Homeಮುಖಪುಟನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

ನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

- Advertisement -
- Advertisement -

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಕಾಂಗ್ರೆಸ್ಸಿನ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆಯಾಗಿದ್ದ ನಟಿ, ರಾಜಕಾರಣಿ ರಮ್ಯಾ ಅವರ ಹಠಾತ್ ನಿರ್ಗಮನವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.ಈ ಪ್ರಶ್ನೆಗಳಿಗೆ ಎರಡು ವರ್ಷಗಳ ಬಳಿಕ ಉತ್ತರ ದೊರೆತಿದೆ.

ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷ ನಟಿಯಾಗಿ ಮೆರೆದ ನಟಿ ರಮ್ಯಾ ರಾಜಕೀಯಕ್ಕೆ ಬಂದು ಮಂಡ್ಯದ ಸಂಸದೆಯಾದರು. ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡ ರಮ್ಯಾ ಬಳಿಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಪಟ್ಟಕ್ಕೇರಿದ್ದರು. ಆದರೆ 2019 ರ ಲೋಕಸಭಾ ಚುನಾವಣೆ ಬಳಿಕ ಕಣ್ಮರೆಯಾಗಿದ್ದರು.

ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಉತ್ತರ ನೀಡಿದ್ದಾರೆ. ತಾವು ಮಾಡಿದ ತಪ್ಪಿನಿಂದ ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರಿಗಾದ ತೊಂದರೆಗಳ ಬಗ್ಗೆ ಮಾತನಾಡಿದ್ದಾರೆ. ತಾವು ಏಕೆ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ’ಬಂಗಾರದ ಮನುಷ್ಯ’ನ ಅಡಿಪಾಯದಿಂದ ಹೊಸತನ ಮತ್ತು ಸದಭಿರುಚಿಯನ್ನು ತಮ್ಮದಾಗಿಸಿಕೊಂಡಿದ್ದ ಚಂದ್ರು

ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ 2018 ರ ಆಗಸ್ಟ್‌ನಲ್ಲಿ ಪಕ್ಷದ ಕೆಲ ಸಂಸದರೊಂದಿಗೆ ಜರ್ಮನಿಗೆ ಭೇಟಿ ನೀಡಿದ್ದರು. ಬರ್ಲಿನ್‌ನ ವಸ್ತುಸಂಗ್ರಹಾಲಯದ ಪ್ರವಾಸದ ವೇಳೆ ರಮ್ಯಾ ಫೋಟೋಗಳನ್ನು ತೆಗೆದಿದ್ದರಂತೆ. ಆ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ಕಾರಣಕ್ಕೆ ವೈರಲ್ ಆಗಿ, ರಾಹುಲ್ ಗಾಂಧಿ ಅವರಿಗೆ ತೀವ್ರ ಮುಜುಗರ ಉಂಟು ಮಾಡಿದ್ದವು ಎಂದು ಹೇಳಿಕೊಂಡಿದ್ದಾರೆ.

”ರಾಹುಲ್ ಗಾಂಧಿ ಅವರ ಫೋಟೋಗಳು ಹೆಚ್ಚು ಟ್ರೋಲ್‌ಗೆ ಒಳಗಾದವು. ರಾಹುಲ್ ಗಾಂಧಿ ಬಗ್ಗೆ ಅಪಹಾಸ್ಯ ಮಾಡಲಾಯಿತು. ನಾನು ಮಾಡಿದ ತಪ್ಪಿನಿಂದ ರಾಹುಲ್ ಗಾಂಧಿ ಅವರನ್ನು ಕೆಟ್ಟ ರೀತಿಯಲ್ಲಿ ಟ್ರೋಲ್ ಮಾಡಲಾಯಿತು. ನಾನು ಮಾಡಿದ ತಪ್ಪಿನಿಂದ ಅಂದು ರಾತ್ರಿ ನನಗೆ ನಿದ್ದೆಯೇ ಬರಲಿಲ್ಲ” ಎಂದು ರಮ್ಯಾ ಬರೆದಿದ್ದಾರೆ.

ತಮ್ಮ ತಪ್ಪಿಗೆ ಕ್ಷಮಾಪಣೆ ಕೇಳಲು ಹಾಗೂ ಹುದ್ದೆಗೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ಬಳಿ ತೆರಳಿದ್ದಾಗಿ, ಅವರು ರಾಜೀನಾಮೆಯನ್ನು ತಿರಸ್ಕರಿಸಿ, ಇನ್ನು ಮುಂದೆ ಜಾಗರೂಕರಾಗಿರಿ ಎಂದು ಹೇಳಿದ್ದರು. ಆ ಸಮಯದಲ್ಲಿ ತಾವು ಕಣ್ಣೀರಿಟ್ಟಿದ್ದಾಗಿ ರಮ್ಯಾ ಹೇಳಿಕೊಂಡಿದ್ದಾರೆ.

“ನಾನು ಮಾಡಿದ ತಪ್ಪಿಗೆ, ನನ್ನನ್ನ ಹುದ್ದೆಯಿಂದ ಹೊರದಬ್ಬಬೇಕಿತ್ತು. ಆದರೆ, ಅವರು ಹಾಗೆ ಮಾಡಲಿಲ್ಲ. ರಾಹುಲ್ ಗಾಂಧಿ ಒಳ್ಳೆಯ ಮನುಷ್ಯ. ಅವರ ಜನಪರ ಕಾಳಜಿ ನನ್ನ ಮೇಲೆ ಸದಾ ಪ್ರಭಾವ ಬೀರುತ್ತದೆ” ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...