Homeಕರ್ನಾಟಕಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

ಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

"ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು"

- Advertisement -
- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆ ವಿಷಯದಲ್ಲಿ ರಾಜಕೀಯ ನಾಯಕರು ಮಾಧ್ಯಮಗಳು ಸೇರಿದಂತೆ ಹಲವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ನಾವೆದ್ದು ನಿಲ್ಲದಿದ್ದರೇ ಮಹಿಳಾ ವೇದಿಕೆ ಗೃಹ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದಿದೆ.

ಸಂವಿಧಾನವನ್ನು ಜಾರಿಗೆ ತರುವ ಮತ್ತು ಮಹಿಳೆಯರ ಸುರಕ್ಷೆಯನ್ನು ಖಾತ್ರಿಪಡಿಸುವ ಜವಾಬ್ದಾರಿ ಯಾವುದೇ ಸರಕಾರದ್ದಾಗಿರುತ್ತದೆ. ಮತ್ತು ಸರಕಾರದ ಸಚಿವರು, ಶಾಸಕರು ಈ ವಿಷಯಗಳಲ್ಲಿ ಮಾದರಿಗಳಾಗಿ ನಿಲ್ಲಬೇಕು. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಅದಕ್ಕೆ ವ್ಯತಿರಿಕ್ತವಾಗಿವೆ ಎಂದು ವೇದಿಕೆ ಆಕ್ರೋಶ ಹೊರ ಹಾಕಿದೆ.

ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ನೇಮಿಸಿದೆ. ದುರಂತವೆಂದರೆ ಈ ತನಿಖಾ ತಂಡ ಒಂದು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಬಯಲಿಗೆಳೆಯುವ ಸಂಭವ ಕಡಿಮೆ ಇದೆ ಎಂಬ ಅನುಮಾನವನ್ನು ವೇದಿಕೆ ಹೊರಹಾಕಿದೆ. ಪ್ರಕರಣವನ್ನು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಮಾಡಿ ಅಮೂಲಾಗ್ರ ಶೋಧನೆಯನ್ನು ಜನರ ಮುಂದಿಡುವ ಹೊಣೆಗಾರಿಕೆ ಎಸ್.ಐ.ಟಿ.ಯದಾಗಬೇಕು. ಆದರೆ ಮೊದಲ ದಿನದಿಂದಲೇ ಅದು ಸತ್ಯ ಶೋಧನೆಯ ಬದಲು ಸಂಚು ಬಯಲು ಮಾಡುವ ಜಾಡು ಹಿಡಿದಿದೆ ಎಂದು ವೇದಿಕೆ ಆರೋಪಿಸಿದೆ.

ಇದನ್ನೂ ಓದಿ: ಕೋರ್ಟ್‌ಗೆ ಹಾಜರಾದ ಸಂತ್ರಸ್ತ ಯುವತಿ: ಅರೆಸ್ಟ್ ಆಗುವರೆ ರಮೇಶ್ ಜಾರಕಿಹೊಳಿ?

ಈ ಹಿನ್ನೆಲೆಯಲ್ಲಿ ನಾವೆದ್ದು ನಿಲ್ಲದಿದ್ದರೇ ವೇದಿಕೆ ಪ್ರಕರಣ ಕುರಿತು ನ್ಯಾಯಯುತ ತನಿಖೆಗೆ ಆಗ್ರಹಿಸಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

1. ಪ್ರಕರಣದ ಆರೋಪಿ ಮತ್ತು ಅವರ ಬೆಂಬಲಿಗರು ಆಳುವ ಪಕ್ಷದ ಭಾಗ ಮತ್ತು ಪ್ರಭಾವೀ ವ್ಯಕ್ತಿಯಾಗಿರುವುದರಿಂದ ಸರಕಾರದ ಅಧೀನದಲ್ಲಿ ಕೆಲಸ ಮಾಡಬೇಕಾಗಿರುವ ವಿಶೇಷ ತನಿಖಾ ತಂಡ ನಿಷ್ಪಕ್ಷಪಾತ ತನಿಖೆ ನಡೆಸಲಾರದು ಎಂಬ ಬಲವಾದ ಅನುಮಾನಗಳಿವೆ. ಈ ಕಾರಣದಿಂದ ಈ ಪ್ರಕರಣದ ತನಿಖೆಯನ್ನು ಉಚ್ಛ ನ್ಯಾಯಾಲಯದ ಸುಪರ್ದಿಯಲ್ಲಿ ನಡೆಸಬೇಕು.

2. ನಿರ್ಭಯಾ ಕಾನೂನು/ಕ್ರಿಮಿನಲ್ ಲಾ ತಿದ್ದುಪಡಿಯ ಪ್ರಕಾರ ಅತ್ಯಾಚಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಅನ್ವಯಿಸಬೇಕು.

3. ಕಾನೂನು ದೇಶದ ಎಲ್ಲ ಜನರಿಗೆ ಒಂದೇ ಆಗಿರುವುದರಿಂದ ಈ ಪ್ರಕರಣದ ಆರೋಪಿಯನ್ನೂ ಕೂಡಾ ಕಟ್ಟುನಿಟ್ಟಾದ ಕಾನೂನು ಪ್ರಕ್ರಿಯೆಗೆ ಒಳಪಡಿಸಬೇಕು.

4.  ದೂರುದಾರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು.

5. ಪ್ರಕರಣವು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದ್ದು ರಾಜಕೀಯ ಮೇಲಾಟದಲ್ಲಿ ಮಹಿಳೆಯರನ್ನು ಕೀಳಾಗಿ ಬಳಸಿಕೊಳ್ಳುವುದಕ್ಕೆ ಲಗಾಮು ಹಾಕಬೇಕು.

6. ಪ್ರಕರಣದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು.

7. ಸಚಿವರೊಬ್ಬರ ಮೇಲೆ ಬಂದ ಆರೋಪವನ್ನು ತಳ್ಳಿ ಹಾಕುವ ಮತ್ತದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಹಿಳೆಯರ ಹಾಗೂ ಆ ಮೂಲಕ ಶಾಸನ ಸಭೆಯ ಘನತೆಗೆ ಕುಂದುಂಟು ಮಾಡುವಂತೆ ಮಾತನಾಡಿದ ಸಚಿವ ಡಾ.ಸುಧಾಕರ್ ರವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಕ್ಷೇತ್ರದಲ್ಲಿರುವವರು ಸಾರ್ವಜನಿಕರಿಗೆ ಉತ್ತರದಾಯಿತ್ವವನ್ನು ಹೊಂದಿರುತ್ತಾರೆ. ಅವರು ಶಾಸನಸಭೆಯ ಕಲಾಪಗಳನ್ನು ಜನರ ಪ್ರಶ್ನೆಗಳ ಆಧಾರದಲ್ಲಿ ಚರ್ಚೆಗೆ ಮೀಸಲಿಡದೇ ಮನ ಬಂದಂತೆಲ್ಲ ವರ್ತಿಸುವುದು ಸರಿಯಲ್ಲ. ಇದು ಅವರ ಖಾಸಗಿ ಸಂಗತಿಗಳಲ್ಲ.

8. ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು.

ಈ ಬೇಡಿಕೆಗಳನ್ನು ನಾವೆದ್ದು ನಿಲ್ಲದಿದ್ದರೇ ವೇದಿಕೆ ಪರವಾಗಿ ವಿಮಲಾ. ಕೆ.ಎಸ್. ಲಕ್ಷ್ಮಿ ಕೆ.ಎಸ್. (ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ) ಮಮತಾ ಯಜಮಾನ್ (ಗಮನ ಮಹಿಳಾ ಸಂಘಟನೆ), ಗಾಂಧಿಮತಿ ( ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ) ಸರ್ಕಾರದ ಮುಂದಿಟ್ಟಿದ್ದಾರೆ.


ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...