Homeಮುಖಪುಟರಾಂಚಿ: ಕಳ್ಳತನದ ಆರೋಪ ಹೊರಿಸಿ ಯುವಕನ ಗುಂಪು ಹತ್ಯೆ

ರಾಂಚಿ: ಕಳ್ಳತನದ ಆರೋಪ ಹೊರಿಸಿ ಯುವಕನ ಗುಂಪು ಹತ್ಯೆ

ಪ್ರಕರಣವು ಕಳ್ಳತನದಂತೆ ಕಾಣುತ್ತಿಲ್ಲ, ಯಾವುದೋ ಆಂತರಿಕ ವಿವಾದ ಇದೆ ಎಂದು ನಮಗೆ ಅನುಮಾನವಿದೆ ಎಂದು ಎಸ್ಪಿ ತಿಳಿಸಿದ್ದಾರೆ.

- Advertisement -
- Advertisement -

ಜಾರ್ಖಂಡ್‌ನ ರಾಂಚಿ ಜಿಲ್ಲೆಯ ಸಿರ್ಕಾ ಗ್ರಾಮದಲ್ಲಿ ಬೈಕ್‌ನ ಬ್ಯಾಟರಿ ಮತ್ತು ಚಕ್ರವನ್ನು ಕದ್ದಿದ್ದಾನೆ ಎಂದು ಆರೋಪಿಸಿ 26 ವರ್ಷದ ಯುವಕನನ್ನು ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಗುಂಪು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಮಹೇಶಪುರ ಗ್ರಾಮದ ನಿವಾಸಿ ಮುಬಾರಕ್ ಖಾನ್ ಎಂಬವರು ನೆರೆಯ ಸಿರ್ಕಾ ಗ್ರಾಮಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ವ್ಯಕ್ತಿಯು ಬೈಕ್‌ನ ಚಕ್ರ ಮತ್ತು ಬ್ಯಾಟರಿಯನ್ನು ಕದಿಯುತ್ತಿದ್ದು, ಸ್ಥಳದಿಂದ ಕಾರಿನ ಚಕ್ರ ಮತ್ತು ಜ್ಯಾಕ್ ಪತ್ತೆಯಾಗಿದೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಗ್ರಾಮಸ್ಥರು ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ಮಾಹಿತಿ ಪಡೆದ ನಂತರ ಪೊಲೀಸರು ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಸ್ಥಳಕ್ಕೆ ಧಾವಿಸಿದ್ದು, ಅಷ್ಟೊತ್ತಿಗೆ ಮುಬಾರಕ್‌ ಮೃತಪಟ್ಟಿದ್ದರು. ಇದರ ನಂತರ ಯುವಕನ ಶವವನ್ನು ಪೊಲೀಸ್ ಠಾಣೆಗೆ ತರಲಾಯಿತು ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಮುಬಾರಕ್ ಅವರ ಹಿರಿಯ ಸಹೋದರ ತಬರಕ್ ಖಾನ್ ಅಂಗಾರ ಪೊಲೀಸ್ ಠಾಣೆಯಲ್ಲಿ 19 ಹೆಸರಿಸಿದ ವ್ಯಕ್ತಿಗಳು ಮತ್ತು 15-25 ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ದೂರು ದಾಖಲಿಸಿದ್ದಾರೆ.

“ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದೇವೆ. ಪ್ರಕರಣದ ಬಗ್ಗೆ ಈಗಾಗಲೇ ಕೆಲವು ಜನರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ” ಎಂದು ರಾಂಚಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ನೌಶಾದ್ ಆಲಂ ಹೇಳಿದ್ದಾರೆ.

“ಮೇಲ್ನೋಟಕ್ಕೆ ಇದು ಕಳ್ಳತನದ ಪ್ರಕರಣವೆಂದು ತೋರುತ್ತಿಲ್ಲ, ಯಾವುದೊ ವಿವಾದವಿದೆ. ಸ್ಥಳೀಯರು ಬೈಕ್‌ನ ಚಕ್ರ ಮತ್ತು ಬ್ಯಾಟರಿಯನ್ನು ಕಳವು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಆದರೆ ಈ ಹೇಳಿಕೆ ಅನುಮಾನದಿಂದ ಕೂಡಿದೆ. ಪಕ್ಕದ ಹಳ್ಳಿಯಿಂದ ಮತ್ತೊಂದು ಬೈಕ್‌ನ ಚಕ್ರ ಮತ್ತು ಬ್ಯಾಟರಿಯನ್ನು ಕದಿಯಲು ಯಾರಾದರೂ ಬೈಕ್‌ನಲ್ಲಿ ಬರುತ್ತಾರೆಯೇ? ಮತ್ತೊಬ್ಬರ ಮನೆಯಲ್ಲಿ ಚಕ್ರ ಮತ್ತು ಬ್ಯಾಟರಿಯನ್ನು ಕದ್ದು, ಅಪಾಯವನ್ನು ಯಾಕೆ ಮೈಗೆಳೆಯುತ್ತಿದ್ದನು? ಅವನು ಕಳ್ಳನಾಗಿದ್ದರೆ, ಅನ್‌ಲಾಕ್ ಆಗಿದ್ದ ಬೈಕನ್ನೇ ಕದ್ದುಕೊಂಡು ಹೋಗುತ್ತಿದ್ದನು” ಎಂದು ಆಲಂ ಹೇಳಿದ್ದಾರೆ.

“ಪ್ರಕರಣದಲ್ಲಿ ಯಾವುದೋ ಆಂತರಿಕ ವಿವಾದ ಇದೆ ಎಂದು ನಾವು ಅನುಮಾನಿಸುತ್ತೇವೆ. ಆದರೂ ತನಿಖೆ ಪೂರ್ಣಗೊಂಡ ನಂತರವೇ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು” ಎಂದು ಎಸ್ಪಿ ಆಲಂ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಈ ಮಧ್ಯೆ, ಹತ್ಯೆಯ ಹಿಂದಿನ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಅಂಗಾರ ಪೊಲೀಸ್ ಠಾಣೆಗೆ ಘೇರಾವ್‌ ಹಾಕಿದ್ದು, ಮುಬಾರಕ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿಲ್ಲಿ ಪ್ರದೇಶದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಕ್ರಿಸ್ಟೋಫರ್ ಕೆರ್ಕೆಟ್ಟಾ, “ಮುಬಾರಕ್‌ ಅವರಿಗೆ ಇಬ್ಬರು ಮಕ್ಕಳು ಇದ್ದು, ಅವರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ವಿರುದ್ದ ಯಾವುದೆ ಕ್ರಿಮಿನಲ್ ಪ್ರಕರಣದ ದಾಖಲೆ ಕಂಡು ಬಂದಿಲ್ಲ” ಎಂದು ಹೇಳಿದ್ದಾರೆ.

ಒಂದೇ ವಾರದಲ್ಲಿ ರಾಂಚಿ ಜಿಲ್ಲೆಯಲ್ಲಿ ನಡೆಯುತ್ತಿರುವ ಎರಡನೇ ಹಲ್ಲೆ ಘಟನೆಯಾಗಿದೆ ಇದು. ರಾಂಚಿಯ ಸಗಟು ಮಾರುಕಟ್ಟೆಯೊಂದರಲ್ಲಿ ಮಿನಿ ಟ್ರಕ್ ಅನ್ನು ಕದಿಯುತ್ತಿದ್ದನೆಂದು ಆರೋಪಿಸಿ 22 ವರ್ಷದ ಸಚಿನ್ ವರ್ಮಾ ಎಂಬ ಯುವಕನ ಮೇಲೆ ಮಾರ್ಚ್ 8 ರಂದು ಅಲ್ಲಿನ ಕಾರ್ಮಿಕರು ಹಲ್ಲೆ ನಡೆಸಿದ್ದರು.

ಜಾರ್ಖಂಡ್‌ನಲ್ಲಿ ಗುಂಪು ಹತ್ಯೆ ಘಟನೆಗಳು ಹಲವಾರು ಬಾರಿ ನಡೆದಿದ್ದು, ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. 2016 ರ ಮಾರ್ಚ್‌ನಿಂದ 2020 ರ ಸೆಪ್ಟೆಂಬರ್‌ವರೆಗೆ ಜಾರ್ಖಂಡ್‌‌ನಲ್ಲಿ ಒಟ್ಟು 29 ಜನರನ್ನು ಗುಂಪು ಹತ್ಯೆ ಮಾಡಲಾಗಿದೆ ಎಂದು ಜಾರ್ಖಂಡ್ ಜನಾಧಿಕರ್ ಮಹಾಸಭಾ (ಜೆಜೆಎಂ) ಹೇಳಿದೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...