Homeಕರ್ನಾಟಕಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಅವಕಾಶವಿಲ್ಲವೆಂದ ಪೊಲೀಸರು

ಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಅವಕಾಶವಿಲ್ಲವೆಂದ ಪೊಲೀಸರು

- Advertisement -
- Advertisement -

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಲ್ಲಿಸಿದ್ದ ದೂರನ್ನು ವಾಪಸ್ ಪಡೆಯಲು ಅವಕಾಶವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ಹಿಂಪಡೆಯಲು ದಿನೇಶ್ ಕಲ್ಲಹಳ್ಳಿ ಬರೆದಿದ್ದ ಪತ್ರಕ್ಕೆ ಉತ್ತರಿಸಿರುವ ಪೊಲೀಸರು, ದೂರು ಹಿಂಪಡೆಯಲು ಠಾಣಾ ಮಟ್ಟದಲ್ಲಿ ಅವಕಾಶವಿಲ್ಲವೆಂದು ಹೇಳಿದ್ದಾರೆ. ಜೊತೆಗೆ ದಿನೇಶ್ ಕಲ್ಲಹಳ್ಳಿಗೆ ನೋಟಿಸ್ ನೀಡಲು ಕಬ್ಬನ್ ಪಾರ್ಕ್ ಪೊಲೀಸರು ಚಿಂತನೆ ನಡೆಸಿದ್ದಾರೆ.

’ದೂರು ವಾಪಸ್ ಪಡೆದುಕೊಳ್ಳೊದಕ್ಕೆ ಆಗಲ್ಲ. ಮತ್ತೆ ದಿನೇಶ್ ಅವರನ್ನು ವಿಚಾರಣೆಗೆ ಕರೆಯಲಾಗುತ್ತೆ. ವಿಚಾರಣೆ ವೇಳೆ ದೂರು ವಾಪಸ್ ಪಡೆದುಕೊಳ್ಳೊದಕ್ಕೆ ಕಾರಣವೇನು ಎಂಬುದನ್ನು ಪ್ರಶ್ನಿಸಲಾಗುತ್ತದೆ ಎಂದು ಉನ್ನತ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಮುಂದಾದ ದಿನೇಶ್ ಕಲ್ಲಹಳ್ಳಿ

ವಿಚಾರಣೆಯಲ್ಲಿ, ಬೆದರಿಕೆ ಕರೆಗಳು ಬರ್ತಾ ಇರೋದಕ್ಕೆ ದೂರು ವಾಪಸ್ ಪಡೆದುಕೊಳ್ಳುತ್ತಿದ್ದೀರಾ? ರಾಜಕೀಯ ಒತ್ತಡದಿಂದ ದೂರು ವಾಪಸ್ ಪಡೆಯುತ್ತಿದ್ದೀರಾ? ಕಾಣದ ಕೈಗಳು ಕೆಲಸ ಮಾಡುತ್ತಿವೆಯಾ..? ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ಉತ್ತರ ಪಡೆಯಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

ಹೀಗಾಗಿ ಮತ್ತೆ ದಿನೇಶ್ ಕಲ್ಲಹಳ್ಳಿಗೆ ನೋಟಿಸ್ ಕೊಟ್ಟು ಕರೆಸಲು ಪೊಲೀಸರ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ’ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದುಕೊಳ್ಳೊದಕ್ಕೆ ಆಗಲ್ಲ. ದೂರಿನ‌ ಅರ್ಜಿ ಕ್ಲೋಸ್ ಮಾಡ್ಬೇಕೋ, ಬೇಡವೋ ಅನ್ನೋದು ತನಿಖಾಧಿಕಾರಿಗಳ ವಿವೇಚನೆಗೆ ಬಿಟ್ಟ ವಿಚಾರ. ಅವರು ದೂರು ಹಿಂಪಡೆಯಲು‌ ಅರ್ಜಿ ನೀಡಿದ್ದಾರೆ ಅದನ್ನ ಸ್ವೀಕಾರ‌ ಮಾಡಿದ್ದೇವೆ ಅಷ್ಟೇ. ಅರ್ಜಿ ಕೊಟ್ಟಿರುವ ಕಾರಣ ಅವರ ವಿಚಾರಣೆ ಕೂಡ ಆಗುತ್ತದೆ. ದೂರು ವಾಪಸ್ ಪಡೆದೆ ಎಂದು ಹೇಳಿದರೇ ಪ್ರಕರಣ ಮುಕ್ತಾಯ ಆಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದಿನೇಶ್ ಕಲ್ಲಹಳ್ಳಿ ಅವರು ದೂರು ಹಿಂಪಡೆಯಲು ಸಲ್ಲಿಸಿದ್ದ ಅರ್ಜಿ ಇಲ್ಲಿದೆ.

ಇತ್ತ, ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆಯಲು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ನಕಲಿ ಸಿಡಿ ವಿಚಾರವಾಗಿ ಗಂಭಿರವಾದ ವಿಷಯಗಳನ್ನು ಪ್ರಕಟಿಸಲು ಸುದ್ದಿಗೋಷ್ಠಿ ಕರೆದಿರುವುದಾಗಿ ಚಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

’ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ. ಮಹಿಳೆಯನ್ನು ಸಂತ್ರಸ್ತ ಮಹಿಳೆ ಎಂದು ಕರೆಯಬೇಡಿ. ದಿನೇಶ್ ಕಲ್ಲಹಳ್ಳಿ ದೂರು ಕೊಡುವುದಕ್ಕೂ ಮುನ್ನವೇ ಈ ವೀಡಿಯೋವನ್ನು ರಷ್ಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದಕ್ಕಾಗಿಯೇ 17 ಕೋಟಿ‌ ರೂಪಾಯಿ ಖರ್ಚು ಮಾಡಿದ್ದಾರೆ. ಇದರ ಹಿಂದೆ ಒಬ್ಬ ಮಹಿಳೆ ಇದ್ದಾರೆ. ಇದರ ಹಿಂದೆ ನಾಲ್ಕು ಜನ ಇದ್ದಾರೆ, ಈ ನಾಲ್ವರ ಹಿಂದೆ ಮೂವರ ಟೀಮ್ ಇದೆ’ ಎಂದು ಆರೋಪಿಸಿದ್ದಾರೆ.

ರಮೇಶ್ ಜಾರಕಿಹೊಳಿ ಹೆಸರನ್ನು ಹಾಳುಮಾಡಬೇಕು ಎಂದು ಈ ರೀತಿಯ ಷಡ್ಯಂತ್ರ ಮಾಡಿದ್ದಾರೆ. ಬಿಜೆಪಿಗೆ ಹಾಗೂ ರಮೇಶ್ ಕುಟುಂಬಕ್ಕೆ  ಮುಜುಗರ ತರಲು ಷಡ್ಯಂತ್ರ ಮಾಡಿದ್ದಾರೆ. ಕೇವಲ ರಾಜಕೀಯ ಅಲ್ಲ ಬೇರೆ ಬೇರೆ ಕ್ಷೇತ್ರಗಳಲ್ಲಿ ಇರುವವರು ಇದರ ಹಿಂದೆ ಇದ್ದಾರೆ. ಇದರ ಸಮಗ್ರ ತನಿಖೆ ಆಗಬೇಕು. ಇದಕ್ಕಾಗಿ ರಮೇಶ್ ಜಾರಕಿಹೊಳಿ ದಯಮಾಡಿ ಹೊರಗಡೆ ಬಂದು ಸಿಎಂಗೆ ದೂರು ಕೊಡಬೇಕು’ ಎಂದು ಆಗ್ರಹಿಸಿದ್ದಾರೆ.

ದಿನೇಶ್ ಕಲ್ಲಹಳ್ಳಿ ಅವರನ್ನು ಈ ತಂಡ ಬಳಸಿಕೊಂಡಿರಬಹುದು. ಅವರನ್ನು ಮಿಸ್ ಗೈಡ್ ಮಾಡಿರಬಹುದು. ಇದೊಂದು ಹನಿ ಟ್ರ್ಯಾಪ್ ಪ್ರಕರಣ ಆಗಿದೆ.  ವೀಡಿಯೋ ಕಾಲ್, ವಿಡಿಯೋ ಎಲ್ಲವೂ ನಕಲಿ. ಹನಿಟ್ರ್ಯಾಪ್ ತಂಡದ ಮೊಬೈಲ್ ಸೇರಿದಂತೆ ಅವರ ಎಲ್ಲ ಮಾಹಿತಿ ಕೂಡ ಪೊಲೀಸರ ಬಳಿ ಇದೆ. ಈಗ ತನಿಖೆ ನಡೆಯುತ್ತಿರುವ ವೇಳೆ ನಾನು ಅದನ್ನೆಲ್ಲಾ ಬಹಿರಂಗ ಪಡಿಸೋಕೆ ಆಗುವುದಿಲ್ಲ’ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಇದನ್ನೂ ಓದಿ: ‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...