Homeಮುಖಪುಟಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

- Advertisement -
- Advertisement -

ಪದ್ಮಾವತಿ ಈಸ್ ಬ್ಯಾಕ್

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ. ಸ್ಯಾಂಡಲ್‍ವುಡ್ ಅಂಗಳಲ್ಲಿ ಒಳ್ಳೆ ನೇಮು ಫೇಮು ಗಿಟ್ಟಿಸಿಕೊಂಡಿದ್ದ ರಮ್ಯಾ, ರಾಜ್ಯಭಾರ ಮಾಡೋ ಮನಸ್ಸಾಗಿ ಚಿತ್ರರಂಗಕ್ಕೆ ಗುಡ್‍ಬೈ ಹೇಳಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಎಂಟ್ರಿಯಲ್ಲೇ ಜಯಭೇರಿ ಬಾರಿಸಿದ ರಮ್ಯಾಗೆ ಆರು ತಿಂಗಳಷ್ಟೇ ರಾಜಕೀಯ ಅಧಿಕಾರ ಅನುಭವಿಸೋ ಚಾನ್ಸ್ ಸಿಕ್ಕಿದ್ದು. ಎರಡನೇ ಇನ್ನಿಂಗ್ಸ್‍ನಲ್ಲಿ ಸೋಲುಂಡ ಮೋಹಕ ತಾರೆ ರಾತ್ರೋರಾತ್ರಿ ಲಂಡನ್‍ಗೆ ಹಾರಿದರು. ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷೆ ಪಟ್ಟ ಗಿಟ್ಟಿಸಿಕೊಂಡು ಕಾಂಟ್ರೋವರ್ಸಿ ಪೋಸ್ಟ್ ಮೂಲಕ ಆಗಾಗ್ಗೆ ಟ್ರೋಲ್ ಆಗುತ್ತಿದ್ದ ರಮ್ಯಾ ‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲರು’ ಎಂಬಂತೆ ಐಟಿ ಸೆಲ್‍ಗೂ ಗುಡ್‍ಬೈ ಹೇಳಿ ನಾಪತ್ತೆಯಾಗಿದ್ದರು. ರಾಜಕೀಯ ಜಂಜಾಟಕ್ಕಿಂತ ಸಿನಿಮಾ ಮಾಡ್ಕೊಂಡ್, ಅಭಿಮಾನಿಗಳಿಗೆ ಆಟೋಗ್ರಾಫ್ ಹಾಕೊಂಡ್ ಇರೋದೆ ವಾಸಿ ಅನ್ನೋದನ್ನ ಅರಿತುಕೊಂಡು ಈಗಲೂ ಸಿನಿಮಾ ಆಫರ್ ಬರ್ತಾಯಿವೆ, ಸಿನಿಮಾ ಮಾಡ್ತಿನಿ ಅಂತ ಹೇಳ್ತಿದ್ದಾರೆ. ಸದ್ಯಕ್ಕೆ ಈಗಾಗಲೇ ಸುಮಾರು ವರ್ಷಗಳ ಹಿಂದೆ ಚಿತ್ರೀಕರಣಗೊಂಡಿದ್ದ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರೋ ‘ದಿಲ್ ಕಾ ರಾಜಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಅಂತೂ ಆಫ್ಟರ್ ಲಾಂಗ್ ಟೈಮ್ ಸಿನಿಮಾ ರಂಗಕ್ಕೆ ರಮ್ಯಾ ಅಭಿನಯದ ಸಿನಿಮಾ ರಿಲೀಸ್ ಆಗ್ತಿದೆ. ಆದರೆ ಮೋದಿ, ಬಿಜೆಪಿಗಳ ವಿರುದ್ಧ ಟೀಕಿಸಿ ಭಾಜಪಾ ಭಜನಾ ಮಂಡಳಿಯ ವಿರೋಧ ಕಟ್ಟಿಕೊಂಡಿರೋ ಕೆಂಪೇಗೌಡ ಕಟ್ಟಿದ್ ಊರಿನ ಪದ್ಮಾವತಿಯನ್ನ ಅಭಿಮಾನಿಗಳು ಅದ್ಯಾವ ರೀತಿ ವೆಲ್‍ಕಮ್ ಮಾಡ್ತಾರೋ ನೋಡಬೇಕು.

ಹಿರಿಯರನ್ನು ಮರೀತಿದ್ಯಾ ಸ್ಯಾಂಡಲ್‍ವುಡ್

ಕನ್ನಡ ಚಿತ್ರರಂಗದಲ್ಲಿ ಒಂದೆಡೆ ನಾಯಕ ನಟರು ಸ್ಟಾರ್‍ಗಳಾದ್ರೆ, ಮತ್ತೊಂದೆಡೆ ಕಾಮಿಡಿ ನಟರೇ ಹೀರೋಗಳಿಗಿಂತ ಸ್ಟಾರ್‍ಗಳಾಗಿ ಮಿಂಚುತ್ತಿದ್ದರು. ಅಭಿಮಾನಿಗಳು ಎಷ್ಟೋ ಸಿನಿಮಾಗಳಲ್ಲಿ ತಮ್ಮ ನೆಚ್ಚಿನ ಕಾಮಿಡಿ ನಟರಿದ್ದಾರೆಂಬ ಕಾರಣಕ್ಕೆ ಸಿನಿಮಾ ನೋಡಲು ಹೋಗುತ್ತಿದ್ದರು. ಈಗಲೂ ಆ ಟ್ರೆಂಡ್ ಹಾಗೇ ಉಳಿದಿದೆ. ಇಂತಹ ಟ್ರೆಂಡ್ ಕ್ರಿಯೇಟ್ ಮಾಡಿದವರಲ್ಲಿ ಹಾಸ್ಯ ನಟ ದೊಡ್ಡಣ್ಣ, ಹೊನ್ನವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ ಮೊದಲಿಗರು. ಸ್ಯಾಂಡಲ್‍ವುಡ್ ಸಿನಿಮಾಗಳಲ್ಲಿ ಹಾಸ್ಯದ ಔತಣ ನೀಡಿದ್ದ ಇಂತಹ ಪ್ರತಿಭೆಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದು ಹೋಗಿವೆ. ಹಾಗೊಮ್ಮೆ ಹೀಗೊಮ್ಮೆ ಕಾಣಸಿಗುವ ನಟನೆಂದರೆ ಅದು ದೊಡ್ಡಣ್ಣ ಮಾತ್ರ. ಉಳಿದವರು ಇದ್ದಾರೆ ಎಂಬುದಕ್ಕೆ ಕುರುಹೂ ಇಲ್ಲದಷ್ಟು ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅಂದಹಾಗೆ ‘ರಾಜಲಕ್ಷ್ಮೀ’ ಟೈಟಲ್‍ನ ಸಿನಿಮಾದಲ್ಲಿ ನಟಿಸುತ್ತಿರುವ ಟೆನ್ನಿಸ್ ಕೃಷ್ಣರದ್ದೂ ಇದೇ ಮಾತು. ಕನ್ನಡ ಇಂಡಸ್ಟ್ರಿಯಲ್ಲಿ ಹಳಬರಿಗೆ ಅವಕಾಶವಿಲ್ಲ. ವಯಸ್ಸಾಗ್ತಿದ್ದಂತೆ ಮೂಲೆಗೆ ತಳ್ಳಿಬಿಡುತ್ತಾರೆ. ಅಭಿಮಾನಿಗಳೇ ನೀವು ಸಿನಿಮಾದಲ್ಲಿ ಕಾಣಸಿಗುತ್ತಿಲ್ಲವಲ್ಲಾ, ಯಾಕೆ ಎಂದು ಕೇಳುತ್ತಾರೆ. ಆದರೆ ಸಿನಿಮಾ ಮಾಡೋರಿಗೆ ಹಿರಿಯರ ಅವಶ್ಯಕತೆ ಇಲ್ಲದಂತಾಗಿದೆ ಅಂತಾರೆ ಟೆನ್ನಿಸ್.

ಲತಾ ಮಂಗೇಶ್ಕರ್ ಆರೋಗ್ಯಸ್ಥಿತಿ ಗಂಭೀರ

ಗಾಯನ ಕ್ಷೇತ್ರದಲ್ಲಿ ಖ್ಯಾತಿ ಪಡೆದು ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಗಾಯಕಿ ಲತಾ ಮಂಗೇಶ್ಕರ್.
90 ವಸಂತಗಳನ್ನು ದಾಟಿರುವ ಲತಾ ಮಂಗೇಶ್ಕರ್ ಉಸಿರಾಟದ ಸಮಸ್ಯೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಬೆಳಗಿನ ಜಾವ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ರೂಲರ್ ಈಸ್ ದ ಮಾಡೆಲ್

ಈಗಿನ ಜನರೇಷನ್ ಹೈಕ್ಳಿಗೆ ಸಿನಿಮಾ ಸ್ಟಾರ್‍ಗಳೇ ಯೂತ್ ಐಕಾನ್‍ಗಳು. ಯಾವುದೇ ಹುಡಗನ್ನ ಕೇಳಿದ್ರು ಅವರು ಯಾವುದಾದ್ರು ಒಬ್ಬ ನಟನ ಹೆಸರೇಳಿ ಅವನೇ ನಮ್ಮ ರೋಲ್ ಮಾಡಲ್ ಅಂತ ಹೇಳ್ತಾರೆ. ಹಂಗೇನೇ ಸಿನಿಮಾ ಸ್ಟಾರ್‍ಗಳಿಗೂ ಯಾರಾದ್ರು ಒಬ್ರು ರೋಲ್ ಮಾಡಲ್‍ಗಳು ಇದ್ದೇಯಿರ್ತಾರೆ. ಸದ್ಯಕ್ಕೆ ಮ್ಯಾಟ್ರು ಏನಪ್ಪಾ ಅಂದ್ರೆ. ತನ್ನ ಪ್ರತಿ ಸಿನಿಮಾದಲ್ಲೂ ಒಬ್ಬೊಬ್ಬರ ಹೆಸರೇಳ್ಕಂಡು ಬೆಳೆದು ಬಂದ ರಾಕಿಂಗ್ ಸ್ಟಾರ್ ಯಶ್‍ನ ರೋಲ್ ಮಾಡೆಲ್ ಯಾರು ಅನ್ನೋದು. ರಾಮಾಚಾರಿ ಸಿನಿಮಾದಲ್ಲಿ ವಿಷ್ಣು ಟ್ಯಾಟೂ ಹಾಕಂಡ್ ವಿಷ್ಣು ಅಭಿಮಾನಿಗಳನ್ನೂ, ಗಜಕೇಸರಿಯಲ್ಲಿ ರಾಜ್‍ಕುಮಾರ್ ಅಭಿಮಾನಿಗಳನ್ನೂ, ಡ್ರಾಮಾ ಸಿನಿಮಾದಲ್ಲಿ ಅಂಬಿ ಜೊತೆ ಆ್ಯಕ್ಟ್ ಮಾಡಿದ ನಂತರ ಅಂಬಿ ಅಣ್ಣ ಅಂತ ಅಂಬಿಯ ಅಭಿಮಾನಿಗಳನ್ನು ತನ್ನತ್ತ ಸೆಳೆದುಕೊಂಡ ಯಶ್ ಅಂಬಿ ಇರುವವರೆಗೂ ಅಂಬಿಯೇ ತನ್ನ ರೋಲ್ ಮಾಡೆಲ್ ಎಂಬಂತೆ ಹೇಳಿಕೊಳ್ಳುತ್ತಿದ್ದರು. ಇವಾಗ ಇದ್ದಕ್ಕಿದ್ದಂಗೆ ರೋಲ್ ಮಾಡಲ್ ಚೇಂಜ್ ಮಾಡ್ಕಂಡಿರೋ ಯಶ್, ನಿಮ್ಮ ಸ್ಫೂರ್ತಿ ಯಾರು ಅಂದ್ರೆ ಮೋದಿ ಅಂದ್ಬುಟ್ಟಿದ್ದಾರೆ. ಅಂದಹಾಗೆ 2014ರಲ್ಲಿ ಮೋದಿ ಅಧಿಕಾರಕ್ಕೆ ಬರೋಕಿಂತ ಮುಂಚೆ ಮೋದಿ ಗೊತ್ತಿತ್ತೋ ಇಲ್ವೋ ಗೊತ್ತಿಲ್ಲ. ಆದ್ರೆ ಸದ್ಯಕ್ಕೆ ಎಲ್ಲರನ್ನೂ ಸೆಳೀತಿರೋ ಮೋದಿನೇ ನನ್ನ ರೋಲ್ ಮಾಡ್ಲು ಅಂತ ಯಶ್ ಹೊಗುಳ್ತಾಯಿರೋದು ನೋಡಿದ್ರೆ ಅಂಬಿ ಮೇಲಿನ ಅಭಿಮಾನ ಕಡ್ಮೆ ಆಗೋಯ್ತಾ ಅನ್ನುಸ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...