Homeಕರ್ನಾಟಕಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

ಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

"ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು"

- Advertisement -
- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆ ವಿಷಯದಲ್ಲಿ ರಾಜಕೀಯ ನಾಯಕರು ಮಾಧ್ಯಮಗಳು ಸೇರಿದಂತೆ ಹಲವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ನಾವೆದ್ದು ನಿಲ್ಲದಿದ್ದರೇ ಮಹಿಳಾ ವೇದಿಕೆ ಗೃಹ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದಿದೆ.

ಸಂವಿಧಾನವನ್ನು ಜಾರಿಗೆ ತರುವ ಮತ್ತು ಮಹಿಳೆಯರ ಸುರಕ್ಷೆಯನ್ನು ಖಾತ್ರಿಪಡಿಸುವ ಜವಾಬ್ದಾರಿ ಯಾವುದೇ ಸರಕಾರದ್ದಾಗಿರುತ್ತದೆ. ಮತ್ತು ಸರಕಾರದ ಸಚಿವರು, ಶಾಸಕರು ಈ ವಿಷಯಗಳಲ್ಲಿ ಮಾದರಿಗಳಾಗಿ ನಿಲ್ಲಬೇಕು. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಅದಕ್ಕೆ ವ್ಯತಿರಿಕ್ತವಾಗಿವೆ ಎಂದು ವೇದಿಕೆ ಆಕ್ರೋಶ ಹೊರ ಹಾಕಿದೆ.

ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ನೇಮಿಸಿದೆ. ದುರಂತವೆಂದರೆ ಈ ತನಿಖಾ ತಂಡ ಒಂದು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಬಯಲಿಗೆಳೆಯುವ ಸಂಭವ ಕಡಿಮೆ ಇದೆ ಎಂಬ ಅನುಮಾನವನ್ನು ವೇದಿಕೆ ಹೊರಹಾಕಿದೆ. ಪ್ರಕರಣವನ್ನು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಮಾಡಿ ಅಮೂಲಾಗ್ರ ಶೋಧನೆಯನ್ನು ಜನರ ಮುಂದಿಡುವ ಹೊಣೆಗಾರಿಕೆ ಎಸ್.ಐ.ಟಿ.ಯದಾಗಬೇಕು. ಆದರೆ ಮೊದಲ ದಿನದಿಂದಲೇ ಅದು ಸತ್ಯ ಶೋಧನೆಯ ಬದಲು ಸಂಚು ಬಯಲು ಮಾಡುವ ಜಾಡು ಹಿಡಿದಿದೆ ಎಂದು ವೇದಿಕೆ ಆರೋಪಿಸಿದೆ.

ಇದನ್ನೂ ಓದಿ: ಕೋರ್ಟ್‌ಗೆ ಹಾಜರಾದ ಸಂತ್ರಸ್ತ ಯುವತಿ: ಅರೆಸ್ಟ್ ಆಗುವರೆ ರಮೇಶ್ ಜಾರಕಿಹೊಳಿ?

ಈ ಹಿನ್ನೆಲೆಯಲ್ಲಿ ನಾವೆದ್ದು ನಿಲ್ಲದಿದ್ದರೇ ವೇದಿಕೆ ಪ್ರಕರಣ ಕುರಿತು ನ್ಯಾಯಯುತ ತನಿಖೆಗೆ ಆಗ್ರಹಿಸಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

1. ಪ್ರಕರಣದ ಆರೋಪಿ ಮತ್ತು ಅವರ ಬೆಂಬಲಿಗರು ಆಳುವ ಪಕ್ಷದ ಭಾಗ ಮತ್ತು ಪ್ರಭಾವೀ ವ್ಯಕ್ತಿಯಾಗಿರುವುದರಿಂದ ಸರಕಾರದ ಅಧೀನದಲ್ಲಿ ಕೆಲಸ ಮಾಡಬೇಕಾಗಿರುವ ವಿಶೇಷ ತನಿಖಾ ತಂಡ ನಿಷ್ಪಕ್ಷಪಾತ ತನಿಖೆ ನಡೆಸಲಾರದು ಎಂಬ ಬಲವಾದ ಅನುಮಾನಗಳಿವೆ. ಈ ಕಾರಣದಿಂದ ಈ ಪ್ರಕರಣದ ತನಿಖೆಯನ್ನು ಉಚ್ಛ ನ್ಯಾಯಾಲಯದ ಸುಪರ್ದಿಯಲ್ಲಿ ನಡೆಸಬೇಕು.

2. ನಿರ್ಭಯಾ ಕಾನೂನು/ಕ್ರಿಮಿನಲ್ ಲಾ ತಿದ್ದುಪಡಿಯ ಪ್ರಕಾರ ಅತ್ಯಾಚಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಅನ್ವಯಿಸಬೇಕು.

3. ಕಾನೂನು ದೇಶದ ಎಲ್ಲ ಜನರಿಗೆ ಒಂದೇ ಆಗಿರುವುದರಿಂದ ಈ ಪ್ರಕರಣದ ಆರೋಪಿಯನ್ನೂ ಕೂಡಾ ಕಟ್ಟುನಿಟ್ಟಾದ ಕಾನೂನು ಪ್ರಕ್ರಿಯೆಗೆ ಒಳಪಡಿಸಬೇಕು.

4.  ದೂರುದಾರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು.

5. ಪ್ರಕರಣವು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದ್ದು ರಾಜಕೀಯ ಮೇಲಾಟದಲ್ಲಿ ಮಹಿಳೆಯರನ್ನು ಕೀಳಾಗಿ ಬಳಸಿಕೊಳ್ಳುವುದಕ್ಕೆ ಲಗಾಮು ಹಾಕಬೇಕು.

6. ಪ್ರಕರಣದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು.

7. ಸಚಿವರೊಬ್ಬರ ಮೇಲೆ ಬಂದ ಆರೋಪವನ್ನು ತಳ್ಳಿ ಹಾಕುವ ಮತ್ತದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಹಿಳೆಯರ ಹಾಗೂ ಆ ಮೂಲಕ ಶಾಸನ ಸಭೆಯ ಘನತೆಗೆ ಕುಂದುಂಟು ಮಾಡುವಂತೆ ಮಾತನಾಡಿದ ಸಚಿವ ಡಾ.ಸುಧಾಕರ್ ರವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಕ್ಷೇತ್ರದಲ್ಲಿರುವವರು ಸಾರ್ವಜನಿಕರಿಗೆ ಉತ್ತರದಾಯಿತ್ವವನ್ನು ಹೊಂದಿರುತ್ತಾರೆ. ಅವರು ಶಾಸನಸಭೆಯ ಕಲಾಪಗಳನ್ನು ಜನರ ಪ್ರಶ್ನೆಗಳ ಆಧಾರದಲ್ಲಿ ಚರ್ಚೆಗೆ ಮೀಸಲಿಡದೇ ಮನ ಬಂದಂತೆಲ್ಲ ವರ್ತಿಸುವುದು ಸರಿಯಲ್ಲ. ಇದು ಅವರ ಖಾಸಗಿ ಸಂಗತಿಗಳಲ್ಲ.

8. ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು.

ಈ ಬೇಡಿಕೆಗಳನ್ನು ನಾವೆದ್ದು ನಿಲ್ಲದಿದ್ದರೇ ವೇದಿಕೆ ಪರವಾಗಿ ವಿಮಲಾ. ಕೆ.ಎಸ್. ಲಕ್ಷ್ಮಿ ಕೆ.ಎಸ್. (ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ) ಮಮತಾ ಯಜಮಾನ್ (ಗಮನ ಮಹಿಳಾ ಸಂಘಟನೆ), ಗಾಂಧಿಮತಿ ( ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ) ಸರ್ಕಾರದ ಮುಂದಿಟ್ಟಿದ್ದಾರೆ.


ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...