Homeಮುಖಪುಟಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆಂದ ರಾಮದೇವ್: ಶಿವಸೇನೆ, ಮಹಿಳಾ ಆಯೋಗ ಖಂಡನೆ

ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆಂದ ರಾಮದೇವ್: ಶಿವಸೇನೆ, ಮಹಿಳಾ ಆಯೋಗ ಖಂಡನೆ

- Advertisement -
- Advertisement -

“ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ಪತಂಜಲಿ ಸಂಸ್ಥೆಯ ಬಾಬಾ ರಾಮದೇವ್ ಹೇಳಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

“ಮಹಿಳೆಯರು ಸೀರೆಯಲ್ಲಿ, ಸಲ್ವಾರ್ ಸೂಟ್‌ಗಳಲ್ಲಿ ಮತ್ತು ಏನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ರಾಮದೇವ್ ಹೇಳಿದ್ದು, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಈ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಥಾಣೆಯಲ್ಲಿ ನಡೆದ ಯೋಗ ಶಿಬಿರದಲ್ಲಿ ಮಾತನಾಡಿದ ರಾಮ್‌ದೇವ್ ಅವರು, “ಸೀರೆ, ಸಲ್ವಾರ್ ಸೂಟ್‌ಗಳಲ್ಲಿ ಮತ್ತು ಏನನ್ನೂ ಧರಿಸದಿದ್ದರೂ ಮಹಿಳೆಯರು ಚೆನ್ನಾಗಿ ಕಾಣುತ್ತಾರೆ” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಈ ಶಿಬಿರದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನಾವೀಸ್ ಉಪಸ್ಥಿತರಿದ್ದರು. ರಾಮ್‌ದೇವ್ ಅವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಈ ವಿಡಿಯೋವನ್ನು ಶೇರ್ ಮಾಡಿದ್ದು, ಬಾಬಾ ರಾಮದೇವ್ ಹೇಳಿಕೆಯನ್ನು ಖಂಡಿಸಿದ್ದಾರೆ. ಮಹಿಳೆಯರನ್ನು ಅವಮಾನಿಸುವ ಹೇಳಿಕೆಯ ಕಾರಣ ಅವರು ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಮಹಾರಾಷ್ಟ್ರದ ಉಪಮುಖ್ಯಮಂತ್ರಿಯವರ ಪತ್ನಿಯ ಮುಂದೆ ಸ್ವಾಮಿ ರಾಮ್‌ದೇವ್ ಅವರು ಮಹಿಳೆಯರ ಬಗ್ಗೆ ನೀಡಿದ ಹೇಳಿಕೆಗಳು ಅಸಭ್ಯ ಮತ್ತು ಖಂಡನೀಯ. ಈ ಹೇಳಿಕೆಯಿಂದ ಎಲ್ಲಾ ಮಹಿಳೆಯರಿಗೆ ನೋವಾಗಿದೆ, ಬಾಬಾ ರಾಮದೇವ್‌ ಅವರು ದೇಶದ ಎದುರು ಕ್ಷಮೆಯಾಚಿಸಬೇಕು!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಸಂಸದ ಶ್ರೀಕಾಂತ್ ಶಿಂಧೆ ಕೂಡ ಉಪಸ್ಥಿತರಿದ್ದರು.

ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಕೂಡ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ಈ ರೀತಿಯ ಹೇಳಿಕೆ ನೀಡಿದಾಗ ಅಮೃತಾ ಫಡ್ನವಿಸ್ ಏಕೆ ಪ್ರತಿಭಟಿಸಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ರಾಜ್ಯಪಾಲರು ಶಿವಾಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಾಗ, ಕರ್ನಾಟಕದ ಮುಖ್ಯಮಂತ್ರಿಗಳು ಮಹಾರಾಷ್ಟ್ರದ ಗ್ರಾಮಗಳನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದಾಗ ಮತ್ತು ಈಗ ಬಿಜೆಪಿ ಪ್ರಚಾರಕ ರಾಮದೇವ್ ಮಹಿಳೆಯರನ್ನು ಅವಮಾನಿಸಿದಾಗ ಸರ್ಕಾರ ಮೌನವಾಗಿದೆ. ಸರ್ಕಾರ ದೆಹಲಿಗೆ ಅಡಮಾನವಿಟ್ಟುಕೊಂಡಿದೆಯೇ?” ಎಂದು ಸಂಜಯ್ ರಾವುತ್ ಕೇಳಿದ್ದಾರೆ.

ಇದನ್ನೂ ಓದಿರಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

“ಸಮಾರಂಭಕ್ಕೆ ಅನೇಕ ಮಹಿಳೆಯರು ಸೀರೆಗಳನ್ನು ತಂದರು. ಆದರೆ ಒಂದರ ಹಿಂದೆ ಒಂದು ಕಾರ್ಯಕ್ರಮಗಳು ಇದ್ದ ಕಾರಣದಿಂದಾಗಿ ಅವುಗಳನ್ನು ಧರಿಸಲು ಸಮಯ ಸಿಗಲಿಲ್ಲ” ಎನ್ನುತ್ತಾ ರಾಮದೇವ್‌, “ನೀವು ಸೀರೆಯಲ್ಲಿ ಚೆನ್ನಾಗಿ ಕಾಣುತ್ತೀರಿ, ಅಮೃತಾಜಿಯವರಂತೆ ಸಲ್ವಾರ್ ಸೂಟ್‌ಗಳಲ್ಲಿಯೂ ಚೆನ್ನಾಗಿ ಕಾಣುತ್ತೀರಿ ಮತ್ತು ನನ್ನಂತೆ ನೀವು ಏನೂ ಧರಿಸದಿದ್ದರೆ ಚೆನ್ನಾಗಿ ಕಾಣುತ್ತೀರಿ…” ಎಂದಿದ್ದರು.

ಈ ಹೇಳಿಕೆ ಕುರಿತು ಆಘಾತ ವ್ಯಕ್ತಪಡಿಸಿರುವ ವಿದರ್ಭದ ರೈತ ನಾಯಕಿ ಅಪರ್ಣಾ ಮಾಲಿಕರ್, “ರಾಮ್‌ದೇವ್ ಅವರ ‘ಕೊಳಕು ಮನಸ್ಸಿನಲ್ಲಿ’ ಏನು ನಡೆಯುತ್ತಿವೆ ಎಂಬುದನ್ನು ಇದು ಬಹಿರಂಗಪಡಿಸಿದೆ. ರಾಮದೇವ್‌ ಮುಂದೆ ಹೋಗುವ ಎಲ್ಲ ಮಹಿಳೆಯರು ಹೆಚ್ಚು ಜಾಗರೂಕರಾಗಿರಿ” ಎಂದು ಎಚ್ಚರಿಸಿದ್ದಾರೆ.

ಎಂಎಲ್‌ಸಿ ಡಾ. ಮನೀಶಾ ಕಯಾಂಡೆ ಪ್ರತಿಕ್ರಿಯಿಸಿ, “ಅಪರ್ಣಾ ಅವರು ಆತನಿಗೆ ಒದ್ದು ಕಾರ್ಯಕ್ರಮದಿಂದ ಹೊರನಡೆಯಬೇಕಿತ್ತು. ದುರಾದೃಷ್ಟವಶಾತ್ ಆಕೆ ನಗುತ್ತಿದ್ದರು, ರಾಮ್‌ದೇವ್‌ನ ಹೇಳಿಕೆಗಳನ್ನು ಆನಂದಿಸುತ್ತಿದ್ದರು. ರಾಮದೇವ್‌ ಹೆಣ್ತನಕ್ಕೆ ಗೌರವವನ್ನು ನೀಡುತ್ತಿದ್ದಾರೆಂಬಂತೆ ಸುಮ್ಮನಿದ್ದರು” ಎಂದು ಬೇಸರ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...