Homeಕರ್ನಾಟಕರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

- Advertisement -
- Advertisement -

ಸರ್ಕಾರಕ್ಕೆ ಬಹುಮತ ಇಲ್ಲ, ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದು ಬಿಜೆಪಿ ಅಬ್ಬರಿಸುತ್ತಿದೆ. ವಿಶ್ವಾಸಮತ ಯಾಚನೆ ಮಾಡಲಿದ್ದೇನೆ, ಸಮಯ ನಿಗದಿ ಮಾಡಿ ಎಂದು ಸ್ವತಃ ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಮುಂಬೈನ ಹೋಟೆಲ್ಲಿನಲ್ಲಿ ಸೇರಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರು ಬಿಜೆಪಿಯು ತಮ್ಮನ್ನು ತೃಪ್ತರಾಗಿಸೀತೇ ಎಂದು ಕಾದುಕೊಂಡು ಕೂತಿದ್ದಾರೆ. ಯಾರ್ಯಾರಿಗೆ ಏನೇನು, ಎಷ್ಟೆಷ್ಟು ಸಿಕ್ಕಿದೆ ಅಥವಾ ಸಿಗುತ್ತದೆ ಎಂಬುದು ಇನ್ನೂ ಗೊತ್ತಾಗಿಲ್ಲ. ಆದರೆ, ಇಬ್ಬರಂತೂ ತಾವೇನು ಪಡೆದುಕೊಳ್ಳಲು ಇಚ್ಛಿಸಿದ್ದರೋ ಅಥವಾ ವಾಸ್ತವದಲ್ಲಿ ಯಾವುದಕ್ಕೆ ಅರ್ಹರೋ ಅದನ್ನು ಪಡೆದುಕೊಂಡಾಗಿದೆ.

ಅವರೇ ರಾಜ್ಯ ರಾಜಕಾರಣದ ಇಬ್ಬರು ಮಹತ್ವಾಕಾಂಕ್ಷಿಗಳಾದ ಸ್ಪೀಕರ್ ರಮೇಶ್ ಕುಮಾರ್ ಮತ್ತು ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್. ಶ್ರೀನಿವಾಸಪುರದ ಕೆ.ಆರ್.ರಮೇಶ್‍ಕುಮಾರ್ ಮುಖ್ಯಮಂತ್ರಿಯಾಗಬಹುದೆಂಬ ಆಸೆಯನ್ನೇನೂ ಇಟ್ಟುಕೊಂಡಿಲ್ಲ. ರಾಜಕೀಯ ಸಂದರ್ಭ ಮತ್ತು ಅವರದ್ದೇ ಮಿತಿಗಳ ಕಾರಣಕ್ಕೆ ಅವರನ್ನು ಸಚಿವರನ್ನಾಗಿಸಲೂ ಅವರ ಪಕ್ಷಗಳು ಸಿದ್ಧರಿಲ್ಲ. ಆದರೆ, ಸುದೀರ್ಘಕಾಲದ ರಾಜಕಾರಣದಲ್ಲಿ ತಾನು ಪಡೆದುಕೊಂಡಿರುವ ಜ್ಞಾನ ಹಾಗೂ ದೇಶದಲ್ಲಿ ಈ ಮಟ್ಟಿಗಿನ ತಿಳುವಳಿಕೆ ಇರುವ ಕೆಲವರಲ್ಲೇ ಒಬ್ಬನಾಗಿರುವ ತನಗೆ ಅದರ ‘ಸದ್ಬಳಕೆ’ಗೆ ಸೂಕ್ತ ಅವಕಾಶ ಸಿಕ್ಕಿಲ್ಲ ಎಂಬ ಕೊರಗಂತೂ ಇದೆ. ಈ ಸಾರಿಯ ಬಿಕ್ಕಟ್ಟು ಆ ಅವಕಾಶವನ್ನು ಅವರಿಗೆ ಒದಗಿಸಿದೆ ಮತ್ತು ಇನ್ನೂ ಕೆಲಕಾಲ ಒದಗಿಸಲಿದೆ.

ಸುಪ್ರೀಂಕೋರ್ಟು ಮತ್ತು ರಾಜ್ಯಪಾಲರಿಗೆ ‘ನನ್ನದು ಸ್ಪೀಕರ್ ಸ್ಥಾನ. ಶಾಸಕಾಂಗದ ಮಟ್ಟಿಗೆ ಇದೂ ಸಾಂವಿಧಾನಿಕ ಹುದ್ದೆಯೇ. ನನ್ನ ಕೆಲಸ ನಾನಷ್ಟೇ ಮಾಡುವುದು ಸಾಧ್ಯ. ನೀವು ನನಗೆ ಡಿಕ್ಟೇಟ್ ಮಾಡಲು ಸಾಧ್ಯವಿಲ್ಲ’ ಎಂದು ಅವರು ಸೂಚ್ಯವಾಗಿ ಹೇಳಿಯಾಗಿದೆ. ಇದು ತಲುಪಬೇಕಾದವರಿಗೆ ತಲುಪಲಿ ಎಂದು ಸಂದರ್ಭ ಇದ್ದಾಗಲೆಲ್ಲಾ ಇಂಗ್ಲಿಷಿನಲ್ಲೂ ಮಾತಾಡುತ್ತಾ, ರಾಜ್ಯಪಾಲರು ಮತ್ತು ಸುಪ್ರೀಂಕೋರ್ಟಿಗೂ ಅವರು ಸಂದೇಶ ರವಾನೆ ಮಾಡಿಯಾಗಿದೆ. ಸ್ಪೀಕರ್ ಸ್ಥಾನದಿಂದ ತಾನೇನು ಮಾಡಬಹುದೆಂಬ ಸಣ್ಣ ಸೂಚನೆಯನ್ನು ಉಮೇಶ್ ಜಾಧವ್ ರಾಜೀನಾಮೆ ಸಂದರ್ಭದಲ್ಲೇ ಅವರು ತೋರಿಸಿದ್ದರು.

ಸಂಜೆ 6 ಗಂಟೆ ಒಳಗೆ ರಾಜೀನಾಮೆ ಕೊಡಬಯಸುವ ಶಾಸಕರು ಸ್ಪೀಕರ್ ಅವರನ್ನು ಕಾಣಿ ಮತ್ತು ಇಂದೇ ರಾಜೀನಾಮೆಗಳನ್ನು ಸ್ಪೀಕರ್ ಇತ್ಯರ್ಥ ಮಾಡಲಿ ಎಂಬ ಸೂಚನೆಯನ್ನು ಸುಪ್ರೀಂಕೋರ್ಟು ನಿನ್ನೆ ಕೊಟ್ಟಿತ್ತು. ತಪ್ಪು ಲೆಕ್ಕಾಚಾರದಿಂದ ಎಚ್‍ಎಎಲ್ ಏರ್ ಪೋರ್ಟಿಗೆ ತಡವಾಗಿ ಬಂದ ತೃಪ್ತರಾಗದ ಶಾಸಕರು, ಸಿಗ್ನಲ್ ಫ್ರೀ ವ್ಯವಸ್ಥೆ ಇದ್ದರೂ 6 ಗಂಟೆ ಒಳಗೆ ವಿಧಾನಸೌಧ ತಲುಪಲಿಲ್ಲ. ಅದರ ರನ್ನಿಂಗ್ ಕಾಮೆಂಟ್ರಿ ನೀಡುತ್ತಿದ್ದ ಟಿವಿ ಆಂಕರ್ ಗಳಲ್ಲಿ ಯಾರಾದರೂ ಒಬ್ಬರು ಉಸಿರುಕಟ್ಟಿ ಸತ್ತು ಹೋಗಬಹುದು ಎನಿಸುವ ರೀತಿಯಲ್ಲಿ ವೀಕ್ಷಕ ವಿವರಣೆ ನೀಡುತ್ತಿದ್ದರು.

ಬೇರೆ ಸ್ಪೀಕರ್ ಆಗಿದ್ದರೆ, 6 ಗಂಟೆ 1 ನಿಮಿಷಕ್ಕೆ ತಮ್ಮ ಕಚೇರಿಯಿಂದ ಹೊರಟು, ಎ.ಜಿ.ಕಚೇರಿ ಗೇಟಿನಿಂದ ವಿಧಾನಸೌಧ ಆವರಣ ಬಿಡಲು ವ್ಯವಸ್ಥೆ ಮಾಡಿಕೊಂಡಿರುತ್ತಿದ್ದರು. ಆಗ ಸುಪ್ರೀಂಕೋರ್ಟಿನ ತೀರ್ಪನ್ನು ಪಾಲನೆ ಮಾಡಿದ ಹಾಗೂ ಆಗಿರುತ್ತಿತ್ತು; ತಮ್ಮ ಪಕ್ಷವನ್ನು ಬಚಾವು ಮಾಡಿದ ಹಾಗೂ ಆಗಿರುತ್ತಿತ್ತು. ಆದರೆ ಸ್ಪೀಕರ್ ನೈತಿಕವಾಗಿ ತಪ್ಪು ಮಾಡಿದ ಕಳಂಕ ಹೊರಬೇಕಾಗುತ್ತಿತ್ತು. ರಮೇಶ್‍ಕುಮಾರ್ ರಿಗೆ ಇರುವ ಆತ್ಮವಿಶ್ವಾಸ ಎಷ್ಟೆಂದರೆ, ತಾನು ಈ ಪ್ರಕರಣವನ್ನು ತಾಂತ್ರಿಕವಾಗಿ ಗೆಲ್ಲಬೇಕಿಲ್ಲ; ಕೊಡಬೇಕಾದ ಪೆಟ್ಟು ಕೊಟ್ಟೇ ಗೆಲ್ಲುತ್ತೇನೆ ಎಂದು. ಹಾಗಾಗಿ ರಾಜೀನಾಮೆ ಪತ್ರವನ್ನು ತೆಗೆದುಕೊಂಡು (ಖಾಲಿ ಹಾಳೆ ಹಿಡಿದು ಬಂದ ಶಾಸಕರಿಗೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಪತ್ರ ಹೇಗಿರಬೇಕು ಎಂದು ಅವರೇ ಹೇಳಿರಲಿಕ್ಕೂ ಸಾಕು), ಹೊರಬಂದು ಪತ್ರಿಕಾಗೋಷ್ಠಿ ನಡೆಸಿದರು. ಸುಪ್ರೀಂಕೋರ್ಟು ತನಗೆ ಇಷ್ಟೇ ಸಮಯದಲ್ಲಿ ನಿರ್ಧಾರ ಹೇಳಿ ಎಂದು ತಾಕೀತು ಮಾಡುವಂತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಹೇಳಿದರು.

ಮರುದಿನ ಸುಪ್ರೀಂಕೋರ್ಟು ತಾನೇ ಸಮಯ ಕೇಳಿಕೊಂಡು ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಿತು! ಇಂತಹ ಸಂದರ್ಭ ಬರಬಹುದೆಂದೇ ಸಿದ್ದರಾಮಯ್ಯ ಮತ್ತು ದೇವೇಗೌಡರಿಬ್ಬರೂ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ರಮೇಶ್‍ಕುಮಾರ್‍ರನ್ನು ಸ್ಪೀಕರ್ ಮಾಡಿದ್ದರು. ಮೊನ್ನೆ ಕಾಂಗ್ರೆಸ್ ಸಂಸದೀಯ ಪಕ್ಷದಿಂದ ಸ್ಪೀಕರ್ ಕಚೇರಿಗೆ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಿಯೋಗವೊಂದು ಹೋಗಿತ್ತು. ಆಗ ಹಳೆಯ ಸ್ನೇಹಿತರಾದ ಸಿದ್ದರಾಮಯ್ಯ ಮತ್ತು ರಮೇಶ್‍ ಕುಮಾರ್ ನಡುವೆ ನಡೆದ ಮಾತುಕತೆ ಹೀಗಿತ್ತು.

ರಮೇಶ್ ಕುಮಾರ್: ‘ಒಟ್ಟಿನಲ್ಲಿ ನಿನಗೆ ಈಗ ಬಹಳ ಖುಷಿಯಲ್ಲವೇನಪ್ಪಾ? You are the happiest person now’,

ಸಿದ್ದರಾಮಯ್ಯ: ‘ನಾನೇಕೆ ಖುಷಿ ಪಡಬೇಕಪ್ಪಾ, ನಮ್ಮ ಕಷ್ಟ ನಮಗೆ ಆಗಿದೆ’.

ರ.ಕು: ‘ನನ್ನನ್ನ ಈ ಕಷ್ಟಕ್ಕೆ ಸಿಕ್ಕಿ ಹಾಕಿಸಿದ್ದಕ್ಕೆ’.

ಸಿ.ರಾ: ‘ಇಂಥದ್ದನ್ನೆಲ್ಲಾ ನಿಭಾಯಿಸಲು ನೀನೇ ಸರಿ. ಆ ಸಾಮಥ್ರ್ಯ, ತಿಳುವಳಿಕೆ ನಿನಗೇ ಇದೆ ಎಂಬ ಕಾರಣಕ್ಕೇ ನಿನ್ನನ್ನು ಸ್ಪೀಕರ್ ಆಗಿ ಮಾಡಿರುವುದು’.

ಇದು ವಾಸ್ತವವೇ. ಹಾಗೆಯೇ ಅದಕ್ಕಿಂತ ಜಾಸ್ತಿ ರಮೇಶ್‍ ಕುಮಾರ್ ರವರಿಗೆ ಅವಕಾಶ ಕೊಡಬಾರದು ಎಂಬುದು ಸಿದ್ದರಾಮಯ್ಯ ಮತ್ತು ದೇವೇಗೌಡರಿಬ್ಬರಿಗೂ ಗೊತ್ತು. ಸಂಸದೀಯ ನಿಯಮಾವಳಿಗಳ ಬಗ್ಗೆ ಅಪಾರ ಜ್ಞಾನವಿರುವ ರಮೇಶ್‍ಕುಮಾರ್, ಈ ಅವಧಿಯಲ್ಲಿ ಎರಡೆರಡು ಸಾರಿ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮ ಕುಮಾರ್ ರಿಂದಲೂ ಸಲಹೆ ಪಡೆದುಕೊಂಡಿದ್ದಾರೆ. ಅವೆಲ್ಲದರ ಪರಿಣಾಮವಾಗಿ ಈ ಪ್ರಕರಣವನ್ನು ವಿಶೇಷ ರೀತಿಯಲ್ಲಿ ನಿಭಾಯಿಸಬೇಕೆಂಬ ನಿರ್ಧಾರಕ್ಕೆ ಅವರು ಬಂದಂತಿದೆ.

ಸಂವಿಧಾನದ 10ನೇ ಶೆಡ್ಯೂಲ್‍ನ ಪ್ರಕಾರ ಶಾಸಕರನ್ನು ಅನರ್ಹಗೊಳಿಸುವ ಪರಮಾಧಿಕಾರ ಸ್ಪೀಕರ್ ಗೆ ಇದೆ. ಅದನ್ನು ನಂತರ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಬಹುದಾದರೂ, ಕೋರ್ಟಿಗೆ ಕೆಲವು ಮಿತಿಗಳಿವೆ. ಈಗಾಗಲೇ ಕಿಹೊಟೊ ಹೊಲ್ಲೊಹಾನ್ ವರ್ಸಸ್ ಜಾಚಿಲ್ಹು (Kihoto Hollohan v/s Zachillhu) ಮೊಕದ್ದಮೆಯಲ್ಲಿ ಸುಪ್ರೀಂಕೋರ್ಟೇ ಅದನ್ನು ಹೇಳಿದೆ. ಹಾಗಾಗಿ ಇದು ಶಾಸಕಾಂಗ ಮತ್ತು ನ್ಯಾಯಾಂಗದ ಅಧಿಕಾರವ್ಯಾಪ್ತಿಯ ಕುರಿತ ತಿಕ್ಕಾಟವಾಗುವ ಸಂಭವವಿದೆ. ಹಾಗಾದಾಗ, ಸಾಂವಿಧಾನಿಕ ಮೌಲ್ಯಗಳು ಏನಿರಬೇಕು ಎಂಬುದನ್ನು ಸಮರ್ಥವಾಗಿ ಅಭಿವ್ಯಕ್ತಿಸಬಲ್ಲ ಸ್ಪೀಕರ್ ಇಲ್ಲಿರುವುದರಿಂದ ಸುಪ್ರೀಂಕೋರ್ಟು ಸಹಾ ಇಕ್ಕಟ್ಟಿಗೆ ಸಿಲುಕುತ್ತದೆ.

ಇವೆಲ್ಲದರ ಕೇಂದ್ರದಲ್ಲಿರುವ ರಮೇಶ್‍ ಕುಮಾರ್ ರವರಿಗೆ ಇವೆಲ್ಲವೂ ಹೆಚ್ಚೆಚ್ಚು ಅವಕಾಶಗಳನ್ನು ಒದಗಿಸುತ್ತಾ ಹೋಗುತ್ತದೆ ಮತ್ತು ಅವರೂ ಅದನ್ನು ಬಯಸುತ್ತಾರೆ. ಇವೆಲ್ಲದರ ಪರಿಣಾಮವಾಗಿ ಪ್ರಜಾತಂತ್ರಕ್ಕೆ ಒಳಿತಾಗುವುದಾದರೆ ಮತ್ತು ಅನೈತಿಕ ಪಕ್ಷಾಂತರವನ್ನು ತಡೆಯುವಲ್ಲಿ ಮೈಲುಗಲ್ಲನ್ನು ನಿರ್ಮಿಸುವುದಾದರೆ ಅದಕ್ಕಿಂದ ಒಳ್ಳೆಯದು ಇನ್ನೊಂದಿಲ್ಲ.

ಇದನ್ನೂ ಓದಿ: ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...