Homeಕರ್ನಾಟಕರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

- Advertisement -
- Advertisement -

ಸರ್ಕಾರಕ್ಕೆ ಬಹುಮತ ಇಲ್ಲ, ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದು ಬಿಜೆಪಿ ಅಬ್ಬರಿಸುತ್ತಿದೆ. ವಿಶ್ವಾಸಮತ ಯಾಚನೆ ಮಾಡಲಿದ್ದೇನೆ, ಸಮಯ ನಿಗದಿ ಮಾಡಿ ಎಂದು ಸ್ವತಃ ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಮುಂಬೈನ ಹೋಟೆಲ್ಲಿನಲ್ಲಿ ಸೇರಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರು ಬಿಜೆಪಿಯು ತಮ್ಮನ್ನು ತೃಪ್ತರಾಗಿಸೀತೇ ಎಂದು ಕಾದುಕೊಂಡು ಕೂತಿದ್ದಾರೆ. ಯಾರ್ಯಾರಿಗೆ ಏನೇನು, ಎಷ್ಟೆಷ್ಟು ಸಿಕ್ಕಿದೆ ಅಥವಾ ಸಿಗುತ್ತದೆ ಎಂಬುದು ಇನ್ನೂ ಗೊತ್ತಾಗಿಲ್ಲ. ಆದರೆ, ಇಬ್ಬರಂತೂ ತಾವೇನು ಪಡೆದುಕೊಳ್ಳಲು ಇಚ್ಛಿಸಿದ್ದರೋ ಅಥವಾ ವಾಸ್ತವದಲ್ಲಿ ಯಾವುದಕ್ಕೆ ಅರ್ಹರೋ ಅದನ್ನು ಪಡೆದುಕೊಂಡಾಗಿದೆ.

ಅವರೇ ರಾಜ್ಯ ರಾಜಕಾರಣದ ಇಬ್ಬರು ಮಹತ್ವಾಕಾಂಕ್ಷಿಗಳಾದ ಸ್ಪೀಕರ್ ರಮೇಶ್ ಕುಮಾರ್ ಮತ್ತು ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್. ಶ್ರೀನಿವಾಸಪುರದ ಕೆ.ಆರ್.ರಮೇಶ್‍ಕುಮಾರ್ ಮುಖ್ಯಮಂತ್ರಿಯಾಗಬಹುದೆಂಬ ಆಸೆಯನ್ನೇನೂ ಇಟ್ಟುಕೊಂಡಿಲ್ಲ. ರಾಜಕೀಯ ಸಂದರ್ಭ ಮತ್ತು ಅವರದ್ದೇ ಮಿತಿಗಳ ಕಾರಣಕ್ಕೆ ಅವರನ್ನು ಸಚಿವರನ್ನಾಗಿಸಲೂ ಅವರ ಪಕ್ಷಗಳು ಸಿದ್ಧರಿಲ್ಲ. ಆದರೆ, ಸುದೀರ್ಘಕಾಲದ ರಾಜಕಾರಣದಲ್ಲಿ ತಾನು ಪಡೆದುಕೊಂಡಿರುವ ಜ್ಞಾನ ಹಾಗೂ ದೇಶದಲ್ಲಿ ಈ ಮಟ್ಟಿಗಿನ ತಿಳುವಳಿಕೆ ಇರುವ ಕೆಲವರಲ್ಲೇ ಒಬ್ಬನಾಗಿರುವ ತನಗೆ ಅದರ ‘ಸದ್ಬಳಕೆ’ಗೆ ಸೂಕ್ತ ಅವಕಾಶ ಸಿಕ್ಕಿಲ್ಲ ಎಂಬ ಕೊರಗಂತೂ ಇದೆ. ಈ ಸಾರಿಯ ಬಿಕ್ಕಟ್ಟು ಆ ಅವಕಾಶವನ್ನು ಅವರಿಗೆ ಒದಗಿಸಿದೆ ಮತ್ತು ಇನ್ನೂ ಕೆಲಕಾಲ ಒದಗಿಸಲಿದೆ.

ಸುಪ್ರೀಂಕೋರ್ಟು ಮತ್ತು ರಾಜ್ಯಪಾಲರಿಗೆ ‘ನನ್ನದು ಸ್ಪೀಕರ್ ಸ್ಥಾನ. ಶಾಸಕಾಂಗದ ಮಟ್ಟಿಗೆ ಇದೂ ಸಾಂವಿಧಾನಿಕ ಹುದ್ದೆಯೇ. ನನ್ನ ಕೆಲಸ ನಾನಷ್ಟೇ ಮಾಡುವುದು ಸಾಧ್ಯ. ನೀವು ನನಗೆ ಡಿಕ್ಟೇಟ್ ಮಾಡಲು ಸಾಧ್ಯವಿಲ್ಲ’ ಎಂದು ಅವರು ಸೂಚ್ಯವಾಗಿ ಹೇಳಿಯಾಗಿದೆ. ಇದು ತಲುಪಬೇಕಾದವರಿಗೆ ತಲುಪಲಿ ಎಂದು ಸಂದರ್ಭ ಇದ್ದಾಗಲೆಲ್ಲಾ ಇಂಗ್ಲಿಷಿನಲ್ಲೂ ಮಾತಾಡುತ್ತಾ, ರಾಜ್ಯಪಾಲರು ಮತ್ತು ಸುಪ್ರೀಂಕೋರ್ಟಿಗೂ ಅವರು ಸಂದೇಶ ರವಾನೆ ಮಾಡಿಯಾಗಿದೆ. ಸ್ಪೀಕರ್ ಸ್ಥಾನದಿಂದ ತಾನೇನು ಮಾಡಬಹುದೆಂಬ ಸಣ್ಣ ಸೂಚನೆಯನ್ನು ಉಮೇಶ್ ಜಾಧವ್ ರಾಜೀನಾಮೆ ಸಂದರ್ಭದಲ್ಲೇ ಅವರು ತೋರಿಸಿದ್ದರು.

ಸಂಜೆ 6 ಗಂಟೆ ಒಳಗೆ ರಾಜೀನಾಮೆ ಕೊಡಬಯಸುವ ಶಾಸಕರು ಸ್ಪೀಕರ್ ಅವರನ್ನು ಕಾಣಿ ಮತ್ತು ಇಂದೇ ರಾಜೀನಾಮೆಗಳನ್ನು ಸ್ಪೀಕರ್ ಇತ್ಯರ್ಥ ಮಾಡಲಿ ಎಂಬ ಸೂಚನೆಯನ್ನು ಸುಪ್ರೀಂಕೋರ್ಟು ನಿನ್ನೆ ಕೊಟ್ಟಿತ್ತು. ತಪ್ಪು ಲೆಕ್ಕಾಚಾರದಿಂದ ಎಚ್‍ಎಎಲ್ ಏರ್ ಪೋರ್ಟಿಗೆ ತಡವಾಗಿ ಬಂದ ತೃಪ್ತರಾಗದ ಶಾಸಕರು, ಸಿಗ್ನಲ್ ಫ್ರೀ ವ್ಯವಸ್ಥೆ ಇದ್ದರೂ 6 ಗಂಟೆ ಒಳಗೆ ವಿಧಾನಸೌಧ ತಲುಪಲಿಲ್ಲ. ಅದರ ರನ್ನಿಂಗ್ ಕಾಮೆಂಟ್ರಿ ನೀಡುತ್ತಿದ್ದ ಟಿವಿ ಆಂಕರ್ ಗಳಲ್ಲಿ ಯಾರಾದರೂ ಒಬ್ಬರು ಉಸಿರುಕಟ್ಟಿ ಸತ್ತು ಹೋಗಬಹುದು ಎನಿಸುವ ರೀತಿಯಲ್ಲಿ ವೀಕ್ಷಕ ವಿವರಣೆ ನೀಡುತ್ತಿದ್ದರು.

ಬೇರೆ ಸ್ಪೀಕರ್ ಆಗಿದ್ದರೆ, 6 ಗಂಟೆ 1 ನಿಮಿಷಕ್ಕೆ ತಮ್ಮ ಕಚೇರಿಯಿಂದ ಹೊರಟು, ಎ.ಜಿ.ಕಚೇರಿ ಗೇಟಿನಿಂದ ವಿಧಾನಸೌಧ ಆವರಣ ಬಿಡಲು ವ್ಯವಸ್ಥೆ ಮಾಡಿಕೊಂಡಿರುತ್ತಿದ್ದರು. ಆಗ ಸುಪ್ರೀಂಕೋರ್ಟಿನ ತೀರ್ಪನ್ನು ಪಾಲನೆ ಮಾಡಿದ ಹಾಗೂ ಆಗಿರುತ್ತಿತ್ತು; ತಮ್ಮ ಪಕ್ಷವನ್ನು ಬಚಾವು ಮಾಡಿದ ಹಾಗೂ ಆಗಿರುತ್ತಿತ್ತು. ಆದರೆ ಸ್ಪೀಕರ್ ನೈತಿಕವಾಗಿ ತಪ್ಪು ಮಾಡಿದ ಕಳಂಕ ಹೊರಬೇಕಾಗುತ್ತಿತ್ತು. ರಮೇಶ್‍ಕುಮಾರ್ ರಿಗೆ ಇರುವ ಆತ್ಮವಿಶ್ವಾಸ ಎಷ್ಟೆಂದರೆ, ತಾನು ಈ ಪ್ರಕರಣವನ್ನು ತಾಂತ್ರಿಕವಾಗಿ ಗೆಲ್ಲಬೇಕಿಲ್ಲ; ಕೊಡಬೇಕಾದ ಪೆಟ್ಟು ಕೊಟ್ಟೇ ಗೆಲ್ಲುತ್ತೇನೆ ಎಂದು. ಹಾಗಾಗಿ ರಾಜೀನಾಮೆ ಪತ್ರವನ್ನು ತೆಗೆದುಕೊಂಡು (ಖಾಲಿ ಹಾಳೆ ಹಿಡಿದು ಬಂದ ಶಾಸಕರಿಗೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಪತ್ರ ಹೇಗಿರಬೇಕು ಎಂದು ಅವರೇ ಹೇಳಿರಲಿಕ್ಕೂ ಸಾಕು), ಹೊರಬಂದು ಪತ್ರಿಕಾಗೋಷ್ಠಿ ನಡೆಸಿದರು. ಸುಪ್ರೀಂಕೋರ್ಟು ತನಗೆ ಇಷ್ಟೇ ಸಮಯದಲ್ಲಿ ನಿರ್ಧಾರ ಹೇಳಿ ಎಂದು ತಾಕೀತು ಮಾಡುವಂತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಹೇಳಿದರು.

ಮರುದಿನ ಸುಪ್ರೀಂಕೋರ್ಟು ತಾನೇ ಸಮಯ ಕೇಳಿಕೊಂಡು ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಿತು! ಇಂತಹ ಸಂದರ್ಭ ಬರಬಹುದೆಂದೇ ಸಿದ್ದರಾಮಯ್ಯ ಮತ್ತು ದೇವೇಗೌಡರಿಬ್ಬರೂ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ರಮೇಶ್‍ಕುಮಾರ್‍ರನ್ನು ಸ್ಪೀಕರ್ ಮಾಡಿದ್ದರು. ಮೊನ್ನೆ ಕಾಂಗ್ರೆಸ್ ಸಂಸದೀಯ ಪಕ್ಷದಿಂದ ಸ್ಪೀಕರ್ ಕಚೇರಿಗೆ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಿಯೋಗವೊಂದು ಹೋಗಿತ್ತು. ಆಗ ಹಳೆಯ ಸ್ನೇಹಿತರಾದ ಸಿದ್ದರಾಮಯ್ಯ ಮತ್ತು ರಮೇಶ್‍ ಕುಮಾರ್ ನಡುವೆ ನಡೆದ ಮಾತುಕತೆ ಹೀಗಿತ್ತು.

ರಮೇಶ್ ಕುಮಾರ್: ‘ಒಟ್ಟಿನಲ್ಲಿ ನಿನಗೆ ಈಗ ಬಹಳ ಖುಷಿಯಲ್ಲವೇನಪ್ಪಾ? You are the happiest person now’,

ಸಿದ್ದರಾಮಯ್ಯ: ‘ನಾನೇಕೆ ಖುಷಿ ಪಡಬೇಕಪ್ಪಾ, ನಮ್ಮ ಕಷ್ಟ ನಮಗೆ ಆಗಿದೆ’.

ರ.ಕು: ‘ನನ್ನನ್ನ ಈ ಕಷ್ಟಕ್ಕೆ ಸಿಕ್ಕಿ ಹಾಕಿಸಿದ್ದಕ್ಕೆ’.

ಸಿ.ರಾ: ‘ಇಂಥದ್ದನ್ನೆಲ್ಲಾ ನಿಭಾಯಿಸಲು ನೀನೇ ಸರಿ. ಆ ಸಾಮಥ್ರ್ಯ, ತಿಳುವಳಿಕೆ ನಿನಗೇ ಇದೆ ಎಂಬ ಕಾರಣಕ್ಕೇ ನಿನ್ನನ್ನು ಸ್ಪೀಕರ್ ಆಗಿ ಮಾಡಿರುವುದು’.

ಇದು ವಾಸ್ತವವೇ. ಹಾಗೆಯೇ ಅದಕ್ಕಿಂತ ಜಾಸ್ತಿ ರಮೇಶ್‍ ಕುಮಾರ್ ರವರಿಗೆ ಅವಕಾಶ ಕೊಡಬಾರದು ಎಂಬುದು ಸಿದ್ದರಾಮಯ್ಯ ಮತ್ತು ದೇವೇಗೌಡರಿಬ್ಬರಿಗೂ ಗೊತ್ತು. ಸಂಸದೀಯ ನಿಯಮಾವಳಿಗಳ ಬಗ್ಗೆ ಅಪಾರ ಜ್ಞಾನವಿರುವ ರಮೇಶ್‍ಕುಮಾರ್, ಈ ಅವಧಿಯಲ್ಲಿ ಎರಡೆರಡು ಸಾರಿ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮ ಕುಮಾರ್ ರಿಂದಲೂ ಸಲಹೆ ಪಡೆದುಕೊಂಡಿದ್ದಾರೆ. ಅವೆಲ್ಲದರ ಪರಿಣಾಮವಾಗಿ ಈ ಪ್ರಕರಣವನ್ನು ವಿಶೇಷ ರೀತಿಯಲ್ಲಿ ನಿಭಾಯಿಸಬೇಕೆಂಬ ನಿರ್ಧಾರಕ್ಕೆ ಅವರು ಬಂದಂತಿದೆ.

ಸಂವಿಧಾನದ 10ನೇ ಶೆಡ್ಯೂಲ್‍ನ ಪ್ರಕಾರ ಶಾಸಕರನ್ನು ಅನರ್ಹಗೊಳಿಸುವ ಪರಮಾಧಿಕಾರ ಸ್ಪೀಕರ್ ಗೆ ಇದೆ. ಅದನ್ನು ನಂತರ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಬಹುದಾದರೂ, ಕೋರ್ಟಿಗೆ ಕೆಲವು ಮಿತಿಗಳಿವೆ. ಈಗಾಗಲೇ ಕಿಹೊಟೊ ಹೊಲ್ಲೊಹಾನ್ ವರ್ಸಸ್ ಜಾಚಿಲ್ಹು (Kihoto Hollohan v/s Zachillhu) ಮೊಕದ್ದಮೆಯಲ್ಲಿ ಸುಪ್ರೀಂಕೋರ್ಟೇ ಅದನ್ನು ಹೇಳಿದೆ. ಹಾಗಾಗಿ ಇದು ಶಾಸಕಾಂಗ ಮತ್ತು ನ್ಯಾಯಾಂಗದ ಅಧಿಕಾರವ್ಯಾಪ್ತಿಯ ಕುರಿತ ತಿಕ್ಕಾಟವಾಗುವ ಸಂಭವವಿದೆ. ಹಾಗಾದಾಗ, ಸಾಂವಿಧಾನಿಕ ಮೌಲ್ಯಗಳು ಏನಿರಬೇಕು ಎಂಬುದನ್ನು ಸಮರ್ಥವಾಗಿ ಅಭಿವ್ಯಕ್ತಿಸಬಲ್ಲ ಸ್ಪೀಕರ್ ಇಲ್ಲಿರುವುದರಿಂದ ಸುಪ್ರೀಂಕೋರ್ಟು ಸಹಾ ಇಕ್ಕಟ್ಟಿಗೆ ಸಿಲುಕುತ್ತದೆ.

ಇವೆಲ್ಲದರ ಕೇಂದ್ರದಲ್ಲಿರುವ ರಮೇಶ್‍ ಕುಮಾರ್ ರವರಿಗೆ ಇವೆಲ್ಲವೂ ಹೆಚ್ಚೆಚ್ಚು ಅವಕಾಶಗಳನ್ನು ಒದಗಿಸುತ್ತಾ ಹೋಗುತ್ತದೆ ಮತ್ತು ಅವರೂ ಅದನ್ನು ಬಯಸುತ್ತಾರೆ. ಇವೆಲ್ಲದರ ಪರಿಣಾಮವಾಗಿ ಪ್ರಜಾತಂತ್ರಕ್ಕೆ ಒಳಿತಾಗುವುದಾದರೆ ಮತ್ತು ಅನೈತಿಕ ಪಕ್ಷಾಂತರವನ್ನು ತಡೆಯುವಲ್ಲಿ ಮೈಲುಗಲ್ಲನ್ನು ನಿರ್ಮಿಸುವುದಾದರೆ ಅದಕ್ಕಿಂದ ಒಳ್ಳೆಯದು ಇನ್ನೊಂದಿಲ್ಲ.

ಇದನ್ನೂ ಓದಿ: ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...