Homeಕರ್ನಾಟಕಸಿಡಿ ಪ್ರಕರಣ: SIT ತನಿಖಾ ವರದಿಗೆ ಸುಪ್ರೀಂಕೋರ್ಟ್ ತಡೆ, ರಮೇಶ್‌ ಜಾರಕಿಹೊಳಿಗೆ ಮತ್ತೆ ಸಂಕಷ್ಟ

ಸಿಡಿ ಪ್ರಕರಣ: SIT ತನಿಖಾ ವರದಿಗೆ ಸುಪ್ರೀಂಕೋರ್ಟ್ ತಡೆ, ರಮೇಶ್‌ ಜಾರಕಿಹೊಳಿಗೆ ಮತ್ತೆ ಸಂಕಷ್ಟ

- Advertisement -
- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧದ ಅಶ್ಲೀಲ ಸಿಡಿ ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ತನಿಖಾ ವರದಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ಎಸ್‌ಐಟಿಯಿಂದ ಕ್ಲೀನ್ ಚಿಟ್ ಪಡೆದಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಎಸ್‌ಐಟಿ ತನಿಖಾ ವರದಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ಫೆ. 3ರಂದು ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆ ನೀಡುವಂತೆ ಸಂತ್ರಸ್ತೆಯು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಹೀಗಾಗಿ ಸಂತ್ರಸ್ತೆ ಸಲ್ಲಿಸಿದ್ದ, ಹೈಕೋರ್ಟ್‌ನಲ್ಲಿ ವಿಲೇವಾರಿಗೆ ಬಾಕಿ ಇರುವ ಎಸ್ಐಟಿ ರಚನೆಯ ನ್ಯಾಯಬದ್ಧತೆ ಹಾಗೂ ತನಿಖೆಯ ಸಿಂಧುತ್ವ ಕುರಿತಾದ ಆಕ್ಷೇಪಣಾ ಅರ್ಜಿ ಇತ್ಯರ್ಥ ಆಗುವವರೆಗೂ, ಎಸ್ಐಟಿ ತನಿಖಾ ವರದಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ: ಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ!

ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ), ತನಿಖೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಯಾವುದೇ ಸಾಕ್ಷ್ಯಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದರು.  ತನಿಖಾಧಿಕಾರಿ ಎಸಿಪಿ ಕವಿತಾ 150 ಪುಟಗಳ ತನಿಖಾ ವರದಿಯನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದಲ್ಲಿ ಸಂತ್ರಸ್ತೆ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಎಸ್‌ಐಟಿ ಅಧಿಕಾರಿಗಳು, ತನಿಖೆಯ ಸಮಯದಲ್ಲಿ ಇದು ಲೈಂಗಿಕ ದೌರ್ಜನ್ಯದ ಪ್ರಕರಣ ಎಂದು ಸಾಬೀತುಪಡಿಸಲು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಇಬ್ಬರೂ ಸಮ್ಮತಿ ಮೇರೆಗೆ ಲೈಂಗಿಕ ಸಂಪರ್ಕ ಹೊಂದಿದ್ದಾರೆ.  ಹೀಗಾಗಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದಿದ್ದರು.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಾಕ್ಷ್ಯವಿಲ್ಲ-ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...