Homeಮುಖಪುಟಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

- Advertisement -
- Advertisement -

ಪದ್ಮಾವತಿ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ. ಸ್ಯಾಂಡಲ್‍ವುಡ್ ಅಂಗಳಲ್ಲಿ ಒಳ್ಳೆ ನೇಮು ಫೇಮು ಗಿಟ್ಟಿಸಿಕೊಂಡಿದ್ದ ರಮ್ಯಾ, ರಾಜ್ಯಭಾರ ಮಾಡೋ ಮನಸ್ಸಾಗಿ ಚಿತ್ರರಂಗಕ್ಕೆ ಗುಡ್‍ಬೈ ಹೇಳಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಎಂಟ್ರಿಯಲ್ಲೇ ಜಯಭೇರಿ ಬಾರಿಸಿದ ರಮ್ಯಾಗೆ ಆರು ತಿಂಗಳಷ್ಟೇ ರಾಜಕೀಯ ಅಧಿಕಾರ ಅನುಭವಿಸೋ ಚಾನ್ಸ್ ಸಿಕ್ಕಿದ್ದು. ಎರಡನೇ ಇನ್ನಿಂಗ್ಸ್‍ನಲ್ಲಿ ಸೋಲುಂಡ ಮೋಹಕ ತಾರೆ ರಾತ್ರೋರಾತ್ರಿ ಲಂಡನ್‍ಗೆ ಹಾರಿದರು. ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷೆ ಪಟ್ಟ ಗಿಟ್ಟಿಸಿಕೊಂಡು ಕಾಂಟ್ರೋವರ್ಸಿ ಪೋಸ್ಟ್ ಮೂಲಕ ಆಗಾಗ್ಗೆ ಟ್ರೋಲ್ ಆಗುತ್ತಿದ್ದ ರಮ್ಯಾ ‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲರು’ ಎಂಬಂತೆ ಐಟಿ ಸೆಲ್‍ಗೂ ಗುಡ್‍ಬೈ ಹೇಳಿ ನಾಪತ್ತೆಯಾಗಿದ್ದರು. ರಾಜಕೀಯ ಜಂಜಾಟಕ್ಕಿಂತ ಸಿನಿಮಾ ಮಾಡ್ಕೊಂಡ್, ಅಭಿಮಾನಿಗಳಿಗೆ ಆಟೋಗ್ರಾಫ್ ಹಾಕೊಂಡ್ ಇರೋದೆ ವಾಸಿ ಅನ್ನೋದನ್ನ ಅರಿತುಕೊಂಡು ಈಗಲೂ ಸಿನಿಮಾ ಆಫರ್ ಬರ್ತಾಯಿವೆ, ಸಿನಿಮಾ ಮಾಡ್ತಿನಿ ಅಂತ ಹೇಳ್ತಿದ್ದಾರೆ. ಸದ್ಯಕ್ಕೆ ಈಗಾಗಲೇ ಸುಮಾರು ವರ್ಷಗಳ ಹಿಂದೆ ಚಿತ್ರೀಕರಣಗೊಂಡಿದ್ದ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರೋ ‘ದಿಲ್ ಕಾ ರಾಜಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಅಂತೂ ಆಫ್ಟರ್ ಲಾಂಗ್ ಟೈಮ್ ಸಿನಿಮಾ ರಂಗಕ್ಕೆ ರಮ್ಯಾ ಅಭಿನಯದ ಸಿನಿಮಾ ರಿಲೀಸ್ ಆಗ್ತಿದೆ. ಆದರೆ ಮೋದಿ, ಬಿಜೆಪಿಗಳ ವಿರುದ್ಧ ಟೀಕಿಸಿ ಭಾಜಪಾ ಭಜನಾ ಮಂಡಳಿಯ ವಿರೋಧ ಕಟ್ಟಿಕೊಂಡಿರೋ ಕೆಂಪೇಗೌಡ ಕಟ್ಟಿದ್ ಊರಿನ ಪದ್ಮಾವತಿಯನ್ನ ಅಭಿಮಾನಿಗಳು ಅದ್ಯಾವ ರೀತಿ ವೆಲ್‍ಕಮ್ ಮಾಡ್ತಾರೋ ನೋಡಬೇಕು.

ಹಿರಿಯರನ್ನು ಮರೀತಿದ್ಯಾ ಸ್ಯಾಂಡಲ್‍ವುಡ್

ಕನ್ನಡ ಚಿತ್ರರಂಗದಲ್ಲಿ ಒಂದೆಡೆ ನಾಯಕ ನಟರು ಸ್ಟಾರ್‍ಗಳಾದ್ರೆ, ಮತ್ತೊಂದೆಡೆ ಕಾಮಿಡಿ ನಟರೇ ಹೀರೋಗಳಿಗಿಂತ ಸ್ಟಾರ್‍ಗಳಾಗಿ ಮಿಂಚುತ್ತಿದ್ದರು. ಅಭಿಮಾನಿಗಳು ಎಷ್ಟೋ ಸಿನಿಮಾಗಳಲ್ಲಿ ತಮ್ಮ ನೆಚ್ಚಿನ ಕಾಮಿಡಿ ನಟರಿದ್ದಾರೆಂಬ ಕಾರಣಕ್ಕೆ ಸಿನಿಮಾ ನೋಡಲು ಹೋಗುತ್ತಿದ್ದರು. ಈಗಲೂ ಆ ಟ್ರೆಂಡ್ ಹಾಗೇ ಉಳಿದಿದೆ. ಇಂತಹ ಟ್ರೆಂಡ್ ಕ್ರಿಯೇಟ್ ಮಾಡಿದವರಲ್ಲಿ ಹಾಸ್ಯ ನಟ ದೊಡ್ಡಣ್ಣ, ಹೊನ್ನವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ ಮೊದಲಿಗರು. ಸ್ಯಾಂಡಲ್‍ವುಡ್ ಸಿನಿಮಾಗಳಲ್ಲಿ ಹಾಸ್ಯದ ಔತಣ ನೀಡಿದ್ದ ಇಂತಹ ಪ್ರತಿಭೆಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದು ಹೋಗಿವೆ. ಹಾಗೊಮ್ಮೆ ಹೀಗೊಮ್ಮೆ ಕಾಣಸಿಗುವ ನಟನೆಂದರೆ ಅದು ದೊಡ್ಡಣ್ಣ ಮಾತ್ರ. ಉಳಿದವರು ಇದ್ದಾರೆ ಎಂಬುದಕ್ಕೆ ಕುರುಹೂ ಇಲ್ಲದಷ್ಟು ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅಂದಹಾಗೆ ‘ರಾಜಲಕ್ಷ್ಮೀ’ ಟೈಟಲ್‍ನ ಸಿನಿಮಾದಲ್ಲಿ ನಟಿಸುತ್ತಿರುವ ಟೆನ್ನಿಸ್ ಕೃಷ್ಣರದ್ದೂ ಇದೇ ಮಾತು. ಕನ್ನಡ ಇಂಡಸ್ಟ್ರಿಯಲ್ಲಿ ಹಳಬರಿಗೆ ಅವಕಾಶವಿಲ್ಲ. ವಯಸ್ಸಾಗ್ತಿದ್ದಂತೆ ಮೂಲೆಗೆ ತಳ್ಳಿಬಿಡುತ್ತಾರೆ. ಅಭಿಮಾನಿಗಳೇ ನೀವು ಸಿನಿಮಾದಲ್ಲಿ ಕಾಣಸಿಗುತ್ತಿಲ್ಲವಲ್ಲಾ, ಯಾಕೆ ಎಂದು ಕೇಳುತ್ತಾರೆ. ಆದರೆ ಸಿನಿಮಾ ಮಾಡೋರಿಗೆ ಹಿರಿಯರ ಅವಶ್ಯಕತೆ ಇಲ್ಲದಂತಾಗಿದೆ ಅಂತಾರೆ ಟೆನ್ನಿಸ್.

ಲತಾ ಮಂಗೇಶ್ಕರ್ ಆರೋಗ್ಯಸ್ಥಿತಿ ಗಂಭೀರ

ಗಾಯನ ಕ್ಷೇತ್ರದಲ್ಲಿ ಖ್ಯಾತಿ ಪಡೆದು ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಗಾಯಕಿ ಲತಾ ಮಂಗೇಶ್ಕರ್.
90 ವಸಂತಗಳನ್ನು ದಾಟಿರುವ ಲತಾ ಮಂಗೇಶ್ಕರ್ ಉಸಿರಾಟದ ಸಮಸ್ಯೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಬೆಳಗಿನ ಜಾವ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ರೂಲರ್ ಈಸ್ ದ ಮಾಡೆಲ್

ಈಗಿನ ಜನರೇಷನ್ ಹೈಕ್ಳಿಗೆ ಸಿನಿಮಾ ಸ್ಟಾರ್‍ಗಳೇ ಯೂತ್ ಐಕಾನ್‍ಗಳು. ಯಾವುದೇ ಹುಡಗನ್ನ ಕೇಳಿದ್ರು ಅವರು ಯಾವುದಾದ್ರು ಒಬ್ಬ ನಟನ ಹೆಸರೇಳಿ ಅವನೇ ನಮ್ಮ ರೋಲ್ ಮಾಡಲ್ ಅಂತ ಹೇಳ್ತಾರೆ. ಹಂಗೇನೇ ಸಿನಿಮಾ ಸ್ಟಾರ್‍ಗಳಿಗೂ ಯಾರಾದ್ರು ಒಬ್ರು ರೋಲ್ ಮಾಡಲ್‍ಗಳು ಇದ್ದೇಯಿರ್ತಾರೆ. ಸದ್ಯಕ್ಕೆ ಮ್ಯಾಟ್ರು ಏನಪ್ಪಾ ಅಂದ್ರೆ. ತನ್ನ ಪ್ರತಿ ಸಿನಿಮಾದಲ್ಲೂ ಒಬ್ಬೊಬ್ಬರ ಹೆಸರೇಳ್ಕಂಡು ಬೆಳೆದು ಬಂದ ರಾಕಿಂಗ್ ಸ್ಟಾರ್ ಯಶ್‍ನ ರೋಲ್ ಮಾಡೆಲ್ ಯಾರು ಅನ್ನೋದು. ರಾಮಾಚಾರಿ ಸಿನಿಮಾದಲ್ಲಿ ವಿಷ್ಣು ಟ್ಯಾಟೂ ಹಾಕಂಡ್ ವಿಷ್ಣು ಅಭಿಮಾನಿಗಳನ್ನೂ, ಗಜಕೇಸರಿಯಲ್ಲಿ ರಾಜ್‍ಕುಮಾರ್ ಅಭಿಮಾನಿಗಳನ್ನೂ, ಡ್ರಾಮಾ ಸಿನಿಮಾದಲ್ಲಿ ಅಂಬಿ ಜೊತೆ ಆ್ಯಕ್ಟ್ ಮಾಡಿದ ನಂತರ ಅಂಬಿ ಅಣ್ಣ ಅಂತ ಅಂಬಿಯ ಅಭಿಮಾನಿಗಳನ್ನು ತನ್ನತ್ತ ಸೆಳೆದುಕೊಂಡ ಯಶ್ ಅಂಬಿ ಇರುವವರೆಗೂ ಅಂಬಿಯೇ ತನ್ನ ರೋಲ್ ಮಾಡೆಲ್ ಎಂಬಂತೆ ಹೇಳಿಕೊಳ್ಳುತ್ತಿದ್ದರು. ಇವಾಗ ಇದ್ದಕ್ಕಿದ್ದಂಗೆ ರೋಲ್ ಮಾಡಲ್ ಚೇಂಜ್ ಮಾಡ್ಕಂಡಿರೋ ಯಶ್, ನಿಮ್ಮ ಸ್ಫೂರ್ತಿ ಯಾರು ಅಂದ್ರೆ ಮೋದಿ ಅಂದ್ಬುಟ್ಟಿದ್ದಾರೆ. ಅಂದಹಾಗೆ 2014ರಲ್ಲಿ ಮೋದಿ ಅಧಿಕಾರಕ್ಕೆ ಬರೋಕಿಂತ ಮುಂಚೆ ಮೋದಿ ಗೊತ್ತಿತ್ತೋ ಇಲ್ವೋ ಗೊತ್ತಿಲ್ಲ. ಆದ್ರೆ ಸದ್ಯಕ್ಕೆ ಎಲ್ಲರನ್ನೂ ಸೆಳೀತಿರೋ ಮೋದಿನೇ ನನ್ನ ರೋಲ್ ಮಾಡ್ಲು ಅಂತ ಯಶ್ ಹೊಗುಳ್ತಾಯಿರೋದು ನೋಡಿದ್ರೆ ಅಂಬಿ ಮೇಲಿನ ಅಭಿಮಾನ ಕಡ್ಮೆ ಆಗೋಯ್ತಾ ಅನ್ನುಸ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...