Homeಕರ್ನಾಟಕರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

- Advertisement -
- Advertisement -

ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆಯು ದಲಿತರ ಭೂಮಿಯನ್ನು ಕಬಳಿಸುತ್ತಿದೆ. ಪರೋಕ್ಷವಾಗಿ ದಲಿತರನ್ನು ವಂಚಿಸುತ್ತಿದೆ ಎಂದು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವರದಿ ಮಾಡಿದೆ.

ಸುಮಾರು ಐದು ದಶಕಗಳ ಹಿಂದೆ ಭೂಸುಧಾರಣೆಯ ಭಾಗವಾಗಿ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ತೆಲಿವಾಲಾ ಗ್ರಾಮದ ಪ್ರತಿ ದಲಿತ ಕುಟುಂಬಕ್ಕೆ ಆರು ಬಿಘಾ ಜಮೀನುಗಳನ್ನು ನೀಡಲಾಯಿತು. ಆದರೆ ಆ ಭೂಮಿಯ ಬಹುಪಾಲು ಈಗ ಪತಂಜಲಿಯ ನಿಯಂತ್ರಣದಲ್ಲಿದೆ. ದಲಿತರು ಹೆಚ್ಚಾಗಿ ಭೂರಹಿತರಾಗಿದ್ದು- ಒಂದೋ ರಾಮ್‌ದೇವ್ ಅವರ ಕಾರ್ಪೊರೇಟ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದಾರೆ ಅಥವಾ ಜೀವನೋಪಾಯಕ್ಕಾಗಿ ವಲಸೆ ಹೋಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತಂಜಲಿ ಸಂಸ್ಥೆ ತಾಂತ್ರಿಕವಾಗಿ ಭೂಮಿಯನ್ನು ಖರೀದಿಸಿಲ್ಲ. ಅವಿಭಜಿತ ಉತ್ತರ ಪ್ರದೇಶದಲ್ಲಿ ಜಮೀನ್ದಾರಿ ಪದ್ಧತಿಯನ್ನು ರದ್ದುಪಡಿಸಿದ ನಂತರ ಜಾರಿಗೊಳಿಸಲಾದ ಕಟ್ಟುನಿಟ್ಟಾದ ಭೂ ಕಾನೂನುಗಳಿಂದಾಗಿ ಇಲ್ಲಿ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ. ಹರಿದ್ವಾರದಿಂದ 20 ಕಿಮೀ ದೂರದಲ್ಲಿರುವ, 1,500 ದಲಿತ ಮತದಾರರಿರುವ ತೆಲಿವಾಲಾ ಗ್ರಾಮದಲ್ಲಿ ಕಾನೂನು ಬದ್ಧವಾಗಿ ಭೂಮಿ ಖರೀದಿಸಲು ಪತಂಜಲಿ ಸಂಸ್ಥೆಗೆ ಅವಕಾಶವಿಲ್ಲ.

18 ಬಿಘಾಗಳಿಗಿಂತ ಹೆಚ್ಚಿನ ನಿವೇಶನಗಳನ್ನು ಹೊಂದಿರುವವರಿಗೆ ವಿನಾಯಿತಿಯನ್ನು ನೀಡಿ ಮಾರಬಹುದು. ಆದರೆ ದಲಿತರು ತಮ್ಮ ಭೂಮಿಯನ್ನು ಇತರ ದಲಿತರಿಗೆ ಮಾತ್ರ ವರ್ಗಾಯಿಸಬಹುದು ಎಂದು ಕಾನೂನು ಹೇಳುತ್ತದೆ. ಹೀಗೆ ಮಾರಾಟ ಮಾಡುವಾಗ ಜಿಲ್ಲೆ ಅಥವಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ರಿಂದ ವಿಶೇಷ ಅನುಮತಿ ಅಗತ್ಯವಿದೆ.

ಆದರೆ ಪತಂಜಲಿ ಸಂಸ್ಥೆ ಮತ್ತು ಅದರ ಸಹಚರರು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಪ್ರಭಾವ ಮತ್ತು ಬಂಡವಾಳವನ್ನು ಬಳಸಿಕೊಂಡು 2005 ಮತ್ತು 2010ರ ನಡುವೆ ದಲಿತ ಗ್ರಾಮಸ್ಥರ ಹೆಸರಿನಲ್ಲಿ ‘ದೇಣಿಗೆ ಪತ್ರಗಳು’ ಮತ್ತು ನೋಂದಣಿಗಳ ಮೂಲಕ ಸುಮಾರು 600 ಬಿಘಾ ಭೂಮಿಯನ್ನು ಪತಂಜಲಿ ಪಡೆದುಕೊಂಡಿದೆ. ಈ ಭೂಮಿಯನ್ನು ಔಷಧೀಯ ಗಿಡಮೂಲಿಕೆಗಳಿಗೆ, ಕಬ್ಬು ಕೃಷಿಗೆ ಮತ್ತು ಗೋಶಾಲೆಗಳನ್ನು ನಿರ್ವಹಿಸಲು ಬಳಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. “ಮಾಲಿಕತ್ವ ನಿಮ್ಮ ಬಳಿಯೇ ಇರಲಿದ್ದು, ಭೂಮಿಯನ್ನಷ್ಟೇ ಬಳಸಲು ಅವಕಾಶ ನೀಡುವಂತೆ ಅನೇಕ ದಲಿತ ಕುಟುಂಬಗಳಿಗೆ ಪತಂಜಲಿಯ ಸಹವರ್ತಿಗಳು ಕೋರಿದರು. ನಿರಾಕರಿಸಿದವರಿಗೆ ಒತ್ತಡ ಹೇರಲಾಯಿತು” ಎನ್ನಲಾಗಿದೆ.

“ಗ್ರಾಮ ಪಂಚಾಯತ್‌ನ ನೂರಾರು ಬಿಘಾಸ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಔರಂಗಾಬಾದ್ ಮತ್ತು ತೇಲಿವಾಲಾ ಮುಂತಾದ ಸ್ಥಳಗಳಲ್ಲಿ ಗ್ರಾಮಸ್ಥರು ವಿರೋಧಿಸಿದ್ದರಿಂದಾಗಿ ಇದು ಯಶಸ್ವಿಯಾಗಲಿಲ್ಲ.”

ಮುಖಂಡರಾದ ಗುಲಾಬ್ ಸಿಂಗ್, ಕುರಾಡಿ ಸಿಂಗ್ ಅವರು ಪತಂಜಲಿ ಸಂಸ್ಥೆ ಜೊತೆ ಮಾತುಕತೆಗೆ ಸಹಾಯ ಮಾಡಿದರು. ತೆಲಿವಾಲಾದಂತಹ ಸ್ಥಳಗಳಲ್ಲಿ ವೈಯಕ್ತಿಕ ಭೂಮಿ ವರ್ಗಾವಣೆಗಳು ಸುಗಮವಾದವು ಎನ್ನಲಾಗಿದೆ.

ಇದನ್ನೂ ಓದಿರಿ: ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

52 ವರ್ಷದ ಮಹೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿ, “ಪತಂಜಲಿ ಸಂಸ್ಥೆಗಾಗಿ ಇತರ ದಲಿತ ಕುಟುಂಬಗಳಿಂದ ಪರೋಕ್ಷವಾಗಿ 100 ಬಿಘಾಗಳನ್ನು ಖರೀದಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪತಂಜಲಿಯ ಹಿರಿಯ ಕಾರ್ಯಕರ್ತ ದೇವೇಂದ್ರ ಚೌಧರಿ ನನ್ನ ಬಳಿ ಬಂದಿದ್ದರು. ನಿಮ್ಮ ಹೆಸರಿಗೆ ಸ್ವಲ್ಪ ಜಮೀನು ವರ್ಗಾವಣೆ ಮಾಡಿಕೊಳ್ಳಿ. ಹಣ ನೀಡುತ್ತೇವೆ, ಹೆಸರೇ ನಿಮ್ಮದೇ ಆಗಿರುತ್ತದೆ ಎಂದ ಚೌಧರಿಯವರು ಜಮೀನು ಮಾರಾಟ ಮಾಡಿದವರಿಗೆ ಹಣ ನೀಡುತ್ತಿದ್ದರು’’ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಭೂ ದಾಖಲೆಗಳ ಪ್ರಕಾರ, ಮಹೇಂದ್ರ ಮತ್ತು ಅವರ ಕುಟುಂಬವು 2008ರಲ್ಲಿ 18 ಬಾರಿ, 2007ರಲ್ಲಿ ಏಳು ಬಾರಿ ಮತ್ತು 2009ರಲ್ಲಿ 21 ಬಾರಿ ಪ್ಲಾಟ್‌ಗಳನ್ನು ಖರೀದಿಸಿ ಮಾರಾಟ ಮಾಡಿದೆ ಮತ್ತು ಒಪ್ಪಂದಗಳಿಗೆ ಸಹಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...