Homeಮುಖಪುಟಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

- Advertisement -
- Advertisement -

ಪದ್ಮಾವತಿ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ. ಸ್ಯಾಂಡಲ್‍ವುಡ್ ಅಂಗಳಲ್ಲಿ ಒಳ್ಳೆ ನೇಮು ಫೇಮು ಗಿಟ್ಟಿಸಿಕೊಂಡಿದ್ದ ರಮ್ಯಾ, ರಾಜ್ಯಭಾರ ಮಾಡೋ ಮನಸ್ಸಾಗಿ ಚಿತ್ರರಂಗಕ್ಕೆ ಗುಡ್‍ಬೈ ಹೇಳಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಎಂಟ್ರಿಯಲ್ಲೇ ಜಯಭೇರಿ ಬಾರಿಸಿದ ರಮ್ಯಾಗೆ ಆರು ತಿಂಗಳಷ್ಟೇ ರಾಜಕೀಯ ಅಧಿಕಾರ ಅನುಭವಿಸೋ ಚಾನ್ಸ್ ಸಿಕ್ಕಿದ್ದು. ಎರಡನೇ ಇನ್ನಿಂಗ್ಸ್‍ನಲ್ಲಿ ಸೋಲುಂಡ ಮೋಹಕ ತಾರೆ ರಾತ್ರೋರಾತ್ರಿ ಲಂಡನ್‍ಗೆ ಹಾರಿದರು. ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷೆ ಪಟ್ಟ ಗಿಟ್ಟಿಸಿಕೊಂಡು ಕಾಂಟ್ರೋವರ್ಸಿ ಪೋಸ್ಟ್ ಮೂಲಕ ಆಗಾಗ್ಗೆ ಟ್ರೋಲ್ ಆಗುತ್ತಿದ್ದ ರಮ್ಯಾ ‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲರು’ ಎಂಬಂತೆ ಐಟಿ ಸೆಲ್‍ಗೂ ಗುಡ್‍ಬೈ ಹೇಳಿ ನಾಪತ್ತೆಯಾಗಿದ್ದರು. ರಾಜಕೀಯ ಜಂಜಾಟಕ್ಕಿಂತ ಸಿನಿಮಾ ಮಾಡ್ಕೊಂಡ್, ಅಭಿಮಾನಿಗಳಿಗೆ ಆಟೋಗ್ರಾಫ್ ಹಾಕೊಂಡ್ ಇರೋದೆ ವಾಸಿ ಅನ್ನೋದನ್ನ ಅರಿತುಕೊಂಡು ಈಗಲೂ ಸಿನಿಮಾ ಆಫರ್ ಬರ್ತಾಯಿವೆ, ಸಿನಿಮಾ ಮಾಡ್ತಿನಿ ಅಂತ ಹೇಳ್ತಿದ್ದಾರೆ. ಸದ್ಯಕ್ಕೆ ಈಗಾಗಲೇ ಸುಮಾರು ವರ್ಷಗಳ ಹಿಂದೆ ಚಿತ್ರೀಕರಣಗೊಂಡಿದ್ದ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರೋ ‘ದಿಲ್ ಕಾ ರಾಜಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಅಂತೂ ಆಫ್ಟರ್ ಲಾಂಗ್ ಟೈಮ್ ಸಿನಿಮಾ ರಂಗಕ್ಕೆ ರಮ್ಯಾ ಅಭಿನಯದ ಸಿನಿಮಾ ರಿಲೀಸ್ ಆಗ್ತಿದೆ. ಆದರೆ ಮೋದಿ, ಬಿಜೆಪಿಗಳ ವಿರುದ್ಧ ಟೀಕಿಸಿ ಭಾಜಪಾ ಭಜನಾ ಮಂಡಳಿಯ ವಿರೋಧ ಕಟ್ಟಿಕೊಂಡಿರೋ ಕೆಂಪೇಗೌಡ ಕಟ್ಟಿದ್ ಊರಿನ ಪದ್ಮಾವತಿಯನ್ನ ಅಭಿಮಾನಿಗಳು ಅದ್ಯಾವ ರೀತಿ ವೆಲ್‍ಕಮ್ ಮಾಡ್ತಾರೋ ನೋಡಬೇಕು.

ಹಿರಿಯರನ್ನು ಮರೀತಿದ್ಯಾ ಸ್ಯಾಂಡಲ್‍ವುಡ್

ಕನ್ನಡ ಚಿತ್ರರಂಗದಲ್ಲಿ ಒಂದೆಡೆ ನಾಯಕ ನಟರು ಸ್ಟಾರ್‍ಗಳಾದ್ರೆ, ಮತ್ತೊಂದೆಡೆ ಕಾಮಿಡಿ ನಟರೇ ಹೀರೋಗಳಿಗಿಂತ ಸ್ಟಾರ್‍ಗಳಾಗಿ ಮಿಂಚುತ್ತಿದ್ದರು. ಅಭಿಮಾನಿಗಳು ಎಷ್ಟೋ ಸಿನಿಮಾಗಳಲ್ಲಿ ತಮ್ಮ ನೆಚ್ಚಿನ ಕಾಮಿಡಿ ನಟರಿದ್ದಾರೆಂಬ ಕಾರಣಕ್ಕೆ ಸಿನಿಮಾ ನೋಡಲು ಹೋಗುತ್ತಿದ್ದರು. ಈಗಲೂ ಆ ಟ್ರೆಂಡ್ ಹಾಗೇ ಉಳಿದಿದೆ. ಇಂತಹ ಟ್ರೆಂಡ್ ಕ್ರಿಯೇಟ್ ಮಾಡಿದವರಲ್ಲಿ ಹಾಸ್ಯ ನಟ ದೊಡ್ಡಣ್ಣ, ಹೊನ್ನವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ ಮೊದಲಿಗರು. ಸ್ಯಾಂಡಲ್‍ವುಡ್ ಸಿನಿಮಾಗಳಲ್ಲಿ ಹಾಸ್ಯದ ಔತಣ ನೀಡಿದ್ದ ಇಂತಹ ಪ್ರತಿಭೆಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದು ಹೋಗಿವೆ. ಹಾಗೊಮ್ಮೆ ಹೀಗೊಮ್ಮೆ ಕಾಣಸಿಗುವ ನಟನೆಂದರೆ ಅದು ದೊಡ್ಡಣ್ಣ ಮಾತ್ರ. ಉಳಿದವರು ಇದ್ದಾರೆ ಎಂಬುದಕ್ಕೆ ಕುರುಹೂ ಇಲ್ಲದಷ್ಟು ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅಂದಹಾಗೆ ‘ರಾಜಲಕ್ಷ್ಮೀ’ ಟೈಟಲ್‍ನ ಸಿನಿಮಾದಲ್ಲಿ ನಟಿಸುತ್ತಿರುವ ಟೆನ್ನಿಸ್ ಕೃಷ್ಣರದ್ದೂ ಇದೇ ಮಾತು. ಕನ್ನಡ ಇಂಡಸ್ಟ್ರಿಯಲ್ಲಿ ಹಳಬರಿಗೆ ಅವಕಾಶವಿಲ್ಲ. ವಯಸ್ಸಾಗ್ತಿದ್ದಂತೆ ಮೂಲೆಗೆ ತಳ್ಳಿಬಿಡುತ್ತಾರೆ. ಅಭಿಮಾನಿಗಳೇ ನೀವು ಸಿನಿಮಾದಲ್ಲಿ ಕಾಣಸಿಗುತ್ತಿಲ್ಲವಲ್ಲಾ, ಯಾಕೆ ಎಂದು ಕೇಳುತ್ತಾರೆ. ಆದರೆ ಸಿನಿಮಾ ಮಾಡೋರಿಗೆ ಹಿರಿಯರ ಅವಶ್ಯಕತೆ ಇಲ್ಲದಂತಾಗಿದೆ ಅಂತಾರೆ ಟೆನ್ನಿಸ್.

ಲತಾ ಮಂಗೇಶ್ಕರ್ ಆರೋಗ್ಯಸ್ಥಿತಿ ಗಂಭೀರ

ಗಾಯನ ಕ್ಷೇತ್ರದಲ್ಲಿ ಖ್ಯಾತಿ ಪಡೆದು ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಗಾಯಕಿ ಲತಾ ಮಂಗೇಶ್ಕರ್.
90 ವಸಂತಗಳನ್ನು ದಾಟಿರುವ ಲತಾ ಮಂಗೇಶ್ಕರ್ ಉಸಿರಾಟದ ಸಮಸ್ಯೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಬೆಳಗಿನ ಜಾವ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ರೂಲರ್ ಈಸ್ ದ ಮಾಡೆಲ್

ಈಗಿನ ಜನರೇಷನ್ ಹೈಕ್ಳಿಗೆ ಸಿನಿಮಾ ಸ್ಟಾರ್‍ಗಳೇ ಯೂತ್ ಐಕಾನ್‍ಗಳು. ಯಾವುದೇ ಹುಡಗನ್ನ ಕೇಳಿದ್ರು ಅವರು ಯಾವುದಾದ್ರು ಒಬ್ಬ ನಟನ ಹೆಸರೇಳಿ ಅವನೇ ನಮ್ಮ ರೋಲ್ ಮಾಡಲ್ ಅಂತ ಹೇಳ್ತಾರೆ. ಹಂಗೇನೇ ಸಿನಿಮಾ ಸ್ಟಾರ್‍ಗಳಿಗೂ ಯಾರಾದ್ರು ಒಬ್ರು ರೋಲ್ ಮಾಡಲ್‍ಗಳು ಇದ್ದೇಯಿರ್ತಾರೆ. ಸದ್ಯಕ್ಕೆ ಮ್ಯಾಟ್ರು ಏನಪ್ಪಾ ಅಂದ್ರೆ. ತನ್ನ ಪ್ರತಿ ಸಿನಿಮಾದಲ್ಲೂ ಒಬ್ಬೊಬ್ಬರ ಹೆಸರೇಳ್ಕಂಡು ಬೆಳೆದು ಬಂದ ರಾಕಿಂಗ್ ಸ್ಟಾರ್ ಯಶ್‍ನ ರೋಲ್ ಮಾಡೆಲ್ ಯಾರು ಅನ್ನೋದು. ರಾಮಾಚಾರಿ ಸಿನಿಮಾದಲ್ಲಿ ವಿಷ್ಣು ಟ್ಯಾಟೂ ಹಾಕಂಡ್ ವಿಷ್ಣು ಅಭಿಮಾನಿಗಳನ್ನೂ, ಗಜಕೇಸರಿಯಲ್ಲಿ ರಾಜ್‍ಕುಮಾರ್ ಅಭಿಮಾನಿಗಳನ್ನೂ, ಡ್ರಾಮಾ ಸಿನಿಮಾದಲ್ಲಿ ಅಂಬಿ ಜೊತೆ ಆ್ಯಕ್ಟ್ ಮಾಡಿದ ನಂತರ ಅಂಬಿ ಅಣ್ಣ ಅಂತ ಅಂಬಿಯ ಅಭಿಮಾನಿಗಳನ್ನು ತನ್ನತ್ತ ಸೆಳೆದುಕೊಂಡ ಯಶ್ ಅಂಬಿ ಇರುವವರೆಗೂ ಅಂಬಿಯೇ ತನ್ನ ರೋಲ್ ಮಾಡೆಲ್ ಎಂಬಂತೆ ಹೇಳಿಕೊಳ್ಳುತ್ತಿದ್ದರು. ಇವಾಗ ಇದ್ದಕ್ಕಿದ್ದಂಗೆ ರೋಲ್ ಮಾಡಲ್ ಚೇಂಜ್ ಮಾಡ್ಕಂಡಿರೋ ಯಶ್, ನಿಮ್ಮ ಸ್ಫೂರ್ತಿ ಯಾರು ಅಂದ್ರೆ ಮೋದಿ ಅಂದ್ಬುಟ್ಟಿದ್ದಾರೆ. ಅಂದಹಾಗೆ 2014ರಲ್ಲಿ ಮೋದಿ ಅಧಿಕಾರಕ್ಕೆ ಬರೋಕಿಂತ ಮುಂಚೆ ಮೋದಿ ಗೊತ್ತಿತ್ತೋ ಇಲ್ವೋ ಗೊತ್ತಿಲ್ಲ. ಆದ್ರೆ ಸದ್ಯಕ್ಕೆ ಎಲ್ಲರನ್ನೂ ಸೆಳೀತಿರೋ ಮೋದಿನೇ ನನ್ನ ರೋಲ್ ಮಾಡ್ಲು ಅಂತ ಯಶ್ ಹೊಗುಳ್ತಾಯಿರೋದು ನೋಡಿದ್ರೆ ಅಂಬಿ ಮೇಲಿನ ಅಭಿಮಾನ ಕಡ್ಮೆ ಆಗೋಯ್ತಾ ಅನ್ನುಸ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...