Homeಮುಖಪುಟಮಹಾರಾಷ್ಟ್ರದಲ್ಲಿನ ರಾಜ್ಯಪಾಲರು ಅಮಿತ್ ಶಾರವರ ಹಿಟ್‌ಮ್ಯಾನ್ ಆಗಿದ್ದಾರೆ: ಕಾಂಗ್ರೆಸ್‌ನ 10 ಪ್ರಶ್ನೆಗಳು

ಮಹಾರಾಷ್ಟ್ರದಲ್ಲಿನ ರಾಜ್ಯಪಾಲರು ಅಮಿತ್ ಶಾರವರ ಹಿಟ್‌ಮ್ಯಾನ್ ಆಗಿದ್ದಾರೆ: ಕಾಂಗ್ರೆಸ್‌ನ 10 ಪ್ರಶ್ನೆಗಳು

- Advertisement -
- Advertisement -

“ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಸಂವಿಧಾನವನ್ನು ಮಟ್ಟಹಾಕಲಾಯಿತು ಮತ್ತು ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಮಾಡುವ ಬದಲು ಅಮಿತ್ ಷಾಗೆ ಹಿಟ್‌ಮ್ಯಾನ್ ಆಗಿ ಕಾರ್ಯನಿರ್ವಹಿಸಿದರು” ಎಂದು ಕಾಂಗ್ರೆಸ್ ನ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ತೆರವುಗೊಳಿಸಿ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ, NCPಯ ಅಜಿತ್ ಪವಾರ್ ಅವರ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಖಂಡಿಸಿರುವ ಅವರು ಕಾಂಗ್ರೆಸ್‌ ಪರವಾಗಿ ಬಿಜೆಪಿಗೆ 10 ಪ್ರಶ್ನೆಗಳನ್ನು ಕೇಳಿದ್ದಾರೆ. ಅವುಗಳೆಂದರೆ

1. ರಾಷ್ಟ್ರಪತಿ ಆಡಳಿತವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಬಿಜೆಪಿ ಸರ್ಕಾರ ರಚಿಸಲಾಗುವುದು ಎಂದು  ಯಾವಾಗ ನಿರ್ಧರವಾಯಿತು?

2. ಎಷ್ಟು ಬಿಜೆಪಿ-ಎನ್‌ಸಿಪಿ ಶಾಸಕರು ದೇವೇಂದ್ರ ಫಡ್ನವೀಸ್ ಅವರನ್ನು ಬೆಂಬಲಿಸಿದ್ದಾರೆ?

3. ಒಂದು ಗಂಟೆಯಲ್ಲಿ ರಾಜ್ಯಪಾಲರು ಅದು ರಾತ್ರಿ ವೇಳೆ ಹೇಗೆ ಬೆಂಬಲ ಪತ್ರ ಪರಿಶೀಲಿಸಿದರು?

4. ರಾಷ್ಟ್ರಪತಿಗಳ ಆಡಳಿತವನ್ನು ಯಾವ ಸಮಯದಲ್ಲಿ ತೆಗೆದುಹಾಕಲಾಯಿತು?

5. ಕೇಂದ್ರ ಸಚಿವ ಸಂಪುಟ ಯಾವ ಸಮಯಕ್ಕೆ ಸಭೆ ಸೇರಿತು, ಅಲ್ಲಿದ್ದವರು ಯಾರು? ರಾಷ್ಟ್ರಪತಿಗಳ ಆಡಳಿತವನ್ನು ತೆಗೆದುಹಾಕುವಂತೆ ಅವರು ಯಾವ ಸಮಯದಲ್ಲಿ ರಾಜ್ಯಪಾಲರಿಗೆ ತಿಳಿಸಿದರು?

6. ರಾಷ್ಟ್ರಪತಿ ಆಡಳಿತವನ್ನು ತೆಗೆದುಹಾಕಲು ಕೇಂದ್ರ ಸಚಿವ ಸಂಪುಟ ಯಾವ ಸಮಯಕ್ಕೆ ರಾಜ್ಯಪಾಲರಿಗೆ ಪತ್ರ ಕಳುಹಿಸಿದೆ?

7. ಅದನ್ನು ಯಾವಾಗ ಸ್ವೀಕರಿಸಲಾಯಿತು?

8. ರಾಜ್ಯಪಾಲರು ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಯಾವ ಸಮಯದಲ್ಲಿ ಕರೆದರು, ಅವರು ಯಾವ ಸಮಯದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು? ಒಂದು ಖಾಸಗಿ ಸುದ್ದಿ ಚಾನೆಲ್ ಹೊರತುಪಡಿಸಿ, ಡಿಡಿ ಅಥವಾ ಬೇರೆ ಯಾವುದೇ ಮಾಧ್ಯಮ ಸಂಸ್ಥೆಗಳು, ನಾಗರಿಕರು, ಮಹಾರಾಷ್ಟ್ರದ ಮುಖ್ಯ ನ್ಯಾಯಮೂರ್ತಿಗಳು ಅಲ್ಲಿಲ್ಲ. ಯಾರನ್ನೂ ಏಕೆ ಕರೆಯಲಿಲ್ಲ?

9. ಪ್ರಮಾಣವಚನದ ಹೊರತಾಗಿಯೂ, ಫಡ್ನವಿಸ್ ಯಾವಾಗ ಸರ್ಕಾರ ರಚಿಸುತ್ತಾರೆ ಎಂದು ರಾಜ್ಯಪಾಲರು ಏಕೆ ಹೇಳಲಿಲ್ಲ?

10. ಫಡ್ನವೀಸ್ ಸರ್ಕಾರವು ಬಹುಮತವನ್ನು ಸಾಬೀತುಪಡಿಸಲು ಸಮಯವಿದ್ದರೂ ರಾಜ್ಯಪಾಲರು ಇನ್ನೂ ಏಕೆ ಕೇಳುತ್ತಿಲ್ಲ?

ಈ ಹತ್ತು ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದ್ದು ಬಿಜೆಪಿಯಿಂದ ಉತ್ತರವನ್ನು ಬಯಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...