Homeಕರ್ನಾಟಕರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

- Advertisement -
- Advertisement -

ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆಯು ದಲಿತರ ಭೂಮಿಯನ್ನು ಕಬಳಿಸುತ್ತಿದೆ. ಪರೋಕ್ಷವಾಗಿ ದಲಿತರನ್ನು ವಂಚಿಸುತ್ತಿದೆ ಎಂದು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವರದಿ ಮಾಡಿದೆ.

ಸುಮಾರು ಐದು ದಶಕಗಳ ಹಿಂದೆ ಭೂಸುಧಾರಣೆಯ ಭಾಗವಾಗಿ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ತೆಲಿವಾಲಾ ಗ್ರಾಮದ ಪ್ರತಿ ದಲಿತ ಕುಟುಂಬಕ್ಕೆ ಆರು ಬಿಘಾ ಜಮೀನುಗಳನ್ನು ನೀಡಲಾಯಿತು. ಆದರೆ ಆ ಭೂಮಿಯ ಬಹುಪಾಲು ಈಗ ಪತಂಜಲಿಯ ನಿಯಂತ್ರಣದಲ್ಲಿದೆ. ದಲಿತರು ಹೆಚ್ಚಾಗಿ ಭೂರಹಿತರಾಗಿದ್ದು- ಒಂದೋ ರಾಮ್‌ದೇವ್ ಅವರ ಕಾರ್ಪೊರೇಟ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದಾರೆ ಅಥವಾ ಜೀವನೋಪಾಯಕ್ಕಾಗಿ ವಲಸೆ ಹೋಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತಂಜಲಿ ಸಂಸ್ಥೆ ತಾಂತ್ರಿಕವಾಗಿ ಭೂಮಿಯನ್ನು ಖರೀದಿಸಿಲ್ಲ. ಅವಿಭಜಿತ ಉತ್ತರ ಪ್ರದೇಶದಲ್ಲಿ ಜಮೀನ್ದಾರಿ ಪದ್ಧತಿಯನ್ನು ರದ್ದುಪಡಿಸಿದ ನಂತರ ಜಾರಿಗೊಳಿಸಲಾದ ಕಟ್ಟುನಿಟ್ಟಾದ ಭೂ ಕಾನೂನುಗಳಿಂದಾಗಿ ಇಲ್ಲಿ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ. ಹರಿದ್ವಾರದಿಂದ 20 ಕಿಮೀ ದೂರದಲ್ಲಿರುವ, 1,500 ದಲಿತ ಮತದಾರರಿರುವ ತೆಲಿವಾಲಾ ಗ್ರಾಮದಲ್ಲಿ ಕಾನೂನು ಬದ್ಧವಾಗಿ ಭೂಮಿ ಖರೀದಿಸಲು ಪತಂಜಲಿ ಸಂಸ್ಥೆಗೆ ಅವಕಾಶವಿಲ್ಲ.

18 ಬಿಘಾಗಳಿಗಿಂತ ಹೆಚ್ಚಿನ ನಿವೇಶನಗಳನ್ನು ಹೊಂದಿರುವವರಿಗೆ ವಿನಾಯಿತಿಯನ್ನು ನೀಡಿ ಮಾರಬಹುದು. ಆದರೆ ದಲಿತರು ತಮ್ಮ ಭೂಮಿಯನ್ನು ಇತರ ದಲಿತರಿಗೆ ಮಾತ್ರ ವರ್ಗಾಯಿಸಬಹುದು ಎಂದು ಕಾನೂನು ಹೇಳುತ್ತದೆ. ಹೀಗೆ ಮಾರಾಟ ಮಾಡುವಾಗ ಜಿಲ್ಲೆ ಅಥವಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ರಿಂದ ವಿಶೇಷ ಅನುಮತಿ ಅಗತ್ಯವಿದೆ.

ಆದರೆ ಪತಂಜಲಿ ಸಂಸ್ಥೆ ಮತ್ತು ಅದರ ಸಹಚರರು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಪ್ರಭಾವ ಮತ್ತು ಬಂಡವಾಳವನ್ನು ಬಳಸಿಕೊಂಡು 2005 ಮತ್ತು 2010ರ ನಡುವೆ ದಲಿತ ಗ್ರಾಮಸ್ಥರ ಹೆಸರಿನಲ್ಲಿ ‘ದೇಣಿಗೆ ಪತ್ರಗಳು’ ಮತ್ತು ನೋಂದಣಿಗಳ ಮೂಲಕ ಸುಮಾರು 600 ಬಿಘಾ ಭೂಮಿಯನ್ನು ಪತಂಜಲಿ ಪಡೆದುಕೊಂಡಿದೆ. ಈ ಭೂಮಿಯನ್ನು ಔಷಧೀಯ ಗಿಡಮೂಲಿಕೆಗಳಿಗೆ, ಕಬ್ಬು ಕೃಷಿಗೆ ಮತ್ತು ಗೋಶಾಲೆಗಳನ್ನು ನಿರ್ವಹಿಸಲು ಬಳಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. “ಮಾಲಿಕತ್ವ ನಿಮ್ಮ ಬಳಿಯೇ ಇರಲಿದ್ದು, ಭೂಮಿಯನ್ನಷ್ಟೇ ಬಳಸಲು ಅವಕಾಶ ನೀಡುವಂತೆ ಅನೇಕ ದಲಿತ ಕುಟುಂಬಗಳಿಗೆ ಪತಂಜಲಿಯ ಸಹವರ್ತಿಗಳು ಕೋರಿದರು. ನಿರಾಕರಿಸಿದವರಿಗೆ ಒತ್ತಡ ಹೇರಲಾಯಿತು” ಎನ್ನಲಾಗಿದೆ.

“ಗ್ರಾಮ ಪಂಚಾಯತ್‌ನ ನೂರಾರು ಬಿಘಾಸ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಔರಂಗಾಬಾದ್ ಮತ್ತು ತೇಲಿವಾಲಾ ಮುಂತಾದ ಸ್ಥಳಗಳಲ್ಲಿ ಗ್ರಾಮಸ್ಥರು ವಿರೋಧಿಸಿದ್ದರಿಂದಾಗಿ ಇದು ಯಶಸ್ವಿಯಾಗಲಿಲ್ಲ.”

ಮುಖಂಡರಾದ ಗುಲಾಬ್ ಸಿಂಗ್, ಕುರಾಡಿ ಸಿಂಗ್ ಅವರು ಪತಂಜಲಿ ಸಂಸ್ಥೆ ಜೊತೆ ಮಾತುಕತೆಗೆ ಸಹಾಯ ಮಾಡಿದರು. ತೆಲಿವಾಲಾದಂತಹ ಸ್ಥಳಗಳಲ್ಲಿ ವೈಯಕ್ತಿಕ ಭೂಮಿ ವರ್ಗಾವಣೆಗಳು ಸುಗಮವಾದವು ಎನ್ನಲಾಗಿದೆ.

ಇದನ್ನೂ ಓದಿರಿ: ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

52 ವರ್ಷದ ಮಹೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿ, “ಪತಂಜಲಿ ಸಂಸ್ಥೆಗಾಗಿ ಇತರ ದಲಿತ ಕುಟುಂಬಗಳಿಂದ ಪರೋಕ್ಷವಾಗಿ 100 ಬಿಘಾಗಳನ್ನು ಖರೀದಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪತಂಜಲಿಯ ಹಿರಿಯ ಕಾರ್ಯಕರ್ತ ದೇವೇಂದ್ರ ಚೌಧರಿ ನನ್ನ ಬಳಿ ಬಂದಿದ್ದರು. ನಿಮ್ಮ ಹೆಸರಿಗೆ ಸ್ವಲ್ಪ ಜಮೀನು ವರ್ಗಾವಣೆ ಮಾಡಿಕೊಳ್ಳಿ. ಹಣ ನೀಡುತ್ತೇವೆ, ಹೆಸರೇ ನಿಮ್ಮದೇ ಆಗಿರುತ್ತದೆ ಎಂದ ಚೌಧರಿಯವರು ಜಮೀನು ಮಾರಾಟ ಮಾಡಿದವರಿಗೆ ಹಣ ನೀಡುತ್ತಿದ್ದರು’’ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಭೂ ದಾಖಲೆಗಳ ಪ್ರಕಾರ, ಮಹೇಂದ್ರ ಮತ್ತು ಅವರ ಕುಟುಂಬವು 2008ರಲ್ಲಿ 18 ಬಾರಿ, 2007ರಲ್ಲಿ ಏಳು ಬಾರಿ ಮತ್ತು 2009ರಲ್ಲಿ 21 ಬಾರಿ ಪ್ಲಾಟ್‌ಗಳನ್ನು ಖರೀದಿಸಿ ಮಾರಾಟ ಮಾಡಿದೆ ಮತ್ತು ಒಪ್ಪಂದಗಳಿಗೆ ಸಹಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...