Homeಕರ್ನಾಟಕರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

- Advertisement -
- Advertisement -

ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆಯು ದಲಿತರ ಭೂಮಿಯನ್ನು ಕಬಳಿಸುತ್ತಿದೆ. ಪರೋಕ್ಷವಾಗಿ ದಲಿತರನ್ನು ವಂಚಿಸುತ್ತಿದೆ ಎಂದು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವರದಿ ಮಾಡಿದೆ.

ಸುಮಾರು ಐದು ದಶಕಗಳ ಹಿಂದೆ ಭೂಸುಧಾರಣೆಯ ಭಾಗವಾಗಿ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ತೆಲಿವಾಲಾ ಗ್ರಾಮದ ಪ್ರತಿ ದಲಿತ ಕುಟುಂಬಕ್ಕೆ ಆರು ಬಿಘಾ ಜಮೀನುಗಳನ್ನು ನೀಡಲಾಯಿತು. ಆದರೆ ಆ ಭೂಮಿಯ ಬಹುಪಾಲು ಈಗ ಪತಂಜಲಿಯ ನಿಯಂತ್ರಣದಲ್ಲಿದೆ. ದಲಿತರು ಹೆಚ್ಚಾಗಿ ಭೂರಹಿತರಾಗಿದ್ದು- ಒಂದೋ ರಾಮ್‌ದೇವ್ ಅವರ ಕಾರ್ಪೊರೇಟ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದಾರೆ ಅಥವಾ ಜೀವನೋಪಾಯಕ್ಕಾಗಿ ವಲಸೆ ಹೋಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತಂಜಲಿ ಸಂಸ್ಥೆ ತಾಂತ್ರಿಕವಾಗಿ ಭೂಮಿಯನ್ನು ಖರೀದಿಸಿಲ್ಲ. ಅವಿಭಜಿತ ಉತ್ತರ ಪ್ರದೇಶದಲ್ಲಿ ಜಮೀನ್ದಾರಿ ಪದ್ಧತಿಯನ್ನು ರದ್ದುಪಡಿಸಿದ ನಂತರ ಜಾರಿಗೊಳಿಸಲಾದ ಕಟ್ಟುನಿಟ್ಟಾದ ಭೂ ಕಾನೂನುಗಳಿಂದಾಗಿ ಇಲ್ಲಿ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ. ಹರಿದ್ವಾರದಿಂದ 20 ಕಿಮೀ ದೂರದಲ್ಲಿರುವ, 1,500 ದಲಿತ ಮತದಾರರಿರುವ ತೆಲಿವಾಲಾ ಗ್ರಾಮದಲ್ಲಿ ಕಾನೂನು ಬದ್ಧವಾಗಿ ಭೂಮಿ ಖರೀದಿಸಲು ಪತಂಜಲಿ ಸಂಸ್ಥೆಗೆ ಅವಕಾಶವಿಲ್ಲ.

18 ಬಿಘಾಗಳಿಗಿಂತ ಹೆಚ್ಚಿನ ನಿವೇಶನಗಳನ್ನು ಹೊಂದಿರುವವರಿಗೆ ವಿನಾಯಿತಿಯನ್ನು ನೀಡಿ ಮಾರಬಹುದು. ಆದರೆ ದಲಿತರು ತಮ್ಮ ಭೂಮಿಯನ್ನು ಇತರ ದಲಿತರಿಗೆ ಮಾತ್ರ ವರ್ಗಾಯಿಸಬಹುದು ಎಂದು ಕಾನೂನು ಹೇಳುತ್ತದೆ. ಹೀಗೆ ಮಾರಾಟ ಮಾಡುವಾಗ ಜಿಲ್ಲೆ ಅಥವಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ರಿಂದ ವಿಶೇಷ ಅನುಮತಿ ಅಗತ್ಯವಿದೆ.

ಆದರೆ ಪತಂಜಲಿ ಸಂಸ್ಥೆ ಮತ್ತು ಅದರ ಸಹಚರರು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಪ್ರಭಾವ ಮತ್ತು ಬಂಡವಾಳವನ್ನು ಬಳಸಿಕೊಂಡು 2005 ಮತ್ತು 2010ರ ನಡುವೆ ದಲಿತ ಗ್ರಾಮಸ್ಥರ ಹೆಸರಿನಲ್ಲಿ ‘ದೇಣಿಗೆ ಪತ್ರಗಳು’ ಮತ್ತು ನೋಂದಣಿಗಳ ಮೂಲಕ ಸುಮಾರು 600 ಬಿಘಾ ಭೂಮಿಯನ್ನು ಪತಂಜಲಿ ಪಡೆದುಕೊಂಡಿದೆ. ಈ ಭೂಮಿಯನ್ನು ಔಷಧೀಯ ಗಿಡಮೂಲಿಕೆಗಳಿಗೆ, ಕಬ್ಬು ಕೃಷಿಗೆ ಮತ್ತು ಗೋಶಾಲೆಗಳನ್ನು ನಿರ್ವಹಿಸಲು ಬಳಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. “ಮಾಲಿಕತ್ವ ನಿಮ್ಮ ಬಳಿಯೇ ಇರಲಿದ್ದು, ಭೂಮಿಯನ್ನಷ್ಟೇ ಬಳಸಲು ಅವಕಾಶ ನೀಡುವಂತೆ ಅನೇಕ ದಲಿತ ಕುಟುಂಬಗಳಿಗೆ ಪತಂಜಲಿಯ ಸಹವರ್ತಿಗಳು ಕೋರಿದರು. ನಿರಾಕರಿಸಿದವರಿಗೆ ಒತ್ತಡ ಹೇರಲಾಯಿತು” ಎನ್ನಲಾಗಿದೆ.

“ಗ್ರಾಮ ಪಂಚಾಯತ್‌ನ ನೂರಾರು ಬಿಘಾಸ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಔರಂಗಾಬಾದ್ ಮತ್ತು ತೇಲಿವಾಲಾ ಮುಂತಾದ ಸ್ಥಳಗಳಲ್ಲಿ ಗ್ರಾಮಸ್ಥರು ವಿರೋಧಿಸಿದ್ದರಿಂದಾಗಿ ಇದು ಯಶಸ್ವಿಯಾಗಲಿಲ್ಲ.”

ಮುಖಂಡರಾದ ಗುಲಾಬ್ ಸಿಂಗ್, ಕುರಾಡಿ ಸಿಂಗ್ ಅವರು ಪತಂಜಲಿ ಸಂಸ್ಥೆ ಜೊತೆ ಮಾತುಕತೆಗೆ ಸಹಾಯ ಮಾಡಿದರು. ತೆಲಿವಾಲಾದಂತಹ ಸ್ಥಳಗಳಲ್ಲಿ ವೈಯಕ್ತಿಕ ಭೂಮಿ ವರ್ಗಾವಣೆಗಳು ಸುಗಮವಾದವು ಎನ್ನಲಾಗಿದೆ.

ಇದನ್ನೂ ಓದಿರಿ: ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

52 ವರ್ಷದ ಮಹೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿ, “ಪತಂಜಲಿ ಸಂಸ್ಥೆಗಾಗಿ ಇತರ ದಲಿತ ಕುಟುಂಬಗಳಿಂದ ಪರೋಕ್ಷವಾಗಿ 100 ಬಿಘಾಗಳನ್ನು ಖರೀದಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪತಂಜಲಿಯ ಹಿರಿಯ ಕಾರ್ಯಕರ್ತ ದೇವೇಂದ್ರ ಚೌಧರಿ ನನ್ನ ಬಳಿ ಬಂದಿದ್ದರು. ನಿಮ್ಮ ಹೆಸರಿಗೆ ಸ್ವಲ್ಪ ಜಮೀನು ವರ್ಗಾವಣೆ ಮಾಡಿಕೊಳ್ಳಿ. ಹಣ ನೀಡುತ್ತೇವೆ, ಹೆಸರೇ ನಿಮ್ಮದೇ ಆಗಿರುತ್ತದೆ ಎಂದ ಚೌಧರಿಯವರು ಜಮೀನು ಮಾರಾಟ ಮಾಡಿದವರಿಗೆ ಹಣ ನೀಡುತ್ತಿದ್ದರು’’ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಭೂ ದಾಖಲೆಗಳ ಪ್ರಕಾರ, ಮಹೇಂದ್ರ ಮತ್ತು ಅವರ ಕುಟುಂಬವು 2008ರಲ್ಲಿ 18 ಬಾರಿ, 2007ರಲ್ಲಿ ಏಳು ಬಾರಿ ಮತ್ತು 2009ರಲ್ಲಿ 21 ಬಾರಿ ಪ್ಲಾಟ್‌ಗಳನ್ನು ಖರೀದಿಸಿ ಮಾರಾಟ ಮಾಡಿದೆ ಮತ್ತು ಒಪ್ಪಂದಗಳಿಗೆ ಸಹಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...