Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ - ವೀಡಿಯೋ ವೈರಲ್

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

- Advertisement -
- Advertisement -

“ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾಗುವ ಅಶ್ಲೀಲ ವೀಡಿಯೋದಲ್ಲಿರುವ ಸಂತ್ರಸ್ತೆ ತಾನು” ಎಂದು ಹೇಳಿಕೊಂಡಿರುವ ಯುವತಿಯೊಬ್ಬರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಆಕೆ ತನಗೆ ರಕ್ಷಣೆಯಿಲ್ಲವೆಂದೂ, ಈ ಘಟನೆ ನಡೆದಿದೆ ಎಂದೂ ಭಾಗಶಃ ಒಪ್ಪಿಕೊಂಡಿದ್ದಾರೆ.

ಈ ವೀಡಿಯೋದಲ್ಲಿ ಮಾತನಾಡಿರುವ ಯುವತಿ, “ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನಾನು ಇಷ್ಟೇ ಕೇಳಿಕೊಳ್ಳುವುದು. ಈ ವಿಡಿಯೋ ಹೇಗೆ ಮಾಡಿದ್ರೂ ಎಂಬುದು ನನಗೆ ಗೊತ್ತಿಲ್ಲ. ಈಗಾಗಲೇ ನನ್ನ ಮಾನ ಹರಾಜಾಗಿದೆ. ನಮ್ಮ ಮನೆ ಹತ್ತಿರ ಬಂದು ಜನಗಳು ಕೇಳಿಕೊಂಡು ಹೋಗುತ್ತಿದ್ದಾರೆ. ಈಗಾಗಲೇ ನಮ್ಮ ಅಪ್ಪ-ಅಮ್ಮ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನಮ್ಮ ಹಿಂದೆ ಯಾರೂ ಇಲ್ಲ. ಪೊಲಿಟಿಕಲ್ ಸಪೋರ್ಟ್ ಅದು ಇದು ಏನೂ ಇಲ್ಲ. ರಮೇಶ್ ಜಾರಕಿಹೊಳಿ ಅವರೇ ನನಗೆ ಕೆಲಸ ಕೊಡಿಸುತ್ತೇನೆ ಅಂತ ಹೇಳಿದ್ರು. ಅದೆಲ್ಲಾ ಮಾಡಿ ಈಗ ವಿಡಿಯೋನು ಈಚೆ ಬಿಡ್ತಾ ಇದ್ದಾರೆ. ಇದೆಲ್ಲಾ ಹೇಗಾಯ್ತು, ಏನು ಅನ್ನೋದು ನನಗೆ ಗೊತ್ತಿಲ್ಲ. ನನಗೆ ಯಾವುದೇ ತರವಾದ ರಕ್ಷಣೆ ಇಲ್ಲ. ನಾನು ಇಷ್ಟೇ ಕೇಳಿಕೊಳ್ಳೋದು ನನಗೆ ರಕ್ಷಣೆ ಕೊಡಿ” ಎಂದು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದ್ದ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ “ಇದೊಂದು ನಕಲಿ ಸಿಡಿ, ಬ್ಲಾಕ್​ ಮೇಲ್, ರಾಜಕೀಯ ದುರುದ್ದೇಶದಿಂದ ಹೀಗೆ ಮಾಡಿದ್ದಾರೆ” ಎಂದು ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದರು. ಆನಂತರ ರಾಜ್ಯ ಸರ್ಕಾರ ಈ ಪ್ರಕರಣ ತನಿಖೆಗೆ ವಿಶೇಷ ತನಿಖೆ ತಂಡ ರಚನೆ ಮಾಡಿದೆ.

ಆದರೆ ಅಧಿಕೃತವಾಗಿ ಯಾವುದೆ ಎಫ್‌ಐಆರ್ ದಾಖಲಿಸಲಾಗಿರುವುದಿಲ್ಲ. ವೀಡಿಯೋದಲ್ಲಿರುವ ಸಂತ್ರಸ್ತೆ ಬಲಿಪಶುವೇ ಅಥವಾ ಆರೋಪಿಯೇ ಎಂಬುದನ್ನೂ ತನಿಖೆ ಮಾಡಲು ಸರ್ಕಾರ ಆಸ್ಥೆ ವಹಿಸಿರುವುದಿಲ್ಲ. ಬದಲಿಗೆ ದೂರು ದಾಖಲಿಸಿದ ದಿನೇಶ್ ಅವರಿಗೇ ನೋಟಿಸ್ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ. ಸಿಡಿ ಮಾಡಿದವರು ಯಾರು ಎಂಬುದನ್ನು ಹುಡುಕುವುದೇ ಸರ್ಕಾರದ ಉದ್ದೇಶವಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ಎಸ್​ಐಟಿ ರಚನೆಯಾದ ಬಳಿಕ ರಮೇಶ್ ಜಾರಕಿಹೊಳಿ ತಮ್ಮ ಆಪ್ತರ ಮೂಲಕ ಇಂದು (ಮಾ.13) ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಪರವಾಗಿ ನೆಲಮಂಗಲದ ಮಾಜಿ ಶಾಸಕ ನಾಗರಾಜ್ ಸದಾಶಿವನಗರದಲ್ಲಿ ದೂರು ದಾಖಲಿಸಿದ್ದಾರೆ.

ಸಿಡಿ ಬಿಡುಗಡೆಯಿಂದ ಮಾನಹಾನಿಯಾಗಿದೆ. ರಾಜಕೀಯ ಷಡ್ಯಂತ್ರ ರೂಪಿಸಲಾಗಿದೆ. ಬ್ಲಾಕ್ ಮೇಲ್ ಮಾಡಲಾಗಿದೆ. ಎಸ್ಐಟಿ ರಚನೆಯಾಗಿದೆ, ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ರಾಜಕೀಯವಾಗಿ ಮುಗಿಸಲು, ಹಣ ವಸೂಲಿ ಮಾಡಲು, ರಾಜಕೀಯ ತೇಜೊವಧೆ ಮಾಡಲು ಷಡ್ಯಂತ್ರ ರೂಪಿಸಲಾಗಿದೆ. ಸುಮಾರು 3 ತಿಂಗಳಿಂದ ಸದಾಶಿವನಗರದಲ್ಲಿ ನನ್ನ ವಿರುದ್ಧ ಮಸಲತ್ತು ಮತ್ತು ಮೋಸ ಮಾಡಿ ನಕಲಿ ಸಿಡಿ ಸೃಷ್ಟಿಸಲಾಗಿದೆ. ಯಾರ ಹೆಸರಿನಲ್ಲೂ ದೂರು ಕೊಟ್ಟಿಲ್ಲ. ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ನೀಡಲಾಗಿದೆ. ರಮೇಶ್ ಜಾರಕಿಹೊಳಿ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 120B, 385, 465, 469 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದಾದ ಕೆಲವೇ ಗಂಟೆಗಳ ನಂತರ ವೀಡಿಯೋದಲ್ಲಿರುವ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಈ ಸಿಡಿ ಪ್ರಕರಣದಲ್ಲಿ ಪ್ರಮುಖ ದೂರುದಾರರಾಗಿರುವ ದಿನೇಶ್ ಕಲ್ಲಹಳ್ಳಿಯವರು ದೂರು ನೀಡಿದ ನಂತರ, ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿ ಅದನ್ನು ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವ ಸರ್ಕಾರ ಈಗ ರಮೇಶ್ ಜಾರಕಿಹೊಳಿಯವರ ದೂರಿಗೆ ಎಫ್‌ಐಆರ್ ದಾಖಲಿಸಿದೆ. ಈ ಸಂದರ್ಭದಲ್ಲಿ ಸಂತ್ರಸ್ತ ಯುವತಿಯ ಈ ವೀಡಿಯೋ ವೈರಲ್ ಆಗುತ್ತಿದ್ದು, ಈ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ.


ಇದನ್ನೂ ಓದಿ: ರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...