Homeಮುಖಪುಟಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ...

ಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಅಕ್ರಮ ಬೆಟ್ಟಿಂಗ್, ಜೂಜಾಟ ಮತ್ತು ಕ್ಯಾಸಿನೊ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿ ಸಾರ್ವಜನಿಕರಿಗೆ ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ಟಾಲಿವುಡ್ ನಟರು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಸೇರಿದಂತೆ 25 ಜನರ ವಿರುದ್ಧ ಭಾನುವಾರ ತೆಲಂಗಾಣದ ಸೈಬರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ 25 ಜನರಲ್ಲಿ ಪ್ರಮುಖ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣೀತಾ ಮತ್ತು ನಿಧಿ ಅಗರ್ವಾಲ್ ಸೇರಿದ್ದಾರೆ.

ಆರೋಪಿ 1 ಮತ್ತು ಆರೋಪಿ 2 ಎಂದು ಹೆಸರಿಸಲಾದ ನಟರಾದ ರಾಣಾ ದಗ್ಗುಬಾಟಿ ಮತ್ತು ಪ್ರಕಾಶ್ ರಾಜ್ ಅವರು ಪಾಪ್-ಅಪ್ ಜಾಹೀರಾತುಗಳ ಮೂಲಕ ಜಂಗ್ಲೀ ರಮ್ಮಿಯನ್ನು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಜಯ್ ದೇವರಕೊಂಡ ಅವರು A23 ರಮ್ಮಿ, ಮಂಚು ಲಕ್ಷ್ಮಿ ಯೋಲೊ247, ಪ್ರಣೀತಾ ಫೇರ್‌ಪ್ಲೇ ಲೈವ್ ಮತ್ತು ನಿಧಿ ಅಗರ್ವಾಲ್ ಜೀತ್ ವಿನ್ ಅನ್ನು ಪಾಪ್-ಅಪ್ ಜಾಹೀರಾತುಗಳ ಮೂಲಕ ಪ್ರಚಾರ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾಗಿ ವರದಿ ಹೇಳಿದೆ.

“ಇದು ತನಿಖೆಯ ಆರಂಭ ಮಾತ್ರ. ಈ ಅಪ್ಲಿಕೇಶನ್‌ಗಳು ಯಾವುವು, ಇದರಲ್ಲಿ ಭಾಗಿಯಾಗಿರುವ ಜನರು ಯಾರು, ಈ ಅಪ್ಲಿಕೇಶನ್‌ಗಳ ಮೂಲ ಯಾವುದು ಮತ್ತು ಇತರ ಅಂಶಗಳನ್ನು ನಾವು ನೋಡುತ್ತೇವೆ. ಪ್ರಕರಣದ ಅರ್ಹತೆ ಮತ್ತು ಲಭ್ಯವಿರುವ ಪುರಾವೆಗಳ ಆಧಾರದ ಮೇಲೆ, ನಾವು ಮುಂದುವರಿಯುತ್ತೇವೆ” ಎಂದು ಪೊಲೀಸ್ ಆಯುಕ್ತ ಅವಿನಾಶ್ ಮೊಹಂತಿ ಹೇಳಿದ್ದಾಗಿ indianexpress.com ವರದಿ ಮಾಡಿದೆ.

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 318(4) [ವಂಚನೆ], ಮತ್ತು 112 (ಸಣ್ಣ ಸಂಘಟಿತ ಅಪರಾಧ), 49 (ಪ್ರೇರಣೆ), ತೆಲಂಗಾಣ ರಾಜ್ಯ ಗೇಮಿಂಗ್ ಕಾಯ್ದೆ (ಟಿಎಸ್‌ಜಿಎ) ಸೆಕ್ಷನ್ 3,3(ಎ) ಮತ್ತು 4 (ಸಾಮಾನ್ಯ ಗೇಮಿಂಗ್ ಹೌಸ್); ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66(ಡಿ) (ಕಂಪ್ಯೂಟರ್ ಸಂಪನ್ಮೂಲವನ್ನು ಬಳಸಿಕೊಂಡು ವಂಚಿಸುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿ ಹೇಳಿದೆ.

“ಈ ವೇದಿಕೆಗಳು ಸಾರ್ವಜನಿಕರನ್ನು, ವಿಶೇಷವಾಗಿ ಹಣದ ಅವಶ್ಯಕತೆಯಿರುವ ಜನರನ್ನು, ತಾವು ಕಷ್ಟಪಟ್ಟು ಸಂಪಾದಿಸಿದ ಮತ್ತು ಕುಟುಂಬದ ಹಣವನ್ನು ಅಪ್ಲಿಕೇಶನ್‌ಗಳು/ವೆಬ್‌ಸೈಟ್‌ಗಳಲ್ಲಿ ಹೂಡಿಕೆ ಮಾಡಲು ಮತ್ತು ನಿಧಾನವಾಗಿ ಅವುಗಳಿಗೆ ವ್ಯಸನಿಯಾಗಲು ಪ್ರೋತ್ಸಾಹಿಸುತ್ತಿವೆ. ಇದು ಸಂಪೂರ್ಣ ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತವೆ” ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಹಲವಾರು ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪಟ್ಟಿ ಮಾಡಿರುವ ಎಫ್‌ಐಆರ್, “ಮೇಲೆ ಉಲ್ಲೇಖಿಸಲಾದ ಎಲ್ಲಾ ಬೆಟ್ಟಿಂಗ್ ಅಪ್ಲಿಕೇಶನ್‌ಗಳು 1867ರ ಸಾರ್ವಜನಿಕ ಜೂಜು ಕಾಯ್ದೆ, ಜೂನು ಕಾನೂನುಗಳು ಮತ್ತು ನಿಬಂಧನೆಗಳ ನೇರ ಉಲ್ಲಂಘನೆಯಾಗಿದೆ. ಈ ವ್ಯಸನಕಾರಿ ಸುಲಭವಾಗಿ ಹಣ ಸಂಪಾದಿಸುವ ಕಾರ್ಯವಿಧಾನವನ್ನು ಪ್ರೋತ್ಸಾಹಿಸುವ ಮೂಲಕ ವ್ಯಕ್ತಿಗಳು ಮತ್ತು ಸಮಾಜಕ್ಕೆ ಹಾನಿಯನ್ನುಂಟುಮಾಡುತ್ತದೆ. ಇದು ಆರ್ಥಿಕ ಸಂಕಷ್ಟಕ್ಕೆ ಕಾರಣವಾಗುತ್ತದೆ” ಎಂದು ಹೇಳಿದೆ.

ದೂರುದಾರರ ಪ್ರಕಾರ, ಈ ವೇದಿಕೆಗಳಲ್ಲಿ ಸಾವಿರಾರು ಜನರು ಲಕ್ಷಾಂತರ ರೂಪಾಯಿಗಳನ್ನು ತೊಡಗಿಸಿದ್ದು, ವಿಶೇಷವಾಗಿ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿಸಿವೆ ಎಂದು ಹೇಳಿದ್ದಾಗಿ ವರದಿ ತಿಳಿಸಿದೆ.

ನಕ್ಸಲರ ವಿರುದ್ಧ ಮೋದಿ ಸರ್ಕಾರ ನಿರ್ದಯವಾಗಿ ಮುಂದುವರಿಯುತ್ತದೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...