಊಟ ಮಾಡುತ್ತೇನೆ. ನಿಮ್ಮ ಯೋಗಕ್ಷೇಮ ವಿಚಾರಿಸುತ್ತೇನೆ. ಕಾರ್ಯಕರ್ತರೇ ಆಸ್ತಿ. ನನ್ನನ್ನು ಅಣ್ಣನ ಸ್ಥಾನದಲ್ಲಿ ನೋಡುತ್ತಿದ್ದೀರಿ. ಕೊನೆಯುಸಿರು ಇರುವವರೆಗೂ ನಿಮ್ಮ ಕ್ಷೇಮವನ್ನು ವಿಚಾರಿಸುತ್ತೇನೆ. ಶಾಸಕರ ಕಚೇರಿ ಇದೆ. ನಾನು ಶಾಸಕನಾಗಿ ಇರುತ್ತೇನೋ ಬಿಡುತ್ತೇನೋ ಬೇರೆ ವಿಷಯ. ಆದರೆ ನನ್ನ ಕಚೇರಿ ಜನರ ಸೇವೆಗಾಗಿ ತೆರೆದಿರುತ್ತದೆ” ಎಂದಿದ್ದಾರೆ.

“ಶಾಸಕನಾಗಿ ಸೇವೆ ಮಾಡುವುದಕ್ಕಾಗಿ ಸರ್ವೇ ಮಾಡಿಸಿದೆ. ಜಾತಿ ಮತ ಎಲ್ಲವನ್ನೂ ಮೀರಿ ನನಗೆ ಬೆಂಬಲ ನೀಡಿದ್ದಾರೆ. ಚುನಾವಣೆಯಲ್ಲಿ ನಿಂತರೆ ಹನ್ನೊಂದರಿಂದ ಹನ್ನೆರಡು ಸಾವಿರ ಮತಗಳಲ್ಲಿ ಗೆಲ್ಲುತ್ತೇನೆ ಅಂತ ಸಮೀಕ್ಷೆಯಲ್ಲಿ ತಿಳಿದುಬಂದಿದೆ.

“ಮೋದಿಯವರು ಮಾಡಿದ ಪ್ರಶಂಸೆ ನನಗೆ ನೆನಪಿದೆ. ಪಕ್ಷ ಮುಖ್ಯನಾ? ನೋವು ಮುಖ್ಯನಾ ಎಂದು ಪ್ರಶ್ನೆ ಬರುತ್ತದೆ. ಜಗದೀಶ್‌ ಶೆಟ್ಟರು ನಮ್ಮ ಮುಂದೆ ಇದ್ದಾರೆ. ಅವರಿಗೆ ಅನಿಸಿದ ನಿರ್ಧಾರ ತೆಗೆದುಕೊಂಡಿದ್ದಾರೆ. ವೈಯಕ್ತಿಕ ವಿಷಯ ಮುಖ್ಯನಾ? ಪಕ್ಷದ ವಿಚಾರ ಮುಖ್ಯನಾ? ದೇಶವನ್ನು ಕಾಪಾಡುತ್ತಿರುವ ಮಹಾನ್ ನಾಯಕ ಮೋದಿಯವರು ಮುಖ್ಯನಾ? ಎಂಬ ತೊಳಲಾಟದಲ್ಲಿ ಇದ್ದೇನೆ. ಹನ್ನೊಂದು ಸಾವಿರ ಪ್ರಮುಖರು ನನ್ನನ್ನು ಮನೆಯ ಮಗ ಎಂದು ಸ್ವೀಕರಿಸಿದ್ದೀರಿ. ಕಠಿಣವಾದ ಸಂದರ್ಭದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂಬುದು ಮುಖ್ಯವಾಗುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳಿದರು.

“ನನ್ನ ನಿರ್ಧಾರ ನಿಮಗೆ ಕೆಟ್ಟದ್ದು ಅನಿಸಿದರೂ ಅದು ಒಳ್ಳೆಯ ನಿರ್ಧಾರವೆಂದು ನಾನು ಭಾವಿಸಿರುವೆ. ಅದನ್ನು ದಯವಿಟ್ಟು ಸ್ವೀಕರಿಸಬೇಕು. ಆರ್‌ಎಸ್‌ಎಸ್‌ನ ಸ್ವಯಂಸೇವಕನಾದ ನಾನು ಹೇಗೆ ಪಕ್ಷವನ್ನು ಕಟ್ಟಿ ಬೆಳೆಸಿದೆನೋ ಹಾಗೆಯೇ ನಡೆದುಕೊಂಡು ಹೋಗಬೇಕಾಗಿರುವುದು ಮುಖ್ಯವಾಗುತ್ತದೆ” ಎಂದಿದ್ದಾರೆ.

“ಪಕ್ಷದ ನಿರ್ಣಯವನ್ನು ತೆಗೆದುಕೊಳ್ಳಬೇಕು. ಭಾರತಾಂಬೆಯ ಗೌರವವನ್ನು ಹೆಚ್ಚಿಸುವ ಸಂದರ್ಭ ಇದು. ನಿಮ್ಮ ಶಾಸಕ ನಿಮ್ಮ ಮನೆಯಲ್ಲಿಯೇ ಇರುತ್ತಾನೆ. ಭಾರತೀಯ ಜನತಾ ಪಕ್ಷವನ್ನು ನಡೆಸಿಕೊಂಡು ಹೋಗಬೇಕಾಗಿದೆ. ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ನಿಮ್ಮ ಹಿತದೃಷ್ಟಿಯಿಂದ ಮತ್ತು ಕ್ಷೇತ್ರದ ಹಿತಾದೃಷ್ಟಿಯಿಂದ ಆಗಿರುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಈ ಮೂರು ದಿನಗಳ ಅವಧಿಯಲ್ಲಿ ಯಾರ್‍ಯಾರು ಹೋದರು, ಯಾರ್‍ಯಾರು ಬಂದರು ಎಂದು ತಿಳಿಸಿದೆ. ಈ ಕ್ಷೇತ್ರದ ಶೇ. 90ರಷ್ಟು ಪದಾಧಿಕಾರಿಗಳು ನನ್ನ ಜೊತೆ ಇದ್ದೀರಿ. ಇದಕ್ಕೆ ನನ್ನ ಜೀವನ ಸಾರ್ಥಕವಾಯಿತು” ಎಂದು ಭಾವುಕವಾಗಿ ನುಡಿದ್ದಾರೆ.

“ಕಾರ್ಯಕರ್ತರ ಯೋಗ ಕ್ಷೇಮ ಮಾಡುತ್ತಿದ್ದೇನೆ. 400 ಕಿಮೀ ರಸ್ತೆ ಆಗಿದೆ, ಇನ್ನೊಂದಿಷ್ಟು ಆಗಬೇಕಾಗಿದೆ.
ಕಬಿನಿಯಿಂದ ನೀರು ಸರಬರಾಜು ಆಗುತ್ತಿದೆ. 120 ಪಾರ್ಕ್‌ಗಳ ಅಭಿವೃದ್ಧಿಯಾಗಿದೆ. ರಾಜಕಾಲುವೆ ಒತ್ತುವರಿ ತೆರವು ಮಾಡಿಸುತ್ತಿದ್ದೇವೆ. ಬಾಡಿಗೆ ಮನೆಯಲ್ಲಿರುವವರಿಗೆ ಮನೆ ಕೊಡಿಸಲು 4500 ಮನೆ ನಿರ್ಮಾಣ ಮಾಡುತ್ತಿದ್ದೇವೆ. ಮನೆಗಳ ಕಾರ್ಯ ಆರಂಭವಾಗಿದೆ. ಬ್ಯಾಂಕ್‌ಗಳು ಒಪ್ಪಿಗೆ ಕೊಟ್ಟಿವೆ” ಎಂದು ವಿವರಿಸಿದ್ದಾರೆ.

“ಇಷ್ಟೆಲ್ಲ ಕೆಲಸ ನಿರಂತರವಾಗಿ ಮಾಡಿದ್ದೇನೆ. 265 ಬೂತ್‌ಗಳಲ್ಲಿ ಸಭೆ ಕರೆದು ಅಭಿಪ್ರಾಯ ತಿಳಿಸಿದ್ದೀರಿ. ನಿಮ್ಮ ಭಾವನೆಗಳನ್ನು ಸ್ಪಷ್ಟಪಡಿಸಿದ್ದೀರಿ. ನಾನು ಒಂದು ಪಕ್ಷದ ವ್ಯವಸ್ಥೆಯಲ್ಲಿ ಬಂದಿರುವವನು. ಬಿ.ಎಸ್.ಯಡಿಯೂರಪ್ಪ ಮತ್ತು ಅನಂತಕುಮಾರ್‌ ಅವರಿಂದಾಗಿ ಎರಡು ಅವಧಿಯಲ್ಲಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷನಾಗಿದ್ದೆ. ಅದನ್ನು ನಾನು ಮರೆಯಲ್ಲ. ಪಕ್ಷ ನನ್ನ ತಾಯಿ ಸಮಾನ” ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿರಿ: ಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

ನೋವುಗಳನ್ನು ಅನುಭವಿಸಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದಾಗ ಅನೇಕ ಕಡೆ ಬೆಂಕಿ ಹಚ್ಚಿದವರಿದ್ದಾರೆ. ನನ್ನ ಕ್ಷೇತ್ರದ ಜನ ಯಾವತ್ತೂ ಜಗಳ ಮಾಡಲಿಲ್ಲ. ಈ ಬಾರಿ ಕೂಡ ಮಂತ್ರಿ ಸ್ಥಾನ ಕೊಡಲಿಲ್ಲ. ಹೊರಗಿನವರಿಗೆ ಕೊಟ್ಟರು. ನಾನು ಆಗಲೂ ಮಾತನಾಡಲಿಲ್ಲ. ನೀವು ತಾಳ್ಮೆಯಿಂದ ಇದ್ದೀರಿ. ಐದು ವರ್ಷಗಳಿಂದ ಮಂತ್ರಿ ಸ್ಥಾನವನ್ನು ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹನ್ನೊಂದು ಶಾಸಕರು ಈ ಭಾಗದಲ್ಲಿ ಬಂದು ಹೋಗಿದ್ದಾರೆ. ಉಳಿದವನು ನಾನೊಬ್ಬ ಮಾತ್ರ. ಈ ಮೂವತ್ತು ವರ್ಷಗಳ ಕಾಲ ಎಲ್ಲ ನೋವುಗಳನ್ನು ಸಹಿಸಿಕೊಂಡು ಸ್ವಯಂ ಸೇವಕನಾಗಿ ಜೀವನ ನಡೆಸುತ್ತಾ ಬಂದಿರುವೆ. ರಾಜಕಾರಣದಲ್ಲಿ ಆಪಾದನೆಗಳು ಬರುತ್ತವೆ. ನೋವಾಗುತ್ತವೆ. ಆದರೆ ಮಹಾಭಾರತ ನೆನಪಾಗುತ್ತದೆ. ಕೃಷ್ಣನನ್ನೇ ಕಳ್ಳ ಎಂದರು, ನೀನ್ಯಾವ ಮಹಾ ಎನಿಸುತ್ತದೆ ಎಂದು ಮೆಲುಕು ಹಾಕಿದ್ದಾರೆ.

“ನನ್ನ ಜೀವನ ಇರುವವರೆಗೂ ಕಾರ್ಯಕರ್ತರ ಮನೆಯಾಳು. ಅವರ ಯೋಗಕ್ಷೇಮಕ್ಕಾಗಿ ಇರುತ್ತೇನೆ. ಆಗಿಬೇಕಾಗಿರುವ ಕೆಲಸಗಳು ಮುಂದೆ ಪೂರ್ಣವಾಗುತ್ತವೆಯೋ ಇಲ್ಲವೋ ಇಲ್ಲವೋ ಎಂಬ ಆತಂಕವಿದೆ” ಎಂದೂ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...