Homeಕರ್ನಾಟಕಬಿಜೆಪಿಯಲ್ಲೇ ಉಳಿಯಲು ರಾಮದಾಸ್ ನಿರ್ಧಾರ; ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದೇನು?

ಬಿಜೆಪಿಯಲ್ಲೇ ಉಳಿಯಲು ರಾಮದಾಸ್ ನಿರ್ಧಾರ; ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದೇನು?

- Advertisement -
- Advertisement -

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅವರು ಮಂಗಳವಾರ ಸಂಜೆ ಜನರೊಂದಿಗೆ ಸಭೆ ನಡೆಸಿದ್ದು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಮುಖಂಡರ ಭೇಟಿಗೂ ನಿರಾಕರಿಸಿದ್ದ ರಾಮದಾಸ್ ಅವರು ಬಂಡಾಯ ಏಳುವ ಸೂಚನೆಗಳು ದೊರೆತ್ತಿದ್ದವು. ಆದರೆ ಅಂತಿಮವಾಗಿ ಪಕ್ಷದಲ್ಲೇ ಉಳಿಯಲು ನಿರ್ಧರಿಸಿದ್ದಾರೆ.

ಕ್ಷೇತ್ರದ ಜನರೊಂದಿಗೆ ಮಾತನಾಡಿದ ಅವರು, ತಾವು ನಡೆದುಬಂದ ರಾಜಕಾರಣವನ್ನು ಮೆಲುಕು ಹಾಕಿದರು. ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿದರು. “ನಾನು ಶಾಸಕನಾಗಿರಲಿ, ಇಲ್ಲದಿರಲಿ ನನ್ನ ಕಚೇರಿ ತೆರೆದಿರುತ್ತದೆ. ಕ್ಷೇತ್ರದ ಪ್ರತಿ ವಾರ್ಡ್‌ನ ಮನೆಗೂ ಭೇಟಿ ನೀಡಿ ಊಟ ಉಪಚಾರ ಮಾಡುತ್ತೇನೆ. ಕ್ಷೇತ್ರದಲ್ಲಿ ನಿರಂತರ ಸಂಪರ್ಕದಲ್ಲಿ ಇರುತ್ತೇನೆ” ಎಂದು ಘೋಷಿಸಿದ್ದಾರೆ.

“ಶಾಸಕನಾದ ನಾನು ಪ್ರತಿಯೊಂದು ಬೂತ್‌ನ ಅಧ್ಯಕ್ಷರ ಮನೆಗೆ ಬರುತ್ತೇನೆ. ನಿಮ್ಮ ಮನೆಯಲ್ಲೇ ಊಟ ಮಾಡುತ್ತೇನೆ. ನಿಮ್ಮ ಯೋಗಕ್ಷೇಮ ವಿಚಾರಿಸುತ್ತೇನೆ. ಕಾರ್ಯಕರ್ತರೇ ಆಸ್ತಿ. ನನ್ನನ್ನು ಅಣ್ಣನ ಸ್ಥಾನದಲ್ಲಿ ನೋಡುತ್ತಿದ್ದೀರಿ. ಕೊನೆಯುಸಿರು ಇರುವವರೆಗೂ ನಿಮ್ಮ ಕ್ಷೇಮವನ್ನು ವಿಚಾರಿಸುತ್ತೇನೆ. ಶಾಸಕರ ಕಚೇರಿ ಇದೆ. ನಾನು ಶಾಸಕನಾಗಿ ಇರುತ್ತೇನೋ ಬಿಡುತ್ತೇನೋ ಬೇರೆ ವಿಷಯ. ಆದರೆ ನನ್ನ ಕಚೇರಿ ಜನರ ಸೇವೆಗಾಗಿ ತೆರೆದಿರುತ್ತದೆ” ಎಂದಿದ್ದಾರೆ.

“ಶಾಸಕನಾಗಿ ಸೇವೆ ಮಾಡುವುದಕ್ಕಾಗಿ ಸರ್ವೇ ಮಾಡಿಸಿದೆ. ಜಾತಿ ಮತ ಎಲ್ಲವನ್ನೂ ಮೀರಿ ನನಗೆ ಬೆಂಬಲ ನೀಡಿದ್ದಾರೆ. ಚುನಾವಣೆಯಲ್ಲಿ ನಿಂತರೆ ಹನ್ನೊಂದರಿಂದ ಹನ್ನೆರಡು ಸಾವಿರ ಮತಗಳಲ್ಲಿ ಗೆಲ್ಲುತ್ತೇನೆ ಅಂತ ಸಮೀಕ್ಷೆಯಲ್ಲಿ ತಿಳಿದುಬಂದಿದೆ.

“ಮೋದಿಯವರು ಮಾಡಿದ ಪ್ರಶಂಸೆ ನನಗೆ ನೆನಪಿದೆ. ಪಕ್ಷ ಮುಖ್ಯನಾ? ನೋವು ಮುಖ್ಯನಾ ಎಂದು ಪ್ರಶ್ನೆ ಬರುತ್ತದೆ. ಜಗದೀಶ್‌ ಶೆಟ್ಟರು ನಮ್ಮ ಮುಂದೆ ಇದ್ದಾರೆ. ಅವರಿಗೆ ಅನಿಸಿದ ನಿರ್ಧಾರ ತೆಗೆದುಕೊಂಡಿದ್ದಾರೆ. ವೈಯಕ್ತಿಕ ವಿಷಯ ಮುಖ್ಯನಾ? ಪಕ್ಷದ ವಿಚಾರ ಮುಖ್ಯನಾ? ದೇಶವನ್ನು ಕಾಪಾಡುತ್ತಿರುವ ಮಹಾನ್ ನಾಯಕ ಮೋದಿಯವರು ಮುಖ್ಯನಾ? ಎಂಬ ತೊಳಲಾಟದಲ್ಲಿ ಇದ್ದೇನೆ. ಹನ್ನೊಂದು ಸಾವಿರ ಪ್ರಮುಖರು ನನ್ನನ್ನು ಮನೆಯ ಮಗ ಎಂದು ಸ್ವೀಕರಿಸಿದ್ದೀರಿ. ಕಠಿಣವಾದ ಸಂದರ್ಭದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂಬುದು ಮುಖ್ಯವಾಗುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳಿದರು.

“ನನ್ನ ನಿರ್ಧಾರ ನಿಮಗೆ ಕೆಟ್ಟದ್ದು ಅನಿಸಿದರೂ ಅದು ಒಳ್ಳೆಯ ನಿರ್ಧಾರವೆಂದು ನಾನು ಭಾವಿಸಿರುವೆ. ಅದನ್ನು ದಯವಿಟ್ಟು ಸ್ವೀಕರಿಸಬೇಕು. ಆರ್‌ಎಸ್‌ಎಸ್‌ನ ಸ್ವಯಂಸೇವಕನಾದ ನಾನು ಹೇಗೆ ಪಕ್ಷವನ್ನು ಕಟ್ಟಿ ಬೆಳೆಸಿದೆನೋ ಹಾಗೆಯೇ ನಡೆದುಕೊಂಡು ಹೋಗಬೇಕಾಗಿರುವುದು ಮುಖ್ಯವಾಗುತ್ತದೆ” ಎಂದಿದ್ದಾರೆ.

“ಪಕ್ಷದ ನಿರ್ಣಯವನ್ನು ತೆಗೆದುಕೊಳ್ಳಬೇಕು. ಭಾರತಾಂಬೆಯ ಗೌರವವನ್ನು ಹೆಚ್ಚಿಸುವ ಸಂದರ್ಭ ಇದು. ನಿಮ್ಮ ಶಾಸಕ ನಿಮ್ಮ ಮನೆಯಲ್ಲಿಯೇ ಇರುತ್ತಾನೆ. ಭಾರತೀಯ ಜನತಾ ಪಕ್ಷವನ್ನು ನಡೆಸಿಕೊಂಡು ಹೋಗಬೇಕಾಗಿದೆ. ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ನಿಮ್ಮ ಹಿತದೃಷ್ಟಿಯಿಂದ ಮತ್ತು ಕ್ಷೇತ್ರದ ಹಿತಾದೃಷ್ಟಿಯಿಂದ ಆಗಿರುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಈ ಮೂರು ದಿನಗಳ ಅವಧಿಯಲ್ಲಿ ಯಾರ್‍ಯಾರು ಹೋದರು, ಯಾರ್‍ಯಾರು ಬಂದರು ಎಂದು ತಿಳಿಸಿದೆ. ಈ ಕ್ಷೇತ್ರದ ಶೇ. 90ರಷ್ಟು ಪದಾಧಿಕಾರಿಗಳು ನನ್ನ ಜೊತೆ ಇದ್ದೀರಿ. ಇದಕ್ಕೆ ನನ್ನ ಜೀವನ ಸಾರ್ಥಕವಾಯಿತು” ಎಂದು ಭಾವುಕವಾಗಿ ನುಡಿದ್ದಾರೆ.

“ಕಾರ್ಯಕರ್ತರ ಯೋಗ ಕ್ಷೇಮ ಮಾಡುತ್ತಿದ್ದೇನೆ. 400 ಕಿಮೀ ರಸ್ತೆ ಆಗಿದೆ, ಇನ್ನೊಂದಿಷ್ಟು ಆಗಬೇಕಾಗಿದೆ.
ಕಬಿನಿಯಿಂದ ನೀರು ಸರಬರಾಜು ಆಗುತ್ತಿದೆ. 120 ಪಾರ್ಕ್‌ಗಳ ಅಭಿವೃದ್ಧಿಯಾಗಿದೆ. ರಾಜಕಾಲುವೆ ಒತ್ತುವರಿ ತೆರವು ಮಾಡಿಸುತ್ತಿದ್ದೇವೆ. ಬಾಡಿಗೆ ಮನೆಯಲ್ಲಿರುವವರಿಗೆ ಮನೆ ಕೊಡಿಸಲು 4500 ಮನೆ ನಿರ್ಮಾಣ ಮಾಡುತ್ತಿದ್ದೇವೆ. ಮನೆಗಳ ಕಾರ್ಯ ಆರಂಭವಾಗಿದೆ. ಬ್ಯಾಂಕ್‌ಗಳು ಒಪ್ಪಿಗೆ ಕೊಟ್ಟಿವೆ” ಎಂದು ವಿವರಿಸಿದ್ದಾರೆ.

“ಇಷ್ಟೆಲ್ಲ ಕೆಲಸ ನಿರಂತರವಾಗಿ ಮಾಡಿದ್ದೇನೆ. 265 ಬೂತ್‌ಗಳಲ್ಲಿ ಸಭೆ ಕರೆದು ಅಭಿಪ್ರಾಯ ತಿಳಿಸಿದ್ದೀರಿ. ನಿಮ್ಮ ಭಾವನೆಗಳನ್ನು ಸ್ಪಷ್ಟಪಡಿಸಿದ್ದೀರಿ. ನಾನು ಒಂದು ಪಕ್ಷದ ವ್ಯವಸ್ಥೆಯಲ್ಲಿ ಬಂದಿರುವವನು. ಬಿ.ಎಸ್.ಯಡಿಯೂರಪ್ಪ ಮತ್ತು ಅನಂತಕುಮಾರ್‌ ಅವರಿಂದಾಗಿ ಎರಡು ಅವಧಿಯಲ್ಲಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷನಾಗಿದ್ದೆ. ಅದನ್ನು ನಾನು ಮರೆಯಲ್ಲ. ಪಕ್ಷ ನನ್ನ ತಾಯಿ ಸಮಾನ” ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿರಿ: ಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

ನೋವುಗಳನ್ನು ಅನುಭವಿಸಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದಾಗ ಅನೇಕ ಕಡೆ ಬೆಂಕಿ ಹಚ್ಚಿದವರಿದ್ದಾರೆ. ನನ್ನ ಕ್ಷೇತ್ರದ ಜನ ಯಾವತ್ತೂ ಜಗಳ ಮಾಡಲಿಲ್ಲ. ಈ ಬಾರಿ ಕೂಡ ಮಂತ್ರಿ ಸ್ಥಾನ ಕೊಡಲಿಲ್ಲ. ಹೊರಗಿನವರಿಗೆ ಕೊಟ್ಟರು. ನಾನು ಆಗಲೂ ಮಾತನಾಡಲಿಲ್ಲ. ನೀವು ತಾಳ್ಮೆಯಿಂದ ಇದ್ದೀರಿ. ಐದು ವರ್ಷಗಳಿಂದ ಮಂತ್ರಿ ಸ್ಥಾನವನ್ನು ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹನ್ನೊಂದು ಶಾಸಕರು ಈ ಭಾಗದಲ್ಲಿ ಬಂದು ಹೋಗಿದ್ದಾರೆ. ಉಳಿದವನು ನಾನೊಬ್ಬ ಮಾತ್ರ. ಈ ಮೂವತ್ತು ವರ್ಷಗಳ ಕಾಲ ಎಲ್ಲ ನೋವುಗಳನ್ನು ಸಹಿಸಿಕೊಂಡು ಸ್ವಯಂ ಸೇವಕನಾಗಿ ಜೀವನ ನಡೆಸುತ್ತಾ ಬಂದಿರುವೆ. ರಾಜಕಾರಣದಲ್ಲಿ ಆಪಾದನೆಗಳು ಬರುತ್ತವೆ. ನೋವಾಗುತ್ತವೆ. ಆದರೆ ಮಹಾಭಾರತ ನೆನಪಾಗುತ್ತದೆ. ಕೃಷ್ಣನನ್ನೇ ಕಳ್ಳ ಎಂದರು, ನೀನ್ಯಾವ ಮಹಾ ಎನಿಸುತ್ತದೆ ಎಂದು ಮೆಲುಕು ಹಾಕಿದ್ದಾರೆ.

“ನನ್ನ ಜೀವನ ಇರುವವರೆಗೂ ಕಾರ್ಯಕರ್ತರ ಮನೆಯಾಳು. ಅವರ ಯೋಗಕ್ಷೇಮಕ್ಕಾಗಿ ಇರುತ್ತೇನೆ. ಆಗಿಬೇಕಾಗಿರುವ ಕೆಲಸಗಳು ಮುಂದೆ ಪೂರ್ಣವಾಗುತ್ತವೆಯೋ ಇಲ್ಲವೋ ಇಲ್ಲವೋ ಎಂಬ ಆತಂಕವಿದೆ” ಎಂದೂ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...