Homeಕರ್ನಾಟಕರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

- Advertisement -
- Advertisement -

ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆಯು ದಲಿತರ ಭೂಮಿಯನ್ನು ಕಬಳಿಸುತ್ತಿದೆ. ಪರೋಕ್ಷವಾಗಿ ದಲಿತರನ್ನು ವಂಚಿಸುತ್ತಿದೆ ಎಂದು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವರದಿ ಮಾಡಿದೆ.

ಸುಮಾರು ಐದು ದಶಕಗಳ ಹಿಂದೆ ಭೂಸುಧಾರಣೆಯ ಭಾಗವಾಗಿ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ತೆಲಿವಾಲಾ ಗ್ರಾಮದ ಪ್ರತಿ ದಲಿತ ಕುಟುಂಬಕ್ಕೆ ಆರು ಬಿಘಾ ಜಮೀನುಗಳನ್ನು ನೀಡಲಾಯಿತು. ಆದರೆ ಆ ಭೂಮಿಯ ಬಹುಪಾಲು ಈಗ ಪತಂಜಲಿಯ ನಿಯಂತ್ರಣದಲ್ಲಿದೆ. ದಲಿತರು ಹೆಚ್ಚಾಗಿ ಭೂರಹಿತರಾಗಿದ್ದು- ಒಂದೋ ರಾಮ್‌ದೇವ್ ಅವರ ಕಾರ್ಪೊರೇಟ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದಾರೆ ಅಥವಾ ಜೀವನೋಪಾಯಕ್ಕಾಗಿ ವಲಸೆ ಹೋಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತಂಜಲಿ ಸಂಸ್ಥೆ ತಾಂತ್ರಿಕವಾಗಿ ಭೂಮಿಯನ್ನು ಖರೀದಿಸಿಲ್ಲ. ಅವಿಭಜಿತ ಉತ್ತರ ಪ್ರದೇಶದಲ್ಲಿ ಜಮೀನ್ದಾರಿ ಪದ್ಧತಿಯನ್ನು ರದ್ದುಪಡಿಸಿದ ನಂತರ ಜಾರಿಗೊಳಿಸಲಾದ ಕಟ್ಟುನಿಟ್ಟಾದ ಭೂ ಕಾನೂನುಗಳಿಂದಾಗಿ ಇಲ್ಲಿ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ. ಹರಿದ್ವಾರದಿಂದ 20 ಕಿಮೀ ದೂರದಲ್ಲಿರುವ, 1,500 ದಲಿತ ಮತದಾರರಿರುವ ತೆಲಿವಾಲಾ ಗ್ರಾಮದಲ್ಲಿ ಕಾನೂನು ಬದ್ಧವಾಗಿ ಭೂಮಿ ಖರೀದಿಸಲು ಪತಂಜಲಿ ಸಂಸ್ಥೆಗೆ ಅವಕಾಶವಿಲ್ಲ.

18 ಬಿಘಾಗಳಿಗಿಂತ ಹೆಚ್ಚಿನ ನಿವೇಶನಗಳನ್ನು ಹೊಂದಿರುವವರಿಗೆ ವಿನಾಯಿತಿಯನ್ನು ನೀಡಿ ಮಾರಬಹುದು. ಆದರೆ ದಲಿತರು ತಮ್ಮ ಭೂಮಿಯನ್ನು ಇತರ ದಲಿತರಿಗೆ ಮಾತ್ರ ವರ್ಗಾಯಿಸಬಹುದು ಎಂದು ಕಾನೂನು ಹೇಳುತ್ತದೆ. ಹೀಗೆ ಮಾರಾಟ ಮಾಡುವಾಗ ಜಿಲ್ಲೆ ಅಥವಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ರಿಂದ ವಿಶೇಷ ಅನುಮತಿ ಅಗತ್ಯವಿದೆ.

ಆದರೆ ಪತಂಜಲಿ ಸಂಸ್ಥೆ ಮತ್ತು ಅದರ ಸಹಚರರು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಪ್ರಭಾವ ಮತ್ತು ಬಂಡವಾಳವನ್ನು ಬಳಸಿಕೊಂಡು 2005 ಮತ್ತು 2010ರ ನಡುವೆ ದಲಿತ ಗ್ರಾಮಸ್ಥರ ಹೆಸರಿನಲ್ಲಿ ‘ದೇಣಿಗೆ ಪತ್ರಗಳು’ ಮತ್ತು ನೋಂದಣಿಗಳ ಮೂಲಕ ಸುಮಾರು 600 ಬಿಘಾ ಭೂಮಿಯನ್ನು ಪತಂಜಲಿ ಪಡೆದುಕೊಂಡಿದೆ. ಈ ಭೂಮಿಯನ್ನು ಔಷಧೀಯ ಗಿಡಮೂಲಿಕೆಗಳಿಗೆ, ಕಬ್ಬು ಕೃಷಿಗೆ ಮತ್ತು ಗೋಶಾಲೆಗಳನ್ನು ನಿರ್ವಹಿಸಲು ಬಳಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. “ಮಾಲಿಕತ್ವ ನಿಮ್ಮ ಬಳಿಯೇ ಇರಲಿದ್ದು, ಭೂಮಿಯನ್ನಷ್ಟೇ ಬಳಸಲು ಅವಕಾಶ ನೀಡುವಂತೆ ಅನೇಕ ದಲಿತ ಕುಟುಂಬಗಳಿಗೆ ಪತಂಜಲಿಯ ಸಹವರ್ತಿಗಳು ಕೋರಿದರು. ನಿರಾಕರಿಸಿದವರಿಗೆ ಒತ್ತಡ ಹೇರಲಾಯಿತು” ಎನ್ನಲಾಗಿದೆ.

“ಗ್ರಾಮ ಪಂಚಾಯತ್‌ನ ನೂರಾರು ಬಿಘಾಸ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಔರಂಗಾಬಾದ್ ಮತ್ತು ತೇಲಿವಾಲಾ ಮುಂತಾದ ಸ್ಥಳಗಳಲ್ಲಿ ಗ್ರಾಮಸ್ಥರು ವಿರೋಧಿಸಿದ್ದರಿಂದಾಗಿ ಇದು ಯಶಸ್ವಿಯಾಗಲಿಲ್ಲ.”

ಮುಖಂಡರಾದ ಗುಲಾಬ್ ಸಿಂಗ್, ಕುರಾಡಿ ಸಿಂಗ್ ಅವರು ಪತಂಜಲಿ ಸಂಸ್ಥೆ ಜೊತೆ ಮಾತುಕತೆಗೆ ಸಹಾಯ ಮಾಡಿದರು. ತೆಲಿವಾಲಾದಂತಹ ಸ್ಥಳಗಳಲ್ಲಿ ವೈಯಕ್ತಿಕ ಭೂಮಿ ವರ್ಗಾವಣೆಗಳು ಸುಗಮವಾದವು ಎನ್ನಲಾಗಿದೆ.

ಇದನ್ನೂ ಓದಿರಿ: ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

52 ವರ್ಷದ ಮಹೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿ, “ಪತಂಜಲಿ ಸಂಸ್ಥೆಗಾಗಿ ಇತರ ದಲಿತ ಕುಟುಂಬಗಳಿಂದ ಪರೋಕ್ಷವಾಗಿ 100 ಬಿಘಾಗಳನ್ನು ಖರೀದಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪತಂಜಲಿಯ ಹಿರಿಯ ಕಾರ್ಯಕರ್ತ ದೇವೇಂದ್ರ ಚೌಧರಿ ನನ್ನ ಬಳಿ ಬಂದಿದ್ದರು. ನಿಮ್ಮ ಹೆಸರಿಗೆ ಸ್ವಲ್ಪ ಜಮೀನು ವರ್ಗಾವಣೆ ಮಾಡಿಕೊಳ್ಳಿ. ಹಣ ನೀಡುತ್ತೇವೆ, ಹೆಸರೇ ನಿಮ್ಮದೇ ಆಗಿರುತ್ತದೆ ಎಂದ ಚೌಧರಿಯವರು ಜಮೀನು ಮಾರಾಟ ಮಾಡಿದವರಿಗೆ ಹಣ ನೀಡುತ್ತಿದ್ದರು’’ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಭೂ ದಾಖಲೆಗಳ ಪ್ರಕಾರ, ಮಹೇಂದ್ರ ಮತ್ತು ಅವರ ಕುಟುಂಬವು 2008ರಲ್ಲಿ 18 ಬಾರಿ, 2007ರಲ್ಲಿ ಏಳು ಬಾರಿ ಮತ್ತು 2009ರಲ್ಲಿ 21 ಬಾರಿ ಪ್ಲಾಟ್‌ಗಳನ್ನು ಖರೀದಿಸಿ ಮಾರಾಟ ಮಾಡಿದೆ ಮತ್ತು ಒಪ್ಪಂದಗಳಿಗೆ ಸಹಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...