Homeಕರ್ನಾಟಕಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

ಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

"ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು"

- Advertisement -
- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆ ವಿಷಯದಲ್ಲಿ ರಾಜಕೀಯ ನಾಯಕರು ಮಾಧ್ಯಮಗಳು ಸೇರಿದಂತೆ ಹಲವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ನಾವೆದ್ದು ನಿಲ್ಲದಿದ್ದರೇ ಮಹಿಳಾ ವೇದಿಕೆ ಗೃಹ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದಿದೆ.

ಸಂವಿಧಾನವನ್ನು ಜಾರಿಗೆ ತರುವ ಮತ್ತು ಮಹಿಳೆಯರ ಸುರಕ್ಷೆಯನ್ನು ಖಾತ್ರಿಪಡಿಸುವ ಜವಾಬ್ದಾರಿ ಯಾವುದೇ ಸರಕಾರದ್ದಾಗಿರುತ್ತದೆ. ಮತ್ತು ಸರಕಾರದ ಸಚಿವರು, ಶಾಸಕರು ಈ ವಿಷಯಗಳಲ್ಲಿ ಮಾದರಿಗಳಾಗಿ ನಿಲ್ಲಬೇಕು. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಅದಕ್ಕೆ ವ್ಯತಿರಿಕ್ತವಾಗಿವೆ ಎಂದು ವೇದಿಕೆ ಆಕ್ರೋಶ ಹೊರ ಹಾಕಿದೆ.

ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ನೇಮಿಸಿದೆ. ದುರಂತವೆಂದರೆ ಈ ತನಿಖಾ ತಂಡ ಒಂದು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಬಯಲಿಗೆಳೆಯುವ ಸಂಭವ ಕಡಿಮೆ ಇದೆ ಎಂಬ ಅನುಮಾನವನ್ನು ವೇದಿಕೆ ಹೊರಹಾಕಿದೆ. ಪ್ರಕರಣವನ್ನು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಮಾಡಿ ಅಮೂಲಾಗ್ರ ಶೋಧನೆಯನ್ನು ಜನರ ಮುಂದಿಡುವ ಹೊಣೆಗಾರಿಕೆ ಎಸ್.ಐ.ಟಿ.ಯದಾಗಬೇಕು. ಆದರೆ ಮೊದಲ ದಿನದಿಂದಲೇ ಅದು ಸತ್ಯ ಶೋಧನೆಯ ಬದಲು ಸಂಚು ಬಯಲು ಮಾಡುವ ಜಾಡು ಹಿಡಿದಿದೆ ಎಂದು ವೇದಿಕೆ ಆರೋಪಿಸಿದೆ.

ಇದನ್ನೂ ಓದಿ: ಕೋರ್ಟ್‌ಗೆ ಹಾಜರಾದ ಸಂತ್ರಸ್ತ ಯುವತಿ: ಅರೆಸ್ಟ್ ಆಗುವರೆ ರಮೇಶ್ ಜಾರಕಿಹೊಳಿ?

ಈ ಹಿನ್ನೆಲೆಯಲ್ಲಿ ನಾವೆದ್ದು ನಿಲ್ಲದಿದ್ದರೇ ವೇದಿಕೆ ಪ್ರಕರಣ ಕುರಿತು ನ್ಯಾಯಯುತ ತನಿಖೆಗೆ ಆಗ್ರಹಿಸಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

1. ಪ್ರಕರಣದ ಆರೋಪಿ ಮತ್ತು ಅವರ ಬೆಂಬಲಿಗರು ಆಳುವ ಪಕ್ಷದ ಭಾಗ ಮತ್ತು ಪ್ರಭಾವೀ ವ್ಯಕ್ತಿಯಾಗಿರುವುದರಿಂದ ಸರಕಾರದ ಅಧೀನದಲ್ಲಿ ಕೆಲಸ ಮಾಡಬೇಕಾಗಿರುವ ವಿಶೇಷ ತನಿಖಾ ತಂಡ ನಿಷ್ಪಕ್ಷಪಾತ ತನಿಖೆ ನಡೆಸಲಾರದು ಎಂಬ ಬಲವಾದ ಅನುಮಾನಗಳಿವೆ. ಈ ಕಾರಣದಿಂದ ಈ ಪ್ರಕರಣದ ತನಿಖೆಯನ್ನು ಉಚ್ಛ ನ್ಯಾಯಾಲಯದ ಸುಪರ್ದಿಯಲ್ಲಿ ನಡೆಸಬೇಕು.

2. ನಿರ್ಭಯಾ ಕಾನೂನು/ಕ್ರಿಮಿನಲ್ ಲಾ ತಿದ್ದುಪಡಿಯ ಪ್ರಕಾರ ಅತ್ಯಾಚಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಅನ್ವಯಿಸಬೇಕು.

3. ಕಾನೂನು ದೇಶದ ಎಲ್ಲ ಜನರಿಗೆ ಒಂದೇ ಆಗಿರುವುದರಿಂದ ಈ ಪ್ರಕರಣದ ಆರೋಪಿಯನ್ನೂ ಕೂಡಾ ಕಟ್ಟುನಿಟ್ಟಾದ ಕಾನೂನು ಪ್ರಕ್ರಿಯೆಗೆ ಒಳಪಡಿಸಬೇಕು.

4.  ದೂರುದಾರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು.

5. ಪ್ರಕರಣವು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದ್ದು ರಾಜಕೀಯ ಮೇಲಾಟದಲ್ಲಿ ಮಹಿಳೆಯರನ್ನು ಕೀಳಾಗಿ ಬಳಸಿಕೊಳ್ಳುವುದಕ್ಕೆ ಲಗಾಮು ಹಾಕಬೇಕು.

6. ಪ್ರಕರಣದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು.

7. ಸಚಿವರೊಬ್ಬರ ಮೇಲೆ ಬಂದ ಆರೋಪವನ್ನು ತಳ್ಳಿ ಹಾಕುವ ಮತ್ತದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಹಿಳೆಯರ ಹಾಗೂ ಆ ಮೂಲಕ ಶಾಸನ ಸಭೆಯ ಘನತೆಗೆ ಕುಂದುಂಟು ಮಾಡುವಂತೆ ಮಾತನಾಡಿದ ಸಚಿವ ಡಾ.ಸುಧಾಕರ್ ರವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಕ್ಷೇತ್ರದಲ್ಲಿರುವವರು ಸಾರ್ವಜನಿಕರಿಗೆ ಉತ್ತರದಾಯಿತ್ವವನ್ನು ಹೊಂದಿರುತ್ತಾರೆ. ಅವರು ಶಾಸನಸಭೆಯ ಕಲಾಪಗಳನ್ನು ಜನರ ಪ್ರಶ್ನೆಗಳ ಆಧಾರದಲ್ಲಿ ಚರ್ಚೆಗೆ ಮೀಸಲಿಡದೇ ಮನ ಬಂದಂತೆಲ್ಲ ವರ್ತಿಸುವುದು ಸರಿಯಲ್ಲ. ಇದು ಅವರ ಖಾಸಗಿ ಸಂಗತಿಗಳಲ್ಲ.

8. ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು.

ಈ ಬೇಡಿಕೆಗಳನ್ನು ನಾವೆದ್ದು ನಿಲ್ಲದಿದ್ದರೇ ವೇದಿಕೆ ಪರವಾಗಿ ವಿಮಲಾ. ಕೆ.ಎಸ್. ಲಕ್ಷ್ಮಿ ಕೆ.ಎಸ್. (ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ) ಮಮತಾ ಯಜಮಾನ್ (ಗಮನ ಮಹಿಳಾ ಸಂಘಟನೆ), ಗಾಂಧಿಮತಿ ( ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ) ಸರ್ಕಾರದ ಮುಂದಿಟ್ಟಿದ್ದಾರೆ.


ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...