Homeಕರ್ನಾಟಕಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಸಂದರ್ಶನಕ್ಕೆ ಹಾಜರಾಗಿದ್ದ ಕಲಾವಿದನನ್ನು ಹೀಯಾಳಿಸಿ ಹೊರಗೆ ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕಿರಿಯ ಕಲಾವಿದರೊಬ್ಬರಿಗೆ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ನಿಂದಿಸಿರುವ ಆಡಿಯೊ ವೈರಲ್‌ ಆಗಿದೆ. ಆಕ್ಷೇಪಾರ್ಹ ಪದಗಳನ್ನು ಕಿರಿಯ ರಂಗಕರ್ಮಿಗೆ ನಿರ್ದೇಶಕರು ಬಳಸಿರುವುದು ಆಡಿಯೊದಲ್ಲಿ ದಾಖಲಾಗಿದೆ.

ರಂಗಾಯಣದ ರೆಪರ್ಟರಿ ಕಲಾವಿದರ ಆಯ್ಕೆ ಪ್ರಕ್ರಿಯೆ ಮೊನ್ನೆಯಷ್ಟೇ ಮೈಸೂರು ರಂಗಾಯಣದಲ್ಲಿ ನಡೆದಿತ್ತು. ರಂಗಾಯಣದಲ್ಲಿ ತರಬೇತಿ ಪಡೆದಿರುವ ಅನುರಾಗ್ ಶರ್ಮ ಎನ್ನುವ ಕಿರಿಯ ಕಲಾವಿದ ಅರ್ಜಿ ಹಾಕಿದ್ದರು. ಆದರೆ ಈ ಹಿಂದೆ ಕಾರ್ಯಪ್ಪ ಅವರ ವಿರುದ್ಧ ಅನುರಾಗ್‌ ಮಾತನಾಡಿದ್ದರು ಎಂಬ ಕಾರಣಕ್ಕೆ ಸಂದರ್ಶನ ನಡೆಸದೆ ವಾಪಸ್‌ ಕಳಿಸಲಾಗಿದೆ ಹಾಗೂ ಕೆಟ್ಟ ಪದಗಳನ್ನು ಬಳಸಿ ನಿಂದಿಸಿದರೂ ಎಂದು ಆರೋಪಿಸಲಾಗಿದೆ. ನಂತರ ಅನುರಾಗ್ ಅವರು ರಂಗಾಯಣ ನಿರ್ದೇಶಕರಿಗೆ ಕರೆ ಮಾಡಿ, “ಏಕೆ ನನ್ನ ಸಂದರ್ಶನ ಮಾಡಲಿಲ್ಲ” ಎಂದು ಕೇಳಿದಾಗ ಆಕ್ಷೇಪಾರ್ಹ ಪದಗಳನ್ನು ಕಾರ್ಯಪ್ಪ ಅವರು ಬಳಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೈರಲ್‌ ಆಡಿಯೊದಲ್ಲಿ ಏನಿದೆ? 

ಅನುರಾಗ್‌: ನನ್ನನ್ನು ಸಂದರ್ಶನ ಮಾಡದೆ ನಿನ್ನೆ ಹೊರಗೆ ಕಳಿಸಿದ್ದು ಏಕೆ?

ಅಡ್ಡಂಡ ಕಾರ್ಯಪ್ಪ: ನೀನು ಯಾರೋ ಮಾರಾಯ ಫೋನ್‌ ಮಾಡೋದಕ್ಕೆ? ನೀ ಯಾರು ನನ್ನ ಕೇಳೋದಕ್ಕೆ… ಲೋ……. ಇಡೋ ಮಾರಾಯ ಫೋನು.

ಅನುರಾಗ್: ನಾನು ಏಕೆ ಫೋನ್ ಮಾಡಬಾರದು.

ಕಾರ್ಯಪ್ಪ: ನೀನ್ ಯಾರೋ ಫೋನ್ ಮಾಡೋಕೆ? ರಂಗಾಯಣಕ್ಕೆ ಕೆಟ್ಟ ಹೆಸರು ತರೋದಕ್ಕೆ… 

ಅನುರಾಗ್: ನಾನು ಯಾವಾಗ ಕೆಟ್ಟ ಹೆಸರು ತಂದಿದ್ದೀನಿ. ಇರೋ ವಿಷಯ ಹೇಳಿದ್ದೇನಲ್ಲವಾ? 

ಕಾರ್ಯಪ್ಪ: ಇಡೋ ಮಾರಾಯ ಫೋನು. ನೀನೊಬ್ಬ ಲೋ….  ಇದ್ದೀಯ. ಇಡೋ ಫೋನು.

ಅನುರಾಗ್: ರಂಗಾಯಣ ನಿರ್ದೇಶಕರಾಗಿ ನೀವು ಈ ರೀತಿ ಮಾತನಾಡುವುದು ಸರಿಯೇ? 

ಕಾರ್ಯಪ್ಪ: ನೀನೊಬ್ಬ ಕಡಚಾ ಫೇಲೋ. ನೀನೊಬ್ಬ ಆರ್ಟಿಸ್ಟಾ?

ಅನುರಾಗ್‌: ನಿಮ್ಮ ಕುರ್ಚಿಗಾದರೂ ಮರ್ಯಾದೆ ಕೊಡೋದು ಬೇಡವಾ?

ಕಾರ್ಯಪ್ಪ: ರಂಗಾಯಣದ ಋಣಪಾತಕ ನೀನು. ಫೋನ್ ಮಾಡಲಿಕ್ಕೆ ನಿನಗೆಷ್ಟು ಸೊಕ್ಕು ಇದೆ. 

ಅನುರಾಗ್‌: ಇದಕ್ಕೆ ಉತ್ತರ ಕೊಡಿ ಸಾಕು, ಇಂಟರ್‌ವ್ಯೂಗೆ ಬಂದ ಕಲಾವಿದನನ್ನು….

ಕಾರ್ಯಪ್ಪ: ನೀನ್ಯಾವನೋ ಕೇಳೋಕೆ. ಸರಿಯಾಗಿ ಅಪ್ಲಿಕೇಷನ್‌ ಕೂಡ ಹಾಕದೆ, ಚೇಷ್ಟೇಗಾಗಿ ಬೇಕಂತಲೇ ಅಪ್ಲಿಕೇಷನ್ ಹಾಕಿದವನು ನೀನು. 

ಅನುರಾಗ್‌: ಎಷ್ಟೋ ಜನ ಡಿಪ್ಲೊಮಾ ಕೂಡ ಮಾಡದವರು ರಂಗಾಯಣಕ್ಕೆ ಅರ್ಜಿ ಹಾಕಿದ್ದಾರೆ. 

ಕಾರ್ಯಪ್ಪ: ನೀನು ಡಿಪ್ಲೊಮಾ ಮಾಡಿದವನು. ನಿನ್ನನ್ನು ತೆಗೆದುಕೊಳ್ಳುವುದಿಲ್ಲ ಎಂದು ಚೆನ್ನಾಗಿ ಗೊತ್ತಿತ್ತು. ಆದರೆ ನೀನು ಹಾಕಿದ ಉದ್ದೇಶವೇ… (ಮಾತು ಅಸ್ಪಷ್ಟವಾಗಿದೆ).

ಅನುರಾಗ್: ಸುಮ್ಮನೇ ಕೂಗಾಡಬೇಡಿ ಸರ್‌. ಬೇರೆಯವರ ಮಾತನ್ನೂ ಕೇಳಿಸಿಕೊಳ್ಳಿ.

ಕಾರ್ಯಪ್ಪ: ನಾಯಿಗಳ ಜೊತೆ ನಾನು ಮಾತನಾಡುವುದಿಲ್ಲ.

– ಹೀಗೆ ಸಂಭಾಷಣೆ ಇರುವ ಆಡಿಯೊ ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಹರಿದಾಡಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕಿರಿಯ ಕಲಾವಿದ ಅನುರಾಗ್‌ ಶರ್ಮಾ ಅವರು, “ನಾನೊಬ್ಬ ಕಲಾವಿದನಾಗಿ ರಂಗಾಯಣ ಕೆಲವು ನಾಟಕಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಹೊಸ ಕಲಾವಿದ ಅಲ್ಲ. ‘ಶ್ರೀ ರಾಮಾಯಣ ದರ್ಶನಂ’ ನಾಟಕದಲ್ಲಿ ರಾವಣನ ಪಾತ್ರ ಮಾಡಿದ್ದೆ. ‘ಪರ್ವ’ದಲ್ಲಿ ಕರ್ಣನ ಪಾತ್ರ ಮಾಡಿದ್ದೆ. ಆದರೆ ಕೆಲವು ದಿನಗಳಿಂದ ರಂಗಾಯಣ ನಿರ್ದೇಶಕರು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಸಿದ್ಧಾಂತನ್ನು ಎಲ್ಲ ಕಡೆ ತುರುಕುತ್ತಾ ಹೋಗಿದ್ದರಿಂದ ಇರುಸುಮುರುಸಾಗಿ ಕೆಲವು ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡಿದ್ದೆ. ಈ ವೈಯಕ್ತಿಕ ವೈಷಮ್ಯ ಇಟ್ಟುಕೊಂಡು ಹೀಗೆ ವರ್ತಿಸಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

“ಸಂದರ್ಶನದ ವೇಳೆ- ನೀನು ಕರ್ಣನ ಪಾತ್ರ ಮಾಡಿದವನು. ಆದರೆ ನೀನು ಶಕುನಿ. ನಿನಗೆ ರಂಗಾಯಣಕ್ಕೆ ಅರ್ಜಿ ಹಾಕುವ ಯೋಗ್ಯತೆ ಇಲ್ಲ. ನಿನ್ನ ಸಂದರ್ಶನ ಮಾಡುವುದಿಲ್ಲ. ಹೊರಗೆ ಹೋಗು- ಎಂದು ಬಲವಂತವಾಗಿ ಹೊರದಬ್ಬಿದರು. ಆ ನಂತರದಲ್ಲಿ ಅವರಿಗೆ ಕರೆ ಮಾಡಿದ್ದೆ. ‘ಹೀಗ್ಯಾಕೆ ಮಾಡಿದಿರಿ, ಕನಿಷ್ಟಪಕ್ಷ ಸಂದರ್ಶನವಾದರೂ ಮಾಡಬಹುದಿತ್ತಲ್ಲ’ ಎಂದು ಕೇಳಿದಾಗ ಹೀಗೆ ನಿಂದಿಸಿದ್ದಾರೆ” ಎಂದು ಆರೋಪಿಸಿದರು.

ಪೊಲೀಸರಿಗೆ ದೂರು ನೀಡಿದ್ದೇನೆ: ಅಡ್ಡಂಡ ಕಾರ್ಯಪ್ಪ

ವೈರಲ್ ಆಡಿಯೊಕ್ಕೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರಂಗಾಯಣ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪ ಅವರು, “ಸಂದರ್ಶನ ಮುಗಿದ ಮೇಲೆ ಸುಮಾರು ಐವತ್ತು ಭಾರಿ ಕರೆ ಮಾಡಿ ನನಗೆ ಅನುರಾಗ್ ತೊಂದರೆ ಕೊಟ್ಟಿದ್ದಾನೆ. ಆನಂತರದಲ್ಲಿ ನಾನು ಆತನೊಂದಿಗೆ ಮಾತನಾಡಿದ್ದೇನೆ. ಪೊಲೀಸರಿಗೆ ದೂರು ಕೂಡ ನೀಡಿದ್ದೇನೆ” ಎಂದರು.

ಸಂದರ್ಶನ ಮಾಡದೆ ಕಳುಹಿಸಿದರು ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಕಳೆದ ಒಂದು ವರ್ಷದಿಂದ ರಂಗಾಯಣದ ವಿರುದ್ಧ, ನಿರ್ದೇಶಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ರಂಗಾಯಣದ ಚರಿಷ್ಮಾವನ್ನು ಹಾಳು ಮಾಡುತ್ತಾ ಬಂದಿದ್ದಾನೆ. ರಂಗಾಯಣದ ಇಬ್ಬರು ಹಿರಿಯ ಕಲಾವಿದರು, ರಂಗ ಸಮಾಜದ ಇಬ್ಬರು ಸದಸ್ಯರು ಒಳಗೊಂಡು ಸಂದರ್ಶನ ಸಮಿತಿ ಮಾಡಿದ ತೀರ್ಮಾನವಿದು” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...