Homeಮುಖಪುಟಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ...

ಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಅಕ್ರಮ ಬೆಟ್ಟಿಂಗ್, ಜೂಜಾಟ ಮತ್ತು ಕ್ಯಾಸಿನೊ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿ ಸಾರ್ವಜನಿಕರಿಗೆ ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ಟಾಲಿವುಡ್ ನಟರು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಸೇರಿದಂತೆ 25 ಜನರ ವಿರುದ್ಧ ಭಾನುವಾರ ತೆಲಂಗಾಣದ ಸೈಬರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ 25 ಜನರಲ್ಲಿ ಪ್ರಮುಖ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣೀತಾ ಮತ್ತು ನಿಧಿ ಅಗರ್ವಾಲ್ ಸೇರಿದ್ದಾರೆ.

ಆರೋಪಿ 1 ಮತ್ತು ಆರೋಪಿ 2 ಎಂದು ಹೆಸರಿಸಲಾದ ನಟರಾದ ರಾಣಾ ದಗ್ಗುಬಾಟಿ ಮತ್ತು ಪ್ರಕಾಶ್ ರಾಜ್ ಅವರು ಪಾಪ್-ಅಪ್ ಜಾಹೀರಾತುಗಳ ಮೂಲಕ ಜಂಗ್ಲೀ ರಮ್ಮಿಯನ್ನು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಜಯ್ ದೇವರಕೊಂಡ ಅವರು A23 ರಮ್ಮಿ, ಮಂಚು ಲಕ್ಷ್ಮಿ ಯೋಲೊ247, ಪ್ರಣೀತಾ ಫೇರ್‌ಪ್ಲೇ ಲೈವ್ ಮತ್ತು ನಿಧಿ ಅಗರ್ವಾಲ್ ಜೀತ್ ವಿನ್ ಅನ್ನು ಪಾಪ್-ಅಪ್ ಜಾಹೀರಾತುಗಳ ಮೂಲಕ ಪ್ರಚಾರ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾಗಿ ವರದಿ ಹೇಳಿದೆ.

“ಇದು ತನಿಖೆಯ ಆರಂಭ ಮಾತ್ರ. ಈ ಅಪ್ಲಿಕೇಶನ್‌ಗಳು ಯಾವುವು, ಇದರಲ್ಲಿ ಭಾಗಿಯಾಗಿರುವ ಜನರು ಯಾರು, ಈ ಅಪ್ಲಿಕೇಶನ್‌ಗಳ ಮೂಲ ಯಾವುದು ಮತ್ತು ಇತರ ಅಂಶಗಳನ್ನು ನಾವು ನೋಡುತ್ತೇವೆ. ಪ್ರಕರಣದ ಅರ್ಹತೆ ಮತ್ತು ಲಭ್ಯವಿರುವ ಪುರಾವೆಗಳ ಆಧಾರದ ಮೇಲೆ, ನಾವು ಮುಂದುವರಿಯುತ್ತೇವೆ” ಎಂದು ಪೊಲೀಸ್ ಆಯುಕ್ತ ಅವಿನಾಶ್ ಮೊಹಂತಿ ಹೇಳಿದ್ದಾಗಿ indianexpress.com ವರದಿ ಮಾಡಿದೆ.

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 318(4) [ವಂಚನೆ], ಮತ್ತು 112 (ಸಣ್ಣ ಸಂಘಟಿತ ಅಪರಾಧ), 49 (ಪ್ರೇರಣೆ), ತೆಲಂಗಾಣ ರಾಜ್ಯ ಗೇಮಿಂಗ್ ಕಾಯ್ದೆ (ಟಿಎಸ್‌ಜಿಎ) ಸೆಕ್ಷನ್ 3,3(ಎ) ಮತ್ತು 4 (ಸಾಮಾನ್ಯ ಗೇಮಿಂಗ್ ಹೌಸ್); ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66(ಡಿ) (ಕಂಪ್ಯೂಟರ್ ಸಂಪನ್ಮೂಲವನ್ನು ಬಳಸಿಕೊಂಡು ವಂಚಿಸುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿ ಹೇಳಿದೆ.

“ಈ ವೇದಿಕೆಗಳು ಸಾರ್ವಜನಿಕರನ್ನು, ವಿಶೇಷವಾಗಿ ಹಣದ ಅವಶ್ಯಕತೆಯಿರುವ ಜನರನ್ನು, ತಾವು ಕಷ್ಟಪಟ್ಟು ಸಂಪಾದಿಸಿದ ಮತ್ತು ಕುಟುಂಬದ ಹಣವನ್ನು ಅಪ್ಲಿಕೇಶನ್‌ಗಳು/ವೆಬ್‌ಸೈಟ್‌ಗಳಲ್ಲಿ ಹೂಡಿಕೆ ಮಾಡಲು ಮತ್ತು ನಿಧಾನವಾಗಿ ಅವುಗಳಿಗೆ ವ್ಯಸನಿಯಾಗಲು ಪ್ರೋತ್ಸಾಹಿಸುತ್ತಿವೆ. ಇದು ಸಂಪೂರ್ಣ ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತವೆ” ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಹಲವಾರು ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪಟ್ಟಿ ಮಾಡಿರುವ ಎಫ್‌ಐಆರ್, “ಮೇಲೆ ಉಲ್ಲೇಖಿಸಲಾದ ಎಲ್ಲಾ ಬೆಟ್ಟಿಂಗ್ ಅಪ್ಲಿಕೇಶನ್‌ಗಳು 1867ರ ಸಾರ್ವಜನಿಕ ಜೂಜು ಕಾಯ್ದೆ, ಜೂನು ಕಾನೂನುಗಳು ಮತ್ತು ನಿಬಂಧನೆಗಳ ನೇರ ಉಲ್ಲಂಘನೆಯಾಗಿದೆ. ಈ ವ್ಯಸನಕಾರಿ ಸುಲಭವಾಗಿ ಹಣ ಸಂಪಾದಿಸುವ ಕಾರ್ಯವಿಧಾನವನ್ನು ಪ್ರೋತ್ಸಾಹಿಸುವ ಮೂಲಕ ವ್ಯಕ್ತಿಗಳು ಮತ್ತು ಸಮಾಜಕ್ಕೆ ಹಾನಿಯನ್ನುಂಟುಮಾಡುತ್ತದೆ. ಇದು ಆರ್ಥಿಕ ಸಂಕಷ್ಟಕ್ಕೆ ಕಾರಣವಾಗುತ್ತದೆ” ಎಂದು ಹೇಳಿದೆ.

ದೂರುದಾರರ ಪ್ರಕಾರ, ಈ ವೇದಿಕೆಗಳಲ್ಲಿ ಸಾವಿರಾರು ಜನರು ಲಕ್ಷಾಂತರ ರೂಪಾಯಿಗಳನ್ನು ತೊಡಗಿಸಿದ್ದು, ವಿಶೇಷವಾಗಿ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿಸಿವೆ ಎಂದು ಹೇಳಿದ್ದಾಗಿ ವರದಿ ತಿಳಿಸಿದೆ.

ನಕ್ಸಲರ ವಿರುದ್ಧ ಮೋದಿ ಸರ್ಕಾರ ನಿರ್ದಯವಾಗಿ ಮುಂದುವರಿಯುತ್ತದೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...