Homeಕರ್ನಾಟಕರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

- Advertisement -
- Advertisement -

ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆಯು ದಲಿತರ ಭೂಮಿಯನ್ನು ಕಬಳಿಸುತ್ತಿದೆ. ಪರೋಕ್ಷವಾಗಿ ದಲಿತರನ್ನು ವಂಚಿಸುತ್ತಿದೆ ಎಂದು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವರದಿ ಮಾಡಿದೆ.

ಸುಮಾರು ಐದು ದಶಕಗಳ ಹಿಂದೆ ಭೂಸುಧಾರಣೆಯ ಭಾಗವಾಗಿ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ತೆಲಿವಾಲಾ ಗ್ರಾಮದ ಪ್ರತಿ ದಲಿತ ಕುಟುಂಬಕ್ಕೆ ಆರು ಬಿಘಾ ಜಮೀನುಗಳನ್ನು ನೀಡಲಾಯಿತು. ಆದರೆ ಆ ಭೂಮಿಯ ಬಹುಪಾಲು ಈಗ ಪತಂಜಲಿಯ ನಿಯಂತ್ರಣದಲ್ಲಿದೆ. ದಲಿತರು ಹೆಚ್ಚಾಗಿ ಭೂರಹಿತರಾಗಿದ್ದು- ಒಂದೋ ರಾಮ್‌ದೇವ್ ಅವರ ಕಾರ್ಪೊರೇಟ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದಾರೆ ಅಥವಾ ಜೀವನೋಪಾಯಕ್ಕಾಗಿ ವಲಸೆ ಹೋಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪತಂಜಲಿ ಸಂಸ್ಥೆ ತಾಂತ್ರಿಕವಾಗಿ ಭೂಮಿಯನ್ನು ಖರೀದಿಸಿಲ್ಲ. ಅವಿಭಜಿತ ಉತ್ತರ ಪ್ರದೇಶದಲ್ಲಿ ಜಮೀನ್ದಾರಿ ಪದ್ಧತಿಯನ್ನು ರದ್ದುಪಡಿಸಿದ ನಂತರ ಜಾರಿಗೊಳಿಸಲಾದ ಕಟ್ಟುನಿಟ್ಟಾದ ಭೂ ಕಾನೂನುಗಳಿಂದಾಗಿ ಇಲ್ಲಿ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ. ಹರಿದ್ವಾರದಿಂದ 20 ಕಿಮೀ ದೂರದಲ್ಲಿರುವ, 1,500 ದಲಿತ ಮತದಾರರಿರುವ ತೆಲಿವಾಲಾ ಗ್ರಾಮದಲ್ಲಿ ಕಾನೂನು ಬದ್ಧವಾಗಿ ಭೂಮಿ ಖರೀದಿಸಲು ಪತಂಜಲಿ ಸಂಸ್ಥೆಗೆ ಅವಕಾಶವಿಲ್ಲ.

18 ಬಿಘಾಗಳಿಗಿಂತ ಹೆಚ್ಚಿನ ನಿವೇಶನಗಳನ್ನು ಹೊಂದಿರುವವರಿಗೆ ವಿನಾಯಿತಿಯನ್ನು ನೀಡಿ ಮಾರಬಹುದು. ಆದರೆ ದಲಿತರು ತಮ್ಮ ಭೂಮಿಯನ್ನು ಇತರ ದಲಿತರಿಗೆ ಮಾತ್ರ ವರ್ಗಾಯಿಸಬಹುದು ಎಂದು ಕಾನೂನು ಹೇಳುತ್ತದೆ. ಹೀಗೆ ಮಾರಾಟ ಮಾಡುವಾಗ ಜಿಲ್ಲೆ ಅಥವಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ರಿಂದ ವಿಶೇಷ ಅನುಮತಿ ಅಗತ್ಯವಿದೆ.

ಆದರೆ ಪತಂಜಲಿ ಸಂಸ್ಥೆ ಮತ್ತು ಅದರ ಸಹಚರರು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಪ್ರಭಾವ ಮತ್ತು ಬಂಡವಾಳವನ್ನು ಬಳಸಿಕೊಂಡು 2005 ಮತ್ತು 2010ರ ನಡುವೆ ದಲಿತ ಗ್ರಾಮಸ್ಥರ ಹೆಸರಿನಲ್ಲಿ ‘ದೇಣಿಗೆ ಪತ್ರಗಳು’ ಮತ್ತು ನೋಂದಣಿಗಳ ಮೂಲಕ ಸುಮಾರು 600 ಬಿಘಾ ಭೂಮಿಯನ್ನು ಪತಂಜಲಿ ಪಡೆದುಕೊಂಡಿದೆ. ಈ ಭೂಮಿಯನ್ನು ಔಷಧೀಯ ಗಿಡಮೂಲಿಕೆಗಳಿಗೆ, ಕಬ್ಬು ಕೃಷಿಗೆ ಮತ್ತು ಗೋಶಾಲೆಗಳನ್ನು ನಿರ್ವಹಿಸಲು ಬಳಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. “ಮಾಲಿಕತ್ವ ನಿಮ್ಮ ಬಳಿಯೇ ಇರಲಿದ್ದು, ಭೂಮಿಯನ್ನಷ್ಟೇ ಬಳಸಲು ಅವಕಾಶ ನೀಡುವಂತೆ ಅನೇಕ ದಲಿತ ಕುಟುಂಬಗಳಿಗೆ ಪತಂಜಲಿಯ ಸಹವರ್ತಿಗಳು ಕೋರಿದರು. ನಿರಾಕರಿಸಿದವರಿಗೆ ಒತ್ತಡ ಹೇರಲಾಯಿತು” ಎನ್ನಲಾಗಿದೆ.

“ಗ್ರಾಮ ಪಂಚಾಯತ್‌ನ ನೂರಾರು ಬಿಘಾಸ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಔರಂಗಾಬಾದ್ ಮತ್ತು ತೇಲಿವಾಲಾ ಮುಂತಾದ ಸ್ಥಳಗಳಲ್ಲಿ ಗ್ರಾಮಸ್ಥರು ವಿರೋಧಿಸಿದ್ದರಿಂದಾಗಿ ಇದು ಯಶಸ್ವಿಯಾಗಲಿಲ್ಲ.”

ಮುಖಂಡರಾದ ಗುಲಾಬ್ ಸಿಂಗ್, ಕುರಾಡಿ ಸಿಂಗ್ ಅವರು ಪತಂಜಲಿ ಸಂಸ್ಥೆ ಜೊತೆ ಮಾತುಕತೆಗೆ ಸಹಾಯ ಮಾಡಿದರು. ತೆಲಿವಾಲಾದಂತಹ ಸ್ಥಳಗಳಲ್ಲಿ ವೈಯಕ್ತಿಕ ಭೂಮಿ ವರ್ಗಾವಣೆಗಳು ಸುಗಮವಾದವು ಎನ್ನಲಾಗಿದೆ.

ಇದನ್ನೂ ಓದಿರಿ: ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

52 ವರ್ಷದ ಮಹೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿ, “ಪತಂಜಲಿ ಸಂಸ್ಥೆಗಾಗಿ ಇತರ ದಲಿತ ಕುಟುಂಬಗಳಿಂದ ಪರೋಕ್ಷವಾಗಿ 100 ಬಿಘಾಗಳನ್ನು ಖರೀದಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪತಂಜಲಿಯ ಹಿರಿಯ ಕಾರ್ಯಕರ್ತ ದೇವೇಂದ್ರ ಚೌಧರಿ ನನ್ನ ಬಳಿ ಬಂದಿದ್ದರು. ನಿಮ್ಮ ಹೆಸರಿಗೆ ಸ್ವಲ್ಪ ಜಮೀನು ವರ್ಗಾವಣೆ ಮಾಡಿಕೊಳ್ಳಿ. ಹಣ ನೀಡುತ್ತೇವೆ, ಹೆಸರೇ ನಿಮ್ಮದೇ ಆಗಿರುತ್ತದೆ ಎಂದ ಚೌಧರಿಯವರು ಜಮೀನು ಮಾರಾಟ ಮಾಡಿದವರಿಗೆ ಹಣ ನೀಡುತ್ತಿದ್ದರು’’ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಭೂ ದಾಖಲೆಗಳ ಪ್ರಕಾರ, ಮಹೇಂದ್ರ ಮತ್ತು ಅವರ ಕುಟುಂಬವು 2008ರಲ್ಲಿ 18 ಬಾರಿ, 2007ರಲ್ಲಿ ಏಳು ಬಾರಿ ಮತ್ತು 2009ರಲ್ಲಿ 21 ಬಾರಿ ಪ್ಲಾಟ್‌ಗಳನ್ನು ಖರೀದಿಸಿ ಮಾರಾಟ ಮಾಡಿದೆ ಮತ್ತು ಒಪ್ಪಂದಗಳಿಗೆ ಸಹಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...