Homeಮುಖಪುಟಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

- Advertisement -
- Advertisement -

ಪದ್ಮಾವತಿ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ. ಸ್ಯಾಂಡಲ್‍ವುಡ್ ಅಂಗಳಲ್ಲಿ ಒಳ್ಳೆ ನೇಮು ಫೇಮು ಗಿಟ್ಟಿಸಿಕೊಂಡಿದ್ದ ರಮ್ಯಾ, ರಾಜ್ಯಭಾರ ಮಾಡೋ ಮನಸ್ಸಾಗಿ ಚಿತ್ರರಂಗಕ್ಕೆ ಗುಡ್‍ಬೈ ಹೇಳಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಎಂಟ್ರಿಯಲ್ಲೇ ಜಯಭೇರಿ ಬಾರಿಸಿದ ರಮ್ಯಾಗೆ ಆರು ತಿಂಗಳಷ್ಟೇ ರಾಜಕೀಯ ಅಧಿಕಾರ ಅನುಭವಿಸೋ ಚಾನ್ಸ್ ಸಿಕ್ಕಿದ್ದು. ಎರಡನೇ ಇನ್ನಿಂಗ್ಸ್‍ನಲ್ಲಿ ಸೋಲುಂಡ ಮೋಹಕ ತಾರೆ ರಾತ್ರೋರಾತ್ರಿ ಲಂಡನ್‍ಗೆ ಹಾರಿದರು. ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷೆ ಪಟ್ಟ ಗಿಟ್ಟಿಸಿಕೊಂಡು ಕಾಂಟ್ರೋವರ್ಸಿ ಪೋಸ್ಟ್ ಮೂಲಕ ಆಗಾಗ್ಗೆ ಟ್ರೋಲ್ ಆಗುತ್ತಿದ್ದ ರಮ್ಯಾ ‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲರು’ ಎಂಬಂತೆ ಐಟಿ ಸೆಲ್‍ಗೂ ಗುಡ್‍ಬೈ ಹೇಳಿ ನಾಪತ್ತೆಯಾಗಿದ್ದರು. ರಾಜಕೀಯ ಜಂಜಾಟಕ್ಕಿಂತ ಸಿನಿಮಾ ಮಾಡ್ಕೊಂಡ್, ಅಭಿಮಾನಿಗಳಿಗೆ ಆಟೋಗ್ರಾಫ್ ಹಾಕೊಂಡ್ ಇರೋದೆ ವಾಸಿ ಅನ್ನೋದನ್ನ ಅರಿತುಕೊಂಡು ಈಗಲೂ ಸಿನಿಮಾ ಆಫರ್ ಬರ್ತಾಯಿವೆ, ಸಿನಿಮಾ ಮಾಡ್ತಿನಿ ಅಂತ ಹೇಳ್ತಿದ್ದಾರೆ. ಸದ್ಯಕ್ಕೆ ಈಗಾಗಲೇ ಸುಮಾರು ವರ್ಷಗಳ ಹಿಂದೆ ಚಿತ್ರೀಕರಣಗೊಂಡಿದ್ದ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರೋ ‘ದಿಲ್ ಕಾ ರಾಜಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಅಂತೂ ಆಫ್ಟರ್ ಲಾಂಗ್ ಟೈಮ್ ಸಿನಿಮಾ ರಂಗಕ್ಕೆ ರಮ್ಯಾ ಅಭಿನಯದ ಸಿನಿಮಾ ರಿಲೀಸ್ ಆಗ್ತಿದೆ. ಆದರೆ ಮೋದಿ, ಬಿಜೆಪಿಗಳ ವಿರುದ್ಧ ಟೀಕಿಸಿ ಭಾಜಪಾ ಭಜನಾ ಮಂಡಳಿಯ ವಿರೋಧ ಕಟ್ಟಿಕೊಂಡಿರೋ ಕೆಂಪೇಗೌಡ ಕಟ್ಟಿದ್ ಊರಿನ ಪದ್ಮಾವತಿಯನ್ನ ಅಭಿಮಾನಿಗಳು ಅದ್ಯಾವ ರೀತಿ ವೆಲ್‍ಕಮ್ ಮಾಡ್ತಾರೋ ನೋಡಬೇಕು.

ಹಿರಿಯರನ್ನು ಮರೀತಿದ್ಯಾ ಸ್ಯಾಂಡಲ್‍ವುಡ್

ಕನ್ನಡ ಚಿತ್ರರಂಗದಲ್ಲಿ ಒಂದೆಡೆ ನಾಯಕ ನಟರು ಸ್ಟಾರ್‍ಗಳಾದ್ರೆ, ಮತ್ತೊಂದೆಡೆ ಕಾಮಿಡಿ ನಟರೇ ಹೀರೋಗಳಿಗಿಂತ ಸ್ಟಾರ್‍ಗಳಾಗಿ ಮಿಂಚುತ್ತಿದ್ದರು. ಅಭಿಮಾನಿಗಳು ಎಷ್ಟೋ ಸಿನಿಮಾಗಳಲ್ಲಿ ತಮ್ಮ ನೆಚ್ಚಿನ ಕಾಮಿಡಿ ನಟರಿದ್ದಾರೆಂಬ ಕಾರಣಕ್ಕೆ ಸಿನಿಮಾ ನೋಡಲು ಹೋಗುತ್ತಿದ್ದರು. ಈಗಲೂ ಆ ಟ್ರೆಂಡ್ ಹಾಗೇ ಉಳಿದಿದೆ. ಇಂತಹ ಟ್ರೆಂಡ್ ಕ್ರಿಯೇಟ್ ಮಾಡಿದವರಲ್ಲಿ ಹಾಸ್ಯ ನಟ ದೊಡ್ಡಣ್ಣ, ಹೊನ್ನವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ ಮೊದಲಿಗರು. ಸ್ಯಾಂಡಲ್‍ವುಡ್ ಸಿನಿಮಾಗಳಲ್ಲಿ ಹಾಸ್ಯದ ಔತಣ ನೀಡಿದ್ದ ಇಂತಹ ಪ್ರತಿಭೆಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದು ಹೋಗಿವೆ. ಹಾಗೊಮ್ಮೆ ಹೀಗೊಮ್ಮೆ ಕಾಣಸಿಗುವ ನಟನೆಂದರೆ ಅದು ದೊಡ್ಡಣ್ಣ ಮಾತ್ರ. ಉಳಿದವರು ಇದ್ದಾರೆ ಎಂಬುದಕ್ಕೆ ಕುರುಹೂ ಇಲ್ಲದಷ್ಟು ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅಂದಹಾಗೆ ‘ರಾಜಲಕ್ಷ್ಮೀ’ ಟೈಟಲ್‍ನ ಸಿನಿಮಾದಲ್ಲಿ ನಟಿಸುತ್ತಿರುವ ಟೆನ್ನಿಸ್ ಕೃಷ್ಣರದ್ದೂ ಇದೇ ಮಾತು. ಕನ್ನಡ ಇಂಡಸ್ಟ್ರಿಯಲ್ಲಿ ಹಳಬರಿಗೆ ಅವಕಾಶವಿಲ್ಲ. ವಯಸ್ಸಾಗ್ತಿದ್ದಂತೆ ಮೂಲೆಗೆ ತಳ್ಳಿಬಿಡುತ್ತಾರೆ. ಅಭಿಮಾನಿಗಳೇ ನೀವು ಸಿನಿಮಾದಲ್ಲಿ ಕಾಣಸಿಗುತ್ತಿಲ್ಲವಲ್ಲಾ, ಯಾಕೆ ಎಂದು ಕೇಳುತ್ತಾರೆ. ಆದರೆ ಸಿನಿಮಾ ಮಾಡೋರಿಗೆ ಹಿರಿಯರ ಅವಶ್ಯಕತೆ ಇಲ್ಲದಂತಾಗಿದೆ ಅಂತಾರೆ ಟೆನ್ನಿಸ್.

ಲತಾ ಮಂಗೇಶ್ಕರ್ ಆರೋಗ್ಯಸ್ಥಿತಿ ಗಂಭೀರ

ಗಾಯನ ಕ್ಷೇತ್ರದಲ್ಲಿ ಖ್ಯಾತಿ ಪಡೆದು ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಗಾಯಕಿ ಲತಾ ಮಂಗೇಶ್ಕರ್.
90 ವಸಂತಗಳನ್ನು ದಾಟಿರುವ ಲತಾ ಮಂಗೇಶ್ಕರ್ ಉಸಿರಾಟದ ಸಮಸ್ಯೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಬೆಳಗಿನ ಜಾವ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ರೂಲರ್ ಈಸ್ ದ ಮಾಡೆಲ್

ಈಗಿನ ಜನರೇಷನ್ ಹೈಕ್ಳಿಗೆ ಸಿನಿಮಾ ಸ್ಟಾರ್‍ಗಳೇ ಯೂತ್ ಐಕಾನ್‍ಗಳು. ಯಾವುದೇ ಹುಡಗನ್ನ ಕೇಳಿದ್ರು ಅವರು ಯಾವುದಾದ್ರು ಒಬ್ಬ ನಟನ ಹೆಸರೇಳಿ ಅವನೇ ನಮ್ಮ ರೋಲ್ ಮಾಡಲ್ ಅಂತ ಹೇಳ್ತಾರೆ. ಹಂಗೇನೇ ಸಿನಿಮಾ ಸ್ಟಾರ್‍ಗಳಿಗೂ ಯಾರಾದ್ರು ಒಬ್ರು ರೋಲ್ ಮಾಡಲ್‍ಗಳು ಇದ್ದೇಯಿರ್ತಾರೆ. ಸದ್ಯಕ್ಕೆ ಮ್ಯಾಟ್ರು ಏನಪ್ಪಾ ಅಂದ್ರೆ. ತನ್ನ ಪ್ರತಿ ಸಿನಿಮಾದಲ್ಲೂ ಒಬ್ಬೊಬ್ಬರ ಹೆಸರೇಳ್ಕಂಡು ಬೆಳೆದು ಬಂದ ರಾಕಿಂಗ್ ಸ್ಟಾರ್ ಯಶ್‍ನ ರೋಲ್ ಮಾಡೆಲ್ ಯಾರು ಅನ್ನೋದು. ರಾಮಾಚಾರಿ ಸಿನಿಮಾದಲ್ಲಿ ವಿಷ್ಣು ಟ್ಯಾಟೂ ಹಾಕಂಡ್ ವಿಷ್ಣು ಅಭಿಮಾನಿಗಳನ್ನೂ, ಗಜಕೇಸರಿಯಲ್ಲಿ ರಾಜ್‍ಕುಮಾರ್ ಅಭಿಮಾನಿಗಳನ್ನೂ, ಡ್ರಾಮಾ ಸಿನಿಮಾದಲ್ಲಿ ಅಂಬಿ ಜೊತೆ ಆ್ಯಕ್ಟ್ ಮಾಡಿದ ನಂತರ ಅಂಬಿ ಅಣ್ಣ ಅಂತ ಅಂಬಿಯ ಅಭಿಮಾನಿಗಳನ್ನು ತನ್ನತ್ತ ಸೆಳೆದುಕೊಂಡ ಯಶ್ ಅಂಬಿ ಇರುವವರೆಗೂ ಅಂಬಿಯೇ ತನ್ನ ರೋಲ್ ಮಾಡೆಲ್ ಎಂಬಂತೆ ಹೇಳಿಕೊಳ್ಳುತ್ತಿದ್ದರು. ಇವಾಗ ಇದ್ದಕ್ಕಿದ್ದಂಗೆ ರೋಲ್ ಮಾಡಲ್ ಚೇಂಜ್ ಮಾಡ್ಕಂಡಿರೋ ಯಶ್, ನಿಮ್ಮ ಸ್ಫೂರ್ತಿ ಯಾರು ಅಂದ್ರೆ ಮೋದಿ ಅಂದ್ಬುಟ್ಟಿದ್ದಾರೆ. ಅಂದಹಾಗೆ 2014ರಲ್ಲಿ ಮೋದಿ ಅಧಿಕಾರಕ್ಕೆ ಬರೋಕಿಂತ ಮುಂಚೆ ಮೋದಿ ಗೊತ್ತಿತ್ತೋ ಇಲ್ವೋ ಗೊತ್ತಿಲ್ಲ. ಆದ್ರೆ ಸದ್ಯಕ್ಕೆ ಎಲ್ಲರನ್ನೂ ಸೆಳೀತಿರೋ ಮೋದಿನೇ ನನ್ನ ರೋಲ್ ಮಾಡ್ಲು ಅಂತ ಯಶ್ ಹೊಗುಳ್ತಾಯಿರೋದು ನೋಡಿದ್ರೆ ಅಂಬಿ ಮೇಲಿನ ಅಭಿಮಾನ ಕಡ್ಮೆ ಆಗೋಯ್ತಾ ಅನ್ನುಸ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...