Homeಮುಖಪುಟರಾಂಚಿ: ಕಳ್ಳತನದ ಆರೋಪ ಹೊರಿಸಿ ಯುವಕನ ಗುಂಪು ಹತ್ಯೆ

ರಾಂಚಿ: ಕಳ್ಳತನದ ಆರೋಪ ಹೊರಿಸಿ ಯುವಕನ ಗುಂಪು ಹತ್ಯೆ

ಪ್ರಕರಣವು ಕಳ್ಳತನದಂತೆ ಕಾಣುತ್ತಿಲ್ಲ, ಯಾವುದೋ ಆಂತರಿಕ ವಿವಾದ ಇದೆ ಎಂದು ನಮಗೆ ಅನುಮಾನವಿದೆ ಎಂದು ಎಸ್ಪಿ ತಿಳಿಸಿದ್ದಾರೆ.

- Advertisement -
- Advertisement -

ಜಾರ್ಖಂಡ್‌ನ ರಾಂಚಿ ಜಿಲ್ಲೆಯ ಸಿರ್ಕಾ ಗ್ರಾಮದಲ್ಲಿ ಬೈಕ್‌ನ ಬ್ಯಾಟರಿ ಮತ್ತು ಚಕ್ರವನ್ನು ಕದ್ದಿದ್ದಾನೆ ಎಂದು ಆರೋಪಿಸಿ 26 ವರ್ಷದ ಯುವಕನನ್ನು ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಗುಂಪು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಮಹೇಶಪುರ ಗ್ರಾಮದ ನಿವಾಸಿ ಮುಬಾರಕ್ ಖಾನ್ ಎಂಬವರು ನೆರೆಯ ಸಿರ್ಕಾ ಗ್ರಾಮಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ವ್ಯಕ್ತಿಯು ಬೈಕ್‌ನ ಚಕ್ರ ಮತ್ತು ಬ್ಯಾಟರಿಯನ್ನು ಕದಿಯುತ್ತಿದ್ದು, ಸ್ಥಳದಿಂದ ಕಾರಿನ ಚಕ್ರ ಮತ್ತು ಜ್ಯಾಕ್ ಪತ್ತೆಯಾಗಿದೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಗ್ರಾಮಸ್ಥರು ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ಮಾಹಿತಿ ಪಡೆದ ನಂತರ ಪೊಲೀಸರು ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಸ್ಥಳಕ್ಕೆ ಧಾವಿಸಿದ್ದು, ಅಷ್ಟೊತ್ತಿಗೆ ಮುಬಾರಕ್‌ ಮೃತಪಟ್ಟಿದ್ದರು. ಇದರ ನಂತರ ಯುವಕನ ಶವವನ್ನು ಪೊಲೀಸ್ ಠಾಣೆಗೆ ತರಲಾಯಿತು ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಮುಬಾರಕ್ ಅವರ ಹಿರಿಯ ಸಹೋದರ ತಬರಕ್ ಖಾನ್ ಅಂಗಾರ ಪೊಲೀಸ್ ಠಾಣೆಯಲ್ಲಿ 19 ಹೆಸರಿಸಿದ ವ್ಯಕ್ತಿಗಳು ಮತ್ತು 15-25 ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ದೂರು ದಾಖಲಿಸಿದ್ದಾರೆ.

“ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದೇವೆ. ಪ್ರಕರಣದ ಬಗ್ಗೆ ಈಗಾಗಲೇ ಕೆಲವು ಜನರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ” ಎಂದು ರಾಂಚಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ನೌಶಾದ್ ಆಲಂ ಹೇಳಿದ್ದಾರೆ.

“ಮೇಲ್ನೋಟಕ್ಕೆ ಇದು ಕಳ್ಳತನದ ಪ್ರಕರಣವೆಂದು ತೋರುತ್ತಿಲ್ಲ, ಯಾವುದೊ ವಿವಾದವಿದೆ. ಸ್ಥಳೀಯರು ಬೈಕ್‌ನ ಚಕ್ರ ಮತ್ತು ಬ್ಯಾಟರಿಯನ್ನು ಕಳವು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಆದರೆ ಈ ಹೇಳಿಕೆ ಅನುಮಾನದಿಂದ ಕೂಡಿದೆ. ಪಕ್ಕದ ಹಳ್ಳಿಯಿಂದ ಮತ್ತೊಂದು ಬೈಕ್‌ನ ಚಕ್ರ ಮತ್ತು ಬ್ಯಾಟರಿಯನ್ನು ಕದಿಯಲು ಯಾರಾದರೂ ಬೈಕ್‌ನಲ್ಲಿ ಬರುತ್ತಾರೆಯೇ? ಮತ್ತೊಬ್ಬರ ಮನೆಯಲ್ಲಿ ಚಕ್ರ ಮತ್ತು ಬ್ಯಾಟರಿಯನ್ನು ಕದ್ದು, ಅಪಾಯವನ್ನು ಯಾಕೆ ಮೈಗೆಳೆಯುತ್ತಿದ್ದನು? ಅವನು ಕಳ್ಳನಾಗಿದ್ದರೆ, ಅನ್‌ಲಾಕ್ ಆಗಿದ್ದ ಬೈಕನ್ನೇ ಕದ್ದುಕೊಂಡು ಹೋಗುತ್ತಿದ್ದನು” ಎಂದು ಆಲಂ ಹೇಳಿದ್ದಾರೆ.

“ಪ್ರಕರಣದಲ್ಲಿ ಯಾವುದೋ ಆಂತರಿಕ ವಿವಾದ ಇದೆ ಎಂದು ನಾವು ಅನುಮಾನಿಸುತ್ತೇವೆ. ಆದರೂ ತನಿಖೆ ಪೂರ್ಣಗೊಂಡ ನಂತರವೇ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು” ಎಂದು ಎಸ್ಪಿ ಆಲಂ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಈ ಮಧ್ಯೆ, ಹತ್ಯೆಯ ಹಿಂದಿನ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಅಂಗಾರ ಪೊಲೀಸ್ ಠಾಣೆಗೆ ಘೇರಾವ್‌ ಹಾಕಿದ್ದು, ಮುಬಾರಕ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿಲ್ಲಿ ಪ್ರದೇಶದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಕ್ರಿಸ್ಟೋಫರ್ ಕೆರ್ಕೆಟ್ಟಾ, “ಮುಬಾರಕ್‌ ಅವರಿಗೆ ಇಬ್ಬರು ಮಕ್ಕಳು ಇದ್ದು, ಅವರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ವಿರುದ್ದ ಯಾವುದೆ ಕ್ರಿಮಿನಲ್ ಪ್ರಕರಣದ ದಾಖಲೆ ಕಂಡು ಬಂದಿಲ್ಲ” ಎಂದು ಹೇಳಿದ್ದಾರೆ.

ಒಂದೇ ವಾರದಲ್ಲಿ ರಾಂಚಿ ಜಿಲ್ಲೆಯಲ್ಲಿ ನಡೆಯುತ್ತಿರುವ ಎರಡನೇ ಹಲ್ಲೆ ಘಟನೆಯಾಗಿದೆ ಇದು. ರಾಂಚಿಯ ಸಗಟು ಮಾರುಕಟ್ಟೆಯೊಂದರಲ್ಲಿ ಮಿನಿ ಟ್ರಕ್ ಅನ್ನು ಕದಿಯುತ್ತಿದ್ದನೆಂದು ಆರೋಪಿಸಿ 22 ವರ್ಷದ ಸಚಿನ್ ವರ್ಮಾ ಎಂಬ ಯುವಕನ ಮೇಲೆ ಮಾರ್ಚ್ 8 ರಂದು ಅಲ್ಲಿನ ಕಾರ್ಮಿಕರು ಹಲ್ಲೆ ನಡೆಸಿದ್ದರು.

ಜಾರ್ಖಂಡ್‌ನಲ್ಲಿ ಗುಂಪು ಹತ್ಯೆ ಘಟನೆಗಳು ಹಲವಾರು ಬಾರಿ ನಡೆದಿದ್ದು, ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. 2016 ರ ಮಾರ್ಚ್‌ನಿಂದ 2020 ರ ಸೆಪ್ಟೆಂಬರ್‌ವರೆಗೆ ಜಾರ್ಖಂಡ್‌‌ನಲ್ಲಿ ಒಟ್ಟು 29 ಜನರನ್ನು ಗುಂಪು ಹತ್ಯೆ ಮಾಡಲಾಗಿದೆ ಎಂದು ಜಾರ್ಖಂಡ್ ಜನಾಧಿಕರ್ ಮಹಾಸಭಾ (ಜೆಜೆಎಂ) ಹೇಳಿದೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...