Homeಕರ್ನಾಟಕಬಿಜೆಪಿಯಲ್ಲೇ ಉಳಿಯಲು ರಾಮದಾಸ್ ನಿರ್ಧಾರ; ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದೇನು?

ಬಿಜೆಪಿಯಲ್ಲೇ ಉಳಿಯಲು ರಾಮದಾಸ್ ನಿರ್ಧಾರ; ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದೇನು?

- Advertisement -
- Advertisement -

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅವರು ಮಂಗಳವಾರ ಸಂಜೆ ಜನರೊಂದಿಗೆ ಸಭೆ ನಡೆಸಿದ್ದು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಮುಖಂಡರ ಭೇಟಿಗೂ ನಿರಾಕರಿಸಿದ್ದ ರಾಮದಾಸ್ ಅವರು ಬಂಡಾಯ ಏಳುವ ಸೂಚನೆಗಳು ದೊರೆತ್ತಿದ್ದವು. ಆದರೆ ಅಂತಿಮವಾಗಿ ಪಕ್ಷದಲ್ಲೇ ಉಳಿಯಲು ನಿರ್ಧರಿಸಿದ್ದಾರೆ.

ಕ್ಷೇತ್ರದ ಜನರೊಂದಿಗೆ ಮಾತನಾಡಿದ ಅವರು, ತಾವು ನಡೆದುಬಂದ ರಾಜಕಾರಣವನ್ನು ಮೆಲುಕು ಹಾಕಿದರು. ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿದರು. “ನಾನು ಶಾಸಕನಾಗಿರಲಿ, ಇಲ್ಲದಿರಲಿ ನನ್ನ ಕಚೇರಿ ತೆರೆದಿರುತ್ತದೆ. ಕ್ಷೇತ್ರದ ಪ್ರತಿ ವಾರ್ಡ್‌ನ ಮನೆಗೂ ಭೇಟಿ ನೀಡಿ ಊಟ ಉಪಚಾರ ಮಾಡುತ್ತೇನೆ. ಕ್ಷೇತ್ರದಲ್ಲಿ ನಿರಂತರ ಸಂಪರ್ಕದಲ್ಲಿ ಇರುತ್ತೇನೆ” ಎಂದು ಘೋಷಿಸಿದ್ದಾರೆ.

“ಶಾಸಕನಾದ ನಾನು ಪ್ರತಿಯೊಂದು ಬೂತ್‌ನ ಅಧ್ಯಕ್ಷರ ಮನೆಗೆ ಬರುತ್ತೇನೆ. ನಿಮ್ಮ ಮನೆಯಲ್ಲೇ ಊಟ ಮಾಡುತ್ತೇನೆ. ನಿಮ್ಮ ಯೋಗಕ್ಷೇಮ ವಿಚಾರಿಸುತ್ತೇನೆ. ಕಾರ್ಯಕರ್ತರೇ ಆಸ್ತಿ. ನನ್ನನ್ನು ಅಣ್ಣನ ಸ್ಥಾನದಲ್ಲಿ ನೋಡುತ್ತಿದ್ದೀರಿ. ಕೊನೆಯುಸಿರು ಇರುವವರೆಗೂ ನಿಮ್ಮ ಕ್ಷೇಮವನ್ನು ವಿಚಾರಿಸುತ್ತೇನೆ. ಶಾಸಕರ ಕಚೇರಿ ಇದೆ. ನಾನು ಶಾಸಕನಾಗಿ ಇರುತ್ತೇನೋ ಬಿಡುತ್ತೇನೋ ಬೇರೆ ವಿಷಯ. ಆದರೆ ನನ್ನ ಕಚೇರಿ ಜನರ ಸೇವೆಗಾಗಿ ತೆರೆದಿರುತ್ತದೆ” ಎಂದಿದ್ದಾರೆ.

“ಶಾಸಕನಾಗಿ ಸೇವೆ ಮಾಡುವುದಕ್ಕಾಗಿ ಸರ್ವೇ ಮಾಡಿಸಿದೆ. ಜಾತಿ ಮತ ಎಲ್ಲವನ್ನೂ ಮೀರಿ ನನಗೆ ಬೆಂಬಲ ನೀಡಿದ್ದಾರೆ. ಚುನಾವಣೆಯಲ್ಲಿ ನಿಂತರೆ ಹನ್ನೊಂದರಿಂದ ಹನ್ನೆರಡು ಸಾವಿರ ಮತಗಳಲ್ಲಿ ಗೆಲ್ಲುತ್ತೇನೆ ಅಂತ ಸಮೀಕ್ಷೆಯಲ್ಲಿ ತಿಳಿದುಬಂದಿದೆ.

“ಮೋದಿಯವರು ಮಾಡಿದ ಪ್ರಶಂಸೆ ನನಗೆ ನೆನಪಿದೆ. ಪಕ್ಷ ಮುಖ್ಯನಾ? ನೋವು ಮುಖ್ಯನಾ ಎಂದು ಪ್ರಶ್ನೆ ಬರುತ್ತದೆ. ಜಗದೀಶ್‌ ಶೆಟ್ಟರು ನಮ್ಮ ಮುಂದೆ ಇದ್ದಾರೆ. ಅವರಿಗೆ ಅನಿಸಿದ ನಿರ್ಧಾರ ತೆಗೆದುಕೊಂಡಿದ್ದಾರೆ. ವೈಯಕ್ತಿಕ ವಿಷಯ ಮುಖ್ಯನಾ? ಪಕ್ಷದ ವಿಚಾರ ಮುಖ್ಯನಾ? ದೇಶವನ್ನು ಕಾಪಾಡುತ್ತಿರುವ ಮಹಾನ್ ನಾಯಕ ಮೋದಿಯವರು ಮುಖ್ಯನಾ? ಎಂಬ ತೊಳಲಾಟದಲ್ಲಿ ಇದ್ದೇನೆ. ಹನ್ನೊಂದು ಸಾವಿರ ಪ್ರಮುಖರು ನನ್ನನ್ನು ಮನೆಯ ಮಗ ಎಂದು ಸ್ವೀಕರಿಸಿದ್ದೀರಿ. ಕಠಿಣವಾದ ಸಂದರ್ಭದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂಬುದು ಮುಖ್ಯವಾಗುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳಿದರು.

“ನನ್ನ ನಿರ್ಧಾರ ನಿಮಗೆ ಕೆಟ್ಟದ್ದು ಅನಿಸಿದರೂ ಅದು ಒಳ್ಳೆಯ ನಿರ್ಧಾರವೆಂದು ನಾನು ಭಾವಿಸಿರುವೆ. ಅದನ್ನು ದಯವಿಟ್ಟು ಸ್ವೀಕರಿಸಬೇಕು. ಆರ್‌ಎಸ್‌ಎಸ್‌ನ ಸ್ವಯಂಸೇವಕನಾದ ನಾನು ಹೇಗೆ ಪಕ್ಷವನ್ನು ಕಟ್ಟಿ ಬೆಳೆಸಿದೆನೋ ಹಾಗೆಯೇ ನಡೆದುಕೊಂಡು ಹೋಗಬೇಕಾಗಿರುವುದು ಮುಖ್ಯವಾಗುತ್ತದೆ” ಎಂದಿದ್ದಾರೆ.

“ಪಕ್ಷದ ನಿರ್ಣಯವನ್ನು ತೆಗೆದುಕೊಳ್ಳಬೇಕು. ಭಾರತಾಂಬೆಯ ಗೌರವವನ್ನು ಹೆಚ್ಚಿಸುವ ಸಂದರ್ಭ ಇದು. ನಿಮ್ಮ ಶಾಸಕ ನಿಮ್ಮ ಮನೆಯಲ್ಲಿಯೇ ಇರುತ್ತಾನೆ. ಭಾರತೀಯ ಜನತಾ ಪಕ್ಷವನ್ನು ನಡೆಸಿಕೊಂಡು ಹೋಗಬೇಕಾಗಿದೆ. ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ನಿಮ್ಮ ಹಿತದೃಷ್ಟಿಯಿಂದ ಮತ್ತು ಕ್ಷೇತ್ರದ ಹಿತಾದೃಷ್ಟಿಯಿಂದ ಆಗಿರುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಈ ಮೂರು ದಿನಗಳ ಅವಧಿಯಲ್ಲಿ ಯಾರ್‍ಯಾರು ಹೋದರು, ಯಾರ್‍ಯಾರು ಬಂದರು ಎಂದು ತಿಳಿಸಿದೆ. ಈ ಕ್ಷೇತ್ರದ ಶೇ. 90ರಷ್ಟು ಪದಾಧಿಕಾರಿಗಳು ನನ್ನ ಜೊತೆ ಇದ್ದೀರಿ. ಇದಕ್ಕೆ ನನ್ನ ಜೀವನ ಸಾರ್ಥಕವಾಯಿತು” ಎಂದು ಭಾವುಕವಾಗಿ ನುಡಿದ್ದಾರೆ.

“ಕಾರ್ಯಕರ್ತರ ಯೋಗ ಕ್ಷೇಮ ಮಾಡುತ್ತಿದ್ದೇನೆ. 400 ಕಿಮೀ ರಸ್ತೆ ಆಗಿದೆ, ಇನ್ನೊಂದಿಷ್ಟು ಆಗಬೇಕಾಗಿದೆ.
ಕಬಿನಿಯಿಂದ ನೀರು ಸರಬರಾಜು ಆಗುತ್ತಿದೆ. 120 ಪಾರ್ಕ್‌ಗಳ ಅಭಿವೃದ್ಧಿಯಾಗಿದೆ. ರಾಜಕಾಲುವೆ ಒತ್ತುವರಿ ತೆರವು ಮಾಡಿಸುತ್ತಿದ್ದೇವೆ. ಬಾಡಿಗೆ ಮನೆಯಲ್ಲಿರುವವರಿಗೆ ಮನೆ ಕೊಡಿಸಲು 4500 ಮನೆ ನಿರ್ಮಾಣ ಮಾಡುತ್ತಿದ್ದೇವೆ. ಮನೆಗಳ ಕಾರ್ಯ ಆರಂಭವಾಗಿದೆ. ಬ್ಯಾಂಕ್‌ಗಳು ಒಪ್ಪಿಗೆ ಕೊಟ್ಟಿವೆ” ಎಂದು ವಿವರಿಸಿದ್ದಾರೆ.

“ಇಷ್ಟೆಲ್ಲ ಕೆಲಸ ನಿರಂತರವಾಗಿ ಮಾಡಿದ್ದೇನೆ. 265 ಬೂತ್‌ಗಳಲ್ಲಿ ಸಭೆ ಕರೆದು ಅಭಿಪ್ರಾಯ ತಿಳಿಸಿದ್ದೀರಿ. ನಿಮ್ಮ ಭಾವನೆಗಳನ್ನು ಸ್ಪಷ್ಟಪಡಿಸಿದ್ದೀರಿ. ನಾನು ಒಂದು ಪಕ್ಷದ ವ್ಯವಸ್ಥೆಯಲ್ಲಿ ಬಂದಿರುವವನು. ಬಿ.ಎಸ್.ಯಡಿಯೂರಪ್ಪ ಮತ್ತು ಅನಂತಕುಮಾರ್‌ ಅವರಿಂದಾಗಿ ಎರಡು ಅವಧಿಯಲ್ಲಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷನಾಗಿದ್ದೆ. ಅದನ್ನು ನಾನು ಮರೆಯಲ್ಲ. ಪಕ್ಷ ನನ್ನ ತಾಯಿ ಸಮಾನ” ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿರಿ: ಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

ನೋವುಗಳನ್ನು ಅನುಭವಿಸಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದಾಗ ಅನೇಕ ಕಡೆ ಬೆಂಕಿ ಹಚ್ಚಿದವರಿದ್ದಾರೆ. ನನ್ನ ಕ್ಷೇತ್ರದ ಜನ ಯಾವತ್ತೂ ಜಗಳ ಮಾಡಲಿಲ್ಲ. ಈ ಬಾರಿ ಕೂಡ ಮಂತ್ರಿ ಸ್ಥಾನ ಕೊಡಲಿಲ್ಲ. ಹೊರಗಿನವರಿಗೆ ಕೊಟ್ಟರು. ನಾನು ಆಗಲೂ ಮಾತನಾಡಲಿಲ್ಲ. ನೀವು ತಾಳ್ಮೆಯಿಂದ ಇದ್ದೀರಿ. ಐದು ವರ್ಷಗಳಿಂದ ಮಂತ್ರಿ ಸ್ಥಾನವನ್ನು ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹನ್ನೊಂದು ಶಾಸಕರು ಈ ಭಾಗದಲ್ಲಿ ಬಂದು ಹೋಗಿದ್ದಾರೆ. ಉಳಿದವನು ನಾನೊಬ್ಬ ಮಾತ್ರ. ಈ ಮೂವತ್ತು ವರ್ಷಗಳ ಕಾಲ ಎಲ್ಲ ನೋವುಗಳನ್ನು ಸಹಿಸಿಕೊಂಡು ಸ್ವಯಂ ಸೇವಕನಾಗಿ ಜೀವನ ನಡೆಸುತ್ತಾ ಬಂದಿರುವೆ. ರಾಜಕಾರಣದಲ್ಲಿ ಆಪಾದನೆಗಳು ಬರುತ್ತವೆ. ನೋವಾಗುತ್ತವೆ. ಆದರೆ ಮಹಾಭಾರತ ನೆನಪಾಗುತ್ತದೆ. ಕೃಷ್ಣನನ್ನೇ ಕಳ್ಳ ಎಂದರು, ನೀನ್ಯಾವ ಮಹಾ ಎನಿಸುತ್ತದೆ ಎಂದು ಮೆಲುಕು ಹಾಕಿದ್ದಾರೆ.

“ನನ್ನ ಜೀವನ ಇರುವವರೆಗೂ ಕಾರ್ಯಕರ್ತರ ಮನೆಯಾಳು. ಅವರ ಯೋಗಕ್ಷೇಮಕ್ಕಾಗಿ ಇರುತ್ತೇನೆ. ಆಗಿಬೇಕಾಗಿರುವ ಕೆಲಸಗಳು ಮುಂದೆ ಪೂರ್ಣವಾಗುತ್ತವೆಯೋ ಇಲ್ಲವೋ ಇಲ್ಲವೋ ಎಂಬ ಆತಂಕವಿದೆ” ಎಂದೂ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...