Homeಕರ್ನಾಟಕರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

- Advertisement -
- Advertisement -

ಸರ್ಕಾರಕ್ಕೆ ಬಹುಮತ ಇಲ್ಲ, ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದು ಬಿಜೆಪಿ ಅಬ್ಬರಿಸುತ್ತಿದೆ. ವಿಶ್ವಾಸಮತ ಯಾಚನೆ ಮಾಡಲಿದ್ದೇನೆ, ಸಮಯ ನಿಗದಿ ಮಾಡಿ ಎಂದು ಸ್ವತಃ ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಮುಂಬೈನ ಹೋಟೆಲ್ಲಿನಲ್ಲಿ ಸೇರಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರು ಬಿಜೆಪಿಯು ತಮ್ಮನ್ನು ತೃಪ್ತರಾಗಿಸೀತೇ ಎಂದು ಕಾದುಕೊಂಡು ಕೂತಿದ್ದಾರೆ. ಯಾರ್ಯಾರಿಗೆ ಏನೇನು, ಎಷ್ಟೆಷ್ಟು ಸಿಕ್ಕಿದೆ ಅಥವಾ ಸಿಗುತ್ತದೆ ಎಂಬುದು ಇನ್ನೂ ಗೊತ್ತಾಗಿಲ್ಲ. ಆದರೆ, ಇಬ್ಬರಂತೂ ತಾವೇನು ಪಡೆದುಕೊಳ್ಳಲು ಇಚ್ಛಿಸಿದ್ದರೋ ಅಥವಾ ವಾಸ್ತವದಲ್ಲಿ ಯಾವುದಕ್ಕೆ ಅರ್ಹರೋ ಅದನ್ನು ಪಡೆದುಕೊಂಡಾಗಿದೆ.

ಅವರೇ ರಾಜ್ಯ ರಾಜಕಾರಣದ ಇಬ್ಬರು ಮಹತ್ವಾಕಾಂಕ್ಷಿಗಳಾದ ಸ್ಪೀಕರ್ ರಮೇಶ್ ಕುಮಾರ್ ಮತ್ತು ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್. ಶ್ರೀನಿವಾಸಪುರದ ಕೆ.ಆರ್.ರಮೇಶ್‍ಕುಮಾರ್ ಮುಖ್ಯಮಂತ್ರಿಯಾಗಬಹುದೆಂಬ ಆಸೆಯನ್ನೇನೂ ಇಟ್ಟುಕೊಂಡಿಲ್ಲ. ರಾಜಕೀಯ ಸಂದರ್ಭ ಮತ್ತು ಅವರದ್ದೇ ಮಿತಿಗಳ ಕಾರಣಕ್ಕೆ ಅವರನ್ನು ಸಚಿವರನ್ನಾಗಿಸಲೂ ಅವರ ಪಕ್ಷಗಳು ಸಿದ್ಧರಿಲ್ಲ. ಆದರೆ, ಸುದೀರ್ಘಕಾಲದ ರಾಜಕಾರಣದಲ್ಲಿ ತಾನು ಪಡೆದುಕೊಂಡಿರುವ ಜ್ಞಾನ ಹಾಗೂ ದೇಶದಲ್ಲಿ ಈ ಮಟ್ಟಿಗಿನ ತಿಳುವಳಿಕೆ ಇರುವ ಕೆಲವರಲ್ಲೇ ಒಬ್ಬನಾಗಿರುವ ತನಗೆ ಅದರ ‘ಸದ್ಬಳಕೆ’ಗೆ ಸೂಕ್ತ ಅವಕಾಶ ಸಿಕ್ಕಿಲ್ಲ ಎಂಬ ಕೊರಗಂತೂ ಇದೆ. ಈ ಸಾರಿಯ ಬಿಕ್ಕಟ್ಟು ಆ ಅವಕಾಶವನ್ನು ಅವರಿಗೆ ಒದಗಿಸಿದೆ ಮತ್ತು ಇನ್ನೂ ಕೆಲಕಾಲ ಒದಗಿಸಲಿದೆ.

ಸುಪ್ರೀಂಕೋರ್ಟು ಮತ್ತು ರಾಜ್ಯಪಾಲರಿಗೆ ‘ನನ್ನದು ಸ್ಪೀಕರ್ ಸ್ಥಾನ. ಶಾಸಕಾಂಗದ ಮಟ್ಟಿಗೆ ಇದೂ ಸಾಂವಿಧಾನಿಕ ಹುದ್ದೆಯೇ. ನನ್ನ ಕೆಲಸ ನಾನಷ್ಟೇ ಮಾಡುವುದು ಸಾಧ್ಯ. ನೀವು ನನಗೆ ಡಿಕ್ಟೇಟ್ ಮಾಡಲು ಸಾಧ್ಯವಿಲ್ಲ’ ಎಂದು ಅವರು ಸೂಚ್ಯವಾಗಿ ಹೇಳಿಯಾಗಿದೆ. ಇದು ತಲುಪಬೇಕಾದವರಿಗೆ ತಲುಪಲಿ ಎಂದು ಸಂದರ್ಭ ಇದ್ದಾಗಲೆಲ್ಲಾ ಇಂಗ್ಲಿಷಿನಲ್ಲೂ ಮಾತಾಡುತ್ತಾ, ರಾಜ್ಯಪಾಲರು ಮತ್ತು ಸುಪ್ರೀಂಕೋರ್ಟಿಗೂ ಅವರು ಸಂದೇಶ ರವಾನೆ ಮಾಡಿಯಾಗಿದೆ. ಸ್ಪೀಕರ್ ಸ್ಥಾನದಿಂದ ತಾನೇನು ಮಾಡಬಹುದೆಂಬ ಸಣ್ಣ ಸೂಚನೆಯನ್ನು ಉಮೇಶ್ ಜಾಧವ್ ರಾಜೀನಾಮೆ ಸಂದರ್ಭದಲ್ಲೇ ಅವರು ತೋರಿಸಿದ್ದರು.

ಸಂಜೆ 6 ಗಂಟೆ ಒಳಗೆ ರಾಜೀನಾಮೆ ಕೊಡಬಯಸುವ ಶಾಸಕರು ಸ್ಪೀಕರ್ ಅವರನ್ನು ಕಾಣಿ ಮತ್ತು ಇಂದೇ ರಾಜೀನಾಮೆಗಳನ್ನು ಸ್ಪೀಕರ್ ಇತ್ಯರ್ಥ ಮಾಡಲಿ ಎಂಬ ಸೂಚನೆಯನ್ನು ಸುಪ್ರೀಂಕೋರ್ಟು ನಿನ್ನೆ ಕೊಟ್ಟಿತ್ತು. ತಪ್ಪು ಲೆಕ್ಕಾಚಾರದಿಂದ ಎಚ್‍ಎಎಲ್ ಏರ್ ಪೋರ್ಟಿಗೆ ತಡವಾಗಿ ಬಂದ ತೃಪ್ತರಾಗದ ಶಾಸಕರು, ಸಿಗ್ನಲ್ ಫ್ರೀ ವ್ಯವಸ್ಥೆ ಇದ್ದರೂ 6 ಗಂಟೆ ಒಳಗೆ ವಿಧಾನಸೌಧ ತಲುಪಲಿಲ್ಲ. ಅದರ ರನ್ನಿಂಗ್ ಕಾಮೆಂಟ್ರಿ ನೀಡುತ್ತಿದ್ದ ಟಿವಿ ಆಂಕರ್ ಗಳಲ್ಲಿ ಯಾರಾದರೂ ಒಬ್ಬರು ಉಸಿರುಕಟ್ಟಿ ಸತ್ತು ಹೋಗಬಹುದು ಎನಿಸುವ ರೀತಿಯಲ್ಲಿ ವೀಕ್ಷಕ ವಿವರಣೆ ನೀಡುತ್ತಿದ್ದರು.

ಬೇರೆ ಸ್ಪೀಕರ್ ಆಗಿದ್ದರೆ, 6 ಗಂಟೆ 1 ನಿಮಿಷಕ್ಕೆ ತಮ್ಮ ಕಚೇರಿಯಿಂದ ಹೊರಟು, ಎ.ಜಿ.ಕಚೇರಿ ಗೇಟಿನಿಂದ ವಿಧಾನಸೌಧ ಆವರಣ ಬಿಡಲು ವ್ಯವಸ್ಥೆ ಮಾಡಿಕೊಂಡಿರುತ್ತಿದ್ದರು. ಆಗ ಸುಪ್ರೀಂಕೋರ್ಟಿನ ತೀರ್ಪನ್ನು ಪಾಲನೆ ಮಾಡಿದ ಹಾಗೂ ಆಗಿರುತ್ತಿತ್ತು; ತಮ್ಮ ಪಕ್ಷವನ್ನು ಬಚಾವು ಮಾಡಿದ ಹಾಗೂ ಆಗಿರುತ್ತಿತ್ತು. ಆದರೆ ಸ್ಪೀಕರ್ ನೈತಿಕವಾಗಿ ತಪ್ಪು ಮಾಡಿದ ಕಳಂಕ ಹೊರಬೇಕಾಗುತ್ತಿತ್ತು. ರಮೇಶ್‍ಕುಮಾರ್ ರಿಗೆ ಇರುವ ಆತ್ಮವಿಶ್ವಾಸ ಎಷ್ಟೆಂದರೆ, ತಾನು ಈ ಪ್ರಕರಣವನ್ನು ತಾಂತ್ರಿಕವಾಗಿ ಗೆಲ್ಲಬೇಕಿಲ್ಲ; ಕೊಡಬೇಕಾದ ಪೆಟ್ಟು ಕೊಟ್ಟೇ ಗೆಲ್ಲುತ್ತೇನೆ ಎಂದು. ಹಾಗಾಗಿ ರಾಜೀನಾಮೆ ಪತ್ರವನ್ನು ತೆಗೆದುಕೊಂಡು (ಖಾಲಿ ಹಾಳೆ ಹಿಡಿದು ಬಂದ ಶಾಸಕರಿಗೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಪತ್ರ ಹೇಗಿರಬೇಕು ಎಂದು ಅವರೇ ಹೇಳಿರಲಿಕ್ಕೂ ಸಾಕು), ಹೊರಬಂದು ಪತ್ರಿಕಾಗೋಷ್ಠಿ ನಡೆಸಿದರು. ಸುಪ್ರೀಂಕೋರ್ಟು ತನಗೆ ಇಷ್ಟೇ ಸಮಯದಲ್ಲಿ ನಿರ್ಧಾರ ಹೇಳಿ ಎಂದು ತಾಕೀತು ಮಾಡುವಂತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಹೇಳಿದರು.

ಮರುದಿನ ಸುಪ್ರೀಂಕೋರ್ಟು ತಾನೇ ಸಮಯ ಕೇಳಿಕೊಂಡು ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಿತು! ಇಂತಹ ಸಂದರ್ಭ ಬರಬಹುದೆಂದೇ ಸಿದ್ದರಾಮಯ್ಯ ಮತ್ತು ದೇವೇಗೌಡರಿಬ್ಬರೂ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ರಮೇಶ್‍ಕುಮಾರ್‍ರನ್ನು ಸ್ಪೀಕರ್ ಮಾಡಿದ್ದರು. ಮೊನ್ನೆ ಕಾಂಗ್ರೆಸ್ ಸಂಸದೀಯ ಪಕ್ಷದಿಂದ ಸ್ಪೀಕರ್ ಕಚೇರಿಗೆ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಿಯೋಗವೊಂದು ಹೋಗಿತ್ತು. ಆಗ ಹಳೆಯ ಸ್ನೇಹಿತರಾದ ಸಿದ್ದರಾಮಯ್ಯ ಮತ್ತು ರಮೇಶ್‍ ಕುಮಾರ್ ನಡುವೆ ನಡೆದ ಮಾತುಕತೆ ಹೀಗಿತ್ತು.

ರಮೇಶ್ ಕುಮಾರ್: ‘ಒಟ್ಟಿನಲ್ಲಿ ನಿನಗೆ ಈಗ ಬಹಳ ಖುಷಿಯಲ್ಲವೇನಪ್ಪಾ? You are the happiest person now’,

ಸಿದ್ದರಾಮಯ್ಯ: ‘ನಾನೇಕೆ ಖುಷಿ ಪಡಬೇಕಪ್ಪಾ, ನಮ್ಮ ಕಷ್ಟ ನಮಗೆ ಆಗಿದೆ’.

ರ.ಕು: ‘ನನ್ನನ್ನ ಈ ಕಷ್ಟಕ್ಕೆ ಸಿಕ್ಕಿ ಹಾಕಿಸಿದ್ದಕ್ಕೆ’.

ಸಿ.ರಾ: ‘ಇಂಥದ್ದನ್ನೆಲ್ಲಾ ನಿಭಾಯಿಸಲು ನೀನೇ ಸರಿ. ಆ ಸಾಮಥ್ರ್ಯ, ತಿಳುವಳಿಕೆ ನಿನಗೇ ಇದೆ ಎಂಬ ಕಾರಣಕ್ಕೇ ನಿನ್ನನ್ನು ಸ್ಪೀಕರ್ ಆಗಿ ಮಾಡಿರುವುದು’.

ಇದು ವಾಸ್ತವವೇ. ಹಾಗೆಯೇ ಅದಕ್ಕಿಂತ ಜಾಸ್ತಿ ರಮೇಶ್‍ ಕುಮಾರ್ ರವರಿಗೆ ಅವಕಾಶ ಕೊಡಬಾರದು ಎಂಬುದು ಸಿದ್ದರಾಮಯ್ಯ ಮತ್ತು ದೇವೇಗೌಡರಿಬ್ಬರಿಗೂ ಗೊತ್ತು. ಸಂಸದೀಯ ನಿಯಮಾವಳಿಗಳ ಬಗ್ಗೆ ಅಪಾರ ಜ್ಞಾನವಿರುವ ರಮೇಶ್‍ಕುಮಾರ್, ಈ ಅವಧಿಯಲ್ಲಿ ಎರಡೆರಡು ಸಾರಿ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮ ಕುಮಾರ್ ರಿಂದಲೂ ಸಲಹೆ ಪಡೆದುಕೊಂಡಿದ್ದಾರೆ. ಅವೆಲ್ಲದರ ಪರಿಣಾಮವಾಗಿ ಈ ಪ್ರಕರಣವನ್ನು ವಿಶೇಷ ರೀತಿಯಲ್ಲಿ ನಿಭಾಯಿಸಬೇಕೆಂಬ ನಿರ್ಧಾರಕ್ಕೆ ಅವರು ಬಂದಂತಿದೆ.

ಸಂವಿಧಾನದ 10ನೇ ಶೆಡ್ಯೂಲ್‍ನ ಪ್ರಕಾರ ಶಾಸಕರನ್ನು ಅನರ್ಹಗೊಳಿಸುವ ಪರಮಾಧಿಕಾರ ಸ್ಪೀಕರ್ ಗೆ ಇದೆ. ಅದನ್ನು ನಂತರ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಬಹುದಾದರೂ, ಕೋರ್ಟಿಗೆ ಕೆಲವು ಮಿತಿಗಳಿವೆ. ಈಗಾಗಲೇ ಕಿಹೊಟೊ ಹೊಲ್ಲೊಹಾನ್ ವರ್ಸಸ್ ಜಾಚಿಲ್ಹು (Kihoto Hollohan v/s Zachillhu) ಮೊಕದ್ದಮೆಯಲ್ಲಿ ಸುಪ್ರೀಂಕೋರ್ಟೇ ಅದನ್ನು ಹೇಳಿದೆ. ಹಾಗಾಗಿ ಇದು ಶಾಸಕಾಂಗ ಮತ್ತು ನ್ಯಾಯಾಂಗದ ಅಧಿಕಾರವ್ಯಾಪ್ತಿಯ ಕುರಿತ ತಿಕ್ಕಾಟವಾಗುವ ಸಂಭವವಿದೆ. ಹಾಗಾದಾಗ, ಸಾಂವಿಧಾನಿಕ ಮೌಲ್ಯಗಳು ಏನಿರಬೇಕು ಎಂಬುದನ್ನು ಸಮರ್ಥವಾಗಿ ಅಭಿವ್ಯಕ್ತಿಸಬಲ್ಲ ಸ್ಪೀಕರ್ ಇಲ್ಲಿರುವುದರಿಂದ ಸುಪ್ರೀಂಕೋರ್ಟು ಸಹಾ ಇಕ್ಕಟ್ಟಿಗೆ ಸಿಲುಕುತ್ತದೆ.

ಇವೆಲ್ಲದರ ಕೇಂದ್ರದಲ್ಲಿರುವ ರಮೇಶ್‍ ಕುಮಾರ್ ರವರಿಗೆ ಇವೆಲ್ಲವೂ ಹೆಚ್ಚೆಚ್ಚು ಅವಕಾಶಗಳನ್ನು ಒದಗಿಸುತ್ತಾ ಹೋಗುತ್ತದೆ ಮತ್ತು ಅವರೂ ಅದನ್ನು ಬಯಸುತ್ತಾರೆ. ಇವೆಲ್ಲದರ ಪರಿಣಾಮವಾಗಿ ಪ್ರಜಾತಂತ್ರಕ್ಕೆ ಒಳಿತಾಗುವುದಾದರೆ ಮತ್ತು ಅನೈತಿಕ ಪಕ್ಷಾಂತರವನ್ನು ತಡೆಯುವಲ್ಲಿ ಮೈಲುಗಲ್ಲನ್ನು ನಿರ್ಮಿಸುವುದಾದರೆ ಅದಕ್ಕಿಂದ ಒಳ್ಳೆಯದು ಇನ್ನೊಂದಿಲ್ಲ.

ಇದನ್ನೂ ಓದಿ: ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...