Homeಕರ್ನಾಟಕಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

ಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

"ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು"

- Advertisement -
- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆ ವಿಷಯದಲ್ಲಿ ರಾಜಕೀಯ ನಾಯಕರು ಮಾಧ್ಯಮಗಳು ಸೇರಿದಂತೆ ಹಲವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ನಾವೆದ್ದು ನಿಲ್ಲದಿದ್ದರೇ ಮಹಿಳಾ ವೇದಿಕೆ ಗೃಹ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದಿದೆ.

ಸಂವಿಧಾನವನ್ನು ಜಾರಿಗೆ ತರುವ ಮತ್ತು ಮಹಿಳೆಯರ ಸುರಕ್ಷೆಯನ್ನು ಖಾತ್ರಿಪಡಿಸುವ ಜವಾಬ್ದಾರಿ ಯಾವುದೇ ಸರಕಾರದ್ದಾಗಿರುತ್ತದೆ. ಮತ್ತು ಸರಕಾರದ ಸಚಿವರು, ಶಾಸಕರು ಈ ವಿಷಯಗಳಲ್ಲಿ ಮಾದರಿಗಳಾಗಿ ನಿಲ್ಲಬೇಕು. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಅದಕ್ಕೆ ವ್ಯತಿರಿಕ್ತವಾಗಿವೆ ಎಂದು ವೇದಿಕೆ ಆಕ್ರೋಶ ಹೊರ ಹಾಕಿದೆ.

ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ನೇಮಿಸಿದೆ. ದುರಂತವೆಂದರೆ ಈ ತನಿಖಾ ತಂಡ ಒಂದು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಬಯಲಿಗೆಳೆಯುವ ಸಂಭವ ಕಡಿಮೆ ಇದೆ ಎಂಬ ಅನುಮಾನವನ್ನು ವೇದಿಕೆ ಹೊರಹಾಕಿದೆ. ಪ್ರಕರಣವನ್ನು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಮಾಡಿ ಅಮೂಲಾಗ್ರ ಶೋಧನೆಯನ್ನು ಜನರ ಮುಂದಿಡುವ ಹೊಣೆಗಾರಿಕೆ ಎಸ್.ಐ.ಟಿ.ಯದಾಗಬೇಕು. ಆದರೆ ಮೊದಲ ದಿನದಿಂದಲೇ ಅದು ಸತ್ಯ ಶೋಧನೆಯ ಬದಲು ಸಂಚು ಬಯಲು ಮಾಡುವ ಜಾಡು ಹಿಡಿದಿದೆ ಎಂದು ವೇದಿಕೆ ಆರೋಪಿಸಿದೆ.

ಇದನ್ನೂ ಓದಿ: ಕೋರ್ಟ್‌ಗೆ ಹಾಜರಾದ ಸಂತ್ರಸ್ತ ಯುವತಿ: ಅರೆಸ್ಟ್ ಆಗುವರೆ ರಮೇಶ್ ಜಾರಕಿಹೊಳಿ?

ಈ ಹಿನ್ನೆಲೆಯಲ್ಲಿ ನಾವೆದ್ದು ನಿಲ್ಲದಿದ್ದರೇ ವೇದಿಕೆ ಪ್ರಕರಣ ಕುರಿತು ನ್ಯಾಯಯುತ ತನಿಖೆಗೆ ಆಗ್ರಹಿಸಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

1. ಪ್ರಕರಣದ ಆರೋಪಿ ಮತ್ತು ಅವರ ಬೆಂಬಲಿಗರು ಆಳುವ ಪಕ್ಷದ ಭಾಗ ಮತ್ತು ಪ್ರಭಾವೀ ವ್ಯಕ್ತಿಯಾಗಿರುವುದರಿಂದ ಸರಕಾರದ ಅಧೀನದಲ್ಲಿ ಕೆಲಸ ಮಾಡಬೇಕಾಗಿರುವ ವಿಶೇಷ ತನಿಖಾ ತಂಡ ನಿಷ್ಪಕ್ಷಪಾತ ತನಿಖೆ ನಡೆಸಲಾರದು ಎಂಬ ಬಲವಾದ ಅನುಮಾನಗಳಿವೆ. ಈ ಕಾರಣದಿಂದ ಈ ಪ್ರಕರಣದ ತನಿಖೆಯನ್ನು ಉಚ್ಛ ನ್ಯಾಯಾಲಯದ ಸುಪರ್ದಿಯಲ್ಲಿ ನಡೆಸಬೇಕು.

2. ನಿರ್ಭಯಾ ಕಾನೂನು/ಕ್ರಿಮಿನಲ್ ಲಾ ತಿದ್ದುಪಡಿಯ ಪ್ರಕಾರ ಅತ್ಯಾಚಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಅನ್ವಯಿಸಬೇಕು.

3. ಕಾನೂನು ದೇಶದ ಎಲ್ಲ ಜನರಿಗೆ ಒಂದೇ ಆಗಿರುವುದರಿಂದ ಈ ಪ್ರಕರಣದ ಆರೋಪಿಯನ್ನೂ ಕೂಡಾ ಕಟ್ಟುನಿಟ್ಟಾದ ಕಾನೂನು ಪ್ರಕ್ರಿಯೆಗೆ ಒಳಪಡಿಸಬೇಕು.

4.  ದೂರುದಾರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು.

5. ಪ್ರಕರಣವು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದ್ದು ರಾಜಕೀಯ ಮೇಲಾಟದಲ್ಲಿ ಮಹಿಳೆಯರನ್ನು ಕೀಳಾಗಿ ಬಳಸಿಕೊಳ್ಳುವುದಕ್ಕೆ ಲಗಾಮು ಹಾಕಬೇಕು.

6. ಪ್ರಕರಣದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು.

7. ಸಚಿವರೊಬ್ಬರ ಮೇಲೆ ಬಂದ ಆರೋಪವನ್ನು ತಳ್ಳಿ ಹಾಕುವ ಮತ್ತದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಹಿಳೆಯರ ಹಾಗೂ ಆ ಮೂಲಕ ಶಾಸನ ಸಭೆಯ ಘನತೆಗೆ ಕುಂದುಂಟು ಮಾಡುವಂತೆ ಮಾತನಾಡಿದ ಸಚಿವ ಡಾ.ಸುಧಾಕರ್ ರವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಕ್ಷೇತ್ರದಲ್ಲಿರುವವರು ಸಾರ್ವಜನಿಕರಿಗೆ ಉತ್ತರದಾಯಿತ್ವವನ್ನು ಹೊಂದಿರುತ್ತಾರೆ. ಅವರು ಶಾಸನಸಭೆಯ ಕಲಾಪಗಳನ್ನು ಜನರ ಪ್ರಶ್ನೆಗಳ ಆಧಾರದಲ್ಲಿ ಚರ್ಚೆಗೆ ಮೀಸಲಿಡದೇ ಮನ ಬಂದಂತೆಲ್ಲ ವರ್ತಿಸುವುದು ಸರಿಯಲ್ಲ. ಇದು ಅವರ ಖಾಸಗಿ ಸಂಗತಿಗಳಲ್ಲ.

8. ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು.

ಈ ಬೇಡಿಕೆಗಳನ್ನು ನಾವೆದ್ದು ನಿಲ್ಲದಿದ್ದರೇ ವೇದಿಕೆ ಪರವಾಗಿ ವಿಮಲಾ. ಕೆ.ಎಸ್. ಲಕ್ಷ್ಮಿ ಕೆ.ಎಸ್. (ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ) ಮಮತಾ ಯಜಮಾನ್ (ಗಮನ ಮಹಿಳಾ ಸಂಘಟನೆ), ಗಾಂಧಿಮತಿ ( ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ) ಸರ್ಕಾರದ ಮುಂದಿಟ್ಟಿದ್ದಾರೆ.


ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...