Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ - ವೀಡಿಯೋ ವೈರಲ್

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

- Advertisement -
- Advertisement -

“ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾಗುವ ಅಶ್ಲೀಲ ವೀಡಿಯೋದಲ್ಲಿರುವ ಸಂತ್ರಸ್ತೆ ತಾನು” ಎಂದು ಹೇಳಿಕೊಂಡಿರುವ ಯುವತಿಯೊಬ್ಬರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಆಕೆ ತನಗೆ ರಕ್ಷಣೆಯಿಲ್ಲವೆಂದೂ, ಈ ಘಟನೆ ನಡೆದಿದೆ ಎಂದೂ ಭಾಗಶಃ ಒಪ್ಪಿಕೊಂಡಿದ್ದಾರೆ.

ಈ ವೀಡಿಯೋದಲ್ಲಿ ಮಾತನಾಡಿರುವ ಯುವತಿ, “ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನಾನು ಇಷ್ಟೇ ಕೇಳಿಕೊಳ್ಳುವುದು. ಈ ವಿಡಿಯೋ ಹೇಗೆ ಮಾಡಿದ್ರೂ ಎಂಬುದು ನನಗೆ ಗೊತ್ತಿಲ್ಲ. ಈಗಾಗಲೇ ನನ್ನ ಮಾನ ಹರಾಜಾಗಿದೆ. ನಮ್ಮ ಮನೆ ಹತ್ತಿರ ಬಂದು ಜನಗಳು ಕೇಳಿಕೊಂಡು ಹೋಗುತ್ತಿದ್ದಾರೆ. ಈಗಾಗಲೇ ನಮ್ಮ ಅಪ್ಪ-ಅಮ್ಮ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನಮ್ಮ ಹಿಂದೆ ಯಾರೂ ಇಲ್ಲ. ಪೊಲಿಟಿಕಲ್ ಸಪೋರ್ಟ್ ಅದು ಇದು ಏನೂ ಇಲ್ಲ. ರಮೇಶ್ ಜಾರಕಿಹೊಳಿ ಅವರೇ ನನಗೆ ಕೆಲಸ ಕೊಡಿಸುತ್ತೇನೆ ಅಂತ ಹೇಳಿದ್ರು. ಅದೆಲ್ಲಾ ಮಾಡಿ ಈಗ ವಿಡಿಯೋನು ಈಚೆ ಬಿಡ್ತಾ ಇದ್ದಾರೆ. ಇದೆಲ್ಲಾ ಹೇಗಾಯ್ತು, ಏನು ಅನ್ನೋದು ನನಗೆ ಗೊತ್ತಿಲ್ಲ. ನನಗೆ ಯಾವುದೇ ತರವಾದ ರಕ್ಷಣೆ ಇಲ್ಲ. ನಾನು ಇಷ್ಟೇ ಕೇಳಿಕೊಳ್ಳೋದು ನನಗೆ ರಕ್ಷಣೆ ಕೊಡಿ” ಎಂದು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದ್ದ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ “ಇದೊಂದು ನಕಲಿ ಸಿಡಿ, ಬ್ಲಾಕ್​ ಮೇಲ್, ರಾಜಕೀಯ ದುರುದ್ದೇಶದಿಂದ ಹೀಗೆ ಮಾಡಿದ್ದಾರೆ” ಎಂದು ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದರು. ಆನಂತರ ರಾಜ್ಯ ಸರ್ಕಾರ ಈ ಪ್ರಕರಣ ತನಿಖೆಗೆ ವಿಶೇಷ ತನಿಖೆ ತಂಡ ರಚನೆ ಮಾಡಿದೆ.

ಆದರೆ ಅಧಿಕೃತವಾಗಿ ಯಾವುದೆ ಎಫ್‌ಐಆರ್ ದಾಖಲಿಸಲಾಗಿರುವುದಿಲ್ಲ. ವೀಡಿಯೋದಲ್ಲಿರುವ ಸಂತ್ರಸ್ತೆ ಬಲಿಪಶುವೇ ಅಥವಾ ಆರೋಪಿಯೇ ಎಂಬುದನ್ನೂ ತನಿಖೆ ಮಾಡಲು ಸರ್ಕಾರ ಆಸ್ಥೆ ವಹಿಸಿರುವುದಿಲ್ಲ. ಬದಲಿಗೆ ದೂರು ದಾಖಲಿಸಿದ ದಿನೇಶ್ ಅವರಿಗೇ ನೋಟಿಸ್ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ. ಸಿಡಿ ಮಾಡಿದವರು ಯಾರು ಎಂಬುದನ್ನು ಹುಡುಕುವುದೇ ಸರ್ಕಾರದ ಉದ್ದೇಶವಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ಎಸ್​ಐಟಿ ರಚನೆಯಾದ ಬಳಿಕ ರಮೇಶ್ ಜಾರಕಿಹೊಳಿ ತಮ್ಮ ಆಪ್ತರ ಮೂಲಕ ಇಂದು (ಮಾ.13) ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಪರವಾಗಿ ನೆಲಮಂಗಲದ ಮಾಜಿ ಶಾಸಕ ನಾಗರಾಜ್ ಸದಾಶಿವನಗರದಲ್ಲಿ ದೂರು ದಾಖಲಿಸಿದ್ದಾರೆ.

ಸಿಡಿ ಬಿಡುಗಡೆಯಿಂದ ಮಾನಹಾನಿಯಾಗಿದೆ. ರಾಜಕೀಯ ಷಡ್ಯಂತ್ರ ರೂಪಿಸಲಾಗಿದೆ. ಬ್ಲಾಕ್ ಮೇಲ್ ಮಾಡಲಾಗಿದೆ. ಎಸ್ಐಟಿ ರಚನೆಯಾಗಿದೆ, ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ರಾಜಕೀಯವಾಗಿ ಮುಗಿಸಲು, ಹಣ ವಸೂಲಿ ಮಾಡಲು, ರಾಜಕೀಯ ತೇಜೊವಧೆ ಮಾಡಲು ಷಡ್ಯಂತ್ರ ರೂಪಿಸಲಾಗಿದೆ. ಸುಮಾರು 3 ತಿಂಗಳಿಂದ ಸದಾಶಿವನಗರದಲ್ಲಿ ನನ್ನ ವಿರುದ್ಧ ಮಸಲತ್ತು ಮತ್ತು ಮೋಸ ಮಾಡಿ ನಕಲಿ ಸಿಡಿ ಸೃಷ್ಟಿಸಲಾಗಿದೆ. ಯಾರ ಹೆಸರಿನಲ್ಲೂ ದೂರು ಕೊಟ್ಟಿಲ್ಲ. ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ನೀಡಲಾಗಿದೆ. ರಮೇಶ್ ಜಾರಕಿಹೊಳಿ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 120B, 385, 465, 469 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದಾದ ಕೆಲವೇ ಗಂಟೆಗಳ ನಂತರ ವೀಡಿಯೋದಲ್ಲಿರುವ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಈ ಸಿಡಿ ಪ್ರಕರಣದಲ್ಲಿ ಪ್ರಮುಖ ದೂರುದಾರರಾಗಿರುವ ದಿನೇಶ್ ಕಲ್ಲಹಳ್ಳಿಯವರು ದೂರು ನೀಡಿದ ನಂತರ, ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿ ಅದನ್ನು ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವ ಸರ್ಕಾರ ಈಗ ರಮೇಶ್ ಜಾರಕಿಹೊಳಿಯವರ ದೂರಿಗೆ ಎಫ್‌ಐಆರ್ ದಾಖಲಿಸಿದೆ. ಈ ಸಂದರ್ಭದಲ್ಲಿ ಸಂತ್ರಸ್ತ ಯುವತಿಯ ಈ ವೀಡಿಯೋ ವೈರಲ್ ಆಗುತ್ತಿದ್ದು, ಈ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ.


ಇದನ್ನೂ ಓದಿ: ರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...