Homeಕರ್ನಾಟಕಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಅವಕಾಶವಿಲ್ಲವೆಂದ ಪೊಲೀಸರು

ಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಅವಕಾಶವಿಲ್ಲವೆಂದ ಪೊಲೀಸರು

- Advertisement -
- Advertisement -

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಲ್ಲಿಸಿದ್ದ ದೂರನ್ನು ವಾಪಸ್ ಪಡೆಯಲು ಅವಕಾಶವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ಹಿಂಪಡೆಯಲು ದಿನೇಶ್ ಕಲ್ಲಹಳ್ಳಿ ಬರೆದಿದ್ದ ಪತ್ರಕ್ಕೆ ಉತ್ತರಿಸಿರುವ ಪೊಲೀಸರು, ದೂರು ಹಿಂಪಡೆಯಲು ಠಾಣಾ ಮಟ್ಟದಲ್ಲಿ ಅವಕಾಶವಿಲ್ಲವೆಂದು ಹೇಳಿದ್ದಾರೆ. ಜೊತೆಗೆ ದಿನೇಶ್ ಕಲ್ಲಹಳ್ಳಿಗೆ ನೋಟಿಸ್ ನೀಡಲು ಕಬ್ಬನ್ ಪಾರ್ಕ್ ಪೊಲೀಸರು ಚಿಂತನೆ ನಡೆಸಿದ್ದಾರೆ.

’ದೂರು ವಾಪಸ್ ಪಡೆದುಕೊಳ್ಳೊದಕ್ಕೆ ಆಗಲ್ಲ. ಮತ್ತೆ ದಿನೇಶ್ ಅವರನ್ನು ವಿಚಾರಣೆಗೆ ಕರೆಯಲಾಗುತ್ತೆ. ವಿಚಾರಣೆ ವೇಳೆ ದೂರು ವಾಪಸ್ ಪಡೆದುಕೊಳ್ಳೊದಕ್ಕೆ ಕಾರಣವೇನು ಎಂಬುದನ್ನು ಪ್ರಶ್ನಿಸಲಾಗುತ್ತದೆ ಎಂದು ಉನ್ನತ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಮುಂದಾದ ದಿನೇಶ್ ಕಲ್ಲಹಳ್ಳಿ

ವಿಚಾರಣೆಯಲ್ಲಿ, ಬೆದರಿಕೆ ಕರೆಗಳು ಬರ್ತಾ ಇರೋದಕ್ಕೆ ದೂರು ವಾಪಸ್ ಪಡೆದುಕೊಳ್ಳುತ್ತಿದ್ದೀರಾ? ರಾಜಕೀಯ ಒತ್ತಡದಿಂದ ದೂರು ವಾಪಸ್ ಪಡೆಯುತ್ತಿದ್ದೀರಾ? ಕಾಣದ ಕೈಗಳು ಕೆಲಸ ಮಾಡುತ್ತಿವೆಯಾ..? ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ಉತ್ತರ ಪಡೆಯಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

ಹೀಗಾಗಿ ಮತ್ತೆ ದಿನೇಶ್ ಕಲ್ಲಹಳ್ಳಿಗೆ ನೋಟಿಸ್ ಕೊಟ್ಟು ಕರೆಸಲು ಪೊಲೀಸರ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ’ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದುಕೊಳ್ಳೊದಕ್ಕೆ ಆಗಲ್ಲ. ದೂರಿನ‌ ಅರ್ಜಿ ಕ್ಲೋಸ್ ಮಾಡ್ಬೇಕೋ, ಬೇಡವೋ ಅನ್ನೋದು ತನಿಖಾಧಿಕಾರಿಗಳ ವಿವೇಚನೆಗೆ ಬಿಟ್ಟ ವಿಚಾರ. ಅವರು ದೂರು ಹಿಂಪಡೆಯಲು‌ ಅರ್ಜಿ ನೀಡಿದ್ದಾರೆ ಅದನ್ನ ಸ್ವೀಕಾರ‌ ಮಾಡಿದ್ದೇವೆ ಅಷ್ಟೇ. ಅರ್ಜಿ ಕೊಟ್ಟಿರುವ ಕಾರಣ ಅವರ ವಿಚಾರಣೆ ಕೂಡ ಆಗುತ್ತದೆ. ದೂರು ವಾಪಸ್ ಪಡೆದೆ ಎಂದು ಹೇಳಿದರೇ ಪ್ರಕರಣ ಮುಕ್ತಾಯ ಆಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದಿನೇಶ್ ಕಲ್ಲಹಳ್ಳಿ ಅವರು ದೂರು ಹಿಂಪಡೆಯಲು ಸಲ್ಲಿಸಿದ್ದ ಅರ್ಜಿ ಇಲ್ಲಿದೆ.

ಇತ್ತ, ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆಯಲು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ನಕಲಿ ಸಿಡಿ ವಿಚಾರವಾಗಿ ಗಂಭಿರವಾದ ವಿಷಯಗಳನ್ನು ಪ್ರಕಟಿಸಲು ಸುದ್ದಿಗೋಷ್ಠಿ ಕರೆದಿರುವುದಾಗಿ ಚಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

’ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ. ಮಹಿಳೆಯನ್ನು ಸಂತ್ರಸ್ತ ಮಹಿಳೆ ಎಂದು ಕರೆಯಬೇಡಿ. ದಿನೇಶ್ ಕಲ್ಲಹಳ್ಳಿ ದೂರು ಕೊಡುವುದಕ್ಕೂ ಮುನ್ನವೇ ಈ ವೀಡಿಯೋವನ್ನು ರಷ್ಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದಕ್ಕಾಗಿಯೇ 17 ಕೋಟಿ‌ ರೂಪಾಯಿ ಖರ್ಚು ಮಾಡಿದ್ದಾರೆ. ಇದರ ಹಿಂದೆ ಒಬ್ಬ ಮಹಿಳೆ ಇದ್ದಾರೆ. ಇದರ ಹಿಂದೆ ನಾಲ್ಕು ಜನ ಇದ್ದಾರೆ, ಈ ನಾಲ್ವರ ಹಿಂದೆ ಮೂವರ ಟೀಮ್ ಇದೆ’ ಎಂದು ಆರೋಪಿಸಿದ್ದಾರೆ.

ರಮೇಶ್ ಜಾರಕಿಹೊಳಿ ಹೆಸರನ್ನು ಹಾಳುಮಾಡಬೇಕು ಎಂದು ಈ ರೀತಿಯ ಷಡ್ಯಂತ್ರ ಮಾಡಿದ್ದಾರೆ. ಬಿಜೆಪಿಗೆ ಹಾಗೂ ರಮೇಶ್ ಕುಟುಂಬಕ್ಕೆ  ಮುಜುಗರ ತರಲು ಷಡ್ಯಂತ್ರ ಮಾಡಿದ್ದಾರೆ. ಕೇವಲ ರಾಜಕೀಯ ಅಲ್ಲ ಬೇರೆ ಬೇರೆ ಕ್ಷೇತ್ರಗಳಲ್ಲಿ ಇರುವವರು ಇದರ ಹಿಂದೆ ಇದ್ದಾರೆ. ಇದರ ಸಮಗ್ರ ತನಿಖೆ ಆಗಬೇಕು. ಇದಕ್ಕಾಗಿ ರಮೇಶ್ ಜಾರಕಿಹೊಳಿ ದಯಮಾಡಿ ಹೊರಗಡೆ ಬಂದು ಸಿಎಂಗೆ ದೂರು ಕೊಡಬೇಕು’ ಎಂದು ಆಗ್ರಹಿಸಿದ್ದಾರೆ.

ದಿನೇಶ್ ಕಲ್ಲಹಳ್ಳಿ ಅವರನ್ನು ಈ ತಂಡ ಬಳಸಿಕೊಂಡಿರಬಹುದು. ಅವರನ್ನು ಮಿಸ್ ಗೈಡ್ ಮಾಡಿರಬಹುದು. ಇದೊಂದು ಹನಿ ಟ್ರ್ಯಾಪ್ ಪ್ರಕರಣ ಆಗಿದೆ.  ವೀಡಿಯೋ ಕಾಲ್, ವಿಡಿಯೋ ಎಲ್ಲವೂ ನಕಲಿ. ಹನಿಟ್ರ್ಯಾಪ್ ತಂಡದ ಮೊಬೈಲ್ ಸೇರಿದಂತೆ ಅವರ ಎಲ್ಲ ಮಾಹಿತಿ ಕೂಡ ಪೊಲೀಸರ ಬಳಿ ಇದೆ. ಈಗ ತನಿಖೆ ನಡೆಯುತ್ತಿರುವ ವೇಳೆ ನಾನು ಅದನ್ನೆಲ್ಲಾ ಬಹಿರಂಗ ಪಡಿಸೋಕೆ ಆಗುವುದಿಲ್ಲ’ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಇದನ್ನೂ ಓದಿ: ‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...