Homeಕರ್ನಾಟಕರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

- Advertisement -
- Advertisement -

ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆಯು ದಲಿತರ ಭೂಮಿಯನ್ನು ಕಬಳಿಸುತ್ತಿದೆ. ಪರೋಕ್ಷವಾಗಿ ದಲಿತರನ್ನು ವಂಚಿಸುತ್ತಿದೆ ಎಂದು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವರದಿ ಮಾಡಿದೆ.

ಸುಮಾರು ಐದು ದಶಕಗಳ ಹಿಂದೆ ಭೂಸುಧಾರಣೆಯ ಭಾಗವಾಗಿ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ತೆಲಿವಾಲಾ ಗ್ರಾಮದ ಪ್ರತಿ ದಲಿತ ಕುಟುಂಬಕ್ಕೆ ಆರು ಬಿಘಾ ಜಮೀನುಗಳನ್ನು ನೀಡಲಾಯಿತು. ಆದರೆ ಆ ಭೂಮಿಯ ಬಹುಪಾಲು ಈಗ ಪತಂಜಲಿಯ ನಿಯಂತ್ರಣದಲ್ಲಿದೆ. ದಲಿತರು ಹೆಚ್ಚಾಗಿ ಭೂರಹಿತರಾಗಿದ್ದು- ಒಂದೋ ರಾಮ್‌ದೇವ್ ಅವರ ಕಾರ್ಪೊರೇಟ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದಾರೆ ಅಥವಾ ಜೀವನೋಪಾಯಕ್ಕಾಗಿ ವಲಸೆ ಹೋಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತಂಜಲಿ ಸಂಸ್ಥೆ ತಾಂತ್ರಿಕವಾಗಿ ಭೂಮಿಯನ್ನು ಖರೀದಿಸಿಲ್ಲ. ಅವಿಭಜಿತ ಉತ್ತರ ಪ್ರದೇಶದಲ್ಲಿ ಜಮೀನ್ದಾರಿ ಪದ್ಧತಿಯನ್ನು ರದ್ದುಪಡಿಸಿದ ನಂತರ ಜಾರಿಗೊಳಿಸಲಾದ ಕಟ್ಟುನಿಟ್ಟಾದ ಭೂ ಕಾನೂನುಗಳಿಂದಾಗಿ ಇಲ್ಲಿ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ. ಹರಿದ್ವಾರದಿಂದ 20 ಕಿಮೀ ದೂರದಲ್ಲಿರುವ, 1,500 ದಲಿತ ಮತದಾರರಿರುವ ತೆಲಿವಾಲಾ ಗ್ರಾಮದಲ್ಲಿ ಕಾನೂನು ಬದ್ಧವಾಗಿ ಭೂಮಿ ಖರೀದಿಸಲು ಪತಂಜಲಿ ಸಂಸ್ಥೆಗೆ ಅವಕಾಶವಿಲ್ಲ.

18 ಬಿಘಾಗಳಿಗಿಂತ ಹೆಚ್ಚಿನ ನಿವೇಶನಗಳನ್ನು ಹೊಂದಿರುವವರಿಗೆ ವಿನಾಯಿತಿಯನ್ನು ನೀಡಿ ಮಾರಬಹುದು. ಆದರೆ ದಲಿತರು ತಮ್ಮ ಭೂಮಿಯನ್ನು ಇತರ ದಲಿತರಿಗೆ ಮಾತ್ರ ವರ್ಗಾಯಿಸಬಹುದು ಎಂದು ಕಾನೂನು ಹೇಳುತ್ತದೆ. ಹೀಗೆ ಮಾರಾಟ ಮಾಡುವಾಗ ಜಿಲ್ಲೆ ಅಥವಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ರಿಂದ ವಿಶೇಷ ಅನುಮತಿ ಅಗತ್ಯವಿದೆ.

ಆದರೆ ಪತಂಜಲಿ ಸಂಸ್ಥೆ ಮತ್ತು ಅದರ ಸಹಚರರು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಪ್ರಭಾವ ಮತ್ತು ಬಂಡವಾಳವನ್ನು ಬಳಸಿಕೊಂಡು 2005 ಮತ್ತು 2010ರ ನಡುವೆ ದಲಿತ ಗ್ರಾಮಸ್ಥರ ಹೆಸರಿನಲ್ಲಿ ‘ದೇಣಿಗೆ ಪತ್ರಗಳು’ ಮತ್ತು ನೋಂದಣಿಗಳ ಮೂಲಕ ಸುಮಾರು 600 ಬಿಘಾ ಭೂಮಿಯನ್ನು ಪತಂಜಲಿ ಪಡೆದುಕೊಂಡಿದೆ. ಈ ಭೂಮಿಯನ್ನು ಔಷಧೀಯ ಗಿಡಮೂಲಿಕೆಗಳಿಗೆ, ಕಬ್ಬು ಕೃಷಿಗೆ ಮತ್ತು ಗೋಶಾಲೆಗಳನ್ನು ನಿರ್ವಹಿಸಲು ಬಳಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. “ಮಾಲಿಕತ್ವ ನಿಮ್ಮ ಬಳಿಯೇ ಇರಲಿದ್ದು, ಭೂಮಿಯನ್ನಷ್ಟೇ ಬಳಸಲು ಅವಕಾಶ ನೀಡುವಂತೆ ಅನೇಕ ದಲಿತ ಕುಟುಂಬಗಳಿಗೆ ಪತಂಜಲಿಯ ಸಹವರ್ತಿಗಳು ಕೋರಿದರು. ನಿರಾಕರಿಸಿದವರಿಗೆ ಒತ್ತಡ ಹೇರಲಾಯಿತು” ಎನ್ನಲಾಗಿದೆ.

“ಗ್ರಾಮ ಪಂಚಾಯತ್‌ನ ನೂರಾರು ಬಿಘಾಸ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಔರಂಗಾಬಾದ್ ಮತ್ತು ತೇಲಿವಾಲಾ ಮುಂತಾದ ಸ್ಥಳಗಳಲ್ಲಿ ಗ್ರಾಮಸ್ಥರು ವಿರೋಧಿಸಿದ್ದರಿಂದಾಗಿ ಇದು ಯಶಸ್ವಿಯಾಗಲಿಲ್ಲ.”

ಮುಖಂಡರಾದ ಗುಲಾಬ್ ಸಿಂಗ್, ಕುರಾಡಿ ಸಿಂಗ್ ಅವರು ಪತಂಜಲಿ ಸಂಸ್ಥೆ ಜೊತೆ ಮಾತುಕತೆಗೆ ಸಹಾಯ ಮಾಡಿದರು. ತೆಲಿವಾಲಾದಂತಹ ಸ್ಥಳಗಳಲ್ಲಿ ವೈಯಕ್ತಿಕ ಭೂಮಿ ವರ್ಗಾವಣೆಗಳು ಸುಗಮವಾದವು ಎನ್ನಲಾಗಿದೆ.

ಇದನ್ನೂ ಓದಿರಿ: ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

52 ವರ್ಷದ ಮಹೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿ, “ಪತಂಜಲಿ ಸಂಸ್ಥೆಗಾಗಿ ಇತರ ದಲಿತ ಕುಟುಂಬಗಳಿಂದ ಪರೋಕ್ಷವಾಗಿ 100 ಬಿಘಾಗಳನ್ನು ಖರೀದಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪತಂಜಲಿಯ ಹಿರಿಯ ಕಾರ್ಯಕರ್ತ ದೇವೇಂದ್ರ ಚೌಧರಿ ನನ್ನ ಬಳಿ ಬಂದಿದ್ದರು. ನಿಮ್ಮ ಹೆಸರಿಗೆ ಸ್ವಲ್ಪ ಜಮೀನು ವರ್ಗಾವಣೆ ಮಾಡಿಕೊಳ್ಳಿ. ಹಣ ನೀಡುತ್ತೇವೆ, ಹೆಸರೇ ನಿಮ್ಮದೇ ಆಗಿರುತ್ತದೆ ಎಂದ ಚೌಧರಿಯವರು ಜಮೀನು ಮಾರಾಟ ಮಾಡಿದವರಿಗೆ ಹಣ ನೀಡುತ್ತಿದ್ದರು’’ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಭೂ ದಾಖಲೆಗಳ ಪ್ರಕಾರ, ಮಹೇಂದ್ರ ಮತ್ತು ಅವರ ಕುಟುಂಬವು 2008ರಲ್ಲಿ 18 ಬಾರಿ, 2007ರಲ್ಲಿ ಏಳು ಬಾರಿ ಮತ್ತು 2009ರಲ್ಲಿ 21 ಬಾರಿ ಪ್ಲಾಟ್‌ಗಳನ್ನು ಖರೀದಿಸಿ ಮಾರಾಟ ಮಾಡಿದೆ ಮತ್ತು ಒಪ್ಪಂದಗಳಿಗೆ ಸಹಿ ಹಾಕಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...