Homeಕರ್ನಾಟಕಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

ಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

"ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು"

- Advertisement -
- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆ ವಿಷಯದಲ್ಲಿ ರಾಜಕೀಯ ನಾಯಕರು ಮಾಧ್ಯಮಗಳು ಸೇರಿದಂತೆ ಹಲವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ನಾವೆದ್ದು ನಿಲ್ಲದಿದ್ದರೇ ಮಹಿಳಾ ವೇದಿಕೆ ಗೃಹ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದಿದೆ.

ಸಂವಿಧಾನವನ್ನು ಜಾರಿಗೆ ತರುವ ಮತ್ತು ಮಹಿಳೆಯರ ಸುರಕ್ಷೆಯನ್ನು ಖಾತ್ರಿಪಡಿಸುವ ಜವಾಬ್ದಾರಿ ಯಾವುದೇ ಸರಕಾರದ್ದಾಗಿರುತ್ತದೆ. ಮತ್ತು ಸರಕಾರದ ಸಚಿವರು, ಶಾಸಕರು ಈ ವಿಷಯಗಳಲ್ಲಿ ಮಾದರಿಗಳಾಗಿ ನಿಲ್ಲಬೇಕು. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಅದಕ್ಕೆ ವ್ಯತಿರಿಕ್ತವಾಗಿವೆ ಎಂದು ವೇದಿಕೆ ಆಕ್ರೋಶ ಹೊರ ಹಾಕಿದೆ.

ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ನೇಮಿಸಿದೆ. ದುರಂತವೆಂದರೆ ಈ ತನಿಖಾ ತಂಡ ಒಂದು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಬಯಲಿಗೆಳೆಯುವ ಸಂಭವ ಕಡಿಮೆ ಇದೆ ಎಂಬ ಅನುಮಾನವನ್ನು ವೇದಿಕೆ ಹೊರಹಾಕಿದೆ. ಪ್ರಕರಣವನ್ನು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಮಾಡಿ ಅಮೂಲಾಗ್ರ ಶೋಧನೆಯನ್ನು ಜನರ ಮುಂದಿಡುವ ಹೊಣೆಗಾರಿಕೆ ಎಸ್.ಐ.ಟಿ.ಯದಾಗಬೇಕು. ಆದರೆ ಮೊದಲ ದಿನದಿಂದಲೇ ಅದು ಸತ್ಯ ಶೋಧನೆಯ ಬದಲು ಸಂಚು ಬಯಲು ಮಾಡುವ ಜಾಡು ಹಿಡಿದಿದೆ ಎಂದು ವೇದಿಕೆ ಆರೋಪಿಸಿದೆ.

ಇದನ್ನೂ ಓದಿ: ಕೋರ್ಟ್‌ಗೆ ಹಾಜರಾದ ಸಂತ್ರಸ್ತ ಯುವತಿ: ಅರೆಸ್ಟ್ ಆಗುವರೆ ರಮೇಶ್ ಜಾರಕಿಹೊಳಿ?

ಈ ಹಿನ್ನೆಲೆಯಲ್ಲಿ ನಾವೆದ್ದು ನಿಲ್ಲದಿದ್ದರೇ ವೇದಿಕೆ ಪ್ರಕರಣ ಕುರಿತು ನ್ಯಾಯಯುತ ತನಿಖೆಗೆ ಆಗ್ರಹಿಸಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

1. ಪ್ರಕರಣದ ಆರೋಪಿ ಮತ್ತು ಅವರ ಬೆಂಬಲಿಗರು ಆಳುವ ಪಕ್ಷದ ಭಾಗ ಮತ್ತು ಪ್ರಭಾವೀ ವ್ಯಕ್ತಿಯಾಗಿರುವುದರಿಂದ ಸರಕಾರದ ಅಧೀನದಲ್ಲಿ ಕೆಲಸ ಮಾಡಬೇಕಾಗಿರುವ ವಿಶೇಷ ತನಿಖಾ ತಂಡ ನಿಷ್ಪಕ್ಷಪಾತ ತನಿಖೆ ನಡೆಸಲಾರದು ಎಂಬ ಬಲವಾದ ಅನುಮಾನಗಳಿವೆ. ಈ ಕಾರಣದಿಂದ ಈ ಪ್ರಕರಣದ ತನಿಖೆಯನ್ನು ಉಚ್ಛ ನ್ಯಾಯಾಲಯದ ಸುಪರ್ದಿಯಲ್ಲಿ ನಡೆಸಬೇಕು.

2. ನಿರ್ಭಯಾ ಕಾನೂನು/ಕ್ರಿಮಿನಲ್ ಲಾ ತಿದ್ದುಪಡಿಯ ಪ್ರಕಾರ ಅತ್ಯಾಚಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಅನ್ವಯಿಸಬೇಕು.

3. ಕಾನೂನು ದೇಶದ ಎಲ್ಲ ಜನರಿಗೆ ಒಂದೇ ಆಗಿರುವುದರಿಂದ ಈ ಪ್ರಕರಣದ ಆರೋಪಿಯನ್ನೂ ಕೂಡಾ ಕಟ್ಟುನಿಟ್ಟಾದ ಕಾನೂನು ಪ್ರಕ್ರಿಯೆಗೆ ಒಳಪಡಿಸಬೇಕು.

4.  ದೂರುದಾರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು.

5. ಪ್ರಕರಣವು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದ್ದು ರಾಜಕೀಯ ಮೇಲಾಟದಲ್ಲಿ ಮಹಿಳೆಯರನ್ನು ಕೀಳಾಗಿ ಬಳಸಿಕೊಳ್ಳುವುದಕ್ಕೆ ಲಗಾಮು ಹಾಕಬೇಕು.

6. ಪ್ರಕರಣದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು.

7. ಸಚಿವರೊಬ್ಬರ ಮೇಲೆ ಬಂದ ಆರೋಪವನ್ನು ತಳ್ಳಿ ಹಾಕುವ ಮತ್ತದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಹಿಳೆಯರ ಹಾಗೂ ಆ ಮೂಲಕ ಶಾಸನ ಸಭೆಯ ಘನತೆಗೆ ಕುಂದುಂಟು ಮಾಡುವಂತೆ ಮಾತನಾಡಿದ ಸಚಿವ ಡಾ.ಸುಧಾಕರ್ ರವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಕ್ಷೇತ್ರದಲ್ಲಿರುವವರು ಸಾರ್ವಜನಿಕರಿಗೆ ಉತ್ತರದಾಯಿತ್ವವನ್ನು ಹೊಂದಿರುತ್ತಾರೆ. ಅವರು ಶಾಸನಸಭೆಯ ಕಲಾಪಗಳನ್ನು ಜನರ ಪ್ರಶ್ನೆಗಳ ಆಧಾರದಲ್ಲಿ ಚರ್ಚೆಗೆ ಮೀಸಲಿಡದೇ ಮನ ಬಂದಂತೆಲ್ಲ ವರ್ತಿಸುವುದು ಸರಿಯಲ್ಲ. ಇದು ಅವರ ಖಾಸಗಿ ಸಂಗತಿಗಳಲ್ಲ.

8. ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು.

ಈ ಬೇಡಿಕೆಗಳನ್ನು ನಾವೆದ್ದು ನಿಲ್ಲದಿದ್ದರೇ ವೇದಿಕೆ ಪರವಾಗಿ ವಿಮಲಾ. ಕೆ.ಎಸ್. ಲಕ್ಷ್ಮಿ ಕೆ.ಎಸ್. (ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ) ಮಮತಾ ಯಜಮಾನ್ (ಗಮನ ಮಹಿಳಾ ಸಂಘಟನೆ), ಗಾಂಧಿಮತಿ ( ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ) ಸರ್ಕಾರದ ಮುಂದಿಟ್ಟಿದ್ದಾರೆ.


ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...