Homeಕರ್ನಾಟಕರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

- Advertisement -
- Advertisement -

ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆಯು ದಲಿತರ ಭೂಮಿಯನ್ನು ಕಬಳಿಸುತ್ತಿದೆ. ಪರೋಕ್ಷವಾಗಿ ದಲಿತರನ್ನು ವಂಚಿಸುತ್ತಿದೆ ಎಂದು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವರದಿ ಮಾಡಿದೆ.

ಸುಮಾರು ಐದು ದಶಕಗಳ ಹಿಂದೆ ಭೂಸುಧಾರಣೆಯ ಭಾಗವಾಗಿ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ತೆಲಿವಾಲಾ ಗ್ರಾಮದ ಪ್ರತಿ ದಲಿತ ಕುಟುಂಬಕ್ಕೆ ಆರು ಬಿಘಾ ಜಮೀನುಗಳನ್ನು ನೀಡಲಾಯಿತು. ಆದರೆ ಆ ಭೂಮಿಯ ಬಹುಪಾಲು ಈಗ ಪತಂಜಲಿಯ ನಿಯಂತ್ರಣದಲ್ಲಿದೆ. ದಲಿತರು ಹೆಚ್ಚಾಗಿ ಭೂರಹಿತರಾಗಿದ್ದು- ಒಂದೋ ರಾಮ್‌ದೇವ್ ಅವರ ಕಾರ್ಪೊರೇಟ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದಾರೆ ಅಥವಾ ಜೀವನೋಪಾಯಕ್ಕಾಗಿ ವಲಸೆ ಹೋಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತಂಜಲಿ ಸಂಸ್ಥೆ ತಾಂತ್ರಿಕವಾಗಿ ಭೂಮಿಯನ್ನು ಖರೀದಿಸಿಲ್ಲ. ಅವಿಭಜಿತ ಉತ್ತರ ಪ್ರದೇಶದಲ್ಲಿ ಜಮೀನ್ದಾರಿ ಪದ್ಧತಿಯನ್ನು ರದ್ದುಪಡಿಸಿದ ನಂತರ ಜಾರಿಗೊಳಿಸಲಾದ ಕಟ್ಟುನಿಟ್ಟಾದ ಭೂ ಕಾನೂನುಗಳಿಂದಾಗಿ ಇಲ್ಲಿ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ. ಹರಿದ್ವಾರದಿಂದ 20 ಕಿಮೀ ದೂರದಲ್ಲಿರುವ, 1,500 ದಲಿತ ಮತದಾರರಿರುವ ತೆಲಿವಾಲಾ ಗ್ರಾಮದಲ್ಲಿ ಕಾನೂನು ಬದ್ಧವಾಗಿ ಭೂಮಿ ಖರೀದಿಸಲು ಪತಂಜಲಿ ಸಂಸ್ಥೆಗೆ ಅವಕಾಶವಿಲ್ಲ.

18 ಬಿಘಾಗಳಿಗಿಂತ ಹೆಚ್ಚಿನ ನಿವೇಶನಗಳನ್ನು ಹೊಂದಿರುವವರಿಗೆ ವಿನಾಯಿತಿಯನ್ನು ನೀಡಿ ಮಾರಬಹುದು. ಆದರೆ ದಲಿತರು ತಮ್ಮ ಭೂಮಿಯನ್ನು ಇತರ ದಲಿತರಿಗೆ ಮಾತ್ರ ವರ್ಗಾಯಿಸಬಹುದು ಎಂದು ಕಾನೂನು ಹೇಳುತ್ತದೆ. ಹೀಗೆ ಮಾರಾಟ ಮಾಡುವಾಗ ಜಿಲ್ಲೆ ಅಥವಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ರಿಂದ ವಿಶೇಷ ಅನುಮತಿ ಅಗತ್ಯವಿದೆ.

ಆದರೆ ಪತಂಜಲಿ ಸಂಸ್ಥೆ ಮತ್ತು ಅದರ ಸಹಚರರು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಪ್ರಭಾವ ಮತ್ತು ಬಂಡವಾಳವನ್ನು ಬಳಸಿಕೊಂಡು 2005 ಮತ್ತು 2010ರ ನಡುವೆ ದಲಿತ ಗ್ರಾಮಸ್ಥರ ಹೆಸರಿನಲ್ಲಿ ‘ದೇಣಿಗೆ ಪತ್ರಗಳು’ ಮತ್ತು ನೋಂದಣಿಗಳ ಮೂಲಕ ಸುಮಾರು 600 ಬಿಘಾ ಭೂಮಿಯನ್ನು ಪತಂಜಲಿ ಪಡೆದುಕೊಂಡಿದೆ. ಈ ಭೂಮಿಯನ್ನು ಔಷಧೀಯ ಗಿಡಮೂಲಿಕೆಗಳಿಗೆ, ಕಬ್ಬು ಕೃಷಿಗೆ ಮತ್ತು ಗೋಶಾಲೆಗಳನ್ನು ನಿರ್ವಹಿಸಲು ಬಳಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. “ಮಾಲಿಕತ್ವ ನಿಮ್ಮ ಬಳಿಯೇ ಇರಲಿದ್ದು, ಭೂಮಿಯನ್ನಷ್ಟೇ ಬಳಸಲು ಅವಕಾಶ ನೀಡುವಂತೆ ಅನೇಕ ದಲಿತ ಕುಟುಂಬಗಳಿಗೆ ಪತಂಜಲಿಯ ಸಹವರ್ತಿಗಳು ಕೋರಿದರು. ನಿರಾಕರಿಸಿದವರಿಗೆ ಒತ್ತಡ ಹೇರಲಾಯಿತು” ಎನ್ನಲಾಗಿದೆ.

“ಗ್ರಾಮ ಪಂಚಾಯತ್‌ನ ನೂರಾರು ಬಿಘಾಸ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಔರಂಗಾಬಾದ್ ಮತ್ತು ತೇಲಿವಾಲಾ ಮುಂತಾದ ಸ್ಥಳಗಳಲ್ಲಿ ಗ್ರಾಮಸ್ಥರು ವಿರೋಧಿಸಿದ್ದರಿಂದಾಗಿ ಇದು ಯಶಸ್ವಿಯಾಗಲಿಲ್ಲ.”

ಮುಖಂಡರಾದ ಗುಲಾಬ್ ಸಿಂಗ್, ಕುರಾಡಿ ಸಿಂಗ್ ಅವರು ಪತಂಜಲಿ ಸಂಸ್ಥೆ ಜೊತೆ ಮಾತುಕತೆಗೆ ಸಹಾಯ ಮಾಡಿದರು. ತೆಲಿವಾಲಾದಂತಹ ಸ್ಥಳಗಳಲ್ಲಿ ವೈಯಕ್ತಿಕ ಭೂಮಿ ವರ್ಗಾವಣೆಗಳು ಸುಗಮವಾದವು ಎನ್ನಲಾಗಿದೆ.

ಇದನ್ನೂ ಓದಿರಿ: ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

52 ವರ್ಷದ ಮಹೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿ, “ಪತಂಜಲಿ ಸಂಸ್ಥೆಗಾಗಿ ಇತರ ದಲಿತ ಕುಟುಂಬಗಳಿಂದ ಪರೋಕ್ಷವಾಗಿ 100 ಬಿಘಾಗಳನ್ನು ಖರೀದಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪತಂಜಲಿಯ ಹಿರಿಯ ಕಾರ್ಯಕರ್ತ ದೇವೇಂದ್ರ ಚೌಧರಿ ನನ್ನ ಬಳಿ ಬಂದಿದ್ದರು. ನಿಮ್ಮ ಹೆಸರಿಗೆ ಸ್ವಲ್ಪ ಜಮೀನು ವರ್ಗಾವಣೆ ಮಾಡಿಕೊಳ್ಳಿ. ಹಣ ನೀಡುತ್ತೇವೆ, ಹೆಸರೇ ನಿಮ್ಮದೇ ಆಗಿರುತ್ತದೆ ಎಂದ ಚೌಧರಿಯವರು ಜಮೀನು ಮಾರಾಟ ಮಾಡಿದವರಿಗೆ ಹಣ ನೀಡುತ್ತಿದ್ದರು’’ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಭೂ ದಾಖಲೆಗಳ ಪ್ರಕಾರ, ಮಹೇಂದ್ರ ಮತ್ತು ಅವರ ಕುಟುಂಬವು 2008ರಲ್ಲಿ 18 ಬಾರಿ, 2007ರಲ್ಲಿ ಏಳು ಬಾರಿ ಮತ್ತು 2009ರಲ್ಲಿ 21 ಬಾರಿ ಪ್ಲಾಟ್‌ಗಳನ್ನು ಖರೀದಿಸಿ ಮಾರಾಟ ಮಾಡಿದೆ ಮತ್ತು ಒಪ್ಪಂದಗಳಿಗೆ ಸಹಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...