Homeಮುಖಪುಟನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

ನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

- Advertisement -
- Advertisement -

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಕಾಂಗ್ರೆಸ್ಸಿನ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆಯಾಗಿದ್ದ ನಟಿ, ರಾಜಕಾರಣಿ ರಮ್ಯಾ ಅವರ ಹಠಾತ್ ನಿರ್ಗಮನವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.ಈ ಪ್ರಶ್ನೆಗಳಿಗೆ ಎರಡು ವರ್ಷಗಳ ಬಳಿಕ ಉತ್ತರ ದೊರೆತಿದೆ.

ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷ ನಟಿಯಾಗಿ ಮೆರೆದ ನಟಿ ರಮ್ಯಾ ರಾಜಕೀಯಕ್ಕೆ ಬಂದು ಮಂಡ್ಯದ ಸಂಸದೆಯಾದರು. ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡ ರಮ್ಯಾ ಬಳಿಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಪಟ್ಟಕ್ಕೇರಿದ್ದರು. ಆದರೆ 2019 ರ ಲೋಕಸಭಾ ಚುನಾವಣೆ ಬಳಿಕ ಕಣ್ಮರೆಯಾಗಿದ್ದರು.

ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಉತ್ತರ ನೀಡಿದ್ದಾರೆ. ತಾವು ಮಾಡಿದ ತಪ್ಪಿನಿಂದ ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರಿಗಾದ ತೊಂದರೆಗಳ ಬಗ್ಗೆ ಮಾತನಾಡಿದ್ದಾರೆ. ತಾವು ಏಕೆ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ’ಬಂಗಾರದ ಮನುಷ್ಯ’ನ ಅಡಿಪಾಯದಿಂದ ಹೊಸತನ ಮತ್ತು ಸದಭಿರುಚಿಯನ್ನು ತಮ್ಮದಾಗಿಸಿಕೊಂಡಿದ್ದ ಚಂದ್ರು

ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ 2018 ರ ಆಗಸ್ಟ್‌ನಲ್ಲಿ ಪಕ್ಷದ ಕೆಲ ಸಂಸದರೊಂದಿಗೆ ಜರ್ಮನಿಗೆ ಭೇಟಿ ನೀಡಿದ್ದರು. ಬರ್ಲಿನ್‌ನ ವಸ್ತುಸಂಗ್ರಹಾಲಯದ ಪ್ರವಾಸದ ವೇಳೆ ರಮ್ಯಾ ಫೋಟೋಗಳನ್ನು ತೆಗೆದಿದ್ದರಂತೆ. ಆ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ಕಾರಣಕ್ಕೆ ವೈರಲ್ ಆಗಿ, ರಾಹುಲ್ ಗಾಂಧಿ ಅವರಿಗೆ ತೀವ್ರ ಮುಜುಗರ ಉಂಟು ಮಾಡಿದ್ದವು ಎಂದು ಹೇಳಿಕೊಂಡಿದ್ದಾರೆ.

”ರಾಹುಲ್ ಗಾಂಧಿ ಅವರ ಫೋಟೋಗಳು ಹೆಚ್ಚು ಟ್ರೋಲ್‌ಗೆ ಒಳಗಾದವು. ರಾಹುಲ್ ಗಾಂಧಿ ಬಗ್ಗೆ ಅಪಹಾಸ್ಯ ಮಾಡಲಾಯಿತು. ನಾನು ಮಾಡಿದ ತಪ್ಪಿನಿಂದ ರಾಹುಲ್ ಗಾಂಧಿ ಅವರನ್ನು ಕೆಟ್ಟ ರೀತಿಯಲ್ಲಿ ಟ್ರೋಲ್ ಮಾಡಲಾಯಿತು. ನಾನು ಮಾಡಿದ ತಪ್ಪಿನಿಂದ ಅಂದು ರಾತ್ರಿ ನನಗೆ ನಿದ್ದೆಯೇ ಬರಲಿಲ್ಲ” ಎಂದು ರಮ್ಯಾ ಬರೆದಿದ್ದಾರೆ.

ತಮ್ಮ ತಪ್ಪಿಗೆ ಕ್ಷಮಾಪಣೆ ಕೇಳಲು ಹಾಗೂ ಹುದ್ದೆಗೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ಬಳಿ ತೆರಳಿದ್ದಾಗಿ, ಅವರು ರಾಜೀನಾಮೆಯನ್ನು ತಿರಸ್ಕರಿಸಿ, ಇನ್ನು ಮುಂದೆ ಜಾಗರೂಕರಾಗಿರಿ ಎಂದು ಹೇಳಿದ್ದರು. ಆ ಸಮಯದಲ್ಲಿ ತಾವು ಕಣ್ಣೀರಿಟ್ಟಿದ್ದಾಗಿ ರಮ್ಯಾ ಹೇಳಿಕೊಂಡಿದ್ದಾರೆ.

“ನಾನು ಮಾಡಿದ ತಪ್ಪಿಗೆ, ನನ್ನನ್ನ ಹುದ್ದೆಯಿಂದ ಹೊರದಬ್ಬಬೇಕಿತ್ತು. ಆದರೆ, ಅವರು ಹಾಗೆ ಮಾಡಲಿಲ್ಲ. ರಾಹುಲ್ ಗಾಂಧಿ ಒಳ್ಳೆಯ ಮನುಷ್ಯ. ಅವರ ಜನಪರ ಕಾಳಜಿ ನನ್ನ ಮೇಲೆ ಸದಾ ಪ್ರಭಾವ ಬೀರುತ್ತದೆ” ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...