Homeಕರ್ನಾಟಕರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿ ಮಾಹಿತಿ ನೀಡಿದವರಿಗೆ ₹10 ಲಕ್ಷ ಘೋಷಿಸಿದ ಎನ್‌ಐಎ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿ ಮಾಹಿತಿ ನೀಡಿದವರಿಗೆ ₹10 ಲಕ್ಷ ಘೋಷಿಸಿದ ಎನ್‌ಐಎ

- Advertisement -
- Advertisement -

ಮಾರ್ಚ್ 1ರಂದು ಸಂಭವಿಸಿದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಿಂದ ಕನಿಷ್ಠ 10 ಜನರು ಗಾಯಗೊಂಡಿದ್ದು, ಬಾಂಬ್ ಇಟ್ಟ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ನೀಡಿದವರಿಗೆ ₹10 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಘೋಷಿಸಿದೆ. ‘ವಾಂಟೆಡ್’ ಪೋಸ್ಟರ್‌ ಬಿಡುಗಡೆ ಮಾಡಿರುವ ತನಿಖಾ ಸಂಸ್ಥೆಯು ಆರೋಪಿಯ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದು, ಮಾಹಿತಿದಾರರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಹೇಳಿದರು.

ಸ್ಫೋಟ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಕೇಂದ್ರ ಅಪರಾಧ ವಿಭಾಗ ಮತ್ತು ಎನ್‌ಐಎ ಎರಡರಿಂದಲೂ ಆರೋಪಿಗೆ ತೀವ್ರ ಹುಡುಕಾಟ ನಡೆಯುತ್ತಿದೆ. ಕರ್ನಾಟಕ ಸರ್ಕಾರವು ತನಿಖೆಯನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸದ ಕಾರಣ, ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವು ಸೂಚಿಸಿದ ನಂತರ ಎನ್‌ಐಎ ಮಂಗಳವಾರ ತನ್ನ ಕೆಲಸ ಪ್ರಾರಂಭಿಸಿತು.

ನಗರದ ಪೊಲೀಸರು ಪ್ರಮುಖ ಸುಳಿವುಗಳನ್ನು ಕಂಡುಕೊಂಡಿದ್ದಾರೆ ಮತ್ತು ಪ್ರಕರಣವನ್ನು ಭೇದಿಸಲು ಹತ್ತಿರವಾಗಿದ್ದಾರೆ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದಾರೆ. ನಗರಕ್ಕೆ ಆಘಾತ ಮೂಡಿಸಿದ ನಂತರ, ಕೆಫೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಯಿತು. ಮಾರ್ಚ್ 8ರಂದು ಮತ್ತೆ ತೆರೆಯಲಾಗುತ್ತದೆ ಎಂದು ತಿಳಿಸಿರುವ ಜೋಟೆಲ್ ಮಾಲೀಕರು, ಸ್ವಚ್ಛತಾ ಕೆಲಸ ಆರಂಭಿಸಿದ್ದಾರೆ.

ಮಾರ್ಚ್ 1 ರಂದು, ಜನಪ್ರಿಯ ಕೆಫೆಯಲ್ಲಿ ಊಟದ ಸಮಯದಲ್ಲಿ ವಿಪರೀತ ಜನರಿದ್ದಾಗ ಸ್ಫೋಟ ಸಂಭವಿಸಿದೆ. 10 ಮಂದಿ ಗಾಯಗೊಂಡಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶಿಲಿಸಿದಾಗ, ಕೆಫೆಗೆ ಒಂದು ಗಂಟೆ ಮೊದಲು ಬಂದು ಇಡ್ಲಿ ಸೇವಿಸಿದ ವ್ಯಕ್ತಿಯೊಬ್ಬ ಟೈಮರ್ನೊಂದಿಗೆ ಐಇಡಿ ಹೊಂದಿದ್ದ ಬ್ಯಾಗ್ ಅನ್ನು ಬಿಟ್ಟು ಹೋಗಿದ್ದಾನೆ ಎಂದು ಪತ್ತೆ ಹಚ್ಚಲಾಯಿತು.

ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ, ಶಂಕಿತ ಆರೋಪಿಯ  ಫೋಟೋ ಬಿಡುಗಡೆ ಮಾಡಲಾಗಿದೆ. ವೈರಲ್ ಫೋಟೋದಲ್ಲಿರುವ ವ್ಯಕ್ತಿಯನ್ನು ಶಂಕಿತ ಎಂದು ಪರಿಗಣಿಸಲಾಗುತ್ತಿದೆ ಎಂದು ಎನ್‌ಐಎ ಬುಧವಾರ ‘ವಾಂಟೆಡ್’ ನೋಟಿಸ್ ದೃಢಪಡಿಸಿದೆ.

ಶಂಕಿತ ವ್ಯಕ್ತಿ ಎತ್ತರದ ವ್ಯಕ್ತಿಯಾಗಿದ್ದು, ಆತನ ವಯಸ್ಸು 30 ರಿಂದ 40 ವರ್ಷ ಇರಬಹುದು. ಕೆಫೆಯೊಳಗಿನ ಸಿಸಿಟಿವಿಯಿಂದ ಪಡೆದ ಹಿಂದಿನ ಫೋಟೋಗಳಲ್ಲಿ, ಅವರು ಮುಖವಾಡದೊಂದಿಗೆ ಕಾಣಿಸಿಕೊಂಡಿದ್ದಾರೆ. ಆದರೆ ಬುಧವಾರ ಎನ್ಐಎ ಬಿಡುಗಡೆ ಮಾಡಿದ ಫೋಟೋದಲ್ಲಿ ಆತನ ಮುಖವು ಸ್ವಲ್ಪ ಸ್ಪಷ್ಟವಾಗಿ ಕಾಣುತ್ತಿದೆ.

ಇದನ್ನೂ ಓದಿ; ನಿಮ್ಮ ನಿಜ ಮುಖವು ಮಹಿಳಾ ವಿರೋಧಿಯಾಗಿದೆ; ಅದು ಇಡೀ ಭಾರತಕ್ಕೆ ತಿಳಿದಿದೆ: ಮೋದಿ ವಿರುದ್ಧ ಟಿಎಂಸಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...