Homeಮುಖಪುಟನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

ನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

- Advertisement -
- Advertisement -

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಕಾಂಗ್ರೆಸ್ಸಿನ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆಯಾಗಿದ್ದ ನಟಿ, ರಾಜಕಾರಣಿ ರಮ್ಯಾ ಅವರ ಹಠಾತ್ ನಿರ್ಗಮನವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.ಈ ಪ್ರಶ್ನೆಗಳಿಗೆ ಎರಡು ವರ್ಷಗಳ ಬಳಿಕ ಉತ್ತರ ದೊರೆತಿದೆ.

ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷ ನಟಿಯಾಗಿ ಮೆರೆದ ನಟಿ ರಮ್ಯಾ ರಾಜಕೀಯಕ್ಕೆ ಬಂದು ಮಂಡ್ಯದ ಸಂಸದೆಯಾದರು. ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡ ರಮ್ಯಾ ಬಳಿಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಪಟ್ಟಕ್ಕೇರಿದ್ದರು. ಆದರೆ 2019 ರ ಲೋಕಸಭಾ ಚುನಾವಣೆ ಬಳಿಕ ಕಣ್ಮರೆಯಾಗಿದ್ದರು.

ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಉತ್ತರ ನೀಡಿದ್ದಾರೆ. ತಾವು ಮಾಡಿದ ತಪ್ಪಿನಿಂದ ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರಿಗಾದ ತೊಂದರೆಗಳ ಬಗ್ಗೆ ಮಾತನಾಡಿದ್ದಾರೆ. ತಾವು ಏಕೆ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ’ಬಂಗಾರದ ಮನುಷ್ಯ’ನ ಅಡಿಪಾಯದಿಂದ ಹೊಸತನ ಮತ್ತು ಸದಭಿರುಚಿಯನ್ನು ತಮ್ಮದಾಗಿಸಿಕೊಂಡಿದ್ದ ಚಂದ್ರು

ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ 2018 ರ ಆಗಸ್ಟ್‌ನಲ್ಲಿ ಪಕ್ಷದ ಕೆಲ ಸಂಸದರೊಂದಿಗೆ ಜರ್ಮನಿಗೆ ಭೇಟಿ ನೀಡಿದ್ದರು. ಬರ್ಲಿನ್‌ನ ವಸ್ತುಸಂಗ್ರಹಾಲಯದ ಪ್ರವಾಸದ ವೇಳೆ ರಮ್ಯಾ ಫೋಟೋಗಳನ್ನು ತೆಗೆದಿದ್ದರಂತೆ. ಆ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ಕಾರಣಕ್ಕೆ ವೈರಲ್ ಆಗಿ, ರಾಹುಲ್ ಗಾಂಧಿ ಅವರಿಗೆ ತೀವ್ರ ಮುಜುಗರ ಉಂಟು ಮಾಡಿದ್ದವು ಎಂದು ಹೇಳಿಕೊಂಡಿದ್ದಾರೆ.

”ರಾಹುಲ್ ಗಾಂಧಿ ಅವರ ಫೋಟೋಗಳು ಹೆಚ್ಚು ಟ್ರೋಲ್‌ಗೆ ಒಳಗಾದವು. ರಾಹುಲ್ ಗಾಂಧಿ ಬಗ್ಗೆ ಅಪಹಾಸ್ಯ ಮಾಡಲಾಯಿತು. ನಾನು ಮಾಡಿದ ತಪ್ಪಿನಿಂದ ರಾಹುಲ್ ಗಾಂಧಿ ಅವರನ್ನು ಕೆಟ್ಟ ರೀತಿಯಲ್ಲಿ ಟ್ರೋಲ್ ಮಾಡಲಾಯಿತು. ನಾನು ಮಾಡಿದ ತಪ್ಪಿನಿಂದ ಅಂದು ರಾತ್ರಿ ನನಗೆ ನಿದ್ದೆಯೇ ಬರಲಿಲ್ಲ” ಎಂದು ರಮ್ಯಾ ಬರೆದಿದ್ದಾರೆ.

ತಮ್ಮ ತಪ್ಪಿಗೆ ಕ್ಷಮಾಪಣೆ ಕೇಳಲು ಹಾಗೂ ಹುದ್ದೆಗೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ಬಳಿ ತೆರಳಿದ್ದಾಗಿ, ಅವರು ರಾಜೀನಾಮೆಯನ್ನು ತಿರಸ್ಕರಿಸಿ, ಇನ್ನು ಮುಂದೆ ಜಾಗರೂಕರಾಗಿರಿ ಎಂದು ಹೇಳಿದ್ದರು. ಆ ಸಮಯದಲ್ಲಿ ತಾವು ಕಣ್ಣೀರಿಟ್ಟಿದ್ದಾಗಿ ರಮ್ಯಾ ಹೇಳಿಕೊಂಡಿದ್ದಾರೆ.

“ನಾನು ಮಾಡಿದ ತಪ್ಪಿಗೆ, ನನ್ನನ್ನ ಹುದ್ದೆಯಿಂದ ಹೊರದಬ್ಬಬೇಕಿತ್ತು. ಆದರೆ, ಅವರು ಹಾಗೆ ಮಾಡಲಿಲ್ಲ. ರಾಹುಲ್ ಗಾಂಧಿ ಒಳ್ಳೆಯ ಮನುಷ್ಯ. ಅವರ ಜನಪರ ಕಾಳಜಿ ನನ್ನ ಮೇಲೆ ಸದಾ ಪ್ರಭಾವ ಬೀರುತ್ತದೆ” ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...