Homeಮುಖಪುಟಮಹಾರಾಷ್ಟ್ರದಲ್ಲಿನ ರಾಜ್ಯಪಾಲರು ಅಮಿತ್ ಶಾರವರ ಹಿಟ್‌ಮ್ಯಾನ್ ಆಗಿದ್ದಾರೆ: ಕಾಂಗ್ರೆಸ್‌ನ 10 ಪ್ರಶ್ನೆಗಳು

ಮಹಾರಾಷ್ಟ್ರದಲ್ಲಿನ ರಾಜ್ಯಪಾಲರು ಅಮಿತ್ ಶಾರವರ ಹಿಟ್‌ಮ್ಯಾನ್ ಆಗಿದ್ದಾರೆ: ಕಾಂಗ್ರೆಸ್‌ನ 10 ಪ್ರಶ್ನೆಗಳು

- Advertisement -
- Advertisement -

“ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಸಂವಿಧಾನವನ್ನು ಮಟ್ಟಹಾಕಲಾಯಿತು ಮತ್ತು ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಮಾಡುವ ಬದಲು ಅಮಿತ್ ಷಾಗೆ ಹಿಟ್‌ಮ್ಯಾನ್ ಆಗಿ ಕಾರ್ಯನಿರ್ವಹಿಸಿದರು” ಎಂದು ಕಾಂಗ್ರೆಸ್ ನ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ತೆರವುಗೊಳಿಸಿ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ, NCPಯ ಅಜಿತ್ ಪವಾರ್ ಅವರ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಖಂಡಿಸಿರುವ ಅವರು ಕಾಂಗ್ರೆಸ್‌ ಪರವಾಗಿ ಬಿಜೆಪಿಗೆ 10 ಪ್ರಶ್ನೆಗಳನ್ನು ಕೇಳಿದ್ದಾರೆ. ಅವುಗಳೆಂದರೆ

1. ರಾಷ್ಟ್ರಪತಿ ಆಡಳಿತವನ್ನು ಹಿಂತೆಗೆದುಕೊಳ್ಳಲಾಗುವುದು ಮತ್ತು ಬಿಜೆಪಿ ಸರ್ಕಾರ ರಚಿಸಲಾಗುವುದು ಎಂದು  ಯಾವಾಗ ನಿರ್ಧರವಾಯಿತು?

2. ಎಷ್ಟು ಬಿಜೆಪಿ-ಎನ್‌ಸಿಪಿ ಶಾಸಕರು ದೇವೇಂದ್ರ ಫಡ್ನವೀಸ್ ಅವರನ್ನು ಬೆಂಬಲಿಸಿದ್ದಾರೆ?

3. ಒಂದು ಗಂಟೆಯಲ್ಲಿ ರಾಜ್ಯಪಾಲರು ಅದು ರಾತ್ರಿ ವೇಳೆ ಹೇಗೆ ಬೆಂಬಲ ಪತ್ರ ಪರಿಶೀಲಿಸಿದರು?

4. ರಾಷ್ಟ್ರಪತಿಗಳ ಆಡಳಿತವನ್ನು ಯಾವ ಸಮಯದಲ್ಲಿ ತೆಗೆದುಹಾಕಲಾಯಿತು?

5. ಕೇಂದ್ರ ಸಚಿವ ಸಂಪುಟ ಯಾವ ಸಮಯಕ್ಕೆ ಸಭೆ ಸೇರಿತು, ಅಲ್ಲಿದ್ದವರು ಯಾರು? ರಾಷ್ಟ್ರಪತಿಗಳ ಆಡಳಿತವನ್ನು ತೆಗೆದುಹಾಕುವಂತೆ ಅವರು ಯಾವ ಸಮಯದಲ್ಲಿ ರಾಜ್ಯಪಾಲರಿಗೆ ತಿಳಿಸಿದರು?

6. ರಾಷ್ಟ್ರಪತಿ ಆಡಳಿತವನ್ನು ತೆಗೆದುಹಾಕಲು ಕೇಂದ್ರ ಸಚಿವ ಸಂಪುಟ ಯಾವ ಸಮಯಕ್ಕೆ ರಾಜ್ಯಪಾಲರಿಗೆ ಪತ್ರ ಕಳುಹಿಸಿದೆ?

7. ಅದನ್ನು ಯಾವಾಗ ಸ್ವೀಕರಿಸಲಾಯಿತು?

8. ರಾಜ್ಯಪಾಲರು ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಯಾವ ಸಮಯದಲ್ಲಿ ಕರೆದರು, ಅವರು ಯಾವ ಸಮಯದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು? ಒಂದು ಖಾಸಗಿ ಸುದ್ದಿ ಚಾನೆಲ್ ಹೊರತುಪಡಿಸಿ, ಡಿಡಿ ಅಥವಾ ಬೇರೆ ಯಾವುದೇ ಮಾಧ್ಯಮ ಸಂಸ್ಥೆಗಳು, ನಾಗರಿಕರು, ಮಹಾರಾಷ್ಟ್ರದ ಮುಖ್ಯ ನ್ಯಾಯಮೂರ್ತಿಗಳು ಅಲ್ಲಿಲ್ಲ. ಯಾರನ್ನೂ ಏಕೆ ಕರೆಯಲಿಲ್ಲ?

9. ಪ್ರಮಾಣವಚನದ ಹೊರತಾಗಿಯೂ, ಫಡ್ನವಿಸ್ ಯಾವಾಗ ಸರ್ಕಾರ ರಚಿಸುತ್ತಾರೆ ಎಂದು ರಾಜ್ಯಪಾಲರು ಏಕೆ ಹೇಳಲಿಲ್ಲ?

10. ಫಡ್ನವೀಸ್ ಸರ್ಕಾರವು ಬಹುಮತವನ್ನು ಸಾಬೀತುಪಡಿಸಲು ಸಮಯವಿದ್ದರೂ ರಾಜ್ಯಪಾಲರು ಇನ್ನೂ ಏಕೆ ಕೇಳುತ್ತಿಲ್ಲ?

ಈ ಹತ್ತು ಪ್ರಶ್ನೆಗಳನ್ನು ಕಾಂಗ್ರೆಸ್‌ ಕೇಳಿದ್ದು ಬಿಜೆಪಿಯಿಂದ ಉತ್ತರವನ್ನು ಬಯಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...