Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ - ವೀಡಿಯೋ ವೈರಲ್

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

- Advertisement -
- Advertisement -

“ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾಗುವ ಅಶ್ಲೀಲ ವೀಡಿಯೋದಲ್ಲಿರುವ ಸಂತ್ರಸ್ತೆ ತಾನು” ಎಂದು ಹೇಳಿಕೊಂಡಿರುವ ಯುವತಿಯೊಬ್ಬರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಆಕೆ ತನಗೆ ರಕ್ಷಣೆಯಿಲ್ಲವೆಂದೂ, ಈ ಘಟನೆ ನಡೆದಿದೆ ಎಂದೂ ಭಾಗಶಃ ಒಪ್ಪಿಕೊಂಡಿದ್ದಾರೆ.

ಈ ವೀಡಿಯೋದಲ್ಲಿ ಮಾತನಾಡಿರುವ ಯುವತಿ, “ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನಾನು ಇಷ್ಟೇ ಕೇಳಿಕೊಳ್ಳುವುದು. ಈ ವಿಡಿಯೋ ಹೇಗೆ ಮಾಡಿದ್ರೂ ಎಂಬುದು ನನಗೆ ಗೊತ್ತಿಲ್ಲ. ಈಗಾಗಲೇ ನನ್ನ ಮಾನ ಹರಾಜಾಗಿದೆ. ನಮ್ಮ ಮನೆ ಹತ್ತಿರ ಬಂದು ಜನಗಳು ಕೇಳಿಕೊಂಡು ಹೋಗುತ್ತಿದ್ದಾರೆ. ಈಗಾಗಲೇ ನಮ್ಮ ಅಪ್ಪ-ಅಮ್ಮ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನಮ್ಮ ಹಿಂದೆ ಯಾರೂ ಇಲ್ಲ. ಪೊಲಿಟಿಕಲ್ ಸಪೋರ್ಟ್ ಅದು ಇದು ಏನೂ ಇಲ್ಲ. ರಮೇಶ್ ಜಾರಕಿಹೊಳಿ ಅವರೇ ನನಗೆ ಕೆಲಸ ಕೊಡಿಸುತ್ತೇನೆ ಅಂತ ಹೇಳಿದ್ರು. ಅದೆಲ್ಲಾ ಮಾಡಿ ಈಗ ವಿಡಿಯೋನು ಈಚೆ ಬಿಡ್ತಾ ಇದ್ದಾರೆ. ಇದೆಲ್ಲಾ ಹೇಗಾಯ್ತು, ಏನು ಅನ್ನೋದು ನನಗೆ ಗೊತ್ತಿಲ್ಲ. ನನಗೆ ಯಾವುದೇ ತರವಾದ ರಕ್ಷಣೆ ಇಲ್ಲ. ನಾನು ಇಷ್ಟೇ ಕೇಳಿಕೊಳ್ಳೋದು ನನಗೆ ರಕ್ಷಣೆ ಕೊಡಿ” ಎಂದು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದ್ದ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ “ಇದೊಂದು ನಕಲಿ ಸಿಡಿ, ಬ್ಲಾಕ್​ ಮೇಲ್, ರಾಜಕೀಯ ದುರುದ್ದೇಶದಿಂದ ಹೀಗೆ ಮಾಡಿದ್ದಾರೆ” ಎಂದು ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದರು. ಆನಂತರ ರಾಜ್ಯ ಸರ್ಕಾರ ಈ ಪ್ರಕರಣ ತನಿಖೆಗೆ ವಿಶೇಷ ತನಿಖೆ ತಂಡ ರಚನೆ ಮಾಡಿದೆ.

ಆದರೆ ಅಧಿಕೃತವಾಗಿ ಯಾವುದೆ ಎಫ್‌ಐಆರ್ ದಾಖಲಿಸಲಾಗಿರುವುದಿಲ್ಲ. ವೀಡಿಯೋದಲ್ಲಿರುವ ಸಂತ್ರಸ್ತೆ ಬಲಿಪಶುವೇ ಅಥವಾ ಆರೋಪಿಯೇ ಎಂಬುದನ್ನೂ ತನಿಖೆ ಮಾಡಲು ಸರ್ಕಾರ ಆಸ್ಥೆ ವಹಿಸಿರುವುದಿಲ್ಲ. ಬದಲಿಗೆ ದೂರು ದಾಖಲಿಸಿದ ದಿನೇಶ್ ಅವರಿಗೇ ನೋಟಿಸ್ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ. ಸಿಡಿ ಮಾಡಿದವರು ಯಾರು ಎಂಬುದನ್ನು ಹುಡುಕುವುದೇ ಸರ್ಕಾರದ ಉದ್ದೇಶವಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ಎಸ್​ಐಟಿ ರಚನೆಯಾದ ಬಳಿಕ ರಮೇಶ್ ಜಾರಕಿಹೊಳಿ ತಮ್ಮ ಆಪ್ತರ ಮೂಲಕ ಇಂದು (ಮಾ.13) ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಪರವಾಗಿ ನೆಲಮಂಗಲದ ಮಾಜಿ ಶಾಸಕ ನಾಗರಾಜ್ ಸದಾಶಿವನಗರದಲ್ಲಿ ದೂರು ದಾಖಲಿಸಿದ್ದಾರೆ.

ಸಿಡಿ ಬಿಡುಗಡೆಯಿಂದ ಮಾನಹಾನಿಯಾಗಿದೆ. ರಾಜಕೀಯ ಷಡ್ಯಂತ್ರ ರೂಪಿಸಲಾಗಿದೆ. ಬ್ಲಾಕ್ ಮೇಲ್ ಮಾಡಲಾಗಿದೆ. ಎಸ್ಐಟಿ ರಚನೆಯಾಗಿದೆ, ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ರಾಜಕೀಯವಾಗಿ ಮುಗಿಸಲು, ಹಣ ವಸೂಲಿ ಮಾಡಲು, ರಾಜಕೀಯ ತೇಜೊವಧೆ ಮಾಡಲು ಷಡ್ಯಂತ್ರ ರೂಪಿಸಲಾಗಿದೆ. ಸುಮಾರು 3 ತಿಂಗಳಿಂದ ಸದಾಶಿವನಗರದಲ್ಲಿ ನನ್ನ ವಿರುದ್ಧ ಮಸಲತ್ತು ಮತ್ತು ಮೋಸ ಮಾಡಿ ನಕಲಿ ಸಿಡಿ ಸೃಷ್ಟಿಸಲಾಗಿದೆ. ಯಾರ ಹೆಸರಿನಲ್ಲೂ ದೂರು ಕೊಟ್ಟಿಲ್ಲ. ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ನೀಡಲಾಗಿದೆ. ರಮೇಶ್ ಜಾರಕಿಹೊಳಿ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 120B, 385, 465, 469 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದಾದ ಕೆಲವೇ ಗಂಟೆಗಳ ನಂತರ ವೀಡಿಯೋದಲ್ಲಿರುವ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಈ ಸಿಡಿ ಪ್ರಕರಣದಲ್ಲಿ ಪ್ರಮುಖ ದೂರುದಾರರಾಗಿರುವ ದಿನೇಶ್ ಕಲ್ಲಹಳ್ಳಿಯವರು ದೂರು ನೀಡಿದ ನಂತರ, ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿ ಅದನ್ನು ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವ ಸರ್ಕಾರ ಈಗ ರಮೇಶ್ ಜಾರಕಿಹೊಳಿಯವರ ದೂರಿಗೆ ಎಫ್‌ಐಆರ್ ದಾಖಲಿಸಿದೆ. ಈ ಸಂದರ್ಭದಲ್ಲಿ ಸಂತ್ರಸ್ತ ಯುವತಿಯ ಈ ವೀಡಿಯೋ ವೈರಲ್ ಆಗುತ್ತಿದ್ದು, ಈ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ.


ಇದನ್ನೂ ಓದಿ: ರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....