Homeಮುಖಪುಟಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

- Advertisement -
- Advertisement -

ಪದ್ಮಾವತಿ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ. ಸ್ಯಾಂಡಲ್‍ವುಡ್ ಅಂಗಳಲ್ಲಿ ಒಳ್ಳೆ ನೇಮು ಫೇಮು ಗಿಟ್ಟಿಸಿಕೊಂಡಿದ್ದ ರಮ್ಯಾ, ರಾಜ್ಯಭಾರ ಮಾಡೋ ಮನಸ್ಸಾಗಿ ಚಿತ್ರರಂಗಕ್ಕೆ ಗುಡ್‍ಬೈ ಹೇಳಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಎಂಟ್ರಿಯಲ್ಲೇ ಜಯಭೇರಿ ಬಾರಿಸಿದ ರಮ್ಯಾಗೆ ಆರು ತಿಂಗಳಷ್ಟೇ ರಾಜಕೀಯ ಅಧಿಕಾರ ಅನುಭವಿಸೋ ಚಾನ್ಸ್ ಸಿಕ್ಕಿದ್ದು. ಎರಡನೇ ಇನ್ನಿಂಗ್ಸ್‍ನಲ್ಲಿ ಸೋಲುಂಡ ಮೋಹಕ ತಾರೆ ರಾತ್ರೋರಾತ್ರಿ ಲಂಡನ್‍ಗೆ ಹಾರಿದರು. ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷೆ ಪಟ್ಟ ಗಿಟ್ಟಿಸಿಕೊಂಡು ಕಾಂಟ್ರೋವರ್ಸಿ ಪೋಸ್ಟ್ ಮೂಲಕ ಆಗಾಗ್ಗೆ ಟ್ರೋಲ್ ಆಗುತ್ತಿದ್ದ ರಮ್ಯಾ ‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲರು’ ಎಂಬಂತೆ ಐಟಿ ಸೆಲ್‍ಗೂ ಗುಡ್‍ಬೈ ಹೇಳಿ ನಾಪತ್ತೆಯಾಗಿದ್ದರು. ರಾಜಕೀಯ ಜಂಜಾಟಕ್ಕಿಂತ ಸಿನಿಮಾ ಮಾಡ್ಕೊಂಡ್, ಅಭಿಮಾನಿಗಳಿಗೆ ಆಟೋಗ್ರಾಫ್ ಹಾಕೊಂಡ್ ಇರೋದೆ ವಾಸಿ ಅನ್ನೋದನ್ನ ಅರಿತುಕೊಂಡು ಈಗಲೂ ಸಿನಿಮಾ ಆಫರ್ ಬರ್ತಾಯಿವೆ, ಸಿನಿಮಾ ಮಾಡ್ತಿನಿ ಅಂತ ಹೇಳ್ತಿದ್ದಾರೆ. ಸದ್ಯಕ್ಕೆ ಈಗಾಗಲೇ ಸುಮಾರು ವರ್ಷಗಳ ಹಿಂದೆ ಚಿತ್ರೀಕರಣಗೊಂಡಿದ್ದ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರೋ ‘ದಿಲ್ ಕಾ ರಾಜಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಅಂತೂ ಆಫ್ಟರ್ ಲಾಂಗ್ ಟೈಮ್ ಸಿನಿಮಾ ರಂಗಕ್ಕೆ ರಮ್ಯಾ ಅಭಿನಯದ ಸಿನಿಮಾ ರಿಲೀಸ್ ಆಗ್ತಿದೆ. ಆದರೆ ಮೋದಿ, ಬಿಜೆಪಿಗಳ ವಿರುದ್ಧ ಟೀಕಿಸಿ ಭಾಜಪಾ ಭಜನಾ ಮಂಡಳಿಯ ವಿರೋಧ ಕಟ್ಟಿಕೊಂಡಿರೋ ಕೆಂಪೇಗೌಡ ಕಟ್ಟಿದ್ ಊರಿನ ಪದ್ಮಾವತಿಯನ್ನ ಅಭಿಮಾನಿಗಳು ಅದ್ಯಾವ ರೀತಿ ವೆಲ್‍ಕಮ್ ಮಾಡ್ತಾರೋ ನೋಡಬೇಕು.

ಹಿರಿಯರನ್ನು ಮರೀತಿದ್ಯಾ ಸ್ಯಾಂಡಲ್‍ವುಡ್

ಕನ್ನಡ ಚಿತ್ರರಂಗದಲ್ಲಿ ಒಂದೆಡೆ ನಾಯಕ ನಟರು ಸ್ಟಾರ್‍ಗಳಾದ್ರೆ, ಮತ್ತೊಂದೆಡೆ ಕಾಮಿಡಿ ನಟರೇ ಹೀರೋಗಳಿಗಿಂತ ಸ್ಟಾರ್‍ಗಳಾಗಿ ಮಿಂಚುತ್ತಿದ್ದರು. ಅಭಿಮಾನಿಗಳು ಎಷ್ಟೋ ಸಿನಿಮಾಗಳಲ್ಲಿ ತಮ್ಮ ನೆಚ್ಚಿನ ಕಾಮಿಡಿ ನಟರಿದ್ದಾರೆಂಬ ಕಾರಣಕ್ಕೆ ಸಿನಿಮಾ ನೋಡಲು ಹೋಗುತ್ತಿದ್ದರು. ಈಗಲೂ ಆ ಟ್ರೆಂಡ್ ಹಾಗೇ ಉಳಿದಿದೆ. ಇಂತಹ ಟ್ರೆಂಡ್ ಕ್ರಿಯೇಟ್ ಮಾಡಿದವರಲ್ಲಿ ಹಾಸ್ಯ ನಟ ದೊಡ್ಡಣ್ಣ, ಹೊನ್ನವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ ಮೊದಲಿಗರು. ಸ್ಯಾಂಡಲ್‍ವುಡ್ ಸಿನಿಮಾಗಳಲ್ಲಿ ಹಾಸ್ಯದ ಔತಣ ನೀಡಿದ್ದ ಇಂತಹ ಪ್ರತಿಭೆಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದು ಹೋಗಿವೆ. ಹಾಗೊಮ್ಮೆ ಹೀಗೊಮ್ಮೆ ಕಾಣಸಿಗುವ ನಟನೆಂದರೆ ಅದು ದೊಡ್ಡಣ್ಣ ಮಾತ್ರ. ಉಳಿದವರು ಇದ್ದಾರೆ ಎಂಬುದಕ್ಕೆ ಕುರುಹೂ ಇಲ್ಲದಷ್ಟು ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅಂದಹಾಗೆ ‘ರಾಜಲಕ್ಷ್ಮೀ’ ಟೈಟಲ್‍ನ ಸಿನಿಮಾದಲ್ಲಿ ನಟಿಸುತ್ತಿರುವ ಟೆನ್ನಿಸ್ ಕೃಷ್ಣರದ್ದೂ ಇದೇ ಮಾತು. ಕನ್ನಡ ಇಂಡಸ್ಟ್ರಿಯಲ್ಲಿ ಹಳಬರಿಗೆ ಅವಕಾಶವಿಲ್ಲ. ವಯಸ್ಸಾಗ್ತಿದ್ದಂತೆ ಮೂಲೆಗೆ ತಳ್ಳಿಬಿಡುತ್ತಾರೆ. ಅಭಿಮಾನಿಗಳೇ ನೀವು ಸಿನಿಮಾದಲ್ಲಿ ಕಾಣಸಿಗುತ್ತಿಲ್ಲವಲ್ಲಾ, ಯಾಕೆ ಎಂದು ಕೇಳುತ್ತಾರೆ. ಆದರೆ ಸಿನಿಮಾ ಮಾಡೋರಿಗೆ ಹಿರಿಯರ ಅವಶ್ಯಕತೆ ಇಲ್ಲದಂತಾಗಿದೆ ಅಂತಾರೆ ಟೆನ್ನಿಸ್.

ಲತಾ ಮಂಗೇಶ್ಕರ್ ಆರೋಗ್ಯಸ್ಥಿತಿ ಗಂಭೀರ

ಗಾಯನ ಕ್ಷೇತ್ರದಲ್ಲಿ ಖ್ಯಾತಿ ಪಡೆದು ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಗಾಯಕಿ ಲತಾ ಮಂಗೇಶ್ಕರ್.
90 ವಸಂತಗಳನ್ನು ದಾಟಿರುವ ಲತಾ ಮಂಗೇಶ್ಕರ್ ಉಸಿರಾಟದ ಸಮಸ್ಯೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಬೆಳಗಿನ ಜಾವ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ರೂಲರ್ ಈಸ್ ದ ಮಾಡೆಲ್

ಈಗಿನ ಜನರೇಷನ್ ಹೈಕ್ಳಿಗೆ ಸಿನಿಮಾ ಸ್ಟಾರ್‍ಗಳೇ ಯೂತ್ ಐಕಾನ್‍ಗಳು. ಯಾವುದೇ ಹುಡಗನ್ನ ಕೇಳಿದ್ರು ಅವರು ಯಾವುದಾದ್ರು ಒಬ್ಬ ನಟನ ಹೆಸರೇಳಿ ಅವನೇ ನಮ್ಮ ರೋಲ್ ಮಾಡಲ್ ಅಂತ ಹೇಳ್ತಾರೆ. ಹಂಗೇನೇ ಸಿನಿಮಾ ಸ್ಟಾರ್‍ಗಳಿಗೂ ಯಾರಾದ್ರು ಒಬ್ರು ರೋಲ್ ಮಾಡಲ್‍ಗಳು ಇದ್ದೇಯಿರ್ತಾರೆ. ಸದ್ಯಕ್ಕೆ ಮ್ಯಾಟ್ರು ಏನಪ್ಪಾ ಅಂದ್ರೆ. ತನ್ನ ಪ್ರತಿ ಸಿನಿಮಾದಲ್ಲೂ ಒಬ್ಬೊಬ್ಬರ ಹೆಸರೇಳ್ಕಂಡು ಬೆಳೆದು ಬಂದ ರಾಕಿಂಗ್ ಸ್ಟಾರ್ ಯಶ್‍ನ ರೋಲ್ ಮಾಡೆಲ್ ಯಾರು ಅನ್ನೋದು. ರಾಮಾಚಾರಿ ಸಿನಿಮಾದಲ್ಲಿ ವಿಷ್ಣು ಟ್ಯಾಟೂ ಹಾಕಂಡ್ ವಿಷ್ಣು ಅಭಿಮಾನಿಗಳನ್ನೂ, ಗಜಕೇಸರಿಯಲ್ಲಿ ರಾಜ್‍ಕುಮಾರ್ ಅಭಿಮಾನಿಗಳನ್ನೂ, ಡ್ರಾಮಾ ಸಿನಿಮಾದಲ್ಲಿ ಅಂಬಿ ಜೊತೆ ಆ್ಯಕ್ಟ್ ಮಾಡಿದ ನಂತರ ಅಂಬಿ ಅಣ್ಣ ಅಂತ ಅಂಬಿಯ ಅಭಿಮಾನಿಗಳನ್ನು ತನ್ನತ್ತ ಸೆಳೆದುಕೊಂಡ ಯಶ್ ಅಂಬಿ ಇರುವವರೆಗೂ ಅಂಬಿಯೇ ತನ್ನ ರೋಲ್ ಮಾಡೆಲ್ ಎಂಬಂತೆ ಹೇಳಿಕೊಳ್ಳುತ್ತಿದ್ದರು. ಇವಾಗ ಇದ್ದಕ್ಕಿದ್ದಂಗೆ ರೋಲ್ ಮಾಡಲ್ ಚೇಂಜ್ ಮಾಡ್ಕಂಡಿರೋ ಯಶ್, ನಿಮ್ಮ ಸ್ಫೂರ್ತಿ ಯಾರು ಅಂದ್ರೆ ಮೋದಿ ಅಂದ್ಬುಟ್ಟಿದ್ದಾರೆ. ಅಂದಹಾಗೆ 2014ರಲ್ಲಿ ಮೋದಿ ಅಧಿಕಾರಕ್ಕೆ ಬರೋಕಿಂತ ಮುಂಚೆ ಮೋದಿ ಗೊತ್ತಿತ್ತೋ ಇಲ್ವೋ ಗೊತ್ತಿಲ್ಲ. ಆದ್ರೆ ಸದ್ಯಕ್ಕೆ ಎಲ್ಲರನ್ನೂ ಸೆಳೀತಿರೋ ಮೋದಿನೇ ನನ್ನ ರೋಲ್ ಮಾಡ್ಲು ಅಂತ ಯಶ್ ಹೊಗುಳ್ತಾಯಿರೋದು ನೋಡಿದ್ರೆ ಅಂಬಿ ಮೇಲಿನ ಅಭಿಮಾನ ಕಡ್ಮೆ ಆಗೋಯ್ತಾ ಅನ್ನುಸ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....