Homeಕರ್ನಾಟಕಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಅವಕಾಶವಿಲ್ಲವೆಂದ ಪೊಲೀಸರು

ಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಅವಕಾಶವಿಲ್ಲವೆಂದ ಪೊಲೀಸರು

- Advertisement -
- Advertisement -

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಲ್ಲಿಸಿದ್ದ ದೂರನ್ನು ವಾಪಸ್ ಪಡೆಯಲು ಅವಕಾಶವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ಹಿಂಪಡೆಯಲು ದಿನೇಶ್ ಕಲ್ಲಹಳ್ಳಿ ಬರೆದಿದ್ದ ಪತ್ರಕ್ಕೆ ಉತ್ತರಿಸಿರುವ ಪೊಲೀಸರು, ದೂರು ಹಿಂಪಡೆಯಲು ಠಾಣಾ ಮಟ್ಟದಲ್ಲಿ ಅವಕಾಶವಿಲ್ಲವೆಂದು ಹೇಳಿದ್ದಾರೆ. ಜೊತೆಗೆ ದಿನೇಶ್ ಕಲ್ಲಹಳ್ಳಿಗೆ ನೋಟಿಸ್ ನೀಡಲು ಕಬ್ಬನ್ ಪಾರ್ಕ್ ಪೊಲೀಸರು ಚಿಂತನೆ ನಡೆಸಿದ್ದಾರೆ.

’ದೂರು ವಾಪಸ್ ಪಡೆದುಕೊಳ್ಳೊದಕ್ಕೆ ಆಗಲ್ಲ. ಮತ್ತೆ ದಿನೇಶ್ ಅವರನ್ನು ವಿಚಾರಣೆಗೆ ಕರೆಯಲಾಗುತ್ತೆ. ವಿಚಾರಣೆ ವೇಳೆ ದೂರು ವಾಪಸ್ ಪಡೆದುಕೊಳ್ಳೊದಕ್ಕೆ ಕಾರಣವೇನು ಎಂಬುದನ್ನು ಪ್ರಶ್ನಿಸಲಾಗುತ್ತದೆ ಎಂದು ಉನ್ನತ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಮುಂದಾದ ದಿನೇಶ್ ಕಲ್ಲಹಳ್ಳಿ

ವಿಚಾರಣೆಯಲ್ಲಿ, ಬೆದರಿಕೆ ಕರೆಗಳು ಬರ್ತಾ ಇರೋದಕ್ಕೆ ದೂರು ವಾಪಸ್ ಪಡೆದುಕೊಳ್ಳುತ್ತಿದ್ದೀರಾ? ರಾಜಕೀಯ ಒತ್ತಡದಿಂದ ದೂರು ವಾಪಸ್ ಪಡೆಯುತ್ತಿದ್ದೀರಾ? ಕಾಣದ ಕೈಗಳು ಕೆಲಸ ಮಾಡುತ್ತಿವೆಯಾ..? ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ಉತ್ತರ ಪಡೆಯಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

ಹೀಗಾಗಿ ಮತ್ತೆ ದಿನೇಶ್ ಕಲ್ಲಹಳ್ಳಿಗೆ ನೋಟಿಸ್ ಕೊಟ್ಟು ಕರೆಸಲು ಪೊಲೀಸರ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ’ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದುಕೊಳ್ಳೊದಕ್ಕೆ ಆಗಲ್ಲ. ದೂರಿನ‌ ಅರ್ಜಿ ಕ್ಲೋಸ್ ಮಾಡ್ಬೇಕೋ, ಬೇಡವೋ ಅನ್ನೋದು ತನಿಖಾಧಿಕಾರಿಗಳ ವಿವೇಚನೆಗೆ ಬಿಟ್ಟ ವಿಚಾರ. ಅವರು ದೂರು ಹಿಂಪಡೆಯಲು‌ ಅರ್ಜಿ ನೀಡಿದ್ದಾರೆ ಅದನ್ನ ಸ್ವೀಕಾರ‌ ಮಾಡಿದ್ದೇವೆ ಅಷ್ಟೇ. ಅರ್ಜಿ ಕೊಟ್ಟಿರುವ ಕಾರಣ ಅವರ ವಿಚಾರಣೆ ಕೂಡ ಆಗುತ್ತದೆ. ದೂರು ವಾಪಸ್ ಪಡೆದೆ ಎಂದು ಹೇಳಿದರೇ ಪ್ರಕರಣ ಮುಕ್ತಾಯ ಆಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದಿನೇಶ್ ಕಲ್ಲಹಳ್ಳಿ ಅವರು ದೂರು ಹಿಂಪಡೆಯಲು ಸಲ್ಲಿಸಿದ್ದ ಅರ್ಜಿ ಇಲ್ಲಿದೆ.

ಇತ್ತ, ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆಯಲು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ನಕಲಿ ಸಿಡಿ ವಿಚಾರವಾಗಿ ಗಂಭಿರವಾದ ವಿಷಯಗಳನ್ನು ಪ್ರಕಟಿಸಲು ಸುದ್ದಿಗೋಷ್ಠಿ ಕರೆದಿರುವುದಾಗಿ ಚಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

’ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ. ಮಹಿಳೆಯನ್ನು ಸಂತ್ರಸ್ತ ಮಹಿಳೆ ಎಂದು ಕರೆಯಬೇಡಿ. ದಿನೇಶ್ ಕಲ್ಲಹಳ್ಳಿ ದೂರು ಕೊಡುವುದಕ್ಕೂ ಮುನ್ನವೇ ಈ ವೀಡಿಯೋವನ್ನು ರಷ್ಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದಕ್ಕಾಗಿಯೇ 17 ಕೋಟಿ‌ ರೂಪಾಯಿ ಖರ್ಚು ಮಾಡಿದ್ದಾರೆ. ಇದರ ಹಿಂದೆ ಒಬ್ಬ ಮಹಿಳೆ ಇದ್ದಾರೆ. ಇದರ ಹಿಂದೆ ನಾಲ್ಕು ಜನ ಇದ್ದಾರೆ, ಈ ನಾಲ್ವರ ಹಿಂದೆ ಮೂವರ ಟೀಮ್ ಇದೆ’ ಎಂದು ಆರೋಪಿಸಿದ್ದಾರೆ.

ರಮೇಶ್ ಜಾರಕಿಹೊಳಿ ಹೆಸರನ್ನು ಹಾಳುಮಾಡಬೇಕು ಎಂದು ಈ ರೀತಿಯ ಷಡ್ಯಂತ್ರ ಮಾಡಿದ್ದಾರೆ. ಬಿಜೆಪಿಗೆ ಹಾಗೂ ರಮೇಶ್ ಕುಟುಂಬಕ್ಕೆ  ಮುಜುಗರ ತರಲು ಷಡ್ಯಂತ್ರ ಮಾಡಿದ್ದಾರೆ. ಕೇವಲ ರಾಜಕೀಯ ಅಲ್ಲ ಬೇರೆ ಬೇರೆ ಕ್ಷೇತ್ರಗಳಲ್ಲಿ ಇರುವವರು ಇದರ ಹಿಂದೆ ಇದ್ದಾರೆ. ಇದರ ಸಮಗ್ರ ತನಿಖೆ ಆಗಬೇಕು. ಇದಕ್ಕಾಗಿ ರಮೇಶ್ ಜಾರಕಿಹೊಳಿ ದಯಮಾಡಿ ಹೊರಗಡೆ ಬಂದು ಸಿಎಂಗೆ ದೂರು ಕೊಡಬೇಕು’ ಎಂದು ಆಗ್ರಹಿಸಿದ್ದಾರೆ.

ದಿನೇಶ್ ಕಲ್ಲಹಳ್ಳಿ ಅವರನ್ನು ಈ ತಂಡ ಬಳಸಿಕೊಂಡಿರಬಹುದು. ಅವರನ್ನು ಮಿಸ್ ಗೈಡ್ ಮಾಡಿರಬಹುದು. ಇದೊಂದು ಹನಿ ಟ್ರ್ಯಾಪ್ ಪ್ರಕರಣ ಆಗಿದೆ.  ವೀಡಿಯೋ ಕಾಲ್, ವಿಡಿಯೋ ಎಲ್ಲವೂ ನಕಲಿ. ಹನಿಟ್ರ್ಯಾಪ್ ತಂಡದ ಮೊಬೈಲ್ ಸೇರಿದಂತೆ ಅವರ ಎಲ್ಲ ಮಾಹಿತಿ ಕೂಡ ಪೊಲೀಸರ ಬಳಿ ಇದೆ. ಈಗ ತನಿಖೆ ನಡೆಯುತ್ತಿರುವ ವೇಳೆ ನಾನು ಅದನ್ನೆಲ್ಲಾ ಬಹಿರಂಗ ಪಡಿಸೋಕೆ ಆಗುವುದಿಲ್ಲ’ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಇದನ್ನೂ ಓದಿ: ‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...