Homeಕರ್ನಾಟಕಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

ಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

"ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು"

- Advertisement -
- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆ ವಿಷಯದಲ್ಲಿ ರಾಜಕೀಯ ನಾಯಕರು ಮಾಧ್ಯಮಗಳು ಸೇರಿದಂತೆ ಹಲವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ನಾವೆದ್ದು ನಿಲ್ಲದಿದ್ದರೇ ಮಹಿಳಾ ವೇದಿಕೆ ಗೃಹ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದಿದೆ.

ಸಂವಿಧಾನವನ್ನು ಜಾರಿಗೆ ತರುವ ಮತ್ತು ಮಹಿಳೆಯರ ಸುರಕ್ಷೆಯನ್ನು ಖಾತ್ರಿಪಡಿಸುವ ಜವಾಬ್ದಾರಿ ಯಾವುದೇ ಸರಕಾರದ್ದಾಗಿರುತ್ತದೆ. ಮತ್ತು ಸರಕಾರದ ಸಚಿವರು, ಶಾಸಕರು ಈ ವಿಷಯಗಳಲ್ಲಿ ಮಾದರಿಗಳಾಗಿ ನಿಲ್ಲಬೇಕು. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಅದಕ್ಕೆ ವ್ಯತಿರಿಕ್ತವಾಗಿವೆ ಎಂದು ವೇದಿಕೆ ಆಕ್ರೋಶ ಹೊರ ಹಾಕಿದೆ.

ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ನೇಮಿಸಿದೆ. ದುರಂತವೆಂದರೆ ಈ ತನಿಖಾ ತಂಡ ಒಂದು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಬಯಲಿಗೆಳೆಯುವ ಸಂಭವ ಕಡಿಮೆ ಇದೆ ಎಂಬ ಅನುಮಾನವನ್ನು ವೇದಿಕೆ ಹೊರಹಾಕಿದೆ. ಪ್ರಕರಣವನ್ನು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಮಾಡಿ ಅಮೂಲಾಗ್ರ ಶೋಧನೆಯನ್ನು ಜನರ ಮುಂದಿಡುವ ಹೊಣೆಗಾರಿಕೆ ಎಸ್.ಐ.ಟಿ.ಯದಾಗಬೇಕು. ಆದರೆ ಮೊದಲ ದಿನದಿಂದಲೇ ಅದು ಸತ್ಯ ಶೋಧನೆಯ ಬದಲು ಸಂಚು ಬಯಲು ಮಾಡುವ ಜಾಡು ಹಿಡಿದಿದೆ ಎಂದು ವೇದಿಕೆ ಆರೋಪಿಸಿದೆ.

ಇದನ್ನೂ ಓದಿ: ಕೋರ್ಟ್‌ಗೆ ಹಾಜರಾದ ಸಂತ್ರಸ್ತ ಯುವತಿ: ಅರೆಸ್ಟ್ ಆಗುವರೆ ರಮೇಶ್ ಜಾರಕಿಹೊಳಿ?

ಈ ಹಿನ್ನೆಲೆಯಲ್ಲಿ ನಾವೆದ್ದು ನಿಲ್ಲದಿದ್ದರೇ ವೇದಿಕೆ ಪ್ರಕರಣ ಕುರಿತು ನ್ಯಾಯಯುತ ತನಿಖೆಗೆ ಆಗ್ರಹಿಸಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

1. ಪ್ರಕರಣದ ಆರೋಪಿ ಮತ್ತು ಅವರ ಬೆಂಬಲಿಗರು ಆಳುವ ಪಕ್ಷದ ಭಾಗ ಮತ್ತು ಪ್ರಭಾವೀ ವ್ಯಕ್ತಿಯಾಗಿರುವುದರಿಂದ ಸರಕಾರದ ಅಧೀನದಲ್ಲಿ ಕೆಲಸ ಮಾಡಬೇಕಾಗಿರುವ ವಿಶೇಷ ತನಿಖಾ ತಂಡ ನಿಷ್ಪಕ್ಷಪಾತ ತನಿಖೆ ನಡೆಸಲಾರದು ಎಂಬ ಬಲವಾದ ಅನುಮಾನಗಳಿವೆ. ಈ ಕಾರಣದಿಂದ ಈ ಪ್ರಕರಣದ ತನಿಖೆಯನ್ನು ಉಚ್ಛ ನ್ಯಾಯಾಲಯದ ಸುಪರ್ದಿಯಲ್ಲಿ ನಡೆಸಬೇಕು.

2. ನಿರ್ಭಯಾ ಕಾನೂನು/ಕ್ರಿಮಿನಲ್ ಲಾ ತಿದ್ದುಪಡಿಯ ಪ್ರಕಾರ ಅತ್ಯಾಚಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಅನ್ವಯಿಸಬೇಕು.

3. ಕಾನೂನು ದೇಶದ ಎಲ್ಲ ಜನರಿಗೆ ಒಂದೇ ಆಗಿರುವುದರಿಂದ ಈ ಪ್ರಕರಣದ ಆರೋಪಿಯನ್ನೂ ಕೂಡಾ ಕಟ್ಟುನಿಟ್ಟಾದ ಕಾನೂನು ಪ್ರಕ್ರಿಯೆಗೆ ಒಳಪಡಿಸಬೇಕು.

4.  ದೂರುದಾರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು.

5. ಪ್ರಕರಣವು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದ್ದು ರಾಜಕೀಯ ಮೇಲಾಟದಲ್ಲಿ ಮಹಿಳೆಯರನ್ನು ಕೀಳಾಗಿ ಬಳಸಿಕೊಳ್ಳುವುದಕ್ಕೆ ಲಗಾಮು ಹಾಕಬೇಕು.

6. ಪ್ರಕರಣದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು.

7. ಸಚಿವರೊಬ್ಬರ ಮೇಲೆ ಬಂದ ಆರೋಪವನ್ನು ತಳ್ಳಿ ಹಾಕುವ ಮತ್ತದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಹಿಳೆಯರ ಹಾಗೂ ಆ ಮೂಲಕ ಶಾಸನ ಸಭೆಯ ಘನತೆಗೆ ಕುಂದುಂಟು ಮಾಡುವಂತೆ ಮಾತನಾಡಿದ ಸಚಿವ ಡಾ.ಸುಧಾಕರ್ ರವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಕ್ಷೇತ್ರದಲ್ಲಿರುವವರು ಸಾರ್ವಜನಿಕರಿಗೆ ಉತ್ತರದಾಯಿತ್ವವನ್ನು ಹೊಂದಿರುತ್ತಾರೆ. ಅವರು ಶಾಸನಸಭೆಯ ಕಲಾಪಗಳನ್ನು ಜನರ ಪ್ರಶ್ನೆಗಳ ಆಧಾರದಲ್ಲಿ ಚರ್ಚೆಗೆ ಮೀಸಲಿಡದೇ ಮನ ಬಂದಂತೆಲ್ಲ ವರ್ತಿಸುವುದು ಸರಿಯಲ್ಲ. ಇದು ಅವರ ಖಾಸಗಿ ಸಂಗತಿಗಳಲ್ಲ.

8. ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು.

ಈ ಬೇಡಿಕೆಗಳನ್ನು ನಾವೆದ್ದು ನಿಲ್ಲದಿದ್ದರೇ ವೇದಿಕೆ ಪರವಾಗಿ ವಿಮಲಾ. ಕೆ.ಎಸ್. ಲಕ್ಷ್ಮಿ ಕೆ.ಎಸ್. (ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ) ಮಮತಾ ಯಜಮಾನ್ (ಗಮನ ಮಹಿಳಾ ಸಂಘಟನೆ), ಗಾಂಧಿಮತಿ ( ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ) ಸರ್ಕಾರದ ಮುಂದಿಟ್ಟಿದ್ದಾರೆ.


ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...